Homeಕರ್ನಾಟಕವಕೀಲೆ ಮೀರಾ ರಾಘವೇಂದ್ರ ವಿರುದ್ದ ಕ್ರಮಕೈಗೊಳ್ಳಿ: ಬಾರ್‌ ಕೌನ್ಸಿಲ್‌ಗೆ ಡಾ. ಸಿ.ಎಸ್.ದ್ವಾರಕನಾಥ್ ಪತ್ರ

ವಕೀಲೆ ಮೀರಾ ರಾಘವೇಂದ್ರ ವಿರುದ್ದ ಕ್ರಮಕೈಗೊಳ್ಳಿ: ಬಾರ್‌ ಕೌನ್ಸಿಲ್‌ಗೆ ಡಾ. ಸಿ.ಎಸ್.ದ್ವಾರಕನಾಥ್ ಪತ್ರ

- Advertisement -
- Advertisement -

ಸಾಹಿತಿ ಕೆ.ಎಸ್. ಭಗವಾನ್ ಅವರಿಗೆ ನ್ಯಾಯಾಲಯದ ಆವರಣದಲ್ಲೇ ಮುಖಕ್ಕೆ ಮಸಿ ಬಳಿದು ಹಲ್ಲೆಗೆ ಯತ್ನಿಸಿದ ವಕೀಲೆ ಮೀರಾ ರಾಘವೇಂದ್ರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ಹೈಕೋರ್ಟ್ ವಕೀಲ ಡಾ. ಸಿ.ಎಸ್‌ ದ್ವಾರಕನಾಥ್‌‌ ಕರ್ನಾಟಕ ಬಾರ್‌ ಕೌನ್ಸಿಲ್‌ಗೆ ಪತ್ರ ಬರೆದಿದ್ದಾರೆ.

ಗುರುವಾರ ತಮ್ಮ ಮೇಲಿನ ಮೊಕದ್ದಮೆಗಾಗಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌‌ ಕೋರ್ಟ್‌ಗೆ ಆಗಮಿಸಿದ್ದ ಭಗವಾನ್ ಅವರ ಮೇಲೆ ವಕೀಲೆ ಮೀರಾ ರಾಘವೇಂದ್ರ ಎನ್ನುವವರು ಕೋರ್ಟಿನ ಆವರಣದಲ್ಲೇ ಮಸಿ ಬಳಿದು ಹಲ್ಲೆಗೆ ಪ್ರಯತ್ನಿಸಿದ್ದರು.

ಈ ಕೃತ್ಯವನ್ನು ಖಂಡಿಸಿರುವ ದ್ವಾರಕನಾಥ್‌, “ವ್ಯಕ್ತಿಯೊಬ್ಬರ ಮೇಲೆ ತಾವೇ ಕೇಸನ್ನು ಹಾಕಿ, ಅವರು ನ್ಯಾಯಾಲಯದ ಕರೆಗೆ ಗೌರವಿಸಿ ನ್ಯಾಯಾಲಯಕ್ಕೆ ಬಂದಾಗ ಅವರ ಮೇಲೆ ನ್ಯಾಯಾಲಯದ ಆವರಣದಲ್ಲೇ ಹಲ್ಲೆ ಮಾಡಿರುವುದು ದುರುದ್ದೇಶಪೂರ್ವಕ. ಇದರಿಂದಾಗಿ ಕಕ್ಷಿದಾರರಿಗೆ ನ್ಯಾಯಾಲಯಕ್ಕೆ ಬರುವ ಧೈರ್ಯವೇ ಇಲ್ಲದಂತಾಗಬಹುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೋರ್ಟ್ ಆವರಣದಲ್ಲೇ ಹಿರಿಯ ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ

“ವಕೀಲೆಯ ಈ ಕೃತ್ಯ ಇಡೀ ವಕೀಲ ಸಮುದಾಯವನ್ನೇ ತಲೆತಗ್ಗಿಸುವಂತೆ ಮಾಡಿದೆ. ನ್ಯಾಯಾಲಯದ ಮೇಲೆ ನಂಬಿಕೆಯಿಲ್ಲದೆ ತಾವೇ ನ್ಯಾಯವನ್ನು ಕೈಗೆ ತೆಗದುಕೊಳ್ಳುವವರು ವಕೀಲ ವೃತ್ತಿಯಲ್ಲಿ ಮುಂದುವರೆಯಲು ಅರ್ಹರಲ್ಲ” ಎಂದು ದ್ವಾರಕನಾಥ್ ಹೇಳಿದ್ದಾರೆ.

“ವಕೀಲೆಯ ಈ ಕೃತ್ಯ ನೇರವಾಗಿ ವಕೀಲ ವೃತ್ತಿಗೆ ಹಾಗೂ ವಕೀಲರ ಘನತೆಗೆ ದಕ್ಕೆ ತರುವಂತಹದ್ದು. ಈ ಕಾರಣಕ್ಕೆ ವಕೀಲರ ಪರಿಷತ್ತು ಈಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು” ಅವರು ಕರ್ನಾಟಕ ಬಾರ್‌ ಕೌನ್ಸಿಲ್‌ಗೆ ಮನವಿ ಮಾಡಿದ್ದಾರೆ.

ಸಾಹಿತಿ ಭಗವಾನ್ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ರಾಜ್ಯದ ಹಲವಾರು ಕಡೆ ಪ್ರತಿಭಟನೆಗಳಾಗಿವೆ. ಮೈಸೂರು ವಿಶ್ವವಿದ್ಯಾಲಯದ ಅಂಬೇಡ್ಕರ್ ಪ್ರತಿಮೆ ಮುಂಭಾಗ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳು ಮೌನ ಪ್ರತಿಭಟನೆ ಮಾಡಿ ಆರೋಪಿಯ ವಿರುದ್ದ ಕ್ರಮಕೈಗೊಳ್ಳ ಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಭಾರತ ಬುದ್ಧನನ್ನು ಹೆತ್ತು ಕೊಟ್ಟಿತೊ, ಬೆದರಿಸಿ ಓಡಿಸಿತೊ?

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಕಾರ್ಯಕರ್ತರು ಮೈಸೂರು ನ್ಯಾಯಾಲಯದ ಮುಂಭಾಗವಿರುವ ಗಾಂಧಿ ಪ್ರತಿಮೆಯ ಮುಂದೆ ಗುರುವಾರ ಪ್ರತಿಭಟನೆ ನಡೆಸಿ ಮೀರಾ ರಾಘವೇಂದ್ರ ವಿರುದ್ದ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ತಮ್ಮ ವಿರುದ್ಧದ ಕೊಲೆ ಬೆದರಿಕೆ ಪತ್ರಕ್ಕೆ ಪ್ರಕಾಶ್‌ ರಾಜ್‌ ಕೊಟ್ಟ ಉತ್ತರ ’ಚಲೋ ಹಮ್‌ ದೇಖೇಂಗೆ’…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...