Homeಮುಖಪುಟತಬ್ರೆಜ್ ಲಿಂಚಿಂಗ್ ಮತ್ತು ಸಾವು: ಆರೋಪಿಗಳ ಮೇಲಿನ ಕೊಲೆ ಆಪಾದನೆ ಕೈಬಿಟ್ಟ ಚಾರ್ಜ್ ಶೀಟ್!!

ತಬ್ರೆಜ್ ಲಿಂಚಿಂಗ್ ಮತ್ತು ಸಾವು: ಆರೋಪಿಗಳ ಮೇಲಿನ ಕೊಲೆ ಆಪಾದನೆ ಕೈಬಿಟ್ಟ ಚಾರ್ಜ್ ಶೀಟ್!!

- Advertisement -
- Advertisement -

“ನಾನು ಗರ್ಭಿಣಿಯಾಗಿದ್ದೇನೆ ಎಂದು ಅವನು ಸತ್ತ ಎರಡು ದಿನಗಳ ನಂತರ ನಾನು ತಿಳಿದುಕೊಂಡೆ. ಆದರೆ ಕೆಲವು ವಾರಗಳ ನಂತರ ನಾನು ನನ್ನ ಮಗುವನ್ನು ಸಹ ಕಳೆದುಕೊಂಡೆ. ವೈದ್ಯರು ಹೇಳುವಂತೆ ನನ್ನ ದೇಹವು ಒತ್ತಡವನ್ನು ನಿಭಾಯಿಸಲು ಸಾಧ್ಯವಾಗಲಿಲ್ಲ. ನಾವು ನಿಜವಾಗಿಯೂ ಮಗುವನ್ನು ಬಯಸಿದ್ದೆವು” ಈ ರೀತಿ ಅಳುತ್ತಾ ದಿ ಕ್ವಿಂಟ್‌ನೊಂದಿಗೆ ಮಾತನಾಡಿದ್ದು ತಬ್ರೆಜ್ ಅನ್ಸಾರಿ ಅವರ ಪತ್ನಿ ಶಹಿಸ್ತ..

ಏಪ್ರಿಲ್ 27 ರಂದು ತಬ್ರೆಜ್ ಅವರೊಂದಿಗೆ ಶಹಿಸ್ತ ಅವರು ಮದುವೆಯಾದ ದಿನ. ಅವರದು ಪ್ರೇಮ ವಿವಾಹವಾಗಿದ್ದು, ಅವರು ಸಾಯುವ ಎರಡು ತಿಂಗಳ ಮೊದಲು ಏಪ್ರಿಲ್ 27 ರಂದು ಅವರ ವಿವಾಹ ನಡೆದಿತ್ತು. ಮದುವೆಯ ನಂತರ ಹೊಸಬದುಕು ಕಟ್ಟಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಜೂನ್ 17 ರಂದು ತಬ್ರೆಜ್‌ನನ್ನು ಕಂಬಕ್ಕೆ ಕಟ್ಟಿ, ಕಳ್ಳತನದ ಆರೋಪ ಹೊರಿಸಲಾಯಿತು. ಜೈ ಶ್ರೀ ರಾಮ್ ಮತ್ತು ಜೈ ಹನುಮಾನ್ ಘೋಷಣೆ ಕೂಗುವಂತೆ ಒತ್ತಾಯಿಸಲಾಯಿತು ಮತ್ತು ಕನಿಷ್ಠ ಏಳು ಗಂಟೆಗಳ ಕಾಲ ನಿಷ್ಕರುಣೆಯಿಂದ ಹೊಡೆಯಲಾಯಿತು.

ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಹೊಡೆದ ಆರೋಪಿಗಳ ಬದಲಾಗಿ ಕಳ್ಳತನದ ಆರೋಪ ಹೊರಿಸಿ ತಬ್ರೆಜ್ ನನ್ನು ಬಂಧಿಸಿದ್ದರು. ತದನಂತರ ಆತನನ್ನು ಆಸ್ಪತ್ರೆಗೆ ಸೇರಿಸಿತ್ತಾದರೂ ವೈದ್ಯರು ಸಮರ್ಪಕ ಚಿಕಿತ್ಸೆ ನೀಡಿರಲಿಲ್ಲ. ತಲೆಗೆ ತೀವ್ರ ಪೆಟ್ಟಾಗಿದ್ದರೂ ವೈದ್ಯರು ಅದನ್ನು ಗುರುತಿಸಿರಲಿಲ್ಲ ಮತ್ತು ಸಿಟಿ ಸ್ಕ್ಯಾನ್ ಸಹ ಮಾಡಿರಲಿಲ್ಲ ಎಂದು ಹೆಸರು ಹೇಳಲಿಚ್ಚಿಸದ ವೈದ್ಯರೊಬ್ಬರು ತಿಳಿಸಿದ್ದರು. ಆದಾದ ಐದು ದಿನಗಳ ನಂತರ ಜೂನ್ 22 ರಂದು ತಬ್ರೆಜ್ ಸಾವನಪ್ಪಿದ್ದರು.

ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ವ್ಯಾಪಕ ಖಂಡನೆಗೊಳಗಾದ ಈ ಪ್ರಕರಣವೀಗ ದಾರಿ ತಪ್ಪುತ್ತಿದೆ ಎಂದು ತಬ್ರೆಜ್ ಪತ್ನಿ ಶಹಿಸ್ತ ವಕೀಲರು ದೂರಿದ್ದಾರೆ.

