Homeಮುಖಪುಟಒಕ್ಕೂಟ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೊ ತಮಿಳುನಾಡಿನಾದ್ಯಂತ ಪ್ರದರ್ಶನ: ಸಿಎಂ ಸ್ಟಾಲಿನ್‌

ಒಕ್ಕೂಟ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೊ ತಮಿಳುನಾಡಿನಾದ್ಯಂತ ಪ್ರದರ್ಶನ: ಸಿಎಂ ಸ್ಟಾಲಿನ್‌

- Advertisement -
- Advertisement -

ಗಣರಾಜ್ಯೋತ್ಸವ ಪರೇಡ್‌ಗಾಗಿ ತಮಿಳುನಾಡಿನ ಟ್ಯಾಬ್ಲೋವನ್ನು ಒಕ್ಕೂಟ ಸರ್ಕಾರದ ತಜ್ಞರ ಸಮಿತಿಯು ತಿರಸ್ಕರಿಸಿದ ಒಂದು ದಿನದ ನಂತರ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌‌ ಅವರು ರಾಜ್ಯ ಸರ್ಕಾರ ಆಯೋಜಿಸಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಇದನ್ನು ಪ್ರದರ್ಶಿಸಲಾಗುವುದು ಎಂದು ಚೆನ್ನೈನಲ್ಲಿ ಮಂಗಳವಾರ ಘೋಷಿಸಿದ್ದಾರೆ. ಇಷ್ಟೇ ಅಲ್ಲದೆ, ಈ ಟ್ಯಾಬ್ಲೊವನ್ನು ರಾಜ್ಯದ ಪ್ರಮುಖ ಸ್ಥಳಗಳಿಗೆ ಕೊಂಡೊಯ್ಯಲಾಗುವುದು ಎಂದು ಅವರು ಹೇಳಿದ್ದಾರೆ.

ಚೆನ್ನೈನಲ್ಲಿ ನಡೆದ ‘ಸ್ವಾತಂತ್ರ್ಯ ಹೋರಾಟದಲ್ಲಿ ತಮಿಳುನಾಡು’ ಎಂಬ ಶೀರ್ಷಿಕೆಯ ಛಾಯಾಚಿತ್ರ ಪ್ರದರ್ಶನವನ್ನು ದೇಶದ ಪ್ರಮುಖ ನಗರಗಳಲ್ಲಿ ಆಯೋಜಿಸಲಾಗಿದೆ ಎಂದು ತಮಿಳುನಾಡು ಈ ಹಿಂದೆಯೆ ಘೊಷಿಸಿತ್ತು.

ಇದನ್ನೂ ಓದಿ:ಗಣರಾಜ್ಯೋತ್ಸವ ಪರೇಡ್‌‌ ಟ್ಯಾಬ್ಲೊ ವಿವಾದ: ಒಕ್ಕೂಟ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

‘1857ರ ದಂಗೆಗೆ ಮುನ್ನ ನಾವು ಬ್ರಿಟಿಷರ ವಿರುದ್ಧ ಹೋರಾಡಿದ್ದೇವೆ’

ಸ್ವಾತಂತ್ರ್ಯ ಹೋರಾಟಕ್ಕೆ ತಮಿಳುನಾಡಿನ ಕೊಡುಗೆಯು 1857 ರ ದಂಗೆಗೆ ಮುಂಚಿತವಾಗಿತ್ತು ಎಂದು ಸೂಚಿಸಿರುವ ಸ್ಟಾಲಿನ್, “ರಾಜ್ಯದ ಸ್ವಾತಂತ್ಯ್ರ ಹೋರಾಟಗಾರರ ಪಾತ್ರವು ಇತರ ಯಾವುದೆ ರಾಜ್ಯಗಳಿಗಿಂತ ಕಡಿಮೆಯಲ್ಲ” ಎಂದು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸ್ವಾಲಿನ್‌ ಅವರಿಗೆ ಪತ್ರ ಬರೆದ ಕೆಲವೆ ಗಂಟೆಗಳ ನಂತರ ಮುಖ್ಯಮಂತ್ರಿ ಈ ನಿರ್ಧಾರ ಮಾಡಿದ್ದಾರೆ. ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿ ಟ್ಯಾಬ್ಲೊವನ್ನು ಆಯ್ಕೆ ಮಾಡಲಾಗಿದೆ ಎಂದು ರಾಜನಾಥ್‌ ಸಿಂಗ್ ಪತ್ರದಲ್ಲಿ ಹೇಳಿದ್ದರು. ಅವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, ರಾಜನಾಥ್‌ ಸಿಂಗ್ ಅವರ ಪತ್ರದಲ್ಲಿ ಅವರು ಯಾವುದೇ ಕಾರಣವನ್ನು ಉಲ್ಲೇಖಿಸಿಲ್ಲ ಎಂದು ಆಘಾತ ಮತ್ತು ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ತಮಿಳುನಾಡಿನ ದೇಶಭಕ್ತಿಯ ಉತ್ಸಾಹ ಮತ್ತು ಭಾವನೆಗಳನ್ನು ವ್ಯಕ್ತಪಡಿಸಲು ರಾಜ್ಯ ಸರ್ಕಾರದ ಗಣರಾಜ್ಯೋತ್ಸವದ ಆಚರಣೆಯಲ್ಲಿ ಟ್ಯಾಬ್ಲೊವನ್ನು ಪ್ರಸ್ತುತಪಡಿಸಲಾಗುತ್ತದೆ. ಇದನ್ನು ತಮಿಳುನಾಡಿನ ಪ್ರಮುಖ ನಗರಗಳಿಗೆ ಕಳುಹಿಸಲಾಗುವುದು ಎಂದು ಸ್ಟಾಲಿನ್ ಹೇಳಿದ್ದಾರೆ.

ವೆಲ್ಲೂರು ದಂಗೆಯು 1806ರಲ್ಲಿ ನಡೆದಿತ್ತು. ಆದರೆ 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ‘ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ’ ಎಂದು ಹೇಳಲಾಗುತ್ತಿದೆ. ಅದೇ ರೀತಿ, ಝಾನ್ಸಿ ರಾಣಿ ತನ್ನ ಕತ್ತಿಯನ್ನು ಬೀಸುವ ದಶಕಗಳ ಹಿಂದೆಯೆ ವೇಲು ನಾಚಿಯಾರ್ ಬ್ರಿಟಿಷರ ವಿರುದ್ಧ ಹೋರಾಡಿ, ಕಳೆದುಕೊಂಡ ಭೂಮಿಯನ್ನು ಮರಳಿ ವಶಪಡಿಸಿಕೊಂಡರು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಅದೇ ರೀತಿ ಪುಲಿತೇವನ್, ವೀರ ಪಾಂಡಿಯ ಕಟ್ಟಬೊಮ್ಮನ್, ವೀರನ್ ಸುಂದರಲಿಂಗಂ, ಮರುತು ಸಹೋದರರು, ಧೀರನ್ ಚಿನ್ನಮಲೈ ಸೇರಿದಂತೆ ಹಲವು ವೀರರನ್ನು ಸ್ವಾತಂತ್ರ್ಯ ಹೋರಾಟಕ್ಕಾಗಿ ತಮಿಳುನಾಡಿನ ಈ ನೆಲವು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....