Homeಮುಖಪುಟಒಕ್ಕೂಟ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೊ ತಮಿಳುನಾಡಿನಾದ್ಯಂತ ಪ್ರದರ್ಶನ: ಸಿಎಂ ಸ್ಟಾಲಿನ್‌

ಒಕ್ಕೂಟ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೊ ತಮಿಳುನಾಡಿನಾದ್ಯಂತ ಪ್ರದರ್ಶನ: ಸಿಎಂ ಸ್ಟಾಲಿನ್‌

- Advertisement -
- Advertisement -

ಗಣರಾಜ್ಯೋತ್ಸವ ಪರೇಡ್‌ಗಾಗಿ ತಮಿಳುನಾಡಿನ ಟ್ಯಾಬ್ಲೋವನ್ನು ಒಕ್ಕೂಟ ಸರ್ಕಾರದ ತಜ್ಞರ ಸಮಿತಿಯು ತಿರಸ್ಕರಿಸಿದ ಒಂದು ದಿನದ ನಂತರ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌‌ ಅವರು ರಾಜ್ಯ ಸರ್ಕಾರ ಆಯೋಜಿಸಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಇದನ್ನು ಪ್ರದರ್ಶಿಸಲಾಗುವುದು ಎಂದು ಚೆನ್ನೈನಲ್ಲಿ ಮಂಗಳವಾರ ಘೋಷಿಸಿದ್ದಾರೆ. ಇಷ್ಟೇ ಅಲ್ಲದೆ, ಈ ಟ್ಯಾಬ್ಲೊವನ್ನು ರಾಜ್ಯದ ಪ್ರಮುಖ ಸ್ಥಳಗಳಿಗೆ ಕೊಂಡೊಯ್ಯಲಾಗುವುದು ಎಂದು ಅವರು ಹೇಳಿದ್ದಾರೆ.

ಚೆನ್ನೈನಲ್ಲಿ ನಡೆದ ‘ಸ್ವಾತಂತ್ರ್ಯ ಹೋರಾಟದಲ್ಲಿ ತಮಿಳುನಾಡು’ ಎಂಬ ಶೀರ್ಷಿಕೆಯ ಛಾಯಾಚಿತ್ರ ಪ್ರದರ್ಶನವನ್ನು ದೇಶದ ಪ್ರಮುಖ ನಗರಗಳಲ್ಲಿ ಆಯೋಜಿಸಲಾಗಿದೆ ಎಂದು ತಮಿಳುನಾಡು ಈ ಹಿಂದೆಯೆ ಘೊಷಿಸಿತ್ತು.

ಇದನ್ನೂ ಓದಿ:ಗಣರಾಜ್ಯೋತ್ಸವ ಪರೇಡ್‌‌ ಟ್ಯಾಬ್ಲೊ ವಿವಾದ: ಒಕ್ಕೂಟ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

‘1857ರ ದಂಗೆಗೆ ಮುನ್ನ ನಾವು ಬ್ರಿಟಿಷರ ವಿರುದ್ಧ ಹೋರಾಡಿದ್ದೇವೆ’

ಸ್ವಾತಂತ್ರ್ಯ ಹೋರಾಟಕ್ಕೆ ತಮಿಳುನಾಡಿನ ಕೊಡುಗೆಯು 1857 ರ ದಂಗೆಗೆ ಮುಂಚಿತವಾಗಿತ್ತು ಎಂದು ಸೂಚಿಸಿರುವ ಸ್ಟಾಲಿನ್, “ರಾಜ್ಯದ ಸ್ವಾತಂತ್ಯ್ರ ಹೋರಾಟಗಾರರ ಪಾತ್ರವು ಇತರ ಯಾವುದೆ ರಾಜ್ಯಗಳಿಗಿಂತ ಕಡಿಮೆಯಲ್ಲ” ಎಂದು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸ್ವಾಲಿನ್‌ ಅವರಿಗೆ ಪತ್ರ ಬರೆದ ಕೆಲವೆ ಗಂಟೆಗಳ ನಂತರ ಮುಖ್ಯಮಂತ್ರಿ ಈ ನಿರ್ಧಾರ ಮಾಡಿದ್ದಾರೆ. ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿ ಟ್ಯಾಬ್ಲೊವನ್ನು ಆಯ್ಕೆ ಮಾಡಲಾಗಿದೆ ಎಂದು ರಾಜನಾಥ್‌ ಸಿಂಗ್ ಪತ್ರದಲ್ಲಿ ಹೇಳಿದ್ದರು. ಅವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, ರಾಜನಾಥ್‌ ಸಿಂಗ್ ಅವರ ಪತ್ರದಲ್ಲಿ ಅವರು ಯಾವುದೇ ಕಾರಣವನ್ನು ಉಲ್ಲೇಖಿಸಿಲ್ಲ ಎಂದು ಆಘಾತ ಮತ್ತು ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ತಮಿಳುನಾಡಿನ ದೇಶಭಕ್ತಿಯ ಉತ್ಸಾಹ ಮತ್ತು ಭಾವನೆಗಳನ್ನು ವ್ಯಕ್ತಪಡಿಸಲು ರಾಜ್ಯ ಸರ್ಕಾರದ ಗಣರಾಜ್ಯೋತ್ಸವದ ಆಚರಣೆಯಲ್ಲಿ ಟ್ಯಾಬ್ಲೊವನ್ನು ಪ್ರಸ್ತುತಪಡಿಸಲಾಗುತ್ತದೆ. ಇದನ್ನು ತಮಿಳುನಾಡಿನ ಪ್ರಮುಖ ನಗರಗಳಿಗೆ ಕಳುಹಿಸಲಾಗುವುದು ಎಂದು ಸ್ಟಾಲಿನ್ ಹೇಳಿದ್ದಾರೆ.

ವೆಲ್ಲೂರು ದಂಗೆಯು 1806ರಲ್ಲಿ ನಡೆದಿತ್ತು. ಆದರೆ 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ‘ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ’ ಎಂದು ಹೇಳಲಾಗುತ್ತಿದೆ. ಅದೇ ರೀತಿ, ಝಾನ್ಸಿ ರಾಣಿ ತನ್ನ ಕತ್ತಿಯನ್ನು ಬೀಸುವ ದಶಕಗಳ ಹಿಂದೆಯೆ ವೇಲು ನಾಚಿಯಾರ್ ಬ್ರಿಟಿಷರ ವಿರುದ್ಧ ಹೋರಾಡಿ, ಕಳೆದುಕೊಂಡ ಭೂಮಿಯನ್ನು ಮರಳಿ ವಶಪಡಿಸಿಕೊಂಡರು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಅದೇ ರೀತಿ ಪುಲಿತೇವನ್, ವೀರ ಪಾಂಡಿಯ ಕಟ್ಟಬೊಮ್ಮನ್, ವೀರನ್ ಸುಂದರಲಿಂಗಂ, ಮರುತು ಸಹೋದರರು, ಧೀರನ್ ಚಿನ್ನಮಲೈ ಸೇರಿದಂತೆ ಹಲವು ವೀರರನ್ನು ಸ್ವಾತಂತ್ರ್ಯ ಹೋರಾಟಕ್ಕಾಗಿ ತಮಿಳುನಾಡಿನ ಈ ನೆಲವು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...