Homeಕರ್ನಾಟಕಆರ್‌ಎಸ್‌ಎಸ್‌ ವಿರುದ್ಧವೂ ಕ್ರಮ ಜರುಗಿಸಿ- ಸಿದ್ದರಾಮಯ್ಯ; ಎಸ್‌ಡಿಪಿಐ ಜೊತೆ ಬಿಜೆಪಿ ನಂಟಿದೆ- ಕಾಂಗ್ರೆಸ್

ಆರ್‌ಎಸ್‌ಎಸ್‌ ವಿರುದ್ಧವೂ ಕ್ರಮ ಜರುಗಿಸಿ- ಸಿದ್ದರಾಮಯ್ಯ; ಎಸ್‌ಡಿಪಿಐ ಜೊತೆ ಬಿಜೆಪಿ ನಂಟಿದೆ- ಕಾಂಗ್ರೆಸ್

- Advertisement -
- Advertisement -

“ಆರ್‌ಎಸ್‌ಎಸ್‌ ವಿರುದ್ಧವೂ ಕ್ರಮ ಜರುಗಿಸಬೇಕು” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರೆ, ರಾಜ್ಯ ಕಾಂಗ್ರೆಸ್‌, “ಎಸ್‌ಡಿಪಿಐಗೂ ಬಿಜೆಪಿಗೂ ಇರುವುದು ಯಾವ ಜನ್ಮದ ಮೈತ್ರಿ?” ಎಂದು ಪ್ರಶ್ನಿಸಿದೆ.

ಒಂದು ವಾರದೊಳಗಡೆ ಎರಡು ಸುತ್ತಿನ ರಾಷ್ಟ್ರವ್ಯಾಪಿ ದಾಳಿಗಳು ನಡೆದು, 240ಕ್ಕೂ ಹೆಚ್ಚು ಸದಸ್ಯರನ್ನು ಬಂಧಿಸಿದ ನಂತರ, ಒಕ್ಕೂಟ ಸರ್ಕಾರವು ಮಂಗಳವಾರ ಸಂಜೆ ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವನ್ನು ಐದು ವರ್ಷಗಳ ಕಾಲ ನಿಷೇಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳನ್ನು “ಕಾನೂನುಬಾಹಿರ ಸಂಘ” ಎಂದು ಘೋಷಿಸಲಾಗಿದೆ ಎಂದು ಸರ್ಕಾರಿ ಅಧಿಸೂಚನೆ ತಿಳಿಸಿದೆ. ಈ ಕುರಿತು ಸಿದ್ದರಾಮಯ್ಯನವರು ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುದ್ದಿಗಾರರ ಜೊತೆ ಮಾತನಾಡಿರುವ ಅವರು, “ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ಧ ಕ್ರಮ ಕೈಗೊಂಡರೆ ನಮ್ಮ ವಿರೋಧ ಇಲ್ಲ. ಯಾವುದೇ ಸಂಘಟನೆಯಾದರೂ ನಿಷೇಧಿಸಬೇಕು. ಆರೆಸ್ಸೆಸ್‌ನವರೂ ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಯಾರು ಸಮಾಜದಲ್ಲಿ ಕಂಟಕ ಮಾಡುತ್ತಾರೊ ಅವರ ವಿರುದ್ಧ ಕ್ರಮ ತೆಗೆದುಕೊಂಡರೆ ನಮ್ಮ‌ ಅಭ್ಯಂತರವಿಲ್ಲ. ಶಾಂತಿ ಹಾಳು ಮಾಡುತ್ತಿದ್ದವರ ಮೇಲೆ ಕ್ರಮ ಜರುಗಿಸಲಿ. ನಾನು ಆಗಲೂ ಹೇಳುತ್ತಿದ್ದೆ. ಈಗಲೂ ಹೇಳುತ್ತಿದ್ದೇನೆ. ದ್ವೇಷದ ರಾಜಕಾರಣ ಮಾಡಿದರೆ ಕ್ರಮ ಜರುಗಿಸಲಿ” ಎಂದು ಒತ್ತಾಯಿಸಿದ್ದಾರೆ.

