Homeಮುಖಪುಟದಾರಿತಪ್ಪಿಸುವ ಜಾಹೀರಾತುಗಳ ವಿರುದ್ಧ ಕ್ರಮ ಕೈಗೊಳ್ಳಿ - ಕೇಂದ್ರ ಸರ್ಕಾರ

ದಾರಿತಪ್ಪಿಸುವ ಜಾಹೀರಾತುಗಳ ವಿರುದ್ಧ ಕ್ರಮ ಕೈಗೊಳ್ಳಿ – ಕೇಂದ್ರ ಸರ್ಕಾರ

- Advertisement -
- Advertisement -

ಆಯುಷ್ ಔಷಧಿಗಳೂ ಸೇರಿದಂತೆ ದಾರಿತಪ್ಪಿಸುವ ಜಾಹೀರಾತುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಗುರಿಯನ್ನು ಹೊಂದಿರುವ ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತು) ಕಾಯಿದೆ – 1954ರ ಕರಡು ತಿದ್ದುಪಡಿ ಮಾಡಲು “ಸೂಕ್ತ ಕ್ರಮ” ತೆಗೆದುಕೊಳ್ಳುವಂತೆ ಪ್ರಧಾನ ಮಂತ್ರಿಗಳ ಕಚೇರಿ (PMO) ಆರೋಗ್ಯ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.

ಆರೋಗ್ಯ ಸಚಿವಾಲಯವು ತನ್ನ ಕರಡು ಪ್ರತಿಯನ್ನು ನಾಲ್ಕು ವರ್ಷಗಳಿಂದ ತಡೆಹಿಡಿದಿತ್ತು. ಇದನ್ನು ವಿರೋಧಿಸಿ ಕಳೆದ ತಿಂಗಳು ಕೇರಳ ಮೂಲದ ಡಾ.ಕೆ.ವಿ. ಬಾಬು ಅವರು ಸಲ್ಲಿಸಿದ ದೂರಿನ ನಂತರ ಪ್ರಧಾನ ಮಂತ್ರಿ ಕಚೇರಿ ನಿರ್ದೇಶನ ನೀಡಿದೆ. ಕರಡು ತಿದ್ದುಪಡಿಯು 24 ರೋಗಗಳು ಮತ್ತು ಅಸ್ವಸ್ಥತೆಗಳನ್ನು ಪರಿಚಯಿಸುವ ಮೂಲಕ ಕಾಯಿದೆಯ ವ್ಯಾಪ್ತಿಯನ್ನು ವಿಸ್ತರಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಸೆಂಬರ್ 21 ರಂದು ಪ್ರಧಾನ ಮಂತ್ರಿ ನೀಡಿದ ಪ್ರತಿಕ್ರಿಯೆಯಲ್ಲಿ, “ಡಾ.ಕೆ.ವಿ. ಬಾಬು ಅವರಿಂದ ಸ್ವೀಕರಿಸಿದ ಪತ್ರವನ್ನು ಸೂಕ್ತ ಕ್ರಮಕ್ಕಾಗಿ ಪಿಎಂಒಪಿಜಿ ಪೋರ್ಟಲ್‌ನಲ್ಲಿ ಆನ್‌ಲೈನ್ ಮೋಡ್ ಮೂಲಕ ಇಲ್ಲಿಗೆ ರವಾನಿಸಲಾಗಿದೆ. ಅರ್ಜಿದಾರರಿಗೆ ಉತ್ತರವನ್ನು ಕಳುಹಿಸಬೇಕು ಮತ್ತು ಅದರ ಪ್ರತಿಯನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು” ಎಂದು ಹೇಳಿದೆ.

ಡಾ.ಕೆ.ವಿ. ಬಾಬು ಅವರು ನೀಡಿದ ದೂರಿನಲ್ಲಿ, “ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ ಕಾಯ್ದೆಗಳಿಗೆ ಪ್ರಸ್ತಾವಿತ ತಿದ್ದುಪಡಿಯು 2018ರ ಸಂಸದೀಯ ಸ್ಥಾಯಿ ಸಮಿತಿಯ ಕಟು ಟೀಕೆಗಳ ಫಲವಾಗಿದೆ. ಪ್ರಸ್ತಾವನೆಯು ಸುಮಾರು ಐದು ವರ್ಷಗಳಿಂದ ಸಾರ್ವಜನಿಕ ಡೊಮೇನ್‌ನಲ್ಲಿದ್ದರೂ, ಅದು ಇನ್ನೂ ಜಾರಿಗೆ ಬಂದಿಲ್ಲ” ಎಂದು ಹೇಳಿದ್ದರು.

