Homeಮುಖಪುಟಗೂಟದ ಕಾರು ಕೊಡ್ತೀವಿ ನಾಮಪತ್ರ ವಾಪಸ್ ತಗೋ: ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಯೊಂದಿಗಿನ ವಿ.ಸೋಮಣ್ಣ ಆಡಿಯೋ ವೈರಲ್

ಗೂಟದ ಕಾರು ಕೊಡ್ತೀವಿ ನಾಮಪತ್ರ ವಾಪಸ್ ತಗೋ: ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಯೊಂದಿಗಿನ ವಿ.ಸೋಮಣ್ಣ ಆಡಿಯೋ ವೈರಲ್

- Advertisement -
- Advertisement -

ಗೂಟದ ಕಾರು ಕೊಡ್ತೀವಿ ನಾಮಪತ್ರ ವಾಪಸ್ ತಗೋ ಎಂದು ಚಾಮರಾಜನಗರ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನಸ್ವಾಮಿಯವರಿಗೆ ಸಚಿವ ವಿ.ಸೋಮಣ್ಣನವರು ಫೋನ್ ಮಾಡಿ ಪದೇ ಪದೇ ಬೇಡಿಕೊಂಡಿರುವ ಆಡಿಯೋ ಒಂದು ವೈರಲ್ ಆಗುತ್ತಿದೆ.

ಬಿಜೆಪಿ ಹೈಕಮಾಂಡ್ ಆದೇಶದ ಮೇರೆಗೆ ಸ್ವಕ್ಷೇತ್ರ ಗೋವಿಂದರಾಜನಗರ ಬದಲು ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳಲ್ಲಿ ಕಣಕ್ಕಿಳಿದಿರುವ ಸಚಿವ ವಿ.ಸೋಮಣ್ಣನವರು ಒಂದು ಕ್ಷೇತ್ರದಲ್ಲಾದರೂ ಗೆಲುವು ಸಾಧಿಸಲು ಹರಸಾಹಸ ಪಡುತ್ತಿದ್ದಾರೆ. ಅದರ ಭಾಗವಾಗಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಉಪ್ಪಾರ ಸಮುದಾಯದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನಸ್ವಾಮಿಯವರ ನಾಮಪತ್ರ ಹಿಂತೆಗೆಸಲು ಪ್ರಯತ್ನಿಸಿರುವುದು ಬೆಳಕಿಗೆ ಬಂದಿದೆ.

ಸೋಮವಾರ ಮಧ್ಯಾಹ್ನ ಕರೆ ಮಾಡಿದ ಸೋಮಣ್ಣನವರು ಏಯ್ ನಾಮಪತ್ರ ವಾಪಸ್ ತಗೋ. ಆಮೇಲೆ ಬಾಕಿದ್ದು ನಿನಗೆ ಏನು ಬೇಕೊ ಮಾಡಿಕೊಡ್ತೀನಿ. ಏನಯ್ಯ ನೀನು ಯಾವನೋ ಮಾತು ಕೇಳಿಕೊಂಡು ನಾಮಪತ್ರ ಹಾಕಿದ್ದೀಯ ಎಂದು ಸೋಮಣ್ಣನವರು ಜೋರು ಮಾಡುವುದು ಆಡಿಯೋದಲ್ಲಿದೆ.

ನೀನು ನನಗೆ ಒಬ್ಬ ಹಳೆಯ ಸ್ನೇಹಿತ. ಅವನ್ಯಾವನೋ ತೊಟ್ಟಿ ನನ್ನ ಮಗನ ಮಾತು ಕೇಳೋಕೆ ಹೋಗಬೇಡ. ನಿನಗೆ ಬದುಕುವುದಕ್ಕೆ ಏನು ಬೇಕು ಎಲ್ಲವೂ ಮಾಡ್ತೀನಿ. ಮೊದ್ಲು ನಾಮಪತ್ರ ವಾಪಸ್ ತಗೋ ಆಮೇಲೆ ಬಾಕಿದ್ದು ನಾನು ಮಾತನಾಡುತ್ತೇನೆ. ನಿನ್ನ ಹಿತ ಕಾಪಾಡುವುದು ನನ್ನ, ಸುದೀಪಣ್ಣ ಮತ್ತು ಮರಮಕಲ್ ರವರ ಜವಾಬ್ದಾರಿ. ನಾನೀಗ ಉಪ್ಪಾರರ ದೇವಾಸ್ಥಾನದಲ್ಲಿ ಇದ್ದೀನಿ. ನಿನ್ನನ್ನು ಎಲ್ಲಿಗೆ ತಗೊಂಡು ಹೋಗಿ ಬಿಡಬೇಕು ಅಲ್ಲಿಗೆ ಬಿಡುತ್ತೇನೆ. ಮೊದಲು ವಾಪಸ್ ತಗೊ ನಿನಗೆ ಕೈ ಮುಗಿಯುತ್ತೇನೆ ಎಂದು ಸೋಮಣ್ಣನವರು ಹೇಳಿದ್ದಾರೆ.

ಮುಂದುವರೆದು, “ಇನ್ನೊಂದು ಗಂಟೆ ಮಾತ್ರ ಸಮಯವಿದೆ. ಅವನ್ಯಾವನೋ ಪೋಲಿ ನನ್ ಮಗನ ಮಾತು ಕೇಳ್ಕೊಂಡು ನಿಂತಿದ್ದೀಯ. ನೀನು ಮೊದಲು ವಾಪಸ್ ತಗೋ. ನಮ್ ಸರ್ಕಾರ ಬರುತ್ತದೆ. ನಿನಗೆ ಒಂದು ಗೂಟದ ಕಾರು ಬೇಕು, ನಾನು ಕೊಡಿಸ್ತೀನಿ ಎಂದು ಸೋಮಣ್ಣ ಹೇಳಿರುವುದು ದಾಖಲಾಗಿದೆ. ಇದೇ ಸಂದರ್ಭದಲ್ಲಿ ಸೋಮಣ್ಣನವರ ಫೋನ್‌ನಿಂದ ಮಾತನಾಡುವ ಮತ್ತೊಬ್ಬರು ಮಲ್ಲ, ಜಿ.ಟಿ ದೇವೇಗೌಡರ ಕೈಲಿ ಹೇಳಿಸ್ತೀನಿ. ನಾಮಪತ್ರ ವಾಪಸ್ ತಗೋ ಎನ್ನುತ್ತಾರೆ.

ಉಪ್ಪಾರರು ನೀವು. ನಾನು ಉಪ್ಪಾರರ ದೇವರ ಮುಂದೆ ನಿಂತಿದ್ದೀನಿ. ನೀನು ಯಾವನ ಮಾತು ಕೇಳಬೇಡ. ಮೊದ್ಲು ನಾಮಪತ್ರ ವಾಪಸ್ ತಗೊ. ಜಿ.ಟಿ ದೇವೇಗೌಡ ನಾವೆಲ್ಲ ಸ್ನೇಹಿತರು, ನಾನು ಮಾತನಾಡುತ್ತೇನೆ. ಪ್ಲೀಸ್ ತಗೋ ಎನ್ನುತ್ತಾರೆ.

ಇದನ್ನೂ ಓದಿ: ಶ್ರವಣಬೆಳಗೊಳ: ಖಾತೆ ತೆರೆಯದ ಬಿಜೆಪಿ – ಜೆಡಿಎಸ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಕಸರತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...