Homeಕರೋನಾ ತಲ್ಲಣಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: 400 ಸಾಮಾಜಿಕ ಕಾರ್ಯಕರ್ತರ...

ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: 400 ಸಾಮಾಜಿಕ ಕಾರ್ಯಕರ್ತರ ಜನಾಗ್ರಹ

ನೀವು ದಿಟ್ಟ ಕ್ರಮಗಳ ಮೂಲಕ ಜನರ ನೆರವಿಗೆ ಧಾವಿಸದಿದ್ದರೆ ಕೋವಿಡ್ ನಿಯಮಗಳನ್ನು ಪಾಲಿಸುತ್ತಲೇ ಪ್ರತಿಭಟಿಸುವ ಅನಿವಾರ್ಯ ನಿರ್ಧಾರಗಳನ್ನು ನಾವೂ ಮಾಡಲೇಬೇಕಾಗುತ್ತದೆ ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.

- Advertisement -
- Advertisement -

ಕೋವಿಡ್ ಎರಡನೇ ಅಲೆಯಿಂದ ಜನಜೀವನ ಜರ್ಜರಿತವಾಗಿದೆ. ಇಂತಹ ದುರಂತದ ಸಂದರ್ಭದಲ್ಲಿ ಸರ್ಕಾರ ಜನರ ಜೀವ ಮತ್ತು ಜೀವನ ಉಳಿಸಲು ಪಂಚ ತುರ್ತು ಕ್ರಮಗಳನ್ನು ಕೈಗೆತ್ತಿಕೊಳ್ಳಬೇಕೆಂದು ಒತ್ತಾಯಿಸಿ ‘ಜನಾಗ್ರಹ ಆಂದೋಲನ’ದ ವತಿಯಿಂದ 400 ಜನ ಸಾಮಾಜಿಕ ಕಾರ್ಯಕರ್ತರು, ಹೋರಾಟಗಾರರು ಸಿಎಂ ಯಡಿಯೂರಪ್ಪನವರಿಗೆ ತುರ್ತು ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿಯವರ ವಿಶೇಷ ಅಧಿಕಾರಿ ಸತೀಶ್‌ರವರಿಗೆ ಆಂದೋಲನದ ಪರವಾಗಿ ವಕೀಲರಾದ ವರದರಾಜೇಂದ್ರ ಮತ್ತು ರವಿಮೋಹನ್ ಆಗ್ರಹ ಪತ್ರವನ್ನು ಸಲ್ಲಿಸಿದ್ದು, ಪತ್ರಕ್ಕೆ ಸಾಣೆಹಳ್ಳಿಯ ಪಂಡಿತರಾಧ್ಯ ಶ್ರೀಗಳು, ಹಿರಿಯ ಸ್ವಾತಂತ್ರ ಹೋರಾಟಗಾರರದ ಹೆಚ್. ಎಸ್. ದೊರೆಸ್ವಾಮಿ, ಸಾಹಿತಿ ಬರಗೂರು ರಾಮಚಂದ್ರಪ್ಪ, ನಿವೃತ್ತ ಐಎಎಸ್ ಅಧಿಕಾರಿ ಶಸಿಕಾಂತ್ ಸೆಂದಿಲ್, ಹಿರಿಯ ಸಾಮಾಜಿಕ ಕಾರ್ಯಕರ್ತ ಕೆ.ಎಲ್. ಅಶೋಕ್, ದಲಿತ ಚಳವಳಿಯ ಮುಖಂಡ ಮಾವಳ್ಳಿ ಶಂಕರ್ ಮುಂತಾದವರು ಸಹಿ ಹಾಕಿದ್ದಾರೆ.

