Homeಮುಖಪುಟದಾರಿತಪ್ಪಿಸುವ ಜಾಹೀರಾತುಗಳ ವಿರುದ್ಧ ಕ್ರಮ ಕೈಗೊಳ್ಳಿ - ಕೇಂದ್ರ ಸರ್ಕಾರ

ದಾರಿತಪ್ಪಿಸುವ ಜಾಹೀರಾತುಗಳ ವಿರುದ್ಧ ಕ್ರಮ ಕೈಗೊಳ್ಳಿ – ಕೇಂದ್ರ ಸರ್ಕಾರ

- Advertisement -
- Advertisement -

ಆಯುಷ್ ಔಷಧಿಗಳೂ ಸೇರಿದಂತೆ ದಾರಿತಪ್ಪಿಸುವ ಜಾಹೀರಾತುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಗುರಿಯನ್ನು ಹೊಂದಿರುವ ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತು) ಕಾಯಿದೆ – 1954ರ ಕರಡು ತಿದ್ದುಪಡಿ ಮಾಡಲು “ಸೂಕ್ತ ಕ್ರಮ” ತೆಗೆದುಕೊಳ್ಳುವಂತೆ ಪ್ರಧಾನ ಮಂತ್ರಿಗಳ ಕಚೇರಿ (PMO) ಆರೋಗ್ಯ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.

ಆರೋಗ್ಯ ಸಚಿವಾಲಯವು ತನ್ನ ಕರಡು ಪ್ರತಿಯನ್ನು ನಾಲ್ಕು ವರ್ಷಗಳಿಂದ ತಡೆಹಿಡಿದಿತ್ತು. ಇದನ್ನು ವಿರೋಧಿಸಿ ಕಳೆದ ತಿಂಗಳು ಕೇರಳ ಮೂಲದ ಡಾ.ಕೆ.ವಿ. ಬಾಬು ಅವರು ಸಲ್ಲಿಸಿದ ದೂರಿನ ನಂತರ ಪ್ರಧಾನ ಮಂತ್ರಿ ಕಚೇರಿ ನಿರ್ದೇಶನ ನೀಡಿದೆ. ಕರಡು ತಿದ್ದುಪಡಿಯು 24 ರೋಗಗಳು ಮತ್ತು ಅಸ್ವಸ್ಥತೆಗಳನ್ನು ಪರಿಚಯಿಸುವ ಮೂಲಕ ಕಾಯಿದೆಯ ವ್ಯಾಪ್ತಿಯನ್ನು ವಿಸ್ತರಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಸೆಂಬರ್ 21 ರಂದು ಪ್ರಧಾನ ಮಂತ್ರಿ ನೀಡಿದ ಪ್ರತಿಕ್ರಿಯೆಯಲ್ಲಿ, “ಡಾ.ಕೆ.ವಿ. ಬಾಬು ಅವರಿಂದ ಸ್ವೀಕರಿಸಿದ ಪತ್ರವನ್ನು ಸೂಕ್ತ ಕ್ರಮಕ್ಕಾಗಿ ಪಿಎಂಒಪಿಜಿ ಪೋರ್ಟಲ್‌ನಲ್ಲಿ ಆನ್‌ಲೈನ್ ಮೋಡ್ ಮೂಲಕ ಇಲ್ಲಿಗೆ ರವಾನಿಸಲಾಗಿದೆ. ಅರ್ಜಿದಾರರಿಗೆ ಉತ್ತರವನ್ನು ಕಳುಹಿಸಬೇಕು ಮತ್ತು ಅದರ ಪ್ರತಿಯನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು” ಎಂದು ಹೇಳಿದೆ.

ಡಾ.ಕೆ.ವಿ. ಬಾಬು ಅವರು ನೀಡಿದ ದೂರಿನಲ್ಲಿ, “ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ ಕಾಯ್ದೆಗಳಿಗೆ ಪ್ರಸ್ತಾವಿತ ತಿದ್ದುಪಡಿಯು 2018ರ ಸಂಸದೀಯ ಸ್ಥಾಯಿ ಸಮಿತಿಯ ಕಟು ಟೀಕೆಗಳ ಫಲವಾಗಿದೆ. ಪ್ರಸ್ತಾವನೆಯು ಸುಮಾರು ಐದು ವರ್ಷಗಳಿಂದ ಸಾರ್ವಜನಿಕ ಡೊಮೇನ್‌ನಲ್ಲಿದ್ದರೂ, ಅದು ಇನ್ನೂ ಜಾರಿಗೆ ಬಂದಿಲ್ಲ” ಎಂದು ಹೇಳಿದ್ದರು.

ಕಣ್ಣಿನ ಪೊರೆ, ಡಬಲ್ ವಿಷನ್, ಕಲರ್ ವಿಷನ್ ಮತ್ತು ರಾತ್ರಿ ಕುರುಡುತನಕ್ಕೆ ಚಿಕಿತ್ಸೆ ನೀಡುವುದಾಗಿ ಹೇಳುವ ದೃಷ್ಠಿ ಐ ಡ್ರಾಪ್‌ ಔಷಧಗಳು ಸೇರಿದಂತೆ ಆಯುಷ್ ಉತ್ಪನ್ನಗಳ ದಾರಿತಪ್ಪಿಸುವ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಬಾಬಾ ರಾಮ್‌ದೇವ್‌ಗೆ ಛೀಮಾರಿ ಹಾಕಿರುವ ಸುಪ್ರೀಂ ಕೋರ್ಟ್‌ನ ತೀರ್ಪು ಈಗಿರುವ ಔಷಧ ಕಾನೂನುಗಳಲ್ಲಿನ ಲೋಪದೋಷಗಳನ್ನು ತೆರೆದಿಟ್ಟಿದೆ ಅವರು ಹೇಳಿದ್ದಾರೆ.

ಹಾಗಾಗಿ, ಪ್ರಧಾನ ಮಂತ್ರಿ ಕಚೇರಿಯು ಮಧ್ಯ ಪ್ರವೇಶ ಮಾಡಿದರೆ ಕಳೆದ ನಾಲ್ಕು ವರ್ಷಗಳಿಂದ ತಿದ್ದುಪಡಿ ಕಾಯ್ದೆಯನ್ನು ವಿಳಂಬ ಮಾಡುತ್ತಿರುವ ಆರೋಗ್ಯ ಸಚಿವಾಲಯದ ನಿಷ್ರಿಯತೆ ಕೊನೆಯಾಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಡಾ.ಬಾಬು ಹೇಳಿದ್ದಾರೆ. “ಕರಡು ತಿದ್ದುಪಡಿ ಇನ್ನೂ ಬಾಕಿ ಇದೆ.. ಹೆಚ್ಚಿನ ಸೂಚನೆ ಲಭ್ಯವಿಲ್ಲ” ಎಂದು ಆರೋಗ್ಯ ಸಚಿವಾಲಯ ನೀಡಿದ ಆರ್‌ಟಿಐ ಉತ್ತರದ ಹಿನ್ನಲೆ ತಾನು ಪ್ರಧಾನ ಮಂತ್ರಿ ಕಚೇರಿಗೆ ದೂರು ಸಲ್ಲಿಸಿದ್ದೇನೆ ಅವರು ಪತ್ರದಲ್ಲಿ ಹೇಳಿದ್ದಾರೆ.

ಸಚಿವಾಲಯವು ಫೆಬ್ರವರಿ 3, 2020 ರಂದು ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತು) ಕಾಯಿದೆ 1954 ಗೆ ತಿದ್ದುಪಡಿಯನ್ನು ಪ್ರಸ್ತಾಪಿಸಿತ್ತು. ಈ ಕಾಯಿದೆಯು ಆಯುರ್ವೇದ, ಸಿದ್ಧ, ಯುನಾನಿ ಮತ್ತು ಹೋಮಿಯೋಪತಿ ಔಷಧಿಗಳು ಸೇರಿದಂತೆ ಎಲ್ಲಾ ಔಷಧಿಗಳಿಗೆ ಅನ್ವಯಿಸುತ್ತದೆ. ಈ ಕಾಯಿದೆ ಮಾಂತ್ರಿಕ ಗುಣಗಳನ್ನು ಹೊಂದಿದೆ ಎಂದು ಪ್ರತಿಪಾದಿಸುವ ಚಿಕಿತ್ಸೆಗಳು ಮತ್ತು ಔಷಧಿಗಳ ಜಾಹೀರಾತನ್ನು ನಿಷೇಧಿಸುತ್ತದೆ.

ಇದನ್ನೂ ಓದಿ: 5, 8ನೇ ತರಗತಿ ವಿದ್ಯಾರ್ಥಿಗಳ ಕಡ್ಡಾಯ ಪಾಸ್ ನಿಯಮ ರದ್ದು : ಅನುತ್ತೀರ್ಣಕ್ಕೆ ಅವಕಾಶ

5, 8ನೇ ತರಗತಿ ವಿದ್ಯಾರ್ಥಿಗಳ ಕಡ್ಡಾಯ ಪಾಸ್ ನಿಯಮ ರದ್ದು : ಅನುತ್ತೀರ್ಣಕ್ಕೆ ಅವಕಾಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...