Homeಕರ್ನಾಟಕಆರ್‌ಎಸ್‌ಎಸ್‌ ವಿರುದ್ಧವೂ ಕ್ರಮ ಜರುಗಿಸಿ- ಸಿದ್ದರಾಮಯ್ಯ; ಎಸ್‌ಡಿಪಿಐ ಜೊತೆ ಬಿಜೆಪಿ ನಂಟಿದೆ- ಕಾಂಗ್ರೆಸ್

ಆರ್‌ಎಸ್‌ಎಸ್‌ ವಿರುದ್ಧವೂ ಕ್ರಮ ಜರುಗಿಸಿ- ಸಿದ್ದರಾಮಯ್ಯ; ಎಸ್‌ಡಿಪಿಐ ಜೊತೆ ಬಿಜೆಪಿ ನಂಟಿದೆ- ಕಾಂಗ್ರೆಸ್

- Advertisement -
- Advertisement -

“ಆರ್‌ಎಸ್‌ಎಸ್‌ ವಿರುದ್ಧವೂ ಕ್ರಮ ಜರುಗಿಸಬೇಕು” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರೆ, ರಾಜ್ಯ ಕಾಂಗ್ರೆಸ್‌, “ಎಸ್‌ಡಿಪಿಐಗೂ ಬಿಜೆಪಿಗೂ ಇರುವುದು ಯಾವ ಜನ್ಮದ ಮೈತ್ರಿ?” ಎಂದು ಪ್ರಶ್ನಿಸಿದೆ.

ಒಂದು ವಾರದೊಳಗಡೆ ಎರಡು ಸುತ್ತಿನ ರಾಷ್ಟ್ರವ್ಯಾಪಿ ದಾಳಿಗಳು ನಡೆದು, 240ಕ್ಕೂ ಹೆಚ್ಚು ಸದಸ್ಯರನ್ನು ಬಂಧಿಸಿದ ನಂತರ, ಒಕ್ಕೂಟ ಸರ್ಕಾರವು ಮಂಗಳವಾರ ಸಂಜೆ ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವನ್ನು ಐದು ವರ್ಷಗಳ ಕಾಲ ನಿಷೇಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳನ್ನು “ಕಾನೂನುಬಾಹಿರ ಸಂಘ” ಎಂದು ಘೋಷಿಸಲಾಗಿದೆ ಎಂದು ಸರ್ಕಾರಿ ಅಧಿಸೂಚನೆ ತಿಳಿಸಿದೆ. ಈ ಕುರಿತು ಸಿದ್ದರಾಮಯ್ಯನವರು ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುದ್ದಿಗಾರರ ಜೊತೆ ಮಾತನಾಡಿರುವ ಅವರು, “ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ಧ ಕ್ರಮ ಕೈಗೊಂಡರೆ ನಮ್ಮ ವಿರೋಧ ಇಲ್ಲ. ಯಾವುದೇ ಸಂಘಟನೆಯಾದರೂ ನಿಷೇಧಿಸಬೇಕು. ಆರೆಸ್ಸೆಸ್‌ನವರೂ ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಯಾರು ಸಮಾಜದಲ್ಲಿ ಕಂಟಕ ಮಾಡುತ್ತಾರೊ ಅವರ ವಿರುದ್ಧ ಕ್ರಮ ತೆಗೆದುಕೊಂಡರೆ ನಮ್ಮ‌ ಅಭ್ಯಂತರವಿಲ್ಲ. ಶಾಂತಿ ಹಾಳು ಮಾಡುತ್ತಿದ್ದವರ ಮೇಲೆ ಕ್ರಮ ಜರುಗಿಸಲಿ. ನಾನು ಆಗಲೂ ಹೇಳುತ್ತಿದ್ದೆ. ಈಗಲೂ ಹೇಳುತ್ತಿದ್ದೇನೆ. ದ್ವೇಷದ ರಾಜಕಾರಣ ಮಾಡಿದರೆ ಕ್ರಮ ಜರುಗಿಸಲಿ” ಎಂದು ಒತ್ತಾಯಿಸಿದ್ದಾರೆ.