ವಕೀಲರಾದ ವರದರಾಜೇಂದ್ರರವರು ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿ ಸತೀಶ್‌ರವರಿಗೆ ಜನಾಗ್ರಹ ಪತ್ರ ಸಲ್ಲಿಸಿದರು

 

ಜನರ ಕೂಗನ್ನು ಸರ್ಕಾರಕ್ಕೆ ತಲುಪಿಸಲು ಮೇ 6ರಿಂದ ‘ಜನಾಗ್ರಹ ಆಂದೋಲನ’ ಪ್ರಾರಂಭವಾಗಿದ್ದು, ಹೆಲ್ಪ್ ಲೈನ್ ನಡೆಸಿ ಜನರಿಗೆ ವೈದ್ಯಕೀಯ ನೆರವು ಹಾಗೂ ಆಹಾರದ ಆಸರೆ ನೀಡಲು ಪ್ರಯತ್ನಿಸಲಾಗುತ್ತಿದ್ದು, ಅದೇ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಸರ್ಕಾರವನ್ನು ಜಾಗೃತಗೊಳಿಸುವ ಪ್ರಯತ್ನ ನಡೆಸಲಾಗಿತ್ತು. ಇದರ ಭಾಗವಾಗಿ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರ್ ಮತ್ತು ಆಕ್ಸಿಜನ್ ಸಹಿತ ಬೆಡ್‌ಗಳ ಸಂಖ್ಯೆಯನ್ನು ಯದ್ಧೋಪಾದಿಯಲ್ಲಿ ಹೆಚ್ಚಿಸುವುದು, ಎಲ್ಲಾ ವಯಸ್ಸಿನವರಿಗೂ ಉಚಿತ ವ್ಯಾಕ್ಸಿನ್ ನೀಡುವುದು, ಎಲ್ಲಾ ಕುಟುಂಬಗಳಿಗೂ ಉಚಿತವಾಗಿ ಸಮಗ್ರ ಪಡಿತರ ಕಿಟ್ ನೀಡುವುದು, ದುಡಿಮೆ ಕಳೆದುಕೊಂಡಿರುವ ಶ್ರಮಿಕ ಕುಟುಂಬಗಳಿಗೆ ಕನಿಷ್ಟ 5000 ರೂಗಳ ಮಾಸಿಕ ಆರ್ಥಿಕ ನೆರವನ್ನು ನೀಡುವುದು ಮತ್ತು ದುಡಿಯುವ ವ್ಯಕ್ತಿ ಮಡಿದ ಕುಟುಂಬಕ್ಕೆ 5ಲಕ್ಷ ಪರಿಹಾರ ಧನ ನೀಡುವುದನ್ನು ಸರ್ಕಾರ ತೆಗೆದುಕೊಳ್ಳಲೇಬೇಕಾದ ಕ್ರಮಗಳೆಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ಈ ಯೋಜನೆಗಾಗಿ ಕಾರ್ಪೊರೇಟ್ ಕಂಪನಿಗಳ ವಹಿವಾಟಿನ ಮೇಲೆ ಶೇ. 2ರ ಕೊರೋನಾ ಸುಂಕವನ್ನು ಹಾಕುವ, ಕೋಟ್ಯಾಧಿಪತಿ ರಾಜಕಾರಣಿಗಳು ಹಾಗೂ ಉದ್ದಿಮೆಪತಿಗಳ ಆದಾಯದ ಮೇಲೆ ಶೇ. 5ರ ತೆರಿಗೆ ವಿಧಿಸುವ ಹಾಗೂ ಸೆಂಟ್ರಲ್ ವಿಸ್ಟಾದಂತಹ ದುಂದು ಯೋಜನೆಗಳನ್ನು ರದ್ದುಗೊಳಿಸಿ ಎಲ್ಲಾ ಹಣವನ್ನು ಕೋವಿಡ್ ನಿಭಾವಣೆಗೆ ತಿರುಗಿಸುವ ಸಲಹೆಗಳನ್ನು ಪತ್ರದಲ್ಲಿ ಮುಂದಿಡಲಾಗಿದೆ.

ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ ಹಾಗೂ ಆರ್ಥಿಕ ನೆರವು: ಸರ್ಕಾರ ತುರ್ತಾಗಿ ಕೈಗೆತ್ತಿಕೊಳ್ಳಲೇಬೇಕಾದ ಪಂಚ ಕ್ರಮಗಳು 

1.     ರಾಜ್ಯದ ಎಲ್ಲಾ ಊರುಗಳಲ್ಲಿ ಕೊರೋನಾ ಕೇರ್ ಸೆಂಟರ್ ಮತ್ತು ಆಕ್ಸಿಜನ್ ಸಹಿತ ಬೆಡ್ ಗಳ ಸಂಖ್ಯೆಯನ್ನು ತೀವ್ರಗತಿಯಲ್ಲಿ ಪ್ರತಿನಿತ್ಯ ಹೆಚ್ಚಿಸಬೇಕು ಮತ್ತು ನಿತ್ಯವೂ ಇದರ ಮಾಹಿತಿಯನ್ನು ಜನರಿಗೆ ನೀಡಬೇಕು.

