Homeಮುಖಪುಟಭಜರಂಗದಳ ಒತ್ತಡಕ್ಕೆ ಮಣಿದ ತಹಶೀಲ್ದಾರ್ : ಏಕಾಏಕಿ ಏಸು ಪ್ರತಿಮೆ ಮತ್ತು ಶಿಲುಬೆಗಳ ಧ್ವಂಸ

ಭಜರಂಗದಳ ಒತ್ತಡಕ್ಕೆ ಮಣಿದ ತಹಶೀಲ್ದಾರ್ : ಏಕಾಏಕಿ ಏಸು ಪ್ರತಿಮೆ ಮತ್ತು ಶಿಲುಬೆಗಳ ಧ್ವಂಸ

- Advertisement -
- Advertisement -

ಕ್ರಿಶ್ಚಿಯನ್ ಸಮುದಾಯಕ್ಕೆ ನೀಡಲಾಗಿದ್ದ ಸ್ಮಶಾನ ಭೂಮಿಯ ಸಣ್ಣಗುಡ್ಡದ ಮೇಲೆ ನಿಲ್ಲಿಸಲಾಗಿದ್ದ ಏಸು ಪ್ರತಿಮೆ ಮತ್ತು 14 ಶಿಲುಬೆಗಳನ್ನು ತಹಶೀಲ್ದಾರ್ ನೇತೃತ್ವದಲ್ಲಿ ಜೆಸಿಬಿಯಿಂದ ಏಕಾಏಕಿ ಧ್ವಂಸಗೊಳಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ನಡೆದಿದೆ.

ಯಾವುದೇ ನೋಟಿಸ್ ನೀಡದೆ, ಸಮಯವನ್ನು ಕೊಡದೆ ಏಸು ಪ್ರತಿಮೆ ಮತ್ತು ಶಿಲುಬೆಗಳನ್ನು ಧ್ವಂಸಗೊಳಿಸಿರುವ ತಾಲೂಕು ಆಡಳಿತದ ಬಗ್ಗೆ ಕ್ರಿಶ್ಚಿಯನ್ ಸಮುದಾಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರತಿಯೊಂದು ಸ್ಮಶಾನಗಳಲ್ಲೂ ಏಸು ಮತ್ತು ಶಿಲುಬೆಗಳು ಇರುವುದು ಸಾಮಾನ್ಯ. ಇಲ್ಲಿಯೂ ಹಾಗೆಯೇ ನಿಲ್ಲಿಸಲಾಗಿತ್ತು. ಯಾರೋ ದೂರಿದದರೆಂಬ ಕಾರಣಕ್ಕೆ ಏಕಾಏಕಿ ದಾಳಿ ನಡೆಸಿರುವುದು ಕ್ರಿಶ್ಚಿಯನ್‌ ಸಮುದಾಯದ ಭಾವನೆಗಳಿಗೆ ಘಾಸಿ ಉಂಟು ಮಾಡಿದೆ ಎಂದು ಮುಖಂಡರು ಆರೋಪಿಸಿದ್ದಾರೆ.

ದೇವನಹಳ್ಳಿ ತಾಲೂಕಿನ ದೊಡ್ಡಸಾಗರಹಳ್ಳಿಯ ಸೇಂಟ್ ಜೋಸೆಫ್ ಚರ್ಚ್ ಸಮೀಪವೇ ಇರುವ 120 ಎಕರೆ ಸರ್ಕಾರಿ ಭೂಮಿಯಲ್ಲಿ ಸಣ್ಣ ಭಾಗವನ್ನು ಸ್ಮಶಾನಕ್ಕೆ ಜಾಗ ನೀಡುವಂತೆ ಕ್ರಿಶ್ಚಿಯನ್ ಸಮುದಾಯದ ಮುಖಂಡರು 2012ರಲ್ಲಿ ದೇವನಹಳ್ಳಿಯ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ತಹಶೀಲ್ದಾರ್ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಹೊತ್ತುಹಾಕಿದರು. ಕೆಲಸ ಮಾತ್ರ ಆಗಿರಲಿಲ್ಲ. ಹೀಗಾಗಿ 2018ರಲ್ಲಿ ಮತ್ತೆ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಆಗ ಮತ್ತೆ ತಹಶೀಲ್ದಾರ್ ಜಿಲ್ಲಾಧಿಕಾರಿಗೆ ಮನವಿ ಪತ್ರವನ್ನು ಕಳುಹಿಸಿದರು.

