Homeಸಾಹಿತ್ಯ-ಸಂಸ್ಕೃತಿಪುಸ್ತಕ ವಿಮರ್ಶೆಮನುಕುಲಕ್ಕೆ ವೇದ್ಯ, ಬದುಕಿಗೆ ನೈವೇದ್ಯ ಠಾಗೋರ್‍ ಅವರ ಗೀತಾಂಜಲಿ

ಮನುಕುಲಕ್ಕೆ ವೇದ್ಯ, ಬದುಕಿಗೆ ನೈವೇದ್ಯ ಠಾಗೋರ್‍ ಅವರ ಗೀತಾಂಜಲಿ

- Advertisement -
- Advertisement -

ಸಂಕಟದಲಿ ಸಂರಕ್ಷಿಸು ಎಂಬ ಪ್ರಾರ್ಥನೆ ಇಲ್ಲ
ಸಂಕಟದಲಿ ಭಯವಿರದಿರೆ ಸಾಕು, ಹೆಚ್ಚಿನದೇನೂ ಬೇಕಿಲ್ಲ

ಜನರ ಭಯ ಮತ್ತು ಆಸೆಗಳೆಂಬ ಮೂಲ ಪ್ರವೃತ್ತಿಯೇ ಪುರೋಹಿತಶಾಹಿಯ ಬಂಡವಾಳ. ದೈವಿಕ ಪ್ರತಿಮೆಯನ್ನು ಮುಂದಿಟ್ಟುಕೊಂಡು ಭಕ್ತ ಮತ್ತು ಭಗವಂತರಿಬ್ಬರೂ ಸಂಧಿಸದ ಹಾಗೆ ನೋಡಿಕೊಳ್ಳುವ ಪುರೋಹಿತವರ್ಗವನ್ನು ದಾಟಿ ತಮ್ಮ ಅಂತರಂಗದಲ್ಲಿಯೇ ಭಗವಂತನೆಂಬ ಪೂರ್ಣಾಸ್ತಿತ್ವದ ಚೈತನ್ಯವನ್ನು ಬಿಂಬ ಪ್ರತಿಬಿಂಬದಂತೆ ನೋಡುವ ಭಕ್ತಿಯೇ ರವೀಂದ್ರನಾಥ ಠಾಗೋರರ ಗೀತಾಂಜಲಿ.

