Homeಮುಖಪುಟಭಜರಂಗದಳ ಒತ್ತಡಕ್ಕೆ ಮಣಿದ ತಹಶೀಲ್ದಾರ್ : ಏಕಾಏಕಿ ಏಸು ಪ್ರತಿಮೆ ಮತ್ತು ಶಿಲುಬೆಗಳ ಧ್ವಂಸ

ಭಜರಂಗದಳ ಒತ್ತಡಕ್ಕೆ ಮಣಿದ ತಹಶೀಲ್ದಾರ್ : ಏಕಾಏಕಿ ಏಸು ಪ್ರತಿಮೆ ಮತ್ತು ಶಿಲುಬೆಗಳ ಧ್ವಂಸ

- Advertisement -
- Advertisement -

ಕ್ರಿಶ್ಚಿಯನ್ ಸಮುದಾಯಕ್ಕೆ ನೀಡಲಾಗಿದ್ದ ಸ್ಮಶಾನ ಭೂಮಿಯ ಸಣ್ಣಗುಡ್ಡದ ಮೇಲೆ ನಿಲ್ಲಿಸಲಾಗಿದ್ದ ಏಸು ಪ್ರತಿಮೆ ಮತ್ತು 14 ಶಿಲುಬೆಗಳನ್ನು ತಹಶೀಲ್ದಾರ್ ನೇತೃತ್ವದಲ್ಲಿ ಜೆಸಿಬಿಯಿಂದ ಏಕಾಏಕಿ ಧ್ವಂಸಗೊಳಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ನಡೆದಿದೆ.

ಯಾವುದೇ ನೋಟಿಸ್ ನೀಡದೆ, ಸಮಯವನ್ನು ಕೊಡದೆ ಏಸು ಪ್ರತಿಮೆ ಮತ್ತು ಶಿಲುಬೆಗಳನ್ನು ಧ್ವಂಸಗೊಳಿಸಿರುವ ತಾಲೂಕು ಆಡಳಿತದ ಬಗ್ಗೆ ಕ್ರಿಶ್ಚಿಯನ್ ಸಮುದಾಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರತಿಯೊಂದು ಸ್ಮಶಾನಗಳಲ್ಲೂ ಏಸು ಮತ್ತು ಶಿಲುಬೆಗಳು ಇರುವುದು ಸಾಮಾನ್ಯ. ಇಲ್ಲಿಯೂ ಹಾಗೆಯೇ ನಿಲ್ಲಿಸಲಾಗಿತ್ತು. ಯಾರೋ ದೂರಿದದರೆಂಬ ಕಾರಣಕ್ಕೆ ಏಕಾಏಕಿ ದಾಳಿ ನಡೆಸಿರುವುದು ಕ್ರಿಶ್ಚಿಯನ್‌ ಸಮುದಾಯದ ಭಾವನೆಗಳಿಗೆ ಘಾಸಿ ಉಂಟು ಮಾಡಿದೆ ಎಂದು ಮುಖಂಡರು ಆರೋಪಿಸಿದ್ದಾರೆ.

ದೇವನಹಳ್ಳಿ ತಾಲೂಕಿನ ದೊಡ್ಡಸಾಗರಹಳ್ಳಿಯ ಸೇಂಟ್ ಜೋಸೆಫ್ ಚರ್ಚ್ ಸಮೀಪವೇ ಇರುವ 120 ಎಕರೆ ಸರ್ಕಾರಿ ಭೂಮಿಯಲ್ಲಿ ಸಣ್ಣ ಭಾಗವನ್ನು ಸ್ಮಶಾನಕ್ಕೆ ಜಾಗ ನೀಡುವಂತೆ ಕ್ರಿಶ್ಚಿಯನ್ ಸಮುದಾಯದ ಮುಖಂಡರು 2012ರಲ್ಲಿ ದೇವನಹಳ್ಳಿಯ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ತಹಶೀಲ್ದಾರ್ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಹೊತ್ತುಹಾಕಿದರು. ಕೆಲಸ ಮಾತ್ರ ಆಗಿರಲಿಲ್ಲ. ಹೀಗಾಗಿ 2018ರಲ್ಲಿ ಮತ್ತೆ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಆಗ ಮತ್ತೆ ತಹಶೀಲ್ದಾರ್ ಜಿಲ್ಲಾಧಿಕಾರಿಗೆ ಮನವಿ ಪತ್ರವನ್ನು ಕಳುಹಿಸಿದರು.

ಕ್ರಿಶ್ಚಿಯನ್ ಸಮುದಾಯವರು ನೀಡಿದ ಪತ್ರವನ್ನು ಪರಿಶೀಲಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸ್ಮಶಾನಕ್ಕೆ ಭೂಮಿ ನೀಡಬಹುದೆಂದು ಸೂಚಿಸಿದರು. ತಹಶೀಲ್ದಾರ್ ಸ್ಥಳೀಯ ಗ್ರಾಮ ಪಂಚಾಯಿತಿಯ ಪಿಡಿಓಗೆ ಪತ್ರ ಬರೆದು ಸ್ಮಶಾನ ಜಾಗಕ್ಕೆ ಭೂಮಿ ನೀಡಲು ಯಾವುದೇ ಅಭ್ಯಂತರವಿಲ್ಲ ಎಂದು ತಿಳಿಸಿದರು.  ಈ ಹಿನ್ನೆಲೆಯಲ್ಲಿ 2019ರ ಸೆಪ್ಟೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯಿತಿಯು ಎಲ್ಲರಿಗೂ ಸ್ಮಶಾನ ಭೂಮಿ ಇದೆ. ಕ್ರಿಶ್ಚಿಯನ್ ಸಮುದಾಯಕ್ಕೆ ಇಲ್ಲ. ಹಾಗಾಗಿ 120 ಎಕರೆಯಲ್ಲಿ 4.2 ಎಕರೆ ಭೂಮಿಯನ್ನು ಸ್ಮಶಾನಕ್ಕೆ ನೀಡಿತ್ತು. ಇದಕ್ಕೆ ದೊಡ್ಡಸಾಗರಹಳ್ಳಿ ಗ್ರಾಮಸ್ಥರೂ ಸಂಪೂರ್ಣ ಒಪ್ಪಿಗೆ ನೀಡಿದ್ದರು.

ಕ್ರಿಶ್ಚಿಯನ್ನರ ಸ್ನಶಾನಕ್ಕೆ ನೀಡಿರುವ 4.2 ಎಕರೆ ಜಾಗದಲ್ಲಿ ಸಣ್ಣದೊಂದು ಗುಡ್ಡವಿದೆ. ಆ ಗುಡ್ಡದ ಮೇಲೆ ಏಸುಕ್ರಿಸ್ತನ ಪ್ರತಿಮೆ ಮತ್ತು ಶಿಲುಬೆಗಳನ್ನು ಇಟ್ಟಿದ್ದೆವು. ‘ಮೌಂಟ್ ಕಲ್ವರಿ’ ಕ್ರಿಶ್ಚಿಯನ್ ಸಮುದಾಯಕ್ಕೆ ಪವಿತ್ರ ವಾದುದು. ಈಸ್ಟರ್ ಸಂದರ್ಭದಲ್ಲಿ ನಾವು ವಿಶೇಷವಾಗಿ ಪ್ರಾರ್ಥನೆ ಸಲ್ಲಿಸುತ್ತೇವೆ. ಅಂತಹ ಪವಿತ್ರ ಸ್ಥಳವನ್ನು ಧ್ವಂಸ ಮಾಡಲಾಗಿದೆ. ಕ್ರೈಸ್ತ ಸಮುದಾಯದ ಸ್ಮಶಾನ ಜಾಗದಲ್ಲಿ ಶಿಲುಬೆ ಮತ್ತು ಏಸುಕ್ರಿಸ್ತನ ಪ್ರತಿಮೆ ಇರುವುದು ಸಾಮಾನ್ಯ. ಇಲ್ಲಿ ನಾವು ಯಾವುದೇ ವಾಣಿಜ್ಯ ಸಂಕೀರ್ಣ ನಿರ್ಮಿಸಿರಲಿಲ್ಲ. ಆದರೂ ತಹಶೀಲ್ದಾರ್ ಜೆಸಿಬಿಯೊಂದಿಗೆ ಬಂದು ಶಿಲುಬೆಗಳು ಮತ್ತು ಏಸು ಪ್ರತಿಮೆಯನ್ನು ಧ್ವಂಸಗೊಳಿಸಿದರು. ಇದರಿಂದ ನಮಗೆ ನೋವಾಗಿದೆ. ಭಾವನೆಗಳಿಗೆ ಧಕ್ಕೆಯಾಗಿದೆ. ಇದನ್ನು ನಾವು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ನಮ್ಮ ಬಳಿ ಎಲ್ಲಾ ದಾಖಲೆಗಳು ಇವೆ. ಹೋರಾಟ ಮುಂದುವರಿಯಲಿದೆ ಎಂದು ಬೆಂಗಳೂರಿನ ಬಿಶಪ್‌ ಚರ್ಚ್ ಸಾರ್ವಜನಿಕ ಸಂಪರ್ಕಾಧಿಕಾರಿ ಕಾಂತರಾಜು ನಾನುಗೌರಿ.ಕಾಮ್ ಗೆ ದೂರವಾಣಿಯಲ್ಲಿ ತಿಳಿಸಿದರು.

ಮುಖ್ಯವಾದ ವಿಷಯವೆಂದರೆ ಜಿಲ್ಲಾಧಿಕಾರಿ, ತಹಶೀಲ್ದಾರ್ ಮತ್ತ ಗ್ರಾಮ ಪಂಚಾಯಿತಿ ಸ್ಮಶಾನಕ್ಕೆ ಜಾಗ ನೀಡಿರುವುದು ಸ್ಪಷ್ಟ. ಎಲ್ಲಾ ದಾಖಲೆಗಳು ಕೂಡ ಇವೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವಾಗ ದಿಢೀರನೇ ಈ ರೀತಿ ಪ್ರತಿಮೆ ಮತ್ತು ಶಿಲುಬೆಗಳನ್ನು ಧ್ವಂಸಗೊಳಿಸಿರುವುದು ಸರಿಯಾದ ಕ್ರಮವಲ್ಲ. ಅಲ್ಲಿನ ಶ್ಮಶಾನದ ಪ್ರತಿಮೆಗೆ ಗ್ರಾಮಸ್ಥರ ಒಪ್ಪಿಗೆ ಮತ್ತು ಸಹಕಾರವೂ ಇದೆ. ಗ್ರಾಮಸ್ಥರ ಸಭೆ ಕರೆದಿದ್ದ ಸಂದರ್ಭದಲ್ಲೂ ಯಾರೊಬ್ಬರೂ ತಕರಾರು ಮಾಡಿಲ್ಲ. ಆದರೆ ಬಲಪಂಥೀಯ ಸಂಘಟನೆಗಳಾದ ಹಿಂದೂ ರಕ್ಷಣಾ ವೇದಿಕೆ ಮತ್ತು ಭಜರಂಗದಳದ ಮುಖಂಡರು ಪ್ರತಿಭಟನೆ ಮಾಡಿದ ಮೇಲೆ ಇಂತಹ ಕ್ರಮಕ್ಕೆ ಮುಂದಾಗಿರುವುದು ನ್ಯಾಯ ಸಮ್ಮತವಲ್ಲ. ಸುಖಾಸುಮ್ಮನೆ ನಮ್ಮ ಮೇಲೆ ಮತಾಂತರದ ಆರೋಪ ಮಾಡುವುದು ಸರಿಯಲ್ಲ ಎನ್ನುತ್ತಾರೆ ಕ್ರಿಶ್ಚಿಯನ್ ಸಮುದಾಯದ ಮುಖಂಡರು.

ಈ ಕುರಿತು ದೇವನಹಳ್ಳಿ ತಹಶೀಲ್ದಾರ್ ಅಜಿತ್‌ ಕುಮಾರ್‌ ರೈ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಯತ್ನಿಸಲಾಯಿತು. ಆದರೆ ಸಾಧ್ಯವಾಗಲಿಲ್ಲ. ಇಲ್ಲಿ ಭಜರಂಗದಳ ಮತ್ತು ಹಿಂದೂ ರಕ್ಷಣ ವೇದಿಕೆಯ ಒತ್ತಡಕ್ಕೆ ತಹಶೀಲ್ದಾರ್ ಮಣಿದಿರುವುದು ಸ್ಪಷ್ಟವಾಗಿದೆ. ನೋಟೀಸ್ ನೀಡದೆ ಯಾವುದೇ ಮಾಹಿತಿಯನ್ನು ನೀಡದೆ ಪ್ರತಿಮೆಗಳ ಧ್ವಂಸ ಮಾಡಿರುವುದು ಆಡಳಿತ ಎತ್ತ ಸಾಗುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಪುಂಡುಪೋಕರಿಗಳ ಒತ್ತಡಕ್ಕೆ ತಾಲೂಕು ಆಡಳಿತ ಮಣಿಯುವಂತಾಗಿರುವುದು ದುರಂತವೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...