2.     ಎಲ್ಲಾ ವಯಸ್ಸಿನ ಜನರಿಗೂ ವ್ಯಾಕ್ಸಿನ್ ಅನ್ನು ಸರ್ಕಾರವೇ ಉಚಿತವಾಗಿ ವ್ಯವಸ್ಥೆ ಮಾಡಬೇಕು ಮತ್ತು ತಡಮಾಡದೆ ನೀಡಬೇಕು.

3.     ರಾಜ್ಯದ ಎಲ್ಲಾ ಕುಟುಂಬಗಳಿಗೂ ಸರ್ಕಾರವೇ ಸಮಗ್ರ ಪಡಿತರ ಕಿಟ್ ಅನ್ನು ಉಚಿತವಾಗಿ ವಿತರಿಸಬೇಕು.

4.     ಕೆಲಸ ಕಳೆದುಕೊಂಡಿರುವ ಅಸಂಘಟಿತ ಕಾರ್ಮಿಕ, ಆಟೋ – ಟ್ಯಾಕ್ಸಿ ಚಾಲಕ, ನೇಕಾರ ಕಾರ್ಮಿಕ, ಕೃಷಿ ಕಾರ್ಮಿಕ, ಸಣ್ಣ ವ್ಯಾಪಾರಿ, ಸ್ವಯಂ ಉದ್ಯೋಗಿ ಮುಂತಾದ ಶ್ರಮಿಕ ವರ್ಗದ ಜನರಿಗೆ [ದೆಹಲಿ ಸರ್ಕಾರದ ಮಾದರಿಯಲ್ಲಿ] ಮಾಸಿಕ ಕನಿಷ್ಟ 5 ಸಾವಿರ ರೂಗಳ ಆರ್ಥಿಕ ನೆರವನ್ನು ನೀಡಲೇಬೇಕು. ಕಛೇರಿಗಳ ಸುತ್ತ ಅಲೆದಾಡಿಸದೆ ಅದನ್ನು ಕೂಡಲೇ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಬೇಕು.

5.     ಕೋರಾನಾದಿಂದ ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡ ಕುಟುಂಬಗಳಿಗೆ ಬದುಕನ್ನು ಕಟ್ಟಿಕೊಳ್ಳಲು ಕನಿಷ್ಟ 5 ಲಕ್ಷದ ಪರಿಹಾರ ದನವನ್ನು ನೀಡಬೇಕು.

 

ಇದಕ್ಕಾಗಿ ಹಣಕಾಸಿನ ವ್ಯವಸ್ಥೆ ಹೇಗೆ ಒದಗಿಸಬಹುದೆ ಎಂಬುದಕ್ಕೆ ಮೂರು ಸಲಹೆಗಳನ್ನು ಸಹ ಪತ್ರದಲ್ಲಿ ವಿವರಿಸಲಾಗಿದೆ. ಅವುಗಳೆಂದರೆ

1.   ಕರ್ನಾಟಕದಲ್ಲಿ ನಡೆಯುತ್ತಿರುವ ಕಾರ್ಪೊರೇಟ್ ವಹಿವಾಟಿನ ಮೇಲೆ ಶೇ. 2ರ ಕೋರೋನಾ ಸೆಸ್ ನಿಗದಿ ಮಾಡಿ. ಹಾಗೇ ಕರ್ನಾಟಕದ ಎಲ್ಲಾ ಕೋಟ್ಯಾಧಿಪತಿ ಉದ್ದಿಮೆಪತಿಗಳು ಮತ್ತು ರಾಜಕಾರಣಿಗಳ ವಾರ್ಷಿಕ ಆದಾಯದ ಶೇ. 5ನ್ನು ಸುಂಕವಾಗಿ ಸಂಗ್ರಹಿಸಿ. ಕೂಡಲೇ ಈ ಹಣವನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸುಗ್ರೀವಾಜ್ಞೆ ಹೊರಡಿಸಿ.