ಇದರಲ್ಲಿನ 103 ಕವನಗಳಲ್ಲಿ ಪ್ರಧಾನವಾಗಿ ಕಾಣುವುದು ಭಾವುಕತೆಯೇ. ಸಾಮಾನ್ಯವಾಗಿ ಕಾವ್ಯವೆಂದ ಕೂಡಲೇ ರೂಪಕಗಳು ಮುನ್ನೆಲೆಗೆ ಬರುವುದಾದರೂ ಗೀತಾಂಜಲಿಯಲ್ಲಿ ಅವು ಸರಳಗೊಳ್ಳುವವು. ಪ್ರಕೃತಿಯ ರೂಪಕಗಳನ್ನೇ ಬಳಸಿದರೂ ಅವು ಕಠಿಣವಾಗಿ ಸಾಂಕೇತಿಕವಾಗಿರುವ ಬದಲು ನೇರವಾಗಿ ಎದೆಗೆ ತಟ್ಟುವವು. ಈ ಪುಸ್ತಕಕ್ಕೆ ಮುನ್ನುಡಿಯನ್ನು ಬರೆದಿರುವ ಡಬ್ಲ್ಯು ಬಿ ಯೀಟ್ಸ್ “ಠಾಗೂರರು ಭಾರತೀಯ ಸಂಸ್ಕೃತಿಯಂತೆ ಅಂತರಾತ್ಮವನ್ನು ಶೋಧಿಸಿಕೊಳ್ಳುವುದರಲ್ಲಿ ತೃಪ್ತಿಪಡುತ್ತಾರೆ. ಅಂತರಂಗದ ಅಧಿನಾಯಕನ ಪ್ರೇರಣೆಗೆ ತಮ್ಮನ್ನು ಸಮರ್ಪಿಸಿಕೊಂಡುಬಿಡುತ್ತಾರೆ. ಸರಳ, ಸುಂದರ ಮತ್ತು ಮುಗ್ಧತೆ ಇದರಲ್ಲಿದೆ” ಎನ್ನುತ್ತಾರೆ. ಠಾಗೋರರು ಬಾಲ್ಯದಿಂದಲೂ ಕಾವ್ಯಕ್ಕೊಲಿದು ಪ್ರಕೃತಿಯಲ್ಲಿ ಭಾವುಕತೆಯಿಂದ ತನ್ಮಯರಾಗುತ್ತಿದ್ದವರು. ಸಾಂಪ್ರದಾಯಿಕವಾಗಿ ಮನೆಯಲ್ಲಿ ಧಾರ್ಮಿಕತೆಯು ಜೀವಂತವಾಗಿದ್ದರೂ ತಂದೆ ಮತ್ತು ಅಣ್ಣ ಹಾಗೂ ಇತರರಿಗಿದ್ದ ಇಂಗ್ಲೀಷ್ ಸಾಹಿತ್ಯ ಮತ್ತು ವಿಶ್ವ ಸಾಹಿತ್ಯದ ಸಂಗವಿತ್ತು. ಅದರಿಂದಾಗಿ ಅವರ ಧಾರ್ಮಿಕತೆಯು ಸಾಂಪ್ರದಾಯಿಕವಾಗಿ ಸಂಕುಚಿತವಾಗಿರದೇ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳಲು ಯತ್ನಿಸುತ್ತಿತ್ತು. ಅಷ್ಟೇ ಅಲ್ಲದೇ ನಾಮ, ರೂಪಗಳನ್ನು ಮೀರಿದ ಮತ್ತು ಪುರೋಹಿತಶಾಹಿಯ ಕಂದಾಚಾರಗಳನ್ನು ಧಿಕ್ಕರಿಸಿದ್ದ ಬ್ರಹ್ಮಸಮಾಜದ ಪ್ರಭಾವವೂ ಅವರಿಗಿತ್ತು.

ಮಕ್ಕಳಿಗೆ ಸಾಂಪ್ರದಾಯಿಕ ಶಿಕ್ಷಣವನ್ನೇ ವಿರೋಧಿಸಿ ಕೋಣೆಗಳ ಗೋಡೆಗಳ ನಡುವೆ ಶಿಕ್ಷೆ ಮತ್ತು ಶಿಕ್ಷಣ ಎಂಬ ಕಟ್ಟುಪಾಡಿನ ಕಲಿಕೆಯನ್ನು ಬಯಲಿಗೆ, ಮರ ಬಳ್ಳಿಗಳ ಕೆಳಗೆ, ಗಿಡ ಹೂಗಳ ನಡುವೆ, ಮಣ್ಣು ಹುಲ್ಲು ಕಲ್ಲುಗಳ ಮೇಲೆ ತಂದವರು. ಕಂಠಪಾಠದ ಕಠಿಣ ಶಿಕ್ಷಣದ ಶೃಂಖಲೆಗಳಿಂದ ಮಕ್ಕಳನ್ನು ಬಿಡಿಸಿ, ಹಾಡು, ಕತೆ, ಕುಣಿತ, ಚಿತ್ರ ಬಿಡಿಸುವುದಕ್ಕೆ ಅನುವು ಮಾಡಿದವರು. ಅದೇ ಮುಕ್ತ ಮನೋಭಾವ ಮತ್ತು ವೈಶಾಲ್ಯದ ಧೋರಣೆ ಅವರು ಪಡೆದ ಧಾರ್ಮಿಕ ತಿಳುವಳಿಕೆಗೂ ಅನ್ವಯವಾಗುತ್ತದೆ. ತಮ್ಮ ಧಾರ್ಮಿಕತೆಯನ್ನು ಮುಕ್ತ ಆಧ್ಯಾತ್ಮಿಕತೆಯನ್ನಾಗಿ ಪ್ರಕಟಿಸಿದ ಠಾಗೋರ್ ಸಂಪ್ರದಾಯವಾಗಿ ಮೂರ್ತಿಪೂಜಕನಾಗಿ ವರ್ತಿಸದೇ ಹಾಡುಗಳಿಂದ ನಮಿಸಿದ್ದೇ ಈ ಗೀತಾಂಜಲಿ.

