Homeಮುಖಪುಟದಾರಿತಪ್ಪಿಸುವ ಜಾಹೀರಾತುಗಳ ವಿರುದ್ಧ ಕ್ರಮ ಕೈಗೊಳ್ಳಿ - ಕೇಂದ್ರ ಸರ್ಕಾರ

ದಾರಿತಪ್ಪಿಸುವ ಜಾಹೀರಾತುಗಳ ವಿರುದ್ಧ ಕ್ರಮ ಕೈಗೊಳ್ಳಿ – ಕೇಂದ್ರ ಸರ್ಕಾರ

- Advertisement -
- Advertisement -

ಆಯುಷ್ ಔಷಧಿಗಳೂ ಸೇರಿದಂತೆ ದಾರಿತಪ್ಪಿಸುವ ಜಾಹೀರಾತುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಗುರಿಯನ್ನು ಹೊಂದಿರುವ ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತು) ಕಾಯಿದೆ – 1954ರ ಕರಡು ತಿದ್ದುಪಡಿ ಮಾಡಲು “ಸೂಕ್ತ ಕ್ರಮ” ತೆಗೆದುಕೊಳ್ಳುವಂತೆ ಪ್ರಧಾನ ಮಂತ್ರಿಗಳ ಕಚೇರಿ (PMO) ಆರೋಗ್ಯ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.

ಆರೋಗ್ಯ ಸಚಿವಾಲಯವು ತನ್ನ ಕರಡು ಪ್ರತಿಯನ್ನು ನಾಲ್ಕು ವರ್ಷಗಳಿಂದ ತಡೆಹಿಡಿದಿತ್ತು. ಇದನ್ನು ವಿರೋಧಿಸಿ ಕಳೆದ ತಿಂಗಳು ಕೇರಳ ಮೂಲದ ಡಾ.ಕೆ.ವಿ. ಬಾಬು ಅವರು ಸಲ್ಲಿಸಿದ ದೂರಿನ ನಂತರ ಪ್ರಧಾನ ಮಂತ್ರಿ ಕಚೇರಿ ನಿರ್ದೇಶನ ನೀಡಿದೆ. ಕರಡು ತಿದ್ದುಪಡಿಯು 24 ರೋಗಗಳು ಮತ್ತು ಅಸ್ವಸ್ಥತೆಗಳನ್ನು ಪರಿಚಯಿಸುವ ಮೂಲಕ ಕಾಯಿದೆಯ ವ್ಯಾಪ್ತಿಯನ್ನು ವಿಸ್ತರಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಸೆಂಬರ್ 21 ರಂದು ಪ್ರಧಾನ ಮಂತ್ರಿ ನೀಡಿದ ಪ್ರತಿಕ್ರಿಯೆಯಲ್ಲಿ, “ಡಾ.ಕೆ.ವಿ. ಬಾಬು ಅವರಿಂದ ಸ್ವೀಕರಿಸಿದ ಪತ್ರವನ್ನು ಸೂಕ್ತ ಕ್ರಮಕ್ಕಾಗಿ ಪಿಎಂಒಪಿಜಿ ಪೋರ್ಟಲ್‌ನಲ್ಲಿ ಆನ್‌ಲೈನ್ ಮೋಡ್ ಮೂಲಕ ಇಲ್ಲಿಗೆ ರವಾನಿಸಲಾಗಿದೆ. ಅರ್ಜಿದಾರರಿಗೆ ಉತ್ತರವನ್ನು ಕಳುಹಿಸಬೇಕು ಮತ್ತು ಅದರ ಪ್ರತಿಯನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು” ಎಂದು ಹೇಳಿದೆ.

ಡಾ.ಕೆ.ವಿ. ಬಾಬು ಅವರು ನೀಡಿದ ದೂರಿನಲ್ಲಿ, “ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ ಕಾಯ್ದೆಗಳಿಗೆ ಪ್ರಸ್ತಾವಿತ ತಿದ್ದುಪಡಿಯು 2018ರ ಸಂಸದೀಯ ಸ್ಥಾಯಿ ಸಮಿತಿಯ ಕಟು ಟೀಕೆಗಳ ಫಲವಾಗಿದೆ. ಪ್ರಸ್ತಾವನೆಯು ಸುಮಾರು ಐದು ವರ್ಷಗಳಿಂದ ಸಾರ್ವಜನಿಕ ಡೊಮೇನ್‌ನಲ್ಲಿದ್ದರೂ, ಅದು ಇನ್ನೂ ಜಾರಿಗೆ ಬಂದಿಲ್ಲ” ಎಂದು ಹೇಳಿದ್ದರು.

ಕಣ್ಣಿನ ಪೊರೆ, ಡಬಲ್ ವಿಷನ್, ಕಲರ್ ವಿಷನ್ ಮತ್ತು ರಾತ್ರಿ ಕುರುಡುತನಕ್ಕೆ ಚಿಕಿತ್ಸೆ ನೀಡುವುದಾಗಿ ಹೇಳುವ ದೃಷ್ಠಿ ಐ ಡ್ರಾಪ್‌ ಔಷಧಗಳು ಸೇರಿದಂತೆ ಆಯುಷ್ ಉತ್ಪನ್ನಗಳ ದಾರಿತಪ್ಪಿಸುವ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಬಾಬಾ ರಾಮ್‌ದೇವ್‌ಗೆ ಛೀಮಾರಿ ಹಾಕಿರುವ ಸುಪ್ರೀಂ ಕೋರ್ಟ್‌ನ ತೀರ್ಪು ಈಗಿರುವ ಔಷಧ ಕಾನೂನುಗಳಲ್ಲಿನ ಲೋಪದೋಷಗಳನ್ನು ತೆರೆದಿಟ್ಟಿದೆ ಅವರು ಹೇಳಿದ್ದಾರೆ.

ಹಾಗಾಗಿ, ಪ್ರಧಾನ ಮಂತ್ರಿ ಕಚೇರಿಯು ಮಧ್ಯ ಪ್ರವೇಶ ಮಾಡಿದರೆ ಕಳೆದ ನಾಲ್ಕು ವರ್ಷಗಳಿಂದ ತಿದ್ದುಪಡಿ ಕಾಯ್ದೆಯನ್ನು ವಿಳಂಬ ಮಾಡುತ್ತಿರುವ ಆರೋಗ್ಯ ಸಚಿವಾಲಯದ ನಿಷ್ರಿಯತೆ ಕೊನೆಯಾಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಡಾ.ಬಾಬು ಹೇಳಿದ್ದಾರೆ. “ಕರಡು ತಿದ್ದುಪಡಿ ಇನ್ನೂ ಬಾಕಿ ಇದೆ.. ಹೆಚ್ಚಿನ ಸೂಚನೆ ಲಭ್ಯವಿಲ್ಲ” ಎಂದು ಆರೋಗ್ಯ ಸಚಿವಾಲಯ ನೀಡಿದ ಆರ್‌ಟಿಐ ಉತ್ತರದ ಹಿನ್ನಲೆ ತಾನು ಪ್ರಧಾನ ಮಂತ್ರಿ ಕಚೇರಿಗೆ ದೂರು ಸಲ್ಲಿಸಿದ್ದೇನೆ ಅವರು ಪತ್ರದಲ್ಲಿ ಹೇಳಿದ್ದಾರೆ.

ಸಚಿವಾಲಯವು ಫೆಬ್ರವರಿ 3, 2020 ರಂದು ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತು) ಕಾಯಿದೆ 1954 ಗೆ ತಿದ್ದುಪಡಿಯನ್ನು ಪ್ರಸ್ತಾಪಿಸಿತ್ತು. ಈ ಕಾಯಿದೆಯು ಆಯುರ್ವೇದ, ಸಿದ್ಧ, ಯುನಾನಿ ಮತ್ತು ಹೋಮಿಯೋಪತಿ ಔಷಧಿಗಳು ಸೇರಿದಂತೆ ಎಲ್ಲಾ ಔಷಧಿಗಳಿಗೆ ಅನ್ವಯಿಸುತ್ತದೆ. ಈ ಕಾಯಿದೆ ಮಾಂತ್ರಿಕ ಗುಣಗಳನ್ನು ಹೊಂದಿದೆ ಎಂದು ಪ್ರತಿಪಾದಿಸುವ ಚಿಕಿತ್ಸೆಗಳು ಮತ್ತು ಔಷಧಿಗಳ ಜಾಹೀರಾತನ್ನು ನಿಷೇಧಿಸುತ್ತದೆ.

ಇದನ್ನೂ ಓದಿ: 5, 8ನೇ ತರಗತಿ ವಿದ್ಯಾರ್ಥಿಗಳ ಕಡ್ಡಾಯ ಪಾಸ್ ನಿಯಮ ರದ್ದು : ಅನುತ್ತೀರ್ಣಕ್ಕೆ ಅವಕಾಶ

5, 8ನೇ ತರಗತಿ ವಿದ್ಯಾರ್ಥಿಗಳ ಕಡ್ಡಾಯ ಪಾಸ್ ನಿಯಮ ರದ್ದು : ಅನುತ್ತೀರ್ಣಕ್ಕೆ ಅವಕಾಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...