Homeಕರ್ನಾಟಕವಕೀಲೆ ಮೀರಾ ರಾಘವೇಂದ್ರ ವಿರುದ್ದ ಕ್ರಮಕೈಗೊಳ್ಳಿ: ಬಾರ್‌ ಕೌನ್ಸಿಲ್‌ಗೆ ಡಾ. ಸಿ.ಎಸ್.ದ್ವಾರಕನಾಥ್ ಪತ್ರ

ವಕೀಲೆ ಮೀರಾ ರಾಘವೇಂದ್ರ ವಿರುದ್ದ ಕ್ರಮಕೈಗೊಳ್ಳಿ: ಬಾರ್‌ ಕೌನ್ಸಿಲ್‌ಗೆ ಡಾ. ಸಿ.ಎಸ್.ದ್ವಾರಕನಾಥ್ ಪತ್ರ

- Advertisement -
- Advertisement -

ಸಾಹಿತಿ ಕೆ.ಎಸ್. ಭಗವಾನ್ ಅವರಿಗೆ ನ್ಯಾಯಾಲಯದ ಆವರಣದಲ್ಲೇ ಮುಖಕ್ಕೆ ಮಸಿ ಬಳಿದು ಹಲ್ಲೆಗೆ ಯತ್ನಿಸಿದ ವಕೀಲೆ ಮೀರಾ ರಾಘವೇಂದ್ರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ಹೈಕೋರ್ಟ್ ವಕೀಲ ಡಾ. ಸಿ.ಎಸ್‌ ದ್ವಾರಕನಾಥ್‌‌ ಕರ್ನಾಟಕ ಬಾರ್‌ ಕೌನ್ಸಿಲ್‌ಗೆ ಪತ್ರ ಬರೆದಿದ್ದಾರೆ.

ಗುರುವಾರ ತಮ್ಮ ಮೇಲಿನ ಮೊಕದ್ದಮೆಗಾಗಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌‌ ಕೋರ್ಟ್‌ಗೆ ಆಗಮಿಸಿದ್ದ ಭಗವಾನ್ ಅವರ ಮೇಲೆ ವಕೀಲೆ ಮೀರಾ ರಾಘವೇಂದ್ರ ಎನ್ನುವವರು ಕೋರ್ಟಿನ ಆವರಣದಲ್ಲೇ ಮಸಿ ಬಳಿದು ಹಲ್ಲೆಗೆ ಪ್ರಯತ್ನಿಸಿದ್ದರು.

ಈ ಕೃತ್ಯವನ್ನು ಖಂಡಿಸಿರುವ ದ್ವಾರಕನಾಥ್‌, “ವ್ಯಕ್ತಿಯೊಬ್ಬರ ಮೇಲೆ ತಾವೇ ಕೇಸನ್ನು ಹಾಕಿ, ಅವರು ನ್ಯಾಯಾಲಯದ ಕರೆಗೆ ಗೌರವಿಸಿ ನ್ಯಾಯಾಲಯಕ್ಕೆ ಬಂದಾಗ ಅವರ ಮೇಲೆ ನ್ಯಾಯಾಲಯದ ಆವರಣದಲ್ಲೇ ಹಲ್ಲೆ ಮಾಡಿರುವುದು ದುರುದ್ದೇಶಪೂರ್ವಕ. ಇದರಿಂದಾಗಿ ಕಕ್ಷಿದಾರರಿಗೆ ನ್ಯಾಯಾಲಯಕ್ಕೆ ಬರುವ ಧೈರ್ಯವೇ ಇಲ್ಲದಂತಾಗಬಹುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೋರ್ಟ್ ಆವರಣದಲ್ಲೇ ಹಿರಿಯ ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ

“ವಕೀಲೆಯ ಈ ಕೃತ್ಯ ಇಡೀ ವಕೀಲ ಸಮುದಾಯವನ್ನೇ ತಲೆತಗ್ಗಿಸುವಂತೆ ಮಾಡಿದೆ. ನ್ಯಾಯಾಲಯದ ಮೇಲೆ ನಂಬಿಕೆಯಿಲ್ಲದೆ ತಾವೇ ನ್ಯಾಯವನ್ನು ಕೈಗೆ ತೆಗದುಕೊಳ್ಳುವವರು ವಕೀಲ ವೃತ್ತಿಯಲ್ಲಿ ಮುಂದುವರೆಯಲು ಅರ್ಹರಲ್ಲ” ಎಂದು ದ್ವಾರಕನಾಥ್ ಹೇಳಿದ್ದಾರೆ.

“ವಕೀಲೆಯ ಈ ಕೃತ್ಯ ನೇರವಾಗಿ ವಕೀಲ ವೃತ್ತಿಗೆ ಹಾಗೂ ವಕೀಲರ ಘನತೆಗೆ ದಕ್ಕೆ ತರುವಂತಹದ್ದು. ಈ ಕಾರಣಕ್ಕೆ ವಕೀಲರ ಪರಿಷತ್ತು ಈಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು” ಅವರು ಕರ್ನಾಟಕ ಬಾರ್‌ ಕೌನ್ಸಿಲ್‌ಗೆ ಮನವಿ ಮಾಡಿದ್ದಾರೆ.

ಸಾಹಿತಿ ಭಗವಾನ್ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ರಾಜ್ಯದ ಹಲವಾರು ಕಡೆ ಪ್ರತಿಭಟನೆಗಳಾಗಿವೆ. ಮೈಸೂರು ವಿಶ್ವವಿದ್ಯಾಲಯದ ಅಂಬೇಡ್ಕರ್ ಪ್ರತಿಮೆ ಮುಂಭಾಗ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳು ಮೌನ ಪ್ರತಿಭಟನೆ ಮಾಡಿ ಆರೋಪಿಯ ವಿರುದ್ದ ಕ್ರಮಕೈಗೊಳ್ಳ ಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಭಾರತ ಬುದ್ಧನನ್ನು ಹೆತ್ತು ಕೊಟ್ಟಿತೊ, ಬೆದರಿಸಿ ಓಡಿಸಿತೊ?

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಕಾರ್ಯಕರ್ತರು ಮೈಸೂರು ನ್ಯಾಯಾಲಯದ ಮುಂಭಾಗವಿರುವ ಗಾಂಧಿ ಪ್ರತಿಮೆಯ ಮುಂದೆ ಗುರುವಾರ ಪ್ರತಿಭಟನೆ ನಡೆಸಿ ಮೀರಾ ರಾಘವೇಂದ್ರ ವಿರುದ್ದ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ತಮ್ಮ ವಿರುದ್ಧದ ಕೊಲೆ ಬೆದರಿಕೆ ಪತ್ರಕ್ಕೆ ಪ್ರಕಾಶ್‌ ರಾಜ್‌ ಕೊಟ್ಟ ಉತ್ತರ ’ಚಲೋ ಹಮ್‌ ದೇಖೇಂಗೆ’…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...