ಮೂರ್ತಿಭಂಜನವು ಭಾರತೀಯ ಧಾರ್ಮಿಕತೆಗೇನೂ ಹೊಸತಲ್ಲ. ಉಪನಿಷತ್ತುಗಳಲ್ಲಿಯೇ ಸಾಂಪ್ರದಾಯಕ ಭಕ್ತಿ ಮತ್ತು ನಿವೇದನೆಯನ್ನು ನಿರಾಕರಿಸಿಯಾಗಿತ್ತು. ದೈವತ್ವವನ್ನು ತನ್ನಲ್ಲೇ ಕಾಣುವ ಅಥವಾ ತನ್ನನ್ನು ದೈವತ್ವದಲ್ಲಿ ಕಾಣುವ ಅದ್ವೈತ ತತ್ವವು ಗಟ್ಟಿಗೊಳ್ಳತೊಡಗಿತ್ತು.

ತಾನು ಎಂಬುದು ವ್ಯಕ್ತಿಗತವಾದ ಅಸ್ತಿತ್ವ ಮತ್ತು ‘ಅದು’ ಎನ್ನುವುದು ಮಹಾ ಅಸ್ತಿತ್ವವೆಂಬ ಪರಿಕಲ್ಪನೆಯಲ್ಲಿ ತನ್ನನ್ನೂ ಮತ್ತು ‘ಅದನ್ನೂ’ ಸಂಧಿಸುವ ‘ಸೋಹಂ’ ಎನ್ನುವ ಭಾವಪ್ರಯೋಗಗಳು ನಡೆದಿದ್ದವು. ಆದರೆ ಗೀತಾಂಜಲಿಯಲ್ಲಿ ಠಾಗೂರರು ಎರಡು ಹೆಜ್ಜೆ ಹಿಂದೆ ಸರಿಯುತ್ತಾರೆ. ನಾನೇ ಅದು, ಅದೇ ನಾನು ಎಂಬ ಭಾವದಲ್ಲಿ ತೋಡಿಕೊಳ್ಳಲಾಗದು. ಮಾನುಷವಾದ ದುಃಖ, ಸಂಕಟ, ನೋವುಗಳನ್ನು ನಿವೇದಿಸಿಕೊಳ್ಳಲಾಗದು. ಅಹಂಬ್ರಹ್ಮಾಸ್ಮಿ ಎಂದು ನಾನೇ ಭಗವಂತನಾಗಿ ನನಗೆ ದುಃಖವಾಗುವುದಿಲ್ಲ, ನೋವಾಗುವುದಿಲ್ಲ ಎಂದು ಆತ್ಮವಂಚನೆ ಮಾಡಿಕೊಳ್ಳಲಾಗದು. ಗೊಂದಲಗಳಾಗುತ್ತವೆ, ತಳಮಳಗಳಾಗುತ್ತವೆ, ಭಯವಾಗುತ್ತದೆ, ಬಯಕೆಯುಂಟಾಗುತ್ತದೆ, ದಿಕ್ಕೆಡುವಂತಾಗುತ್ತದೆ; ಈ ಬಗೆಯ ಹಲವು ಮಾನುಷ ಭಾವಗಳು ಹುಟ್ಟಿದ್ದನ್ನು ಒಪ್ಪದೇ ಇದ್ದರೆ ಹೇಗೆ? ತಾನೊಬ್ಬ ಮೂರ್ಖನೆಂದು ಅರಿವಾಗದಿದ್ದರೆ ಹೇಗೆ? ಅದಕ್ಕೆ ತಮ್ಮ ಅಂತರಂಗದಲ್ಲಿನ ಮಹಾಚೈತನ್ಯಕ್ಕೆ ಅಥವಾ ಮಹಾಅಸ್ತಿತ್ವದ ಬಲಕ್ಕೆ ಅಧಿನಾಯಕನೆಂದು ಕರೆದು, ತಮ್ಮ ಮಾನುಷ ಸಹಜ ಮನೋಭಾವವನ್ನು ವಿನಯಗೊಳಿಸಿಕೊಂಡು ತಮ್ಮ ದೈನೇಸಿಯನ್ನು, ದೌರ್ಬಲ್ಯಗಳನ್ನು, ಆಶಯಗಳನ್ನು ಪ್ರದರ್ಶಿಸಿಕೊಳ್ಳುತ್ತಾ ನಿವೇದಿಸಿಕೊಳ್ಳುತ್ತಾರೆ. ಯಾವ ಪೌರಾಣಿಕ ದೇವರ ಪ್ರತಿಮೆಗಳು ಇಲ್ಲಿಲ್ಲ. ಆದರೆ ಗೀತಾಂಜಲಿ ಸಂಪೂರ್ಣ ಆಸ್ತಿಕ ಭಾವ ಮಂಜರಿಯೇ. ಹಾಗಾಗಿ ವಿಶ್ವದ ಯಾವುದೇ ದೇಶ ಮತ್ತು ಕಾಲದವರು ಗೀತಾಂಜಲಿಯಲ್ಲಿ ವಿಶ್ವಸ್ಥವಾಗಿರುವ ದೈವೀ ಪ್ರತಿಮೆಯಲ್ಲಿ ತಮ್ಮ ದೇವರನ್ನು ಕಂಡುಕೊಳ್ಳಬಹುದು. ಯೆಹೂದಿಗಳಾಗಲಿ, ಮುಸಲ್ಮಾನರು, ಕ್ರೈಸ್ತರು, ಹಿಂದೂಗಳೂ; ದೇವರನ್ನು ಒಪ್ಪುವ ಯಾವುದೇ ಧರ್ಮೀಯರು ತಮ್ಮ ತಮ್ಮ ದೇವರನ್ನು ಅಲ್ಲಿ ಕಾಣಬಹುದು. ಗೀತಾಂಜಲಿ ದೇವರ ಸ್ತುತಿಯಲ್ಲ. ಭಕ್ತನ ನಿವೇದನೆ. ಭಕ್ತನು ಮನುಷ್ಯನಾಗಿರುವ ಕಾರಣದಿಂದ, ಮಾನುಷಾನುಭವಗಳು ದೇಶ ಕಾಲ ಮೀರಿ ಸಹಜ ಮತ್ತು ಸಾಮಾನ್ಯವಾಗಿರುವುದರಿಂದ ಗೀತಾಂಜಲಿಯ ಹಾಡಿನ ನಮಸ್ಕಾರಗಳು ಯಾರ ಭಕ್ತಿಯಾಗಿಯೂ ಪ್ರಕಟಗೊಳ್ಳಬಹುದು.