2.    ಮೆಟ್ರೋ ವಿಸ್ತರಣೆ, ರಸ್ತೆ ವಿಸ್ತರಣೆ, ಸರ್ಕಾರಿ ಸೌಧಗಳ ನಿರ್ಮಾಣ, ಮಠಗಳಿಗೆ ಅನುದಾನ ಮುಂತಾದ ಬಹುತೇಕ ತುರ್ತಲ್ಲದ ಯೋಜನೆಗಳಿಗೆ ಮಂಜೂರು ಮಾಡಿರುವ ಹಣವನ್ನು ಕೋವಿಡ್ ನಿಭಾವಣೆಗೆ ಡೈವರ್ಟ್ ಮಾಡಿ.

3.   ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಬರ ಪರಿಹಾರದ, ನೆರೆ ಪರಿಹಾರದ, ಜಿ ಎಸ್ ಟಿ ಬಾಬ್ತಿನ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ. ‘ಸೆಂಟ್ರಲ್ ವಿಸ್ಟಾ’ [20 ಸಾವಿರ ಕೋಟಿ ಮೌಲ್ಯದ ಮೋದಿ ಮಹಲ್] ನಂತಹ ಐಶಾರಾಮಿ ದುಂದು ವೆಚ್ಚಗಳನ್ನು ರದ್ದುಗೊಳಿಸಿ ರಾಜ್ಯಗಳಿಗೆ ಕೋವಿಡ್ ನೆರವು ನೀಡಲು ಮುಂದಾಗಬೇಕೆಂದು ಪ್ರಧಾನಿಯವರನ್ನು ಒತ್ತಾಯಿಸಿ ಎಂದು ತಿಳಿಸಲಾಗಿದೆ.

ಈ ಪತ್ರವನ್ನು ಔಪಚಾರಿಕವಾಗಿ ಬರಿಯುತ್ತಿಲ್ಲ. ಬದಲಿಗೆ ಪರಿಸ್ಥಿತಿಯ ತೀವ್ರತೆಯನ್ನು ಮನಗಂಡು, ರಾಜ್ಯದ ಜನರು ಉಳಿಯಬೇಕಾದರೆ ಸರ್ಕಾರ ಇದನ್ನು ಮಾಡಲೇಬೇಕು ಎಂಬ ಒತ್ತಾಸೆಯೊಂದಿಗೆ ಬರಿಯುತ್ತಿದ್ದೇವೆ. ಇವ್ಯಾವುವೂ ಅಸಾಧ್ಯವಾದ ಬೇಡಿಕೆಗಳಲ್ಲ. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ದೆಹಲಿ ಮುಂತಾದ ಸರ್ಕಾರಗಳು ಈಗಾಗಲೇ ಈ ನಿಟ್ಟಿನಲ್ಲಿ ನಿರ್ಧಾರಗಳನ್ನು ತೆಗೆದುಕೊಂಡಾಗಿದೆ. ಮುಖ್ಯಮಂತ್ರಿಗಳಾಗಿ ನೀವು ದಿಟ್ಟ ಕ್ರಮಗಳ ಮೂಲಕ ಜನರ ನೆರವಿಗೆ ಧಾವಿಸದಿದ್ದರೆ ಕೋವಿಡ್ ನಿಯಮಗಳನ್ನು ಪಾಲಿಸುತ್ತಲೇ ಪ್ರತಿಭಟಿಸುವ ಮತ್ತು  “ನಿಮ್ಮ ಬಳಿಗೂ ಬರುವ” ಅನಿವಾರ್ಯ ನಿರ್ಧಾರಗಳನ್ನು ನಾವೂ ಮಾಡಲೇಬೇಕಾಗುತ್ತದೆ. ಏಕೆಂದರೆ ನಮ್ಮ ಜೀವಕ್ಕಿಂತಲೂ ಜನರ ಜೀವನ ಮುಖ್ಯವಿದೆ. ಅದರ ಪತನವನ್ನು ನೋಡುತ್ತಾ ಕೈ ಕಟ್ಟಿ ