Homeಮುಖಪುಟತಬ್ರೆಜ್ ಲಿಂಚಿಂಗ್ ಮತ್ತು ಸಾವು: ಆರೋಪಿಗಳ ಮೇಲಿನ ಕೊಲೆ ಆಪಾದನೆ ಕೈಬಿಟ್ಟ ಚಾರ್ಜ್ ಶೀಟ್!!

ತಬ್ರೆಜ್ ಲಿಂಚಿಂಗ್ ಮತ್ತು ಸಾವು: ಆರೋಪಿಗಳ ಮೇಲಿನ ಕೊಲೆ ಆಪಾದನೆ ಕೈಬಿಟ್ಟ ಚಾರ್ಜ್ ಶೀಟ್!!

- Advertisement -
- Advertisement -

“ನಾನು ಗರ್ಭಿಣಿಯಾಗಿದ್ದೇನೆ ಎಂದು ಅವನು ಸತ್ತ ಎರಡು ದಿನಗಳ ನಂತರ ನಾನು ತಿಳಿದುಕೊಂಡೆ. ಆದರೆ ಕೆಲವು ವಾರಗಳ ನಂತರ ನಾನು ನನ್ನ ಮಗುವನ್ನು ಸಹ ಕಳೆದುಕೊಂಡೆ. ವೈದ್ಯರು ಹೇಳುವಂತೆ ನನ್ನ ದೇಹವು ಒತ್ತಡವನ್ನು ನಿಭಾಯಿಸಲು ಸಾಧ್ಯವಾಗಲಿಲ್ಲ. ನಾವು ನಿಜವಾಗಿಯೂ ಮಗುವನ್ನು ಬಯಸಿದ್ದೆವು” ಈ ರೀತಿ ಅಳುತ್ತಾ ದಿ ಕ್ವಿಂಟ್‌ನೊಂದಿಗೆ ಮಾತನಾಡಿದ್ದು ತಬ್ರೆಜ್ ಅನ್ಸಾರಿ ಅವರ ಪತ್ನಿ ಶಹಿಸ್ತ..

ಏಪ್ರಿಲ್ 27 ರಂದು ತಬ್ರೆಜ್ ಅವರೊಂದಿಗೆ ಶಹಿಸ್ತ ಅವರು ಮದುವೆಯಾದ ದಿನ. ಅವರದು ಪ್ರೇಮ ವಿವಾಹವಾಗಿದ್ದು, ಅವರು ಸಾಯುವ ಎರಡು ತಿಂಗಳ ಮೊದಲು ಏಪ್ರಿಲ್ 27 ರಂದು ಅವರ ವಿವಾಹ ನಡೆದಿತ್ತು. ಮದುವೆಯ ನಂತರ ಹೊಸಬದುಕು ಕಟ್ಟಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಜೂನ್ 17 ರಂದು ತಬ್ರೆಜ್‌ನನ್ನು ಕಂಬಕ್ಕೆ ಕಟ್ಟಿ, ಕಳ್ಳತನದ ಆರೋಪ ಹೊರಿಸಲಾಯಿತು. ಜೈ ಶ್ರೀ ರಾಮ್ ಮತ್ತು ಜೈ ಹನುಮಾನ್ ಘೋಷಣೆ ಕೂಗುವಂತೆ ಒತ್ತಾಯಿಸಲಾಯಿತು ಮತ್ತು ಕನಿಷ್ಠ ಏಳು ಗಂಟೆಗಳ ಕಾಲ ನಿಷ್ಕರುಣೆಯಿಂದ ಹೊಡೆಯಲಾಯಿತು.

ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಹೊಡೆದ ಆರೋಪಿಗಳ ಬದಲಾಗಿ ಕಳ್ಳತನದ ಆರೋಪ ಹೊರಿಸಿ ತಬ್ರೆಜ್ ನನ್ನು ಬಂಧಿಸಿದ್ದರು. ತದನಂತರ ಆತನನ್ನು ಆಸ್ಪತ್ರೆಗೆ ಸೇರಿಸಿತ್ತಾದರೂ ವೈದ್ಯರು ಸಮರ್ಪಕ ಚಿಕಿತ್ಸೆ ನೀಡಿರಲಿಲ್ಲ. ತಲೆಗೆ ತೀವ್ರ ಪೆಟ್ಟಾಗಿದ್ದರೂ ವೈದ್ಯರು ಅದನ್ನು ಗುರುತಿಸಿರಲಿಲ್ಲ ಮತ್ತು ಸಿಟಿ ಸ್ಕ್ಯಾನ್ ಸಹ ಮಾಡಿರಲಿಲ್ಲ ಎಂದು ಹೆಸರು ಹೇಳಲಿಚ್ಚಿಸದ ವೈದ್ಯರೊಬ್ಬರು ತಿಳಿಸಿದ್ದರು. ಆದಾದ ಐದು ದಿನಗಳ ನಂತರ ಜೂನ್ 22 ರಂದು ತಬ್ರೆಜ್ ಸಾವನಪ್ಪಿದ್ದರು.

ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ವ್ಯಾಪಕ ಖಂಡನೆಗೊಳಗಾದ ಈ ಪ್ರಕರಣವೀಗ ದಾರಿ ತಪ್ಪುತ್ತಿದೆ ಎಂದು ತಬ್ರೆಜ್ ಪತ್ನಿ ಶಹಿಸ್ತ ವಕೀಲರು ದೂರಿದ್ದಾರೆ.