ನಾಸ್ತಿಕನೊಬ್ಬನಿಗೆ ಒಬ್ಬ ವ್ಯಕ್ತಿಯ ಮನಸ್ಸು ತನ್ನದೇ ಮನಸ್ಸನ್ನು ಮುಖಾಮುಖಿಯಾದಂತೆ ತೋರಬಹುದು. ವ್ಯಕ್ತಿಯೊಬ್ಬನ ಸೀಮಿತ ಮನೋಬಲವು ಅವನದೇ ಆದಂತಹ ಮಹಾಮನೋಬಲಕ್ಕೆ ನಿವೇದಿಸಿಕೊಳ್ಳುವಂತೆಯೂ ತೋರಬಹುದು.

ಒಟ್ಟಾರೆ ಗೀತಾಂಜಲಿಯು ಹಾಡುವುದೇನು? ಆತ್ಮಾವಲೋಕನದ, ಸರಳ ಬಾಳ್ವೆಯ, ದೌರ್ಬಲ್ಯವನ್ನು ಒಪ್ಪುವ, ವಿನಯವಂತಿಕೆಯನ್ನು ಅಪ್ಪುವ, ಹೃದಯವನ್ನು ಅರಳಿಸಿಕೊಳ್ಳುವ, ಮನವನ್ನು ವಿಸ್ತಾರಗೊಳಿಸಿಕೊಳ್ಳುವ, ಪ್ರೇಮ, ಶಾಂತಿ, ಮಮತೆಯ ಹನಿಗಳನ್ನು ಸೇವಿಸುವ ಮತ್ತು ಹಂಚುವ ಆಶಯವನ್ನು. ಅಷ್ಟಾದರೆ ವ್ಯಕ್ತಿಯು ಆಸ್ತಿಕನಾದರೇನು, ನಾಸ್ತಿಕನಾದರೇನು? ಭಕ್ತಿಯಾದರೇನು, ಪ್ರೀತಿಯಾದರೇನು? ಬರಗೆಟ್ಟಿರುವ ಮನುಷ್ಯನ ಬದುಕಿಗೆ ಪ್ರೇಮ, ಶಾಂತಿ, ನೆಮ್ಮದಿ ಮತ್ತು ಮಮತೆಯ ಅನುಭವವಾದರೆ ಸಾಲದೇ!

