Homeಮುಖಪುಟಗೂಟದ ಕಾರು ಕೊಡ್ತೀವಿ ನಾಮಪತ್ರ ವಾಪಸ್ ತಗೋ: ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಯೊಂದಿಗಿನ ವಿ.ಸೋಮಣ್ಣ ಆಡಿಯೋ ವೈರಲ್

ಗೂಟದ ಕಾರು ಕೊಡ್ತೀವಿ ನಾಮಪತ್ರ ವಾಪಸ್ ತಗೋ: ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಯೊಂದಿಗಿನ ವಿ.ಸೋಮಣ್ಣ ಆಡಿಯೋ ವೈರಲ್

- Advertisement -
- Advertisement -

ಗೂಟದ ಕಾರು ಕೊಡ್ತೀವಿ ನಾಮಪತ್ರ ವಾಪಸ್ ತಗೋ ಎಂದು ಚಾಮರಾಜನಗರ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನಸ್ವಾಮಿಯವರಿಗೆ ಸಚಿವ ವಿ.ಸೋಮಣ್ಣನವರು ಫೋನ್ ಮಾಡಿ ಪದೇ ಪದೇ ಬೇಡಿಕೊಂಡಿರುವ ಆಡಿಯೋ ಒಂದು ವೈರಲ್ ಆಗುತ್ತಿದೆ.

ಬಿಜೆಪಿ ಹೈಕಮಾಂಡ್ ಆದೇಶದ ಮೇರೆಗೆ ಸ್ವಕ್ಷೇತ್ರ ಗೋವಿಂದರಾಜನಗರ ಬದಲು ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳಲ್ಲಿ ಕಣಕ್ಕಿಳಿದಿರುವ ಸಚಿವ ವಿ.ಸೋಮಣ್ಣನವರು ಒಂದು ಕ್ಷೇತ್ರದಲ್ಲಾದರೂ ಗೆಲುವು ಸಾಧಿಸಲು ಹರಸಾಹಸ ಪಡುತ್ತಿದ್ದಾರೆ. ಅದರ ಭಾಗವಾಗಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಉಪ್ಪಾರ ಸಮುದಾಯದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನಸ್ವಾಮಿಯವರ ನಾಮಪತ್ರ ಹಿಂತೆಗೆಸಲು ಪ್ರಯತ್ನಿಸಿರುವುದು ಬೆಳಕಿಗೆ ಬಂದಿದೆ.

ಸೋಮವಾರ ಮಧ್ಯಾಹ್ನ ಕರೆ ಮಾಡಿದ ಸೋಮಣ್ಣನವರು ಏಯ್ ನಾಮಪತ್ರ ವಾಪಸ್ ತಗೋ. ಆಮೇಲೆ ಬಾಕಿದ್ದು ನಿನಗೆ ಏನು ಬೇಕೊ ಮಾಡಿಕೊಡ್ತೀನಿ. ಏನಯ್ಯ ನೀನು ಯಾವನೋ ಮಾತು ಕೇಳಿಕೊಂಡು ನಾಮಪತ್ರ ಹಾಕಿದ್ದೀಯ ಎಂದು ಸೋಮಣ್ಣನವರು ಜೋರು ಮಾಡುವುದು ಆಡಿಯೋದಲ್ಲಿದೆ.

ನೀನು ನನಗೆ ಒಬ್ಬ ಹಳೆಯ ಸ್ನೇಹಿತ. ಅವನ್ಯಾವನೋ ತೊಟ್ಟಿ ನನ್ನ ಮಗನ ಮಾತು ಕೇಳೋಕೆ ಹೋಗಬೇಡ. ನಿನಗೆ ಬದುಕುವುದಕ್ಕೆ ಏನು ಬೇಕು ಎಲ್ಲವೂ ಮಾಡ್ತೀನಿ. ಮೊದ್ಲು ನಾಮಪತ್ರ ವಾಪಸ್ ತಗೋ ಆಮೇಲೆ ಬಾಕಿದ್ದು ನಾನು ಮಾತನಾಡುತ್ತೇನೆ. ನಿನ್ನ ಹಿತ ಕಾಪಾಡುವುದು ನನ್ನ, ಸುದೀಪಣ್ಣ ಮತ್ತು ಮರಮಕಲ್ ರವರ ಜವಾಬ್ದಾರಿ. ನಾನೀಗ ಉಪ್ಪಾರರ ದೇವಾಸ್ಥಾನದಲ್ಲಿ ಇದ್ದೀನಿ. ನಿನ್ನನ್ನು ಎಲ್ಲಿಗೆ ತಗೊಂಡು ಹೋಗಿ ಬಿಡಬೇಕು ಅಲ್ಲಿಗೆ ಬಿಡುತ್ತೇನೆ. ಮೊದಲು ವಾಪಸ್ ತಗೊ ನಿನಗೆ ಕೈ ಮುಗಿಯುತ್ತೇನೆ ಎಂದು ಸೋಮಣ್ಣನವರು ಹೇಳಿದ್ದಾರೆ.

ಮುಂದುವರೆದು, “ಇನ್ನೊಂದು ಗಂಟೆ ಮಾತ್ರ ಸಮಯವಿದೆ. ಅವನ್ಯಾವನೋ ಪೋಲಿ ನನ್ ಮಗನ ಮಾತು ಕೇಳ್ಕೊಂಡು ನಿಂತಿದ್ದೀಯ. ನೀನು ಮೊದಲು ವಾಪಸ್ ತಗೋ. ನಮ್ ಸರ್ಕಾರ ಬರುತ್ತದೆ. ನಿನಗೆ ಒಂದು ಗೂಟದ ಕಾರು ಬೇಕು, ನಾನು ಕೊಡಿಸ್ತೀನಿ ಎಂದು ಸೋಮಣ್ಣ ಹೇಳಿರುವುದು ದಾಖಲಾಗಿದೆ. ಇದೇ ಸಂದರ್ಭದಲ್ಲಿ ಸೋಮಣ್ಣನವರ ಫೋನ್‌ನಿಂದ ಮಾತನಾಡುವ ಮತ್ತೊಬ್ಬರು ಮಲ್ಲ, ಜಿ.ಟಿ ದೇವೇಗೌಡರ ಕೈಲಿ ಹೇಳಿಸ್ತೀನಿ. ನಾಮಪತ್ರ ವಾಪಸ್ ತಗೋ ಎನ್ನುತ್ತಾರೆ.

ಉಪ್ಪಾರರು ನೀವು. ನಾನು ಉಪ್ಪಾರರ ದೇವರ ಮುಂದೆ ನಿಂತಿದ್ದೀನಿ. ನೀನು ಯಾವನ ಮಾತು ಕೇಳಬೇಡ. ಮೊದ್ಲು ನಾಮಪತ್ರ ವಾಪಸ್ ತಗೊ. ಜಿ.ಟಿ ದೇವೇಗೌಡ ನಾವೆಲ್ಲ ಸ್ನೇಹಿತರು, ನಾನು ಮಾತನಾಡುತ್ತೇನೆ. ಪ್ಲೀಸ್ ತಗೋ ಎನ್ನುತ್ತಾರೆ.

ಇದನ್ನೂ ಓದಿ: ಶ್ರವಣಬೆಳಗೊಳ: ಖಾತೆ ತೆರೆಯದ ಬಿಜೆಪಿ – ಜೆಡಿಎಸ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಕಸರತ್ತು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...