“ನುಡಿದಂತೆ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ್ದೇವೆ” ಎಂಬ ಬಿಜೆಪಿ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, “ಪಿಎಫ್ಐ ಜೊತೆಗೆ ಒಂದೇ ನಾಣ್ಯದ ಇನ್ನೊಂದು ಮುಖ ಆಗಿರುವ ಆರೆಸ್ಸೆಸ್‌ ವಿರುದ್ಧ ಬಿಜೆಪಿ ಯಾವಾಗ ಕ್ರಮಕೈಗೊಳುತ್ತದೆ? ಎಲ್ಲ ರೀತಿಯ ಕೋಮುವಾದ ಮತ್ತು ದ್ವೇಷ ಸಮಾಜದ ರಚನೆ ಹಾನಿಕಾರಕ. ಅದನ್ನು ನಿಗ್ರಹಿಸುವ ಕೆಲಸ ಆಗಬೇಕು’ ಎಂದು ಆಗ್ರಹಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, “ಪಿಎಫ್‌ಐ ಹಾಗೂ ಎಸ್‌ಡಿಪಿಐ ಒಂದೇ ನಾಣ್ಯದ ಎರಡು ಮುಖಗಳಂತಿದ್ದವು, ಚುನಾವಣಾ ರಾಜಕೀಯದಲ್ಲಿ ಹೆಚ್ಚು ಸಕ್ರಿಯವಾಗಿರುವ ಎಸ್‌ಡಿಪಿಐ ಸಂಘಟನೆಯ ಬಗ್ಗೆ ಚಕಾರ ಎತ್ತದಿರುವುದೇಕೆ ಬಿಜೆಪಿ ಸರ್ಕಾರ? ಎಸ್‌ಡಿಪಿಐಗೂ ಬಿಜೆಪಿಗೂ ಇರುವುದು ಯಾವ ಜನ್ಮದ ಮೈತ್ರಿ? ಪಿಎಫ್‌ಐ ಜೊತೆ ಇದ್ದ ಬಿಜೆಪಿಯ ಹೊಂದಾಣಿಕೆ ಎಂತದ್ದು? ಈ ಆಯಾಮದಲ್ಲಿ ಎನ್‌ಐಎ ತನಿಖೆ ನಡೆಸಬೇಕಿದೆ” ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿರಿ: PFI ನಿಷೇಧ ಸಾಲದು, RSS ಅನ್ನು ಕೂಡ ನಿಷೇಧಿಸಬೇಕು: ಕಾಂಗ್ರೆಸ್ ಸಂಸದನ ಆಗ್ರಹ

“ಪಿಎಫ್‌ಐ ಮಾತ್ರವಲ್ಲ, ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಎಲ್ಲಾ ಮೂಲಭೂತವಾದಿ, ಕೋಮುವಾದಿ ಸಂಘಟನೆಗಳನ್ನೂ ನಿಷೇಧಿಸಬೇಕು. ಪಿಎಫ್‌ಐ ಸಂಘಟನೆಯನ್ನು ಪೋಷಿಸಿಕೊಂಡು ಬಂದಿದ್ದು ಬಿಜೆಪಿಯೇ ಎಂದು ಸತ್ಯಜಿತ್ ಸುರತ್ಕಲ್ ಸೇರಿದಂತೆ ಹಲವು ಸಂಘಪರಿವಾರದ ನಾಯಕರು ಹೇಳಿದ್ದರು. ಆ ಬಗ್ಗೆಯೂ ತನಿಖೆಯಾಗಬೇಕು. ಪೋಷಕರ ಬಗ್ಗೆ ಜಗತ್ತಿಗೆ ತಿಳಿಯಬೇಕು” ಎಂದಿರುವ ಕಾಂಗ್ರೆಸ್ ಸತ್ಯಜಿತ್‌ ಸುರತ್ಕಲ್ ಅವರ ವಿಡಿಯೊ ತುಣುಕನ್ನು ಹಂಚಿಕೊಂಡಿದೆ.

“ಕಾಂಗ್ರೆಸ್‌ ಸೋಲಿಸಬೇಕಾದರೆ ಎಸ್‌ಡಿಪಿಐ ಬಲವಾಗಬೇಕು ಎಂದು ಹಿಂದುತ್ವದ ಹೆಸರಿನಲ್ಲಿ ರಾಜಕೀಯ ಮಾಡುವ ಪಕ್ಷ ಬಯಸುತ್ತಿದೆ. ಎಸ್‌ಡಿಪಿಐಗೆ ಹಣವನ್ನು ನೀಡುತ್ತಿದೆ. ಕಾಂಗ್ರೆಸ್‌ನಿಂದ ಮುಸ್ಲಿಮರನ್ನು ದೂರ ತಳ್ಳಬೇಕು ಎಂದು ಎಸ್‌ಡಿಪಿಐಯನ್ನು ಬೆಳೆಸುತ್ತಿದ್ದಾರೆ” ಎಂದು ಸತ್ಯಜಿತ್‌ ಅವರು ಇಲ್ಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...