ಕ್ರಿಶ್ಚಿಯನ್ ಸಮುದಾಯವರು ನೀಡಿದ ಪತ್ರವನ್ನು ಪರಿಶೀಲಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸ್ಮಶಾನಕ್ಕೆ ಭೂಮಿ ನೀಡಬಹುದೆಂದು ಸೂಚಿಸಿದರು. ತಹಶೀಲ್ದಾರ್ ಸ್ಥಳೀಯ ಗ್ರಾಮ ಪಂಚಾಯಿತಿಯ ಪಿಡಿಓಗೆ ಪತ್ರ ಬರೆದು ಸ್ಮಶಾನ ಜಾಗಕ್ಕೆ ಭೂಮಿ ನೀಡಲು ಯಾವುದೇ ಅಭ್ಯಂತರವಿಲ್ಲ ಎಂದು ತಿಳಿಸಿದರು.  ಈ ಹಿನ್ನೆಲೆಯಲ್ಲಿ 2019ರ ಸೆಪ್ಟೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯಿತಿಯು ಎಲ್ಲರಿಗೂ ಸ್ಮಶಾನ ಭೂಮಿ ಇದೆ. ಕ್ರಿಶ್ಚಿಯನ್ ಸಮುದಾಯಕ್ಕೆ ಇಲ್ಲ. ಹಾಗಾಗಿ 120 ಎಕರೆಯಲ್ಲಿ 4.2 ಎಕರೆ ಭೂಮಿಯನ್ನು ಸ್ಮಶಾನಕ್ಕೆ ನೀಡಿತ್ತು. ಇದಕ್ಕೆ ದೊಡ್ಡಸಾಗರಹಳ್ಳಿ ಗ್ರಾಮಸ್ಥರೂ ಸಂಪೂರ್ಣ ಒಪ್ಪಿಗೆ ನೀಡಿದ್ದರು.

ಕ್ರಿಶ್ಚಿಯನ್ನರ ಸ್ನಶಾನಕ್ಕೆ ನೀಡಿರುವ 4.2 ಎಕರೆ ಜಾಗದಲ್ಲಿ ಸಣ್ಣದೊಂದು ಗುಡ್ಡವಿದೆ. ಆ ಗುಡ್ಡದ ಮೇಲೆ ಏಸುಕ್ರಿಸ್ತನ ಪ್ರತಿಮೆ ಮತ್ತು ಶಿಲುಬೆಗಳನ್ನು ಇಟ್ಟಿದ್ದೆವು. ‘ಮೌಂಟ್ ಕಲ್ವರಿ’ ಕ್ರಿಶ್ಚಿಯನ್ ಸಮುದಾಯಕ್ಕೆ ಪವಿತ್ರ ವಾದುದು. ಈಸ್ಟರ್ ಸಂದರ್ಭದಲ್ಲಿ ನಾವು ವಿಶೇಷವಾಗಿ ಪ್ರಾರ್ಥನೆ ಸಲ್ಲಿಸುತ್ತೇವೆ. ಅಂತಹ ಪವಿತ್ರ ಸ್ಥಳವನ್ನು ಧ್ವಂಸ ಮಾಡಲಾಗಿದೆ. ಕ್ರೈಸ್ತ ಸಮುದಾಯದ ಸ್ಮಶಾನ ಜಾಗದಲ್ಲಿ ಶಿಲುಬೆ ಮತ್ತು ಏಸುಕ್ರಿಸ್ತನ ಪ್ರತಿಮೆ ಇರುವುದು ಸಾಮಾನ್ಯ. ಇಲ್ಲಿ ನಾವು ಯಾವುದೇ ವಾಣಿಜ್ಯ ಸಂಕೀರ್ಣ ನಿರ್ಮಿಸಿರಲಿಲ್ಲ. ಆದರೂ ತಹಶೀಲ್ದಾರ್ ಜೆಸಿಬಿಯೊಂದಿಗೆ ಬಂದು ಶಿಲುಬೆಗಳು ಮತ್ತು ಏಸು ಪ್ರತಿಮೆಯನ್ನು ಧ್ವಂಸಗೊಳಿಸಿದರು. ಇದರಿಂದ ನಮಗೆ ನೋವಾಗಿದೆ. ಭಾವನೆಗಳಿಗೆ ಧಕ್ಕೆಯಾಗಿದೆ. ಇದನ್ನು ನಾವು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ನಮ್ಮ ಬಳಿ ಎಲ್ಲಾ ದಾಖಲೆಗಳು ಇವೆ. ಹೋರಾಟ ಮುಂದುವರಿಯಲಿದೆ ಎಂದು ಬೆಂಗಳೂರಿನ ಬಿಶಪ್‌ ಚರ್ಚ್ ಸಾರ್ವಜನಿಕ ಸಂಪರ್ಕಾಧಿಕಾರಿ ಕಾಂತರಾಜು ನಾನುಗೌರಿ.ಕಾಮ್ ಗೆ ದೂರವಾಣಿಯಲ್ಲಿ ತಿಳಿಸಿದರು.

ಮುಖ್ಯವಾದ ವಿಷಯವೆಂದರೆ ಜಿಲ್ಲಾಧಿಕಾರಿ, ತಹಶೀಲ್ದಾರ್ ಮತ್ತ ಗ್ರಾಮ ಪಂಚಾಯಿತಿ ಸ್ಮಶಾನಕ್ಕೆ ಜಾಗ ನೀಡಿರುವುದು ಸ್ಪಷ್ಟ. ಎಲ್ಲಾ ದಾಖಲೆಗಳು ಕೂಡ ಇವೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವಾಗ ದಿಢೀರನೇ ಈ ರೀತಿ ಪ್ರತಿಮೆ ಮತ್ತು ಶಿಲುಬೆಗಳನ್ನು ಧ್ವಂಸಗೊಳಿಸಿರುವುದು ಸರಿಯಾದ ಕ್ರಮವಲ್ಲ. ಅಲ್ಲಿನ ಶ್ಮಶಾನದ ಪ್ರತಿಮೆಗೆ ಗ್ರಾಮಸ್ಥರ ಒಪ್ಪಿಗೆ ಮತ್ತು ಸಹಕಾರವೂ ಇದೆ. ಗ್ರಾಮಸ್ಥರ ಸಭೆ ಕರೆದಿದ್ದ ಸಂದರ್ಭದಲ್ಲೂ ಯಾರೊಬ್ಬರೂ ತಕರಾರು ಮಾಡಿಲ್ಲ. ಆದರೆ ಬಲಪಂಥೀಯ ಸಂಘಟನೆಗಳಾದ ಹಿಂದೂ ರಕ್ಷಣಾ ವೇದಿಕೆ ಮತ್ತು ಭಜರಂಗದಳದ ಮುಖಂಡರು ಪ್ರತಿಭಟನೆ ಮಾಡಿದ ಮೇಲೆ ಇಂತಹ ಕ್ರಮಕ್ಕೆ ಮುಂದಾಗಿರುವುದು ನ್ಯಾಯ ಸಮ್ಮತವಲ್ಲ. ಸುಖಾಸುಮ್ಮನೆ ನಮ್ಮ ಮೇಲೆ ಮತಾಂತರದ ಆರೋಪ ಮಾಡುವುದು ಸರಿಯಲ್ಲ ಎನ್ನುತ್ತಾರೆ ಕ್ರಿಶ್ಚಿಯನ್ ಸಮುದಾಯದ ಮುಖಂಡರು.

ಈ ಕುರಿತು ದೇವನಹಳ್ಳಿ ತಹಶೀಲ್ದಾರ್ ಅಜಿತ್‌ ಕುಮಾರ್‌ ರೈ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಯತ್ನಿಸಲಾಯಿತು. ಆದರೆ ಸಾಧ್ಯವಾಗಲಿಲ್ಲ. ಇಲ್ಲಿ ಭಜರಂಗದಳ ಮತ್ತು ಹಿಂದೂ ರಕ್ಷಣ ವೇದಿಕೆಯ ಒತ್ತಡಕ್ಕೆ ತಹಶೀಲ್ದಾರ್ ಮಣಿದಿರುವುದು ಸ್ಪಷ್ಟವಾಗಿದೆ. ನೋಟೀಸ್ ನೀಡದೆ ಯಾವುದೇ ಮಾಹಿತಿಯನ್ನು ನೀಡದೆ ಪ್ರತಿಮೆಗಳ ಧ್ವಂಸ ಮಾಡಿರುವುದು ಆಡಳಿತ ಎತ್ತ ಸಾಗುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಪುಂಡುಪೋಕರಿಗಳ ಒತ್ತಡಕ್ಕೆ ತಾಲೂಕು ಆಡಳಿತ ಮಣಿಯುವಂತಾಗಿರುವುದು ದುರಂತವೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...