ಅಧಮರಲ್ಲಿ ಅಧಮರಾದವರ ಅಡಿಯಲ್ಲಿ ಕಳೆದು

ಕಂಗೆಟ್ಟವರ ಕಟ್ಟ ಕಡೆಯಲ್ಲಿ ನಿನ್ನಡಿಯು ತೋರುವುದು.

ಬಡವರಲ್ಲಿ ಬಡವರಾದವರ ಬುಡದಲ್ಲಿ

ದೀನರಲಿ ದೀನರಾದವರ ದಡದಲ್ಲಿ ನಿನ್ನಡಿಯು ರಾಜಿಪುದು.

ಗೀತಾಂಜಲಿಯಲ್ಲಿ ನೀನು ಎನ್ನುವ ಕರೆಯು ದೇವನಿಗಾದರೂ, ದೇವರೆಂಬುವ ಪರಿಕಲ್ಪನೆಯು ತನ್ನ ವಿವಿಧ ಪಾತ್ರಗಳನ್ನು ಧರಿಸುವುದು.

ಚೈತನ್ಯ, ಅನಂತತೆ, ಪ್ರೀತಿ, ಜೀವನ, ಪ್ರಕೃತಿ; ಇತ್ಯಾದಿಗಳೇ ಆ ಪಾತ್ರಗಳು.

ಓ ನನ್ನ ಜೀವನದ ಜೀವನವೇ, ಈ ದೇಹವನು ಸತತ ಪಾವನವಾಗಿರಿಸಿಕೊಳ್ಳುವೆ,

ನಗರಿವಿದೆ ನಿನ್ನ ಜೀವಂತಿಕೆಯ ಸ್ಪರ್ಶ ನನ್ನೆಲ್ಲಾ ಅಂಗಾಂಗಗಳ ಮೇಲಿದೆ.

1912 ರಲ್ಲಿ ಗೀತಾಂಜಲಿಯ ಇಂಗ್ಲೀಷ್ ಆವೃತ್ತಿ ಪ್ರಕಟವಾಯಿತು. 1913ರಲ್ಲಿ ಅದಕ್ಕೆ ನೊಬೆಲ್ ಪಾರಿತೋಷಕವೂ ದೊರೆಯಿತು. ಆದರೆ, ಭಾರತವೂ ಒಳಗೊಂಡಂತೆ ಅನೇಕ ಐರೋಪ್ಯದೇಶಗಳಲ್ಲಿ ಈ ಗೀತ ಸಂಗ್ರಹದಲ್ಲಿರುವ ಅನೇಕಾನೇಕ ಗೀತೆಗಳು ಎಷ್ಟೆಷ್ಟೋ ಜನರ ಅಂತರಂಗದ ನಿವೇದನೆಯನ್ನು ಧ್ವನಿಸುವ ಕವನಗಳಾದವು. ರೋಗದಿಂದ ನರಳುತ್ತಿದ್ದವರು, ಮಾನಸಿಕವಾಗಿ ಬಳಲಿದ್ದವರು, ಜೀವನದಲ್ಲಿ ಚೈತನ್ಯಹೀನರಾದವರು ತಮ್ಮ ದಿಂಬಿನಡಿಯಲ್ಲಿರಿಸಿಕೊಂಡು ಓದಿಕೊಳ್ಳುತ್ತಿದ್ದ ಸಂಗತಿಗಳಿವೆ. ಅಲ್ಲಿ ಗೀತಾಂಜಲಿ ಮನುಕುಲಕ್ಕೆ ವೇದ್ಯವಾಯಿತು. ಬದುಕಿಗೆ ನೈವೇದ್ಯವಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...