Homeಕರ್ನಾಟಕಆರ್‌ಎಸ್‌ಎಸ್‌ ವಿರುದ್ಧವೂ ಕ್ರಮ ಜರುಗಿಸಿ- ಸಿದ್ದರಾಮಯ್ಯ; ಎಸ್‌ಡಿಪಿಐ ಜೊತೆ ಬಿಜೆಪಿ ನಂಟಿದೆ- ಕಾಂಗ್ರೆಸ್

ಆರ್‌ಎಸ್‌ಎಸ್‌ ವಿರುದ್ಧವೂ ಕ್ರಮ ಜರುಗಿಸಿ- ಸಿದ್ದರಾಮಯ್ಯ; ಎಸ್‌ಡಿಪಿಐ ಜೊತೆ ಬಿಜೆಪಿ ನಂಟಿದೆ- ಕಾಂಗ್ರೆಸ್

- Advertisement -
- Advertisement -

“ಆರ್‌ಎಸ್‌ಎಸ್‌ ವಿರುದ್ಧವೂ ಕ್ರಮ ಜರುಗಿಸಬೇಕು” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರೆ, ರಾಜ್ಯ ಕಾಂಗ್ರೆಸ್‌, “ಎಸ್‌ಡಿಪಿಐಗೂ ಬಿಜೆಪಿಗೂ ಇರುವುದು ಯಾವ ಜನ್ಮದ ಮೈತ್ರಿ?” ಎಂದು ಪ್ರಶ್ನಿಸಿದೆ.

ಒಂದು ವಾರದೊಳಗಡೆ ಎರಡು ಸುತ್ತಿನ ರಾಷ್ಟ್ರವ್ಯಾಪಿ ದಾಳಿಗಳು ನಡೆದು, 240ಕ್ಕೂ ಹೆಚ್ಚು ಸದಸ್ಯರನ್ನು ಬಂಧಿಸಿದ ನಂತರ, ಒಕ್ಕೂಟ ಸರ್ಕಾರವು ಮಂಗಳವಾರ ಸಂಜೆ ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವನ್ನು ಐದು ವರ್ಷಗಳ ಕಾಲ ನಿಷೇಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳನ್ನು “ಕಾನೂನುಬಾಹಿರ ಸಂಘ” ಎಂದು ಘೋಷಿಸಲಾಗಿದೆ ಎಂದು ಸರ್ಕಾರಿ ಅಧಿಸೂಚನೆ ತಿಳಿಸಿದೆ. ಈ ಕುರಿತು ಸಿದ್ದರಾಮಯ್ಯನವರು ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುದ್ದಿಗಾರರ ಜೊತೆ ಮಾತನಾಡಿರುವ ಅವರು, “ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ಧ ಕ್ರಮ ಕೈಗೊಂಡರೆ ನಮ್ಮ ವಿರೋಧ ಇಲ್ಲ. ಯಾವುದೇ ಸಂಘಟನೆಯಾದರೂ ನಿಷೇಧಿಸಬೇಕು. ಆರೆಸ್ಸೆಸ್‌ನವರೂ ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಯಾರು ಸಮಾಜದಲ್ಲಿ ಕಂಟಕ ಮಾಡುತ್ತಾರೊ ಅವರ ವಿರುದ್ಧ ಕ್ರಮ ತೆಗೆದುಕೊಂಡರೆ ನಮ್ಮ‌ ಅಭ್ಯಂತರವಿಲ್ಲ. ಶಾಂತಿ ಹಾಳು ಮಾಡುತ್ತಿದ್ದವರ ಮೇಲೆ ಕ್ರಮ ಜರುಗಿಸಲಿ. ನಾನು ಆಗಲೂ ಹೇಳುತ್ತಿದ್ದೆ. ಈಗಲೂ ಹೇಳುತ್ತಿದ್ದೇನೆ. ದ್ವೇಷದ ರಾಜಕಾರಣ ಮಾಡಿದರೆ ಕ್ರಮ ಜರುಗಿಸಲಿ” ಎಂದು ಒತ್ತಾಯಿಸಿದ್ದಾರೆ.

“ನುಡಿದಂತೆ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ್ದೇವೆ” ಎಂಬ ಬಿಜೆಪಿ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, “ಪಿಎಫ್ಐ ಜೊತೆಗೆ ಒಂದೇ ನಾಣ್ಯದ ಇನ್ನೊಂದು ಮುಖ ಆಗಿರುವ ಆರೆಸ್ಸೆಸ್‌ ವಿರುದ್ಧ ಬಿಜೆಪಿ ಯಾವಾಗ ಕ್ರಮಕೈಗೊಳುತ್ತದೆ? ಎಲ್ಲ ರೀತಿಯ ಕೋಮುವಾದ ಮತ್ತು ದ್ವೇಷ ಸಮಾಜದ ರಚನೆ ಹಾನಿಕಾರಕ. ಅದನ್ನು ನಿಗ್ರಹಿಸುವ ಕೆಲಸ ಆಗಬೇಕು’ ಎಂದು ಆಗ್ರಹಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, “ಪಿಎಫ್‌ಐ ಹಾಗೂ ಎಸ್‌ಡಿಪಿಐ ಒಂದೇ ನಾಣ್ಯದ ಎರಡು ಮುಖಗಳಂತಿದ್ದವು, ಚುನಾವಣಾ ರಾಜಕೀಯದಲ್ಲಿ ಹೆಚ್ಚು ಸಕ್ರಿಯವಾಗಿರುವ ಎಸ್‌ಡಿಪಿಐ ಸಂಘಟನೆಯ ಬಗ್ಗೆ ಚಕಾರ ಎತ್ತದಿರುವುದೇಕೆ ಬಿಜೆಪಿ ಸರ್ಕಾರ? ಎಸ್‌ಡಿಪಿಐಗೂ ಬಿಜೆಪಿಗೂ ಇರುವುದು ಯಾವ ಜನ್ಮದ ಮೈತ್ರಿ? ಪಿಎಫ್‌ಐ ಜೊತೆ ಇದ್ದ ಬಿಜೆಪಿಯ ಹೊಂದಾಣಿಕೆ ಎಂತದ್ದು? ಈ ಆಯಾಮದಲ್ಲಿ ಎನ್‌ಐಎ ತನಿಖೆ ನಡೆಸಬೇಕಿದೆ” ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿರಿ: PFI ನಿಷೇಧ ಸಾಲದು, RSS ಅನ್ನು ಕೂಡ ನಿಷೇಧಿಸಬೇಕು: ಕಾಂಗ್ರೆಸ್ ಸಂಸದನ ಆಗ್ರಹ

“ಪಿಎಫ್‌ಐ ಮಾತ್ರವಲ್ಲ, ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಎಲ್ಲಾ ಮೂಲಭೂತವಾದಿ, ಕೋಮುವಾದಿ ಸಂಘಟನೆಗಳನ್ನೂ ನಿಷೇಧಿಸಬೇಕು. ಪಿಎಫ್‌ಐ ಸಂಘಟನೆಯನ್ನು ಪೋಷಿಸಿಕೊಂಡು ಬಂದಿದ್ದು ಬಿಜೆಪಿಯೇ ಎಂದು ಸತ್ಯಜಿತ್ ಸುರತ್ಕಲ್ ಸೇರಿದಂತೆ ಹಲವು ಸಂಘಪರಿವಾರದ ನಾಯಕರು ಹೇಳಿದ್ದರು. ಆ ಬಗ್ಗೆಯೂ ತನಿಖೆಯಾಗಬೇಕು. ಪೋಷಕರ ಬಗ್ಗೆ ಜಗತ್ತಿಗೆ ತಿಳಿಯಬೇಕು” ಎಂದಿರುವ ಕಾಂಗ್ರೆಸ್ ಸತ್ಯಜಿತ್‌ ಸುರತ್ಕಲ್ ಅವರ ವಿಡಿಯೊ ತುಣುಕನ್ನು ಹಂಚಿಕೊಂಡಿದೆ.

“ಕಾಂಗ್ರೆಸ್‌ ಸೋಲಿಸಬೇಕಾದರೆ ಎಸ್‌ಡಿಪಿಐ ಬಲವಾಗಬೇಕು ಎಂದು ಹಿಂದುತ್ವದ ಹೆಸರಿನಲ್ಲಿ ರಾಜಕೀಯ ಮಾಡುವ ಪಕ್ಷ ಬಯಸುತ್ತಿದೆ. ಎಸ್‌ಡಿಪಿಐಗೆ ಹಣವನ್ನು ನೀಡುತ್ತಿದೆ. ಕಾಂಗ್ರೆಸ್‌ನಿಂದ ಮುಸ್ಲಿಮರನ್ನು ದೂರ ತಳ್ಳಬೇಕು ಎಂದು ಎಸ್‌ಡಿಪಿಐಯನ್ನು ಬೆಳೆಸುತ್ತಿದ್ದಾರೆ” ಎಂದು ಸತ್ಯಜಿತ್‌ ಅವರು ಇಲ್ಲಿ ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2025ಕ್ಕೆ ಬಿಜೆಪಿ ಸಂಪೂರ್ಣ ಮೀಸಲಾತಿಯನ್ನು ರದ್ದುಗೊಳಿಸಲಿದೆ: ರೇವಂತ್ ರೆಡ್ಡಿ

0
ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಮೀಸಲಾತಿಯನ್ನು ರದ್ದುಗೊಳಿಸುವ ಉದ್ದೇಶದಿಂದ ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಂವಿಧಾನದ ವಿರುದ್ಧ ಸಮರ ಸಾರಿವೆ ಎಂದು ಆರೋಪಿಸಿರುವ ತೆಲಂಗಾಣದ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ಮೀಸಲಾತಿ ರದ್ದುಗೊಳಿಸುವ...