ನಾನೀಗ ಪೊಲೀಸ್ ತನಿಖೆಯ ಬಗ್ಗೆ ಮಾತ್ರ ಯೋಚಿಸುತ್ತಿದ್ದಾನೆ. “ದಯವಿಟ್ಟು ನನಗೆ ನ್ಯಾಯ ಪಡೆಯಲು ಸಹಾಯ ಮಾಡಿ. ದಯವಿಟ್ಟು ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಿ. ದಯವಿಟ್ಟು ನನ್ನ ಶಾಂತಿಯನ್ನು ಮರಳಿ ಪಡೆಯಲು ಸಹಾಯ ಮಾಡಿ.”ಎಂದು ಶಹಿಸ್ತ ಅವಲತ್ತುಕೊಂಡಿದ್ದಾಳೆ. ಕಾರಣವೆಂದರೆ ಜುಲೈ 29 ರಂದು ಪೊಲೀಸರು ನ್ಯಾಯಾಲಯದಲ್ಲಿ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಆಕೆಯ ಗಂಡನ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕೊಲೆ ಆರೋಪವನ್ನು ಕೈಬಿಟ್ಟಿದೆ. ಇದು ಅವಳನ್ನು ಚಿಂತಾಕ್ರಾಂತಳನ್ನಾಗಿಸಿದೆ.

ಇದೇ ಸಂದರ್ಭದಲ್ಲಿ ಪೊಲೀಸ್ ತನಿಖೆಗೆ ಆಕ್ಷೇಪ ವ್ಯಕ್ತಪಡಿಸಿರುವ ಆಕೆಯ ವಕೀಲ ಅಲ್ತಾಫ್ ಹುಸೇನ್ ಆಗಸ್ಟ್ 31 ರಂದು ನ್ಯಾಯಾಲಯದಲ್ಲಿ ಪ್ರತಿಭಟನಾ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಾಲಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಸೆಕ್ಷನ್ 147 (ಗಲಭೆ), 149 (ಕಾನೂನುಬಾಹಿರ ಸಭೆ), 341 (ತಪ್ಪಾದ ಸಂಯಮ), 342 (ತಪ್ಪಾಗಿ ಬಂಧನ), 323 (ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡುವುದು), 325 (ತೀವ್ರ ನೋವನ್ನುಂಟುಮಾಡುವುದು), 304 (ಅಪರಾಧಿ ನರಹತ್ಯೆ ಕೊಲೆಗೆ ಸಮನಾಗಿಲ್ಲ) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಇವುಗಳನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿಗಳನ್ನಾಗಿ ಪ್ರಕಾಶ್ ಮಂಡಲ್ ಅಲಿಯಾಸ್ ಪಪ್ಪು ಮಂಡಲ್, ಕಮಲ್ ಮಹತೋ, ಸುನಮೋ ಪ್ರಧಾನ್, ಪ್ರೇಮ್‌ಚಂದ್ ಮಹಾಲಿ, ಸುಮಂತ್ ಮಹತೋ, ಮದನ್ ನಾಯಕ್, ಚಾಮು ನಾಯಕ್, ಮಹೇಶ್ ಮಹಾಲಿ, ಕುಶಾಲ್ ಮಹಾಲಿ, ಸತ್ಯನಾರಾಯಣ್ ನಾಯಕ್ ಮತ್ತು ಭೀಮ್ ಸೇನ್ ಮಂಡಲ್ ಎಂದು ಗುರುತಿಸಲಾಗಿದೆ.

ಕೊಲೆ ಆರೋಪವನ್ನು ತೆಗೆದುಹಾಕಲು ಏನು ಕಾರಣ?
“ತಬ್ರೆಜ್ ಹಠಾತ್ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ ಎಂಬ ವರದಿಗಳನ್ನು ನಾವು ಕೇಳುತ್ತಿದ್ದೇವೆ. ಆದರೆ ಅವರ ತಲೆಗೆ ದೊಡ್ಡ ಗಾಯವಾಗಿತ್ತು, ಹೊಡೆತದಿಂದ ಅವನ ತಲೆಬುರುಡೆ ಬಿರುಕು ಬಿಟ್ಟಿತ್ತು. ಸಾವಿಗೆ ಕಾರಣ ಕೇವಲ ಹೃದಯ ಸ್ತಂಭನ ಎಂದು ಅವರು ಹೇಗೆ ಹೇಳಬಹುದು?” ಎಂದು ವಕೀಲರಾದ ಅಲ್ತಾಫ್ ಪ್ರಶ್ನಿಸಿದ್ದಾರೆ. ಪೊಲೀಸರು ತಮ್ಮದೇ ಆದ ಬೇಜವಾಬ್ದಾರಿಯನ್ನು ಮರೆಮಾಡಲು ಮತ್ತು ಆರೋಪಿಗಳನ್ನು ರಕ್ಷಿಸಲು ‘ಹಠಾತ್ ಹೃದಯ ಸ್ತಂಭನ’ ವನ್ನು ಬಳಸುತ್ತಿದ್ದಾರೆ ಎಂದು ಶಹಿಸ್ತ ಅವರ ವಕೀಲ ಅಲ್ತಾಫ್ ಅಭಿಪ್ರಾಯಪಟ್ಟಿದ್ದಾರೆ.

ಈ ಪ್ರಕರಣದ ತನಿಖಾ ಅಧಿಕಾರಿ ಆರ್. ನಾರಾಯಣ್ ಅವರು “ಸಾವಿಗೆ ಕಾರಣವೆಂದರೆ ಹಠಾತ್ ಹೃದಯ ಸ್ತಂಭನ. “ನಾವು ಇದನ್ನು ದೃಢೀಕರಿಸಿದ ಇಬ್ಬರು ವೈದ್ಯರ ಅಭಿಪ್ರಾಯವನ್ನು ಪಡೆದಿದ್ದೇವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...