“ನುಡಿದಂತೆ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ್ದೇವೆ” ಎಂಬ ಬಿಜೆಪಿ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, “ಪಿಎಫ್ಐ ಜೊತೆಗೆ ಒಂದೇ ನಾಣ್ಯದ ಇನ್ನೊಂದು ಮುಖ ಆಗಿರುವ ಆರೆಸ್ಸೆಸ್‌ ವಿರುದ್ಧ ಬಿಜೆಪಿ ಯಾವಾಗ ಕ್ರಮಕೈಗೊಳುತ್ತದೆ? ಎಲ್ಲ ರೀತಿಯ ಕೋಮುವಾದ ಮತ್ತು ದ್ವೇಷ ಸಮಾಜದ ರಚನೆ ಹಾನಿಕಾರಕ. ಅದನ್ನು ನಿಗ್ರಹಿಸುವ ಕೆಲಸ ಆಗಬೇಕು’ ಎಂದು ಆಗ್ರಹಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, “ಪಿಎಫ್‌ಐ ಹಾಗೂ ಎಸ್‌ಡಿಪಿಐ ಒಂದೇ ನಾಣ್ಯದ ಎರಡು ಮುಖಗಳಂತಿದ್ದವು, ಚುನಾವಣಾ ರಾಜಕೀಯದಲ್ಲಿ ಹೆಚ್ಚು ಸಕ್ರಿಯವಾಗಿರುವ ಎಸ್‌ಡಿಪಿಐ ಸಂಘಟನೆಯ ಬಗ್ಗೆ ಚಕಾರ ಎತ್ತದಿರುವುದೇಕೆ ಬಿಜೆಪಿ ಸರ್ಕಾರ? ಎಸ್‌ಡಿಪಿಐಗೂ ಬಿಜೆಪಿಗೂ ಇರುವುದು ಯಾವ ಜನ್ಮದ ಮೈತ್ರಿ? ಪಿಎಫ್‌ಐ ಜೊತೆ ಇದ್ದ ಬಿಜೆಪಿಯ ಹೊಂದಾಣಿಕೆ ಎಂತದ್ದು? ಈ ಆಯಾಮದಲ್ಲಿ ಎನ್‌ಐಎ ತನಿಖೆ ನಡೆಸಬೇಕಿದೆ” ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿರಿ: PFI ನಿಷೇಧ ಸಾಲದು, RSS ಅನ್ನು ಕೂಡ ನಿಷೇಧಿಸಬೇಕು: ಕಾಂಗ್ರೆಸ್ ಸಂಸದನ ಆಗ್ರಹ

“ಪಿಎಫ್‌ಐ ಮಾತ್ರವಲ್ಲ, ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಎಲ್ಲಾ ಮೂಲಭೂತವಾದಿ, ಕೋಮುವಾದಿ ಸಂಘಟನೆಗಳನ್ನೂ ನಿಷೇಧಿಸಬೇಕು. ಪಿಎಫ್‌ಐ ಸಂಘಟನೆಯನ್ನು ಪೋಷಿಸಿಕೊಂಡು ಬಂದಿದ್ದು ಬಿಜೆಪಿಯೇ ಎಂದು ಸತ್ಯಜಿತ್ ಸುರತ್ಕಲ್ ಸೇರಿದಂತೆ ಹಲವು ಸಂಘಪರಿವಾರದ ನಾಯಕರು ಹೇಳಿದ್ದರು. ಆ ಬಗ್ಗೆಯೂ ತನಿಖೆಯಾಗಬೇಕು. ಪೋಷಕರ ಬಗ್ಗೆ ಜಗತ್ತಿಗೆ ತಿಳಿಯಬೇಕು” ಎಂದಿರುವ ಕಾಂಗ್ರೆಸ್ ಸತ್ಯಜಿತ್‌ ಸುರತ್ಕಲ್ ಅವರ ವಿಡಿಯೊ ತುಣುಕನ್ನು ಹಂಚಿಕೊಂಡಿದೆ.

“ಕಾಂಗ್ರೆಸ್‌ ಸೋಲಿಸಬೇಕಾದರೆ ಎಸ್‌ಡಿಪಿಐ ಬಲವಾಗಬೇಕು ಎಂದು ಹಿಂದುತ್ವದ ಹೆಸರಿನಲ್ಲಿ ರಾಜಕೀಯ ಮಾಡುವ ಪಕ್ಷ ಬಯಸುತ್ತಿದೆ. ಎಸ್‌ಡಿಪಿಐಗೆ ಹಣವನ್ನು ನೀಡುತ್ತಿದೆ. ಕಾಂಗ್ರೆಸ್‌ನಿಂದ ಮುಸ್ಲಿಮರನ್ನು ದೂರ ತಳ್ಳಬೇಕು ಎಂದು ಎಸ್‌ಡಿಪಿಐಯನ್ನು ಬೆಳೆಸುತ್ತಿದ್ದಾರೆ” ಎಂದು ಸತ್ಯಜಿತ್‌ ಅವರು ಇಲ್ಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...

ಕೇರಳ | ದೇವಸ್ಥಾನದ ಉತ್ಸವದಲ್ಲಿ ಗುಂಪು ಹಲ್ಲೆ : 18 ವರ್ಷದ ಯುವಕ ಸಾವು

ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತನ...

ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು

ರಂಝಾನ್ ಉಪವಾಸ ನಿರತ ಮುಸ್ಲಿಂ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಭೀಕರವಾಗಿ ಥಳಿಸಿ, ಆಕೆ ನೀರು ಕೇಳಿದಾಗ ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಅಮಾನವೀಯ, ಅನಾಗರಿಕ ಮತ್ತು ಆಘಾತಕಾರಿ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ...