Homeಕರ್ನಾಟಕಆರ್‌ಎಸ್‌ಎಸ್‌ ವಿರುದ್ಧವೂ ಕ್ರಮ ಜರುಗಿಸಿ- ಸಿದ್ದರಾಮಯ್ಯ; ಎಸ್‌ಡಿಪಿಐ ಜೊತೆ ಬಿಜೆಪಿ ನಂಟಿದೆ- ಕಾಂಗ್ರೆಸ್

ಆರ್‌ಎಸ್‌ಎಸ್‌ ವಿರುದ್ಧವೂ ಕ್ರಮ ಜರುಗಿಸಿ- ಸಿದ್ದರಾಮಯ್ಯ; ಎಸ್‌ಡಿಪಿಐ ಜೊತೆ ಬಿಜೆಪಿ ನಂಟಿದೆ- ಕಾಂಗ್ರೆಸ್

- Advertisement -
- Advertisement -

“ಆರ್‌ಎಸ್‌ಎಸ್‌ ವಿರುದ್ಧವೂ ಕ್ರಮ ಜರುಗಿಸಬೇಕು” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರೆ, ರಾಜ್ಯ ಕಾಂಗ್ರೆಸ್‌, “ಎಸ್‌ಡಿಪಿಐಗೂ ಬಿಜೆಪಿಗೂ ಇರುವುದು ಯಾವ ಜನ್ಮದ ಮೈತ್ರಿ?” ಎಂದು ಪ್ರಶ್ನಿಸಿದೆ.

ಒಂದು ವಾರದೊಳಗಡೆ ಎರಡು ಸುತ್ತಿನ ರಾಷ್ಟ್ರವ್ಯಾಪಿ ದಾಳಿಗಳು ನಡೆದು, 240ಕ್ಕೂ ಹೆಚ್ಚು ಸದಸ್ಯರನ್ನು ಬಂಧಿಸಿದ ನಂತರ, ಒಕ್ಕೂಟ ಸರ್ಕಾರವು ಮಂಗಳವಾರ ಸಂಜೆ ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವನ್ನು ಐದು ವರ್ಷಗಳ ಕಾಲ ನಿಷೇಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳನ್ನು “ಕಾನೂನುಬಾಹಿರ ಸಂಘ” ಎಂದು ಘೋಷಿಸಲಾಗಿದೆ ಎಂದು ಸರ್ಕಾರಿ ಅಧಿಸೂಚನೆ ತಿಳಿಸಿದೆ. ಈ ಕುರಿತು ಸಿದ್ದರಾಮಯ್ಯನವರು ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುದ್ದಿಗಾರರ ಜೊತೆ ಮಾತನಾಡಿರುವ ಅವರು, “ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ಧ ಕ್ರಮ ಕೈಗೊಂಡರೆ ನಮ್ಮ ವಿರೋಧ ಇಲ್ಲ. ಯಾವುದೇ ಸಂಘಟನೆಯಾದರೂ ನಿಷೇಧಿಸಬೇಕು. ಆರೆಸ್ಸೆಸ್‌ನವರೂ ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಯಾರು ಸಮಾಜದಲ್ಲಿ ಕಂಟಕ ಮಾಡುತ್ತಾರೊ ಅವರ ವಿರುದ್ಧ ಕ್ರಮ ತೆಗೆದುಕೊಂಡರೆ ನಮ್ಮ‌ ಅಭ್ಯಂತರವಿಲ್ಲ. ಶಾಂತಿ ಹಾಳು ಮಾಡುತ್ತಿದ್ದವರ ಮೇಲೆ ಕ್ರಮ ಜರುಗಿಸಲಿ. ನಾನು ಆಗಲೂ ಹೇಳುತ್ತಿದ್ದೆ. ಈಗಲೂ ಹೇಳುತ್ತಿದ್ದೇನೆ. ದ್ವೇಷದ ರಾಜಕಾರಣ ಮಾಡಿದರೆ ಕ್ರಮ ಜರುಗಿಸಲಿ” ಎಂದು ಒತ್ತಾಯಿಸಿದ್ದಾರೆ.

“ನುಡಿದಂತೆ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ್ದೇವೆ” ಎಂಬ ಬಿಜೆಪಿ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, “ಪಿಎಫ್ಐ ಜೊತೆಗೆ ಒಂದೇ ನಾಣ್ಯದ ಇನ್ನೊಂದು ಮುಖ ಆಗಿರುವ ಆರೆಸ್ಸೆಸ್‌ ವಿರುದ್ಧ ಬಿಜೆಪಿ ಯಾವಾಗ ಕ್ರಮಕೈಗೊಳುತ್ತದೆ? ಎಲ್ಲ ರೀತಿಯ ಕೋಮುವಾದ ಮತ್ತು ದ್ವೇಷ ಸಮಾಜದ ರಚನೆ ಹಾನಿಕಾರಕ. ಅದನ್ನು ನಿಗ್ರಹಿಸುವ ಕೆಲಸ ಆಗಬೇಕು’ ಎಂದು ಆಗ್ರಹಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, “ಪಿಎಫ್‌ಐ ಹಾಗೂ ಎಸ್‌ಡಿಪಿಐ ಒಂದೇ ನಾಣ್ಯದ ಎರಡು ಮುಖಗಳಂತಿದ್ದವು, ಚುನಾವಣಾ ರಾಜಕೀಯದಲ್ಲಿ ಹೆಚ್ಚು ಸಕ್ರಿಯವಾಗಿರುವ ಎಸ್‌ಡಿಪಿಐ ಸಂಘಟನೆಯ ಬಗ್ಗೆ ಚಕಾರ ಎತ್ತದಿರುವುದೇಕೆ ಬಿಜೆಪಿ ಸರ್ಕಾರ? ಎಸ್‌ಡಿಪಿಐಗೂ ಬಿಜೆಪಿಗೂ ಇರುವುದು ಯಾವ ಜನ್ಮದ ಮೈತ್ರಿ? ಪಿಎಫ್‌ಐ ಜೊತೆ ಇದ್ದ ಬಿಜೆಪಿಯ ಹೊಂದಾಣಿಕೆ ಎಂತದ್ದು? ಈ ಆಯಾಮದಲ್ಲಿ ಎನ್‌ಐಎ ತನಿಖೆ ನಡೆಸಬೇಕಿದೆ” ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿರಿ: PFI ನಿಷೇಧ ಸಾಲದು, RSS ಅನ್ನು ಕೂಡ ನಿಷೇಧಿಸಬೇಕು: ಕಾಂಗ್ರೆಸ್ ಸಂಸದನ ಆಗ್ರಹ

“ಪಿಎಫ್‌ಐ ಮಾತ್ರವಲ್ಲ, ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಎಲ್ಲಾ ಮೂಲಭೂತವಾದಿ, ಕೋಮುವಾದಿ ಸಂಘಟನೆಗಳನ್ನೂ ನಿಷೇಧಿಸಬೇಕು. ಪಿಎಫ್‌ಐ ಸಂಘಟನೆಯನ್ನು ಪೋಷಿಸಿಕೊಂಡು ಬಂದಿದ್ದು ಬಿಜೆಪಿಯೇ ಎಂದು ಸತ್ಯಜಿತ್ ಸುರತ್ಕಲ್ ಸೇರಿದಂತೆ ಹಲವು ಸಂಘಪರಿವಾರದ ನಾಯಕರು ಹೇಳಿದ್ದರು. ಆ ಬಗ್ಗೆಯೂ ತನಿಖೆಯಾಗಬೇಕು. ಪೋಷಕರ ಬಗ್ಗೆ ಜಗತ್ತಿಗೆ ತಿಳಿಯಬೇಕು” ಎಂದಿರುವ ಕಾಂಗ್ರೆಸ್ ಸತ್ಯಜಿತ್‌ ಸುರತ್ಕಲ್ ಅವರ ವಿಡಿಯೊ ತುಣುಕನ್ನು ಹಂಚಿಕೊಂಡಿದೆ.

“ಕಾಂಗ್ರೆಸ್‌ ಸೋಲಿಸಬೇಕಾದರೆ ಎಸ್‌ಡಿಪಿಐ ಬಲವಾಗಬೇಕು ಎಂದು ಹಿಂದುತ್ವದ ಹೆಸರಿನಲ್ಲಿ ರಾಜಕೀಯ ಮಾಡುವ ಪಕ್ಷ ಬಯಸುತ್ತಿದೆ. ಎಸ್‌ಡಿಪಿಐಗೆ ಹಣವನ್ನು ನೀಡುತ್ತಿದೆ. ಕಾಂಗ್ರೆಸ್‌ನಿಂದ ಮುಸ್ಲಿಮರನ್ನು ದೂರ ತಳ್ಳಬೇಕು ಎಂದು ಎಸ್‌ಡಿಪಿಐಯನ್ನು ಬೆಳೆಸುತ್ತಿದ್ದಾರೆ” ಎಂದು ಸತ್ಯಜಿತ್‌ ಅವರು ಇಲ್ಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...