Homeಕರ್ನಾಟಕನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ಟ್ಯಾಬ್ಲೊ ಕುರಿತಂತೆ ಬಿಜೆಪಿ ನಾಯಕರ ಹೇಳಿಕೆಗಳು ತಾಳೆಯಾಗುತ್ತಿಲ್ಲ ಎಂದು ಹೋರಾಟಗಾರರು, ಪತ್ರಕರ್ತರು ಹೇಳಿದ್ದಾರೆ

- Advertisement -
- Advertisement -

ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಪ್ರಸ್ತುತಪಡಿಸಲು ಕೇರಳ ಸರ್ಕಾರ ಕಳುಹಿಸಿದ್ದ ಪ್ರಸ್ತಾಪವನ್ನು ಒಕ್ಕೂಟ ಸರ್ಕಾರ ನಿರಾಕರಿಸಿದೆ. ಈ ಮೂಲಕ ಸತತ ಮೂರನೇ ಬಾರಿಗೆ ಕೇರಳ ಗಣರಾಜ್ಯೋತ್ಸವ ಪರೇಡ್‌ನಿಂದ ಹೊರಗುಳಿಯಲಿದ್ದು, ದೇಶದಾದ್ಯಂತ ಈ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ರಾಜ್ಯದ ವಿರೋಧ ಪಕ್ಷಗಳು ಕೂಡಾ ಬಗ್ಗೆ ಬಿಜೆಪಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದೆ. ಆದರೆ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್‌ ಕಾರ್ಕಾಳ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ಅವರು ಒಕ್ಕೂಟ ಸರ್ಕಾರದ ಕ್ರಮವನ್ನು ಸಮರ್ಥಿಸುತ್ತಿದ್ದಾರೆ.

ಈ ಮಧ್ಯೆ ಟ್ಯಾಬ್ಲೊ ಕುರಿತಂತೆ ನಳಿನ್ ಕುಮಾರ್ ಮತ್ತು ಸುನಿಲ್ ಕುಮಾರ್ ಅವರ ಹೇಳಿಕೆಗಳಿಗೆ ಯಾವುದೆ ಸಾಮ್ಯತೆಯಿಲ್ಲದೆ ಇರುವುದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪತ್ರಕರ್ತರು, ಹೋರಾಟಗಾರರು ಸೇರಿದಂತೆ ಹಲವಾರು ಜನರು ಗುರುತಿಸಿದ್ದು ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಸತತ 3 ನೇ ಬಾರಿ ಗಣರಾಜ್ಯೋತ್ಸವ ಪರೇಡ್‌ನಿಂದ ಕೇರಳ ಹೊರಕ್ಕೆ: ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರದ ನಿರಾಕರಣೆ

ಪರೇಡ್‌ನಲ್ಲಿ ನಾರಾಯಣ ಗುರುಗಳ ಟ್ಯಾಬ್ಲೊವನ್ನು ಒಕ್ಕೂಟ ಸರ್ಕಾರ ನಿರಾಕರಿಸಿರುವುದನ್ನು ಸಮರ್ಥಿಸಿಕೊಂಡಿದ್ದ ಸಂಸ್ಕೃತಿ ಸಚಿವ ಸುನಿಲ್ ಕುಮಾರ್, “ಪ್ರತಿ ವರ್ಷ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡಿಗೆ 12 ರಾಜ್ಯಗಳ ಸ್ತಬ್ಧ ಚಿತ್ರಗಳನ್ನು ಮಾತ್ರ ಪರಿಗಣಿಸಲಾಗುತ್ತಿದೆ. ಅಂದರೆ 3 ವರ್ಷಕ್ಕೊಮ್ಮೆ ಪ್ರತಿ ರಾಜ್ಯಗಳಿಗೆ ಭಾಗವಹಿಸುವ ಅವಕಾಶವಿರುತ್ತದೆ” ಎಂದು ಹೇಳಿದ್ದರು.

ಆದರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಟ್ಯಾಬ್ಲೊ ಸತತವಾಗಿ 13ನೇ ಬಾರಿಗೆ ಆಯ್ಕೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ. ಅವರು ತಮ್ಮ ಟ್ವೀ‌ಟ್‌ನಲ್ಲಿ, “ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ. ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಸತತ 3 ನೇ ಬಾರಿ ಗಣರಾಜ್ಯೋತ್ಸವ ಪರೇಡ್‌ನಿಂದ ಕೇರಳ ಹೊರಕ್ಕೆ: ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರದ ನಿರಾಕರಣೆ

ಆದರೆ ಸಚಿವ ಸುನಿಲ್ ಕುಮಾರ್ ಅವರು, 3 ವರ್ಷಕ್ಕೊಮ್ಮೆ ಪ್ರತಿ ರಾಜ್ಯಗಳಿಗೆ ಭಾಗವಹಿಸುವ ಅವಕಾಶವಿರುತ್ತದೆ ಎಂದು ಹೇಳಿದ್ದಾರೆ. ಅವರ ಹೇಳಿಕೆ ಸುಳ್ಳು ಎಂದು ಹೇಳಿರುವ ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಅವರು, “ಸಚಿವ ಸುನಿಲ್‌ ಕುಮಾರ್ ಅವರು ನಾರಾಯಣ ಗುರುಗಳ ಸ್ಥಬ್ದಚಿತ್ರಕ್ಕೆ ಅವಕಾಶ ನಿರಾಕರಿಸಿದ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದ ವಿದ್ರೋಹವನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಸತತ ಐದು ವರ್ಷಗಳ ಕಾಲ ಕರ್ನಾಟಕದ ಸ್ತಬ್ದಚಿತ್ರಗಳು ಗಣರಾಜ್ಯೋತ್ಸವದ ಪರೇಡ್ ನಲ್ಲಿ ಭಾಗವಹಿಸಿರುವುದನ್ನು ಸುನೀಲ್ ಕುಮಾರ್ ಮರೆತುಬಿಟ್ಟಂತೆ ಕಾಣುತ್ತಿದೆ” ಎಂದು ಹೇಳಿದ್ದಾರೆ.

“ನಾರಾಯಣ ಗುರುಗಳ ಸ್ಥಬ್ದಚಿತ್ರಕ್ಕೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ತಂಡ ಸಚಿವರು ಹೇಳಿರುವ ನಿಯಮವನ್ನು ಯಾಕೆ ಉಲ್ಲೇಖಿಸಿಲ್ಲ? ಯಾಕೆ ಅವರು ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಬದಲಾಗಿ ಶಂಕರಾಚಾರ್ಯರ ಸ್ತಬ್ದಚಿತ್ರವನ್ನು ಸೂಚಿಸಿದ್ದರು?” ಎಂದು ದಿನೇಶ್‌ ಅಮಿನ್ ಕೇಳಿದ್ದಾರೆ.

“ಸುನೀಲ್ ಕುಮಾರ್ ಒಬ್ಬ ಜವಾಬ್ದಾರಿಯುತ ಸಚಿವರಾಗಿದ್ದು. ಅವರು ಇಲ್ಲದ ನಿಯಮಗಳನ್ನು ಸ್ವಯಂ ಸೃಷ್ಟಿಸಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು. ಅಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ‌ ಸಹೋದ್ಯೋಗಿ ಸುನೀಲ್ ಕುಮಾರ್ ಹೇಳಿರುವುದು ಸುಳ್ಳು ಎಂದು ಸಾಬೀತುಪಡಿಸಿದ್ದಾರೆ. ಕರ್ನಾಟಕದ ಸ್ತಬ್ದಚಿತ್ರ ಸತತ 13 ನೇ ಬಾರಿ ಗಣರಾಜ್ಯೋತ್ಸವ ಪರೇಡ್‌ಗೆ ಆಯ್ಕೆಯಾಗಿರುವುದನ್ನು ಮುಖ್ಯಮಂತ್ರಿಗಳು ಹೆಮ್ಮೆ-ಸಂತೋಷದಿಂದ ಹೇಳಿಕೊಂಡಿದ್ದಾರೆ. ಸುನೀಲ್ ಕುಮಾರ್ ಮೂರು ವರ್ಷಗಳ ನಿಯಮವನ್ನು ಎಲ್ಲಿಂದ‌ ಅಗೆದು ತೆಗೆದಿದ್ದಾರೆ ಎನ್ನುವುದನ್ನು ತಿಳಿಸಬೇಕು” ಎಂದು ದಿನೇಶ್ ಅಮಿನ್ ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಗಣರಾಜ್ಯೋತ್ಸವ ಟ್ಯಾಬ್ಲೊ: ತಮಿಳುನಾಡಿಗೂ ನಿರಾಕರಣೆ; ಸ್ವಾತಂತ್ಯ್ರ ಹೋರಾಟಗಾರನನ್ನು ‘ವ್ಯಾಪಾರಿ’ ಎಂದು ಕರೆದ ಒಕ್ಕೂಟ ಸರ್ಕಾರ

ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಅವರು ನಾರಾಯಣ ಗುರುಗಳ ಟ್ಯಾಬ್ಲೊವನ್ನು ಒಕ್ಕೂಟ ಸರ್ಕಾರ ನಿರಾಕರಿಸಿರುವುದ ಬಗ್ಗೆ ಬೇರೆಯೆ ಹೇಳಿಕೆಯನ್ನು ನೀಡಿದ್ದಾರೆ. ಅವರು ತನ್ನ ಟ್ವೀಟ್‌ನಲ್ಲಿ, “ಪ್ರಜಾಪ್ರಭುತ್ವ ದಿನದಂದು ದೆಹಲಿಯ ರಾಜಪಥದಲ್ಲಿ ಚಲಿಸುವ ಟ್ಯಾಬ್ಲೋಗಳಿಗೆ ಕೆಲವು ಮಾರ್ಗದರ್ಶಿ ಸೂತ್ರಗಳಿವೆ. ಒಕ್ಕೂಟ ಸರ್ಕಾರ ಕಳುಹಿಸಿದ ಮಾರ್ಗದರ್ಶಿ ಸೂತ್ರಗಳನ್ನು ಕೇರಳ ನಿರ್ಲಕ್ಷ್ಯ ಮಾಡಿದೆ. ಕೇರಳ ಸರಕಾರದ ಧೋರಣೆಯಿಂದ ರದ್ದಾಗಿದೆ ವಿನಃ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಎನ್ನುವ ಕಾರಣಕ್ಕೆ ಒಕ್ಕೂಟ ಸರಕಾರ ರದ್ದು ಮಾಡಿಲ್ಲ” ಎಂದು ಹೇಳಿದ್ದಾರೆ.

ಒಕ್ಕೂಟ ಸರ್ಕಾರವು ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ಮಾಡಿರುವುದರ ಬಗ್ಗೆ ಬಿಜೆಪಿಯ ಮೂವರು ನಾಯಕರ ಹೇಳಿಕೆಯ ನಡುವೆ ಯಾವುದೆ ತಾಳೆಯಾಗುತ್ತಿಲ್ಲ ಎಂದು ಹೋರಾಟಗಾರರು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆಗಾಗಿ ನಾನುಗೌರಿ.ಕಾಂ ಸಚಿವ ಸುನಿಲ್ ಕುಮಾರ್‌ ಅವರನ್ನು ಸಂಪರ್ಕಿಸಿತ್ತಾದರೂ ಅವರು ಕರೆಯನ್ನು ಸ್ವೀಕರಿಸಿಲ್ಲ. ಅವರ ಹೇಳಿಕೆ ಸಿಕ್ಕ ಕೂಡಲೇ ಅದನ್ನು ಇಲ್ಲಿ ಅಪ್‌ಡೇಟ್‌ ಮಾಡಲಾಗುವುದು.

ಇದನ್ನೂ ಓದಿ:ಟ್ಯಾಬ್ಲೊಗೆ ತಮಿಳುನಾಡು ಪ್ರಸ್ತಾಪಿಸಿದ ವ್ಯಕ್ತಿಗಳು ಪ್ರಸಿದ್ಧ ಸ್ವಾತಂತ್ಯ್ರ ಹೋರಾಟಗಾರರಲ್ಲ: ಒಕ್ಕೂಟ ಸರ್ಕಾರದ ತಜ್ಞರ ಸಮಿತಿ

ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ನಾರಾಯಣ ಗುರುಗಳ ಟ್ಯಾಬ್ಲೋ ಗಣರಾಜ್ಯೋತ್ಸವ ಪರೇಡ್ ಗೆ ಮೋದಿ ಸರಕಾರದಿಂದ ತಿರಸ್ಕಾರ ಗೊಂಡಿರುವ ವಿಚಾರದಲ್ಲಿ ಸಚಿವ ಸುನಿಲ್ ಕುಮಾರ್ ಸುಳ್ಳು ಹೇಳಿ ಬಹಿರಂಗವಾಗಿ ಸಿಕ್ಕಾಕಿಕೊಂಡಿದ್ದಾರೆ. ಅವರು ಈ ಕುರಿತು ನಾರಾಯಣ ಗುರುಗಳ ಸಮಸ್ತ ಅನುಯಾಯಿಗಳು, ಹಾಗೂ ಕೇರಳದ ಎಡರಂಗ ಸರಕಾರದ ಮುಂದೆ ಕ್ಷಮೆ ಯಾಚಿಸಬೇಕು. ಅದಕ್ಕಿಂತ ಮುಂಚೆ ಅವರು ತಕ್ಷಣ ಒಂದು ಬೈಠಕ್ ಸೇರಿ ನಾರಾಯಣ ಗುರುಗಳ ಟ್ಯಾಬ್ಲೋ ವಿಚಾರಕ್ಕೆ ಸಂಬಂಧಿಸಿ ಕೇರಳದ ಕಮ್ಯುನಿಸ್ಟ್ ಸರಕಾರದ ವಿರುದ್ದ ಒಂದು ಪರಿಣಾಮಕಾರಿ ಆರೋಪ ಸಿದ್ದಪಡಿಸಬೇಕು. ನಳಿನ್ ಕುಮಾರ್ ಒಂದು ಆರೋಪ, ಸುನಿಲ್ ಕುಮಾರ್ ಇನ್ನೊಂದು ಆರೋಪ, ಬೊಮ್ಮಾಯಿಯವರದ್ದು ಮತ್ತೊಂದು ಹೇಳಿಕೆ…ಒಂದಕ್ಕೂ ತಾಳಮೇಳ ಇಲ್ಲ. ಒಳ್ಳೆ ಜೋಕರ್‌ಗಳಂತಾಗಿದ್ದಾರೆ” ಎಂದು ಹೇಳಿದ್ದಾರೆ.

ಈ ಮಧ್ಯೆ, ತಮಿಳುನಾಡಿನ ಟ್ಯಾಬ್ಲೊಗೂ ಒಕ್ಕೂಟ ಸರ್ಕಾರ ಅನುಮತಿ ನಿರಾಕರಿಸಿದೆ. ತಮಿಳುನಾಡು ಸರ್ಕಾರವು ಸ್ವಾತಂತ್ಯ್ರ ಹೋರಾಟಗಾರರಾದ ಸುಬ್ರಮಣ್ಯ ಭಾರತಿ, ವಿ.ಒ. ಚಿದಂಬರನಾರ್‌‌, ರಾಣಿ ವೇಲು ನಾಚಿಯಾರ್, ಮರುತು ಪಾಂಡಿಯರ್‌ ಸೇರಿದಂತೆ ಹಲವು ಪ್ರಸಿದ್ದ ಸ್ವಾತಂತ್ಯ್ರ ಹೋರಾಟಗಾರರ ಟ್ಯಾಬ್ಲೊವನ್ನು ಸಿದ್ದಪಡಿಸಿತ್ತು. ಆದರೆ ಒಕ್ಕೂಟ ಸರ್ಕಾರವು ಇವರು ಪ್ರಸಿದ್ದ ಸ್ವಾತಂತ್ಯ್ರ ಹೋರಾಟಗಾರರಲ್ಲ ಎಂದು ಹೇಳಿ ನಿರಾಕರಿಸಿದೆ ಎಂದು ವರದಿಯಾಗಿದೆ. ಜೊತೆಗೆ ಸ್ವಾತಂತ್ಯ್ರ ಹೋರಾಟಗಾರ ವಿ.ಒ. ಚಿದಂಬರನಾರ್‌ ಅವರನ್ನು ‘ವ್ಯಾಪಾರಿ’ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ:ಶಿವಾಜಿ ಪ್ರತಿಮೆ ಅಪಮಾನ ಹೆಸರಿನಲ್ಲಿ ಕನ್ನಡಪರ ಕಾರ್ಯಕರ್ತ ಮೇಲೆ ಅತಿರೇಕದ ಕ್ರಮ: ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...