Homeಮುಖಪುಟತಬ್ರೆಜ್ ಲಿಂಚಿಂಗ್ ಮತ್ತು ಸಾವು: ಆರೋಪಿಗಳ ಮೇಲಿನ ಕೊಲೆ ಆಪಾದನೆ ಕೈಬಿಟ್ಟ ಚಾರ್ಜ್ ಶೀಟ್!!

ತಬ್ರೆಜ್ ಲಿಂಚಿಂಗ್ ಮತ್ತು ಸಾವು: ಆರೋಪಿಗಳ ಮೇಲಿನ ಕೊಲೆ ಆಪಾದನೆ ಕೈಬಿಟ್ಟ ಚಾರ್ಜ್ ಶೀಟ್!!

- Advertisement -
- Advertisement -

“ನಾನು ಗರ್ಭಿಣಿಯಾಗಿದ್ದೇನೆ ಎಂದು ಅವನು ಸತ್ತ ಎರಡು ದಿನಗಳ ನಂತರ ನಾನು ತಿಳಿದುಕೊಂಡೆ. ಆದರೆ ಕೆಲವು ವಾರಗಳ ನಂತರ ನಾನು ನನ್ನ ಮಗುವನ್ನು ಸಹ ಕಳೆದುಕೊಂಡೆ. ವೈದ್ಯರು ಹೇಳುವಂತೆ ನನ್ನ ದೇಹವು ಒತ್ತಡವನ್ನು ನಿಭಾಯಿಸಲು ಸಾಧ್ಯವಾಗಲಿಲ್ಲ. ನಾವು ನಿಜವಾಗಿಯೂ ಮಗುವನ್ನು ಬಯಸಿದ್ದೆವು” ಈ ರೀತಿ ಅಳುತ್ತಾ ದಿ ಕ್ವಿಂಟ್‌ನೊಂದಿಗೆ ಮಾತನಾಡಿದ್ದು ತಬ್ರೆಜ್ ಅನ್ಸಾರಿ ಅವರ ಪತ್ನಿ ಶಹಿಸ್ತ..

ಏಪ್ರಿಲ್ 27 ರಂದು ತಬ್ರೆಜ್ ಅವರೊಂದಿಗೆ ಶಹಿಸ್ತ ಅವರು ಮದುವೆಯಾದ ದಿನ. ಅವರದು ಪ್ರೇಮ ವಿವಾಹವಾಗಿದ್ದು, ಅವರು ಸಾಯುವ ಎರಡು ತಿಂಗಳ ಮೊದಲು ಏಪ್ರಿಲ್ 27 ರಂದು ಅವರ ವಿವಾಹ ನಡೆದಿತ್ತು. ಮದುವೆಯ ನಂತರ ಹೊಸಬದುಕು ಕಟ್ಟಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಜೂನ್ 17 ರಂದು ತಬ್ರೆಜ್‌ನನ್ನು ಕಂಬಕ್ಕೆ ಕಟ್ಟಿ, ಕಳ್ಳತನದ ಆರೋಪ ಹೊರಿಸಲಾಯಿತು. ಜೈ ಶ್ರೀ ರಾಮ್ ಮತ್ತು ಜೈ ಹನುಮಾನ್ ಘೋಷಣೆ ಕೂಗುವಂತೆ ಒತ್ತಾಯಿಸಲಾಯಿತು ಮತ್ತು ಕನಿಷ್ಠ ಏಳು ಗಂಟೆಗಳ ಕಾಲ ನಿಷ್ಕರುಣೆಯಿಂದ ಹೊಡೆಯಲಾಯಿತು.

ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಹೊಡೆದ ಆರೋಪಿಗಳ ಬದಲಾಗಿ ಕಳ್ಳತನದ ಆರೋಪ ಹೊರಿಸಿ ತಬ್ರೆಜ್ ನನ್ನು ಬಂಧಿಸಿದ್ದರು. ತದನಂತರ ಆತನನ್ನು ಆಸ್ಪತ್ರೆಗೆ ಸೇರಿಸಿತ್ತಾದರೂ ವೈದ್ಯರು ಸಮರ್ಪಕ ಚಿಕಿತ್ಸೆ ನೀಡಿರಲಿಲ್ಲ. ತಲೆಗೆ ತೀವ್ರ ಪೆಟ್ಟಾಗಿದ್ದರೂ ವೈದ್ಯರು ಅದನ್ನು ಗುರುತಿಸಿರಲಿಲ್ಲ ಮತ್ತು ಸಿಟಿ ಸ್ಕ್ಯಾನ್ ಸಹ ಮಾಡಿರಲಿಲ್ಲ ಎಂದು ಹೆಸರು ಹೇಳಲಿಚ್ಚಿಸದ ವೈದ್ಯರೊಬ್ಬರು ತಿಳಿಸಿದ್ದರು. ಆದಾದ ಐದು ದಿನಗಳ ನಂತರ ಜೂನ್ 22 ರಂದು ತಬ್ರೆಜ್ ಸಾವನಪ್ಪಿದ್ದರು.

ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ವ್ಯಾಪಕ ಖಂಡನೆಗೊಳಗಾದ ಈ ಪ್ರಕರಣವೀಗ ದಾರಿ ತಪ್ಪುತ್ತಿದೆ ಎಂದು ತಬ್ರೆಜ್ ಪತ್ನಿ ಶಹಿಸ್ತ ವಕೀಲರು ದೂರಿದ್ದಾರೆ.

ನಾನೀಗ ಪೊಲೀಸ್ ತನಿಖೆಯ ಬಗ್ಗೆ ಮಾತ್ರ ಯೋಚಿಸುತ್ತಿದ್ದಾನೆ. “ದಯವಿಟ್ಟು ನನಗೆ ನ್ಯಾಯ ಪಡೆಯಲು ಸಹಾಯ ಮಾಡಿ. ದಯವಿಟ್ಟು ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಿ. ದಯವಿಟ್ಟು ನನ್ನ ಶಾಂತಿಯನ್ನು ಮರಳಿ ಪಡೆಯಲು ಸಹಾಯ ಮಾಡಿ.”ಎಂದು ಶಹಿಸ್ತ ಅವಲತ್ತುಕೊಂಡಿದ್ದಾಳೆ. ಕಾರಣವೆಂದರೆ ಜುಲೈ 29 ರಂದು ಪೊಲೀಸರು ನ್ಯಾಯಾಲಯದಲ್ಲಿ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಆಕೆಯ ಗಂಡನ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕೊಲೆ ಆರೋಪವನ್ನು ಕೈಬಿಟ್ಟಿದೆ. ಇದು ಅವಳನ್ನು ಚಿಂತಾಕ್ರಾಂತಳನ್ನಾಗಿಸಿದೆ.

ಇದೇ ಸಂದರ್ಭದಲ್ಲಿ ಪೊಲೀಸ್ ತನಿಖೆಗೆ ಆಕ್ಷೇಪ ವ್ಯಕ್ತಪಡಿಸಿರುವ ಆಕೆಯ ವಕೀಲ ಅಲ್ತಾಫ್ ಹುಸೇನ್ ಆಗಸ್ಟ್ 31 ರಂದು ನ್ಯಾಯಾಲಯದಲ್ಲಿ ಪ್ರತಿಭಟನಾ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಾಲಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಸೆಕ್ಷನ್ 147 (ಗಲಭೆ), 149 (ಕಾನೂನುಬಾಹಿರ ಸಭೆ), 341 (ತಪ್ಪಾದ ಸಂಯಮ), 342 (ತಪ್ಪಾಗಿ ಬಂಧನ), 323 (ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡುವುದು), 325 (ತೀವ್ರ ನೋವನ್ನುಂಟುಮಾಡುವುದು), 304 (ಅಪರಾಧಿ ನರಹತ್ಯೆ ಕೊಲೆಗೆ ಸಮನಾಗಿಲ್ಲ) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಇವುಗಳನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿಗಳನ್ನಾಗಿ ಪ್ರಕಾಶ್ ಮಂಡಲ್ ಅಲಿಯಾಸ್ ಪಪ್ಪು ಮಂಡಲ್, ಕಮಲ್ ಮಹತೋ, ಸುನಮೋ ಪ್ರಧಾನ್, ಪ್ರೇಮ್‌ಚಂದ್ ಮಹಾಲಿ, ಸುಮಂತ್ ಮಹತೋ, ಮದನ್ ನಾಯಕ್, ಚಾಮು ನಾಯಕ್, ಮಹೇಶ್ ಮಹಾಲಿ, ಕುಶಾಲ್ ಮಹಾಲಿ, ಸತ್ಯನಾರಾಯಣ್ ನಾಯಕ್ ಮತ್ತು ಭೀಮ್ ಸೇನ್ ಮಂಡಲ್ ಎಂದು ಗುರುತಿಸಲಾಗಿದೆ.

ಕೊಲೆ ಆರೋಪವನ್ನು ತೆಗೆದುಹಾಕಲು ಏನು ಕಾರಣ?
“ತಬ್ರೆಜ್ ಹಠಾತ್ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ ಎಂಬ ವರದಿಗಳನ್ನು ನಾವು ಕೇಳುತ್ತಿದ್ದೇವೆ. ಆದರೆ ಅವರ ತಲೆಗೆ ದೊಡ್ಡ ಗಾಯವಾಗಿತ್ತು, ಹೊಡೆತದಿಂದ ಅವನ ತಲೆಬುರುಡೆ ಬಿರುಕು ಬಿಟ್ಟಿತ್ತು. ಸಾವಿಗೆ ಕಾರಣ ಕೇವಲ ಹೃದಯ ಸ್ತಂಭನ ಎಂದು ಅವರು ಹೇಗೆ ಹೇಳಬಹುದು?” ಎಂದು ವಕೀಲರಾದ ಅಲ್ತಾಫ್ ಪ್ರಶ್ನಿಸಿದ್ದಾರೆ. ಪೊಲೀಸರು ತಮ್ಮದೇ ಆದ ಬೇಜವಾಬ್ದಾರಿಯನ್ನು ಮರೆಮಾಡಲು ಮತ್ತು ಆರೋಪಿಗಳನ್ನು ರಕ್ಷಿಸಲು ‘ಹಠಾತ್ ಹೃದಯ ಸ್ತಂಭನ’ ವನ್ನು ಬಳಸುತ್ತಿದ್ದಾರೆ ಎಂದು ಶಹಿಸ್ತ ಅವರ ವಕೀಲ ಅಲ್ತಾಫ್ ಅಭಿಪ್ರಾಯಪಟ್ಟಿದ್ದಾರೆ.

ಈ ಪ್ರಕರಣದ ತನಿಖಾ ಅಧಿಕಾರಿ ಆರ್. ನಾರಾಯಣ್ ಅವರು “ಸಾವಿಗೆ ಕಾರಣವೆಂದರೆ ಹಠಾತ್ ಹೃದಯ ಸ್ತಂಭನ. “ನಾವು ಇದನ್ನು ದೃಢೀಕರಿಸಿದ ಇಬ್ಬರು ವೈದ್ಯರ ಅಭಿಪ್ರಾಯವನ್ನು ಪಡೆದಿದ್ದೇವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...