ನಾನೀಗ ಪೊಲೀಸ್ ತನಿಖೆಯ ಬಗ್ಗೆ ಮಾತ್ರ ಯೋಚಿಸುತ್ತಿದ್ದಾನೆ. “ದಯವಿಟ್ಟು ನನಗೆ ನ್ಯಾಯ ಪಡೆಯಲು ಸಹಾಯ ಮಾಡಿ. ದಯವಿಟ್ಟು ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಿ. ದಯವಿಟ್ಟು ನನ್ನ ಶಾಂತಿಯನ್ನು ಮರಳಿ ಪಡೆಯಲು ಸಹಾಯ ಮಾಡಿ.”ಎಂದು ಶಹಿಸ್ತ ಅವಲತ್ತುಕೊಂಡಿದ್ದಾಳೆ. ಕಾರಣವೆಂದರೆ ಜುಲೈ 29 ರಂದು ಪೊಲೀಸರು ನ್ಯಾಯಾಲಯದಲ್ಲಿ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಆಕೆಯ ಗಂಡನ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕೊಲೆ ಆರೋಪವನ್ನು ಕೈಬಿಟ್ಟಿದೆ. ಇದು ಅವಳನ್ನು ಚಿಂತಾಕ್ರಾಂತಳನ್ನಾಗಿಸಿದೆ.

ಇದೇ ಸಂದರ್ಭದಲ್ಲಿ ಪೊಲೀಸ್ ತನಿಖೆಗೆ ಆಕ್ಷೇಪ ವ್ಯಕ್ತಪಡಿಸಿರುವ ಆಕೆಯ ವಕೀಲ ಅಲ್ತಾಫ್ ಹುಸೇನ್ ಆಗಸ್ಟ್ 31 ರಂದು ನ್ಯಾಯಾಲಯದಲ್ಲಿ ಪ್ರತಿಭಟನಾ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಾಲಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಸೆಕ್ಷನ್ 147 (ಗಲಭೆ), 149 (ಕಾನೂನುಬಾಹಿರ ಸಭೆ), 341 (ತಪ್ಪಾದ ಸಂಯಮ), 342 (ತಪ್ಪಾಗಿ ಬಂಧನ), 323 (ಸ್ವಯಂಪ್ರೇರಣೆಯಿಂದ ನೋವನ್ನುಂಟುಮಾಡುವುದು), 325 (ತೀವ್ರ ನೋವನ್ನುಂಟುಮಾಡುವುದು), 304 (ಅಪರಾಧಿ ನರಹತ್ಯೆ ಕೊಲೆಗೆ ಸಮನಾಗಿಲ್ಲ) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಇವುಗಳನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿಗಳನ್ನಾಗಿ ಪ್ರಕಾಶ್ ಮಂಡಲ್ ಅಲಿಯಾಸ್ ಪಪ್ಪು ಮಂಡಲ್, ಕಮಲ್ ಮಹತೋ, ಸುನಮೋ ಪ್ರಧಾನ್, ಪ್ರೇಮ್‌ಚಂದ್ ಮಹಾಲಿ, ಸುಮಂತ್ ಮಹತೋ, ಮದನ್ ನಾಯಕ್, ಚಾಮು ನಾಯಕ್, ಮಹೇಶ್ ಮಹಾಲಿ, ಕುಶಾಲ್ ಮಹಾಲಿ, ಸತ್ಯನಾರಾಯಣ್ ನಾಯಕ್ ಮತ್ತು ಭೀಮ್ ಸೇನ್ ಮಂಡಲ್ ಎಂದು ಗುರುತಿಸಲಾಗಿದೆ.

ಕೊಲೆ ಆರೋಪವನ್ನು ತೆಗೆದುಹಾಕಲು ಏನು ಕಾರಣ?
“ತಬ್ರೆಜ್ ಹಠಾತ್ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ ಎಂಬ ವರದಿಗಳನ್ನು ನಾವು ಕೇಳುತ್ತಿದ್ದೇವೆ. ಆದರೆ ಅವರ ತಲೆಗೆ ದೊಡ್ಡ ಗಾಯವಾಗಿತ್ತು, ಹೊಡೆತದಿಂದ ಅವನ ತಲೆಬುರುಡೆ ಬಿರುಕು ಬಿಟ್ಟಿತ್ತು. ಸಾವಿಗೆ ಕಾರಣ ಕೇವಲ ಹೃದಯ ಸ್ತಂಭನ ಎಂದು ಅವರು ಹೇಗೆ ಹೇಳಬಹುದು?” ಎಂದು ವಕೀಲರಾದ ಅಲ್ತಾಫ್ ಪ್ರಶ್ನಿಸಿದ್ದಾರೆ. ಪೊಲೀಸರು ತಮ್ಮದೇ ಆದ ಬೇಜವಾಬ್ದಾರಿಯನ್ನು ಮರೆಮಾಡಲು ಮತ್ತು ಆರೋಪಿಗಳನ್ನು ರಕ್ಷಿಸಲು ‘ಹಠಾತ್ ಹೃದಯ ಸ್ತಂಭನ’ ವನ್ನು ಬಳಸುತ್ತಿದ್ದಾರೆ ಎಂದು ಶಹಿಸ್ತ ಅವರ ವಕೀಲ ಅಲ್ತಾಫ್ ಅಭಿಪ್ರಾಯಪಟ್ಟಿದ್ದಾರೆ.

ಈ ಪ್ರಕರಣದ ತನಿಖಾ ಅಧಿಕಾರಿ ಆರ್. ನಾರಾಯಣ್ ಅವರು “ಸಾವಿಗೆ ಕಾರಣವೆಂದರೆ ಹಠಾತ್ ಹೃದಯ ಸ್ತಂಭನ. “ನಾವು ಇದನ್ನು ದೃಢೀಕರಿಸಿದ ಇಬ್ಬರು ವೈದ್ಯರ ಅಭಿಪ್ರಾಯವನ್ನು ಪಡೆದಿದ್ದೇವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...