ಕಣ್ಣಿನ ಪೊರೆ, ಡಬಲ್ ವಿಷನ್, ಕಲರ್ ವಿಷನ್ ಮತ್ತು ರಾತ್ರಿ ಕುರುಡುತನಕ್ಕೆ ಚಿಕಿತ್ಸೆ ನೀಡುವುದಾಗಿ ಹೇಳುವ ದೃಷ್ಠಿ ಐ ಡ್ರಾಪ್‌ ಔಷಧಗಳು ಸೇರಿದಂತೆ ಆಯುಷ್ ಉತ್ಪನ್ನಗಳ ದಾರಿತಪ್ಪಿಸುವ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಬಾಬಾ ರಾಮ್‌ದೇವ್‌ಗೆ ಛೀಮಾರಿ ಹಾಕಿರುವ ಸುಪ್ರೀಂ ಕೋರ್ಟ್‌ನ ತೀರ್ಪು ಈಗಿರುವ ಔಷಧ ಕಾನೂನುಗಳಲ್ಲಿನ ಲೋಪದೋಷಗಳನ್ನು ತೆರೆದಿಟ್ಟಿದೆ ಅವರು ಹೇಳಿದ್ದಾರೆ.

ಹಾಗಾಗಿ, ಪ್ರಧಾನ ಮಂತ್ರಿ ಕಚೇರಿಯು ಮಧ್ಯ ಪ್ರವೇಶ ಮಾಡಿದರೆ ಕಳೆದ ನಾಲ್ಕು ವರ್ಷಗಳಿಂದ ತಿದ್ದುಪಡಿ ಕಾಯ್ದೆಯನ್ನು ವಿಳಂಬ ಮಾಡುತ್ತಿರುವ ಆರೋಗ್ಯ ಸಚಿವಾಲಯದ ನಿಷ್ರಿಯತೆ ಕೊನೆಯಾಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಡಾ.ಬಾಬು ಹೇಳಿದ್ದಾರೆ. “ಕರಡು ತಿದ್ದುಪಡಿ ಇನ್ನೂ ಬಾಕಿ ಇದೆ.. ಹೆಚ್ಚಿನ ಸೂಚನೆ ಲಭ್ಯವಿಲ್ಲ” ಎಂದು ಆರೋಗ್ಯ ಸಚಿವಾಲಯ ನೀಡಿದ ಆರ್‌ಟಿಐ ಉತ್ತರದ ಹಿನ್ನಲೆ ತಾನು ಪ್ರಧಾನ ಮಂತ್ರಿ ಕಚೇರಿಗೆ ದೂರು ಸಲ್ಲಿಸಿದ್ದೇನೆ ಅವರು ಪತ್ರದಲ್ಲಿ ಹೇಳಿದ್ದಾರೆ.

ಸಚಿವಾಲಯವು ಫೆಬ್ರವರಿ 3, 2020 ರಂದು ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತು) ಕಾಯಿದೆ 1954 ಗೆ ತಿದ್ದುಪಡಿಯನ್ನು ಪ್ರಸ್ತಾಪಿಸಿತ್ತು. ಈ ಕಾಯಿದೆಯು ಆಯುರ್ವೇದ, ಸಿದ್ಧ, ಯುನಾನಿ ಮತ್ತು ಹೋಮಿಯೋಪತಿ ಔಷಧಿಗಳು ಸೇರಿದಂತೆ ಎಲ್ಲಾ ಔಷಧಿಗಳಿಗೆ ಅನ್ವಯಿಸುತ್ತದೆ. ಈ ಕಾಯಿದೆ ಮಾಂತ್ರಿಕ ಗುಣಗಳನ್ನು ಹೊಂದಿದೆ ಎಂದು ಪ್ರತಿಪಾದಿಸುವ ಚಿಕಿತ್ಸೆಗಳು ಮತ್ತು ಔಷಧಿಗಳ ಜಾಹೀರಾತನ್ನು ನಿಷೇಧಿಸುತ್ತದೆ.

ಇದನ್ನೂ ಓದಿ: 5, 8ನೇ ತರಗತಿ ವಿದ್ಯಾರ್ಥಿಗಳ ಕಡ್ಡಾಯ ಪಾಸ್ ನಿಯಮ ರದ್ದು : ಅನುತ್ತೀರ್ಣಕ್ಕೆ ಅವಕಾಶ

5, 8ನೇ ತರಗತಿ ವಿದ್ಯಾರ್ಥಿಗಳ ಕಡ್ಡಾಯ ಪಾಸ್ ನಿಯಮ ರದ್ದು : ಅನುತ್ತೀರ್ಣಕ್ಕೆ ಅವಕಾಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...