Homeಮುಖಪುಟಗೂಟದ ಕಾರು ಕೊಡ್ತೀವಿ ನಾಮಪತ್ರ ವಾಪಸ್ ತಗೋ: ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಯೊಂದಿಗಿನ ವಿ.ಸೋಮಣ್ಣ ಆಡಿಯೋ ವೈರಲ್

ಗೂಟದ ಕಾರು ಕೊಡ್ತೀವಿ ನಾಮಪತ್ರ ವಾಪಸ್ ತಗೋ: ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಯೊಂದಿಗಿನ ವಿ.ಸೋಮಣ್ಣ ಆಡಿಯೋ ವೈರಲ್

- Advertisement -
- Advertisement -

ಗೂಟದ ಕಾರು ಕೊಡ್ತೀವಿ ನಾಮಪತ್ರ ವಾಪಸ್ ತಗೋ ಎಂದು ಚಾಮರಾಜನಗರ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನಸ್ವಾಮಿಯವರಿಗೆ ಸಚಿವ ವಿ.ಸೋಮಣ್ಣನವರು ಫೋನ್ ಮಾಡಿ ಪದೇ ಪದೇ ಬೇಡಿಕೊಂಡಿರುವ ಆಡಿಯೋ ಒಂದು ವೈರಲ್ ಆಗುತ್ತಿದೆ.

ಬಿಜೆಪಿ ಹೈಕಮಾಂಡ್ ಆದೇಶದ ಮೇರೆಗೆ ಸ್ವಕ್ಷೇತ್ರ ಗೋವಿಂದರಾಜನಗರ ಬದಲು ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳಲ್ಲಿ ಕಣಕ್ಕಿಳಿದಿರುವ ಸಚಿವ ವಿ.ಸೋಮಣ್ಣನವರು ಒಂದು ಕ್ಷೇತ್ರದಲ್ಲಾದರೂ ಗೆಲುವು ಸಾಧಿಸಲು ಹರಸಾಹಸ ಪಡುತ್ತಿದ್ದಾರೆ. ಅದರ ಭಾಗವಾಗಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಉಪ್ಪಾರ ಸಮುದಾಯದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನಸ್ವಾಮಿಯವರ ನಾಮಪತ್ರ ಹಿಂತೆಗೆಸಲು ಪ್ರಯತ್ನಿಸಿರುವುದು ಬೆಳಕಿಗೆ ಬಂದಿದೆ.

ಸೋಮವಾರ ಮಧ್ಯಾಹ್ನ ಕರೆ ಮಾಡಿದ ಸೋಮಣ್ಣನವರು ಏಯ್ ನಾಮಪತ್ರ ವಾಪಸ್ ತಗೋ. ಆಮೇಲೆ ಬಾಕಿದ್ದು ನಿನಗೆ ಏನು ಬೇಕೊ ಮಾಡಿಕೊಡ್ತೀನಿ. ಏನಯ್ಯ ನೀನು ಯಾವನೋ ಮಾತು ಕೇಳಿಕೊಂಡು ನಾಮಪತ್ರ ಹಾಕಿದ್ದೀಯ ಎಂದು ಸೋಮಣ್ಣನವರು ಜೋರು ಮಾಡುವುದು ಆಡಿಯೋದಲ್ಲಿದೆ.

ನೀನು ನನಗೆ ಒಬ್ಬ ಹಳೆಯ ಸ್ನೇಹಿತ. ಅವನ್ಯಾವನೋ ತೊಟ್ಟಿ ನನ್ನ ಮಗನ ಮಾತು ಕೇಳೋಕೆ ಹೋಗಬೇಡ. ನಿನಗೆ ಬದುಕುವುದಕ್ಕೆ ಏನು ಬೇಕು ಎಲ್ಲವೂ ಮಾಡ್ತೀನಿ. ಮೊದ್ಲು ನಾಮಪತ್ರ ವಾಪಸ್ ತಗೋ ಆಮೇಲೆ ಬಾಕಿದ್ದು ನಾನು ಮಾತನಾಡುತ್ತೇನೆ. ನಿನ್ನ ಹಿತ ಕಾಪಾಡುವುದು ನನ್ನ, ಸುದೀಪಣ್ಣ ಮತ್ತು ಮರಮಕಲ್ ರವರ ಜವಾಬ್ದಾರಿ. ನಾನೀಗ ಉಪ್ಪಾರರ ದೇವಾಸ್ಥಾನದಲ್ಲಿ ಇದ್ದೀನಿ. ನಿನ್ನನ್ನು ಎಲ್ಲಿಗೆ ತಗೊಂಡು ಹೋಗಿ ಬಿಡಬೇಕು ಅಲ್ಲಿಗೆ ಬಿಡುತ್ತೇನೆ. ಮೊದಲು ವಾಪಸ್ ತಗೊ ನಿನಗೆ ಕೈ ಮುಗಿಯುತ್ತೇನೆ ಎಂದು ಸೋಮಣ್ಣನವರು ಹೇಳಿದ್ದಾರೆ.

ಮುಂದುವರೆದು, “ಇನ್ನೊಂದು ಗಂಟೆ ಮಾತ್ರ ಸಮಯವಿದೆ. ಅವನ್ಯಾವನೋ ಪೋಲಿ ನನ್ ಮಗನ ಮಾತು ಕೇಳ್ಕೊಂಡು ನಿಂತಿದ್ದೀಯ. ನೀನು ಮೊದಲು ವಾಪಸ್ ತಗೋ. ನಮ್ ಸರ್ಕಾರ ಬರುತ್ತದೆ. ನಿನಗೆ ಒಂದು ಗೂಟದ ಕಾರು ಬೇಕು, ನಾನು ಕೊಡಿಸ್ತೀನಿ ಎಂದು ಸೋಮಣ್ಣ ಹೇಳಿರುವುದು ದಾಖಲಾಗಿದೆ. ಇದೇ ಸಂದರ್ಭದಲ್ಲಿ ಸೋಮಣ್ಣನವರ ಫೋನ್‌ನಿಂದ ಮಾತನಾಡುವ ಮತ್ತೊಬ್ಬರು ಮಲ್ಲ, ಜಿ.ಟಿ ದೇವೇಗೌಡರ ಕೈಲಿ ಹೇಳಿಸ್ತೀನಿ. ನಾಮಪತ್ರ ವಾಪಸ್ ತಗೋ ಎನ್ನುತ್ತಾರೆ.

ಉಪ್ಪಾರರು ನೀವು. ನಾನು ಉಪ್ಪಾರರ ದೇವರ ಮುಂದೆ ನಿಂತಿದ್ದೀನಿ. ನೀನು ಯಾವನ ಮಾತು ಕೇಳಬೇಡ. ಮೊದ್ಲು ನಾಮಪತ್ರ ವಾಪಸ್ ತಗೊ. ಜಿ.ಟಿ ದೇವೇಗೌಡ ನಾವೆಲ್ಲ ಸ್ನೇಹಿತರು, ನಾನು ಮಾತನಾಡುತ್ತೇನೆ. ಪ್ಲೀಸ್ ತಗೋ ಎನ್ನುತ್ತಾರೆ.

ಇದನ್ನೂ ಓದಿ: ಶ್ರವಣಬೆಳಗೊಳ: ಖಾತೆ ತೆರೆಯದ ಬಿಜೆಪಿ – ಜೆಡಿಎಸ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಕಸರತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...