Homeಮುಖಪುಟತಬ್ರೆಜ್ ಲಿಂಚಿಂಗ್ ಮತ್ತು ಸಾವು: ಆರೋಪಿಗಳ ಮೇಲಿನ ಕೊಲೆ ಆಪಾದನೆ ಕೈಬಿಟ್ಟ ಚಾರ್ಜ್ ಶೀಟ್!!

ತಬ್ರೆಜ್ ಲಿಂಚಿಂಗ್ ಮತ್ತು ಸಾವು: ಆರೋಪಿಗಳ ಮೇಲಿನ ಕೊಲೆ ಆಪಾದನೆ ಕೈಬಿಟ್ಟ ಚಾರ್ಜ್ ಶೀಟ್!!

- Advertisement -
- Advertisement -

“ನಾನು ಗರ್ಭಿಣಿಯಾಗಿದ್ದೇನೆ ಎಂದು ಅವನು ಸತ್ತ ಎರಡು ದಿನಗಳ ನಂತರ ನಾನು ತಿಳಿದುಕೊಂಡೆ. ಆದರೆ ಕೆಲವು ವಾರಗಳ ನಂತರ ನಾನು ನನ್ನ ಮಗುವನ್ನು ಸಹ ಕಳೆದುಕೊಂಡೆ. ವೈದ್ಯರು ಹೇಳುವಂತೆ ನನ್ನ ದೇಹವು ಒತ್ತಡವನ್ನು ನಿಭಾಯಿಸಲು ಸಾಧ್ಯವಾಗಲಿಲ್ಲ. ನಾವು ನಿಜವಾಗಿಯೂ ಮಗುವನ್ನು ಬಯಸಿದ್ದೆವು” ಈ ರೀತಿ ಅಳುತ್ತಾ ದಿ ಕ್ವಿಂಟ್‌ನೊಂದಿಗೆ ಮಾತನಾಡಿದ್ದು ತಬ್ರೆಜ್ ಅನ್ಸಾರಿ ಅವರ ಪತ್ನಿ ಶಹಿಸ್ತ..

ಏಪ್ರಿಲ್ 27 ರಂದು ತಬ್ರೆಜ್ ಅವರೊಂದಿಗೆ ಶಹಿಸ್ತ ಅವರು ಮದುವೆಯಾದ ದಿನ. ಅವರದು ಪ್ರೇಮ ವಿವಾಹವಾಗಿದ್ದು, ಅವರು ಸಾಯುವ ಎರಡು ತಿಂಗಳ ಮೊದಲು ಏಪ್ರಿಲ್ 27 ರಂದು ಅವರ ವಿವಾಹ ನಡೆದಿತ್ತು. ಮದುವೆಯ ನಂತರ ಹೊಸಬದುಕು ಕಟ್ಟಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಜೂನ್ 17 ರಂದು ತಬ್ರೆಜ್‌ನನ್ನು ಕಂಬಕ್ಕೆ ಕಟ್ಟಿ, ಕಳ್ಳತನದ ಆರೋಪ ಹೊರಿಸಲಾಯಿತು. ಜೈ ಶ್ರೀ ರಾಮ್ ಮತ್ತು ಜೈ ಹನುಮಾನ್ ಘೋಷಣೆ ಕೂಗುವಂತೆ ಒತ್ತಾಯಿಸಲಾಯಿತು ಮತ್ತು ಕನಿಷ್ಠ ಏಳು ಗಂಟೆಗಳ ಕಾಲ ನಿಷ್ಕರುಣೆಯಿಂದ ಹೊಡೆಯಲಾಯಿತು.

ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಹೊಡೆದ ಆರೋಪಿಗಳ ಬದಲಾಗಿ ಕಳ್ಳತನದ ಆರೋಪ ಹೊರಿಸಿ ತಬ್ರೆಜ್ ನನ್ನು ಬಂಧಿಸಿದ್ದರು. ತದನಂತರ ಆತನನ್ನು ಆಸ್ಪತ್ರೆಗೆ ಸೇರಿಸಿತ್ತಾದರೂ ವೈದ್ಯರು ಸಮರ್ಪಕ ಚಿಕಿತ್ಸೆ ನೀಡಿರಲಿಲ್ಲ. ತಲೆಗೆ ತೀವ್ರ ಪೆಟ್ಟಾಗಿದ್ದರೂ ವೈದ್ಯರು ಅದನ್ನು ಗುರುತಿಸಿರಲಿಲ್ಲ ಮತ್ತು ಸಿಟಿ ಸ್ಕ್ಯಾನ್ ಸಹ ಮಾಡಿರಲಿಲ್ಲ ಎಂದು ಹೆಸರು ಹೇಳಲಿಚ್ಚಿಸದ ವೈದ್ಯರೊಬ್ಬರು ತಿಳಿಸಿದ್ದರು. ಆದಾದ ಐದು ದಿನಗಳ ನಂತರ ಜೂನ್ 22 ರಂದು ತಬ್ರೆಜ್ ಸಾವನಪ್ಪಿದ್ದರು.

ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ವ್ಯಾಪಕ ಖಂಡನೆಗೊಳಗಾದ ಈ ಪ್ರಕರಣವೀಗ ದಾರಿ ತಪ್ಪುತ್ತಿದೆ ಎಂದು ತಬ್ರೆಜ್ ಪತ್ನಿ ಶಹಿಸ್ತ ವಕೀಲರು ದೂರಿದ್ದಾರೆ.

ನಾನೀಗ ಪೊಲೀಸ್ ತನಿಖೆಯ ಬಗ್ಗೆ ಮಾತ್ರ ಯೋಚಿಸುತ್ತಿದ್ದಾನೆ. “ದಯವಿಟ್ಟು ನನಗೆ ನ್ಯಾಯ ಪಡೆಯಲು ಸಹಾಯ ಮಾಡಿ. ದಯವಿಟ್ಟು ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಿ. ದಯವಿಟ್ಟು ನನ್ನ ಶಾಂತಿಯನ್ನು ಮರಳಿ ಪಡೆಯಲು ಸಹಾಯ ಮಾಡಿ.”ಎಂದು ಶಹಿಸ್ತ ಅವಲತ್ತುಕೊಂಡಿದ್ದಾಳೆ. ಕಾರಣವೆಂದರೆ ಜುಲೈ 29 ರಂದು ಪೊಲೀಸರು ನ್ಯಾಯಾಲಯದಲ್ಲಿ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಆಕೆಯ ಗಂಡನ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕೊಲೆ ಆರೋಪವನ್ನು ಕೈಬಿಟ್ಟಿದೆ. ಇದು ಅವಳನ್ನು ಚಿಂತಾಕ್ರಾಂತಳನ್ನಾಗಿಸಿದೆ.

ಇದೇ ಸಂದರ್ಭದಲ್ಲಿ ಪೊಲೀಸ್ ತನಿಖೆಗೆ ಆಕ್ಷೇಪ ವ್ಯಕ್ತಪಡಿಸಿರುವ ಆಕೆಯ ವಕೀಲ ಅಲ್ತಾಫ್ ಹುಸೇನ್ ಆಗಸ್ಟ್ 31 ರಂದು ನ್ಯಾಯಾಲಯದಲ್ಲಿ ಪ್ರತಿಭಟನಾ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಾಲಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಸೆಕ್ಷನ್ 147 (ಗಲಭೆ), 149 (ಕಾನೂನುಬಾಹಿರ ಸಭೆ), 341 (ತಪ್ಪಾದ ಸಂಯಮ), 342 (ತಪ್ಪಾಗಿ ಬಂಧನ), 323 (ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡುವುದು), 325 (ತೀವ್ರ ನೋವನ್ನುಂಟುಮಾಡುವುದು), 304 (ಅಪರಾಧಿ ನರಹತ್ಯೆ ಕೊಲೆಗೆ ಸಮನಾಗಿಲ್ಲ) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಇವುಗಳನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿಗಳನ್ನಾಗಿ ಪ್ರಕಾಶ್ ಮಂಡಲ್ ಅಲಿಯಾಸ್ ಪಪ್ಪು ಮಂಡಲ್, ಕಮಲ್ ಮಹತೋ, ಸುನಮೋ ಪ್ರಧಾನ್, ಪ್ರೇಮ್‌ಚಂದ್ ಮಹಾಲಿ, ಸುಮಂತ್ ಮಹತೋ, ಮದನ್ ನಾಯಕ್, ಚಾಮು ನಾಯಕ್, ಮಹೇಶ್ ಮಹಾಲಿ, ಕುಶಾಲ್ ಮಹಾಲಿ, ಸತ್ಯನಾರಾಯಣ್ ನಾಯಕ್ ಮತ್ತು ಭೀಮ್ ಸೇನ್ ಮಂಡಲ್ ಎಂದು ಗುರುತಿಸಲಾಗಿದೆ.

ಕೊಲೆ ಆರೋಪವನ್ನು ತೆಗೆದುಹಾಕಲು ಏನು ಕಾರಣ?
“ತಬ್ರೆಜ್ ಹಠಾತ್ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ ಎಂಬ ವರದಿಗಳನ್ನು ನಾವು ಕೇಳುತ್ತಿದ್ದೇವೆ. ಆದರೆ ಅವರ ತಲೆಗೆ ದೊಡ್ಡ ಗಾಯವಾಗಿತ್ತು, ಹೊಡೆತದಿಂದ ಅವನ ತಲೆಬುರುಡೆ ಬಿರುಕು ಬಿಟ್ಟಿತ್ತು. ಸಾವಿಗೆ ಕಾರಣ ಕೇವಲ ಹೃದಯ ಸ್ತಂಭನ ಎಂದು ಅವರು ಹೇಗೆ ಹೇಳಬಹುದು?” ಎಂದು ವಕೀಲರಾದ ಅಲ್ತಾಫ್ ಪ್ರಶ್ನಿಸಿದ್ದಾರೆ. ಪೊಲೀಸರು ತಮ್ಮದೇ ಆದ ಬೇಜವಾಬ್ದಾರಿಯನ್ನು ಮರೆಮಾಡಲು ಮತ್ತು ಆರೋಪಿಗಳನ್ನು ರಕ್ಷಿಸಲು ‘ಹಠಾತ್ ಹೃದಯ ಸ್ತಂಭನ’ ವನ್ನು ಬಳಸುತ್ತಿದ್ದಾರೆ ಎಂದು ಶಹಿಸ್ತ ಅವರ ವಕೀಲ ಅಲ್ತಾಫ್ ಅಭಿಪ್ರಾಯಪಟ್ಟಿದ್ದಾರೆ.

ಈ ಪ್ರಕರಣದ ತನಿಖಾ ಅಧಿಕಾರಿ ಆರ್. ನಾರಾಯಣ್ ಅವರು “ಸಾವಿಗೆ ಕಾರಣವೆಂದರೆ ಹಠಾತ್ ಹೃದಯ ಸ್ತಂಭನ. “ನಾವು ಇದನ್ನು ದೃಢೀಕರಿಸಿದ ಇಬ್ಬರು ವೈದ್ಯರ ಅಭಿಪ್ರಾಯವನ್ನು ಪಡೆದಿದ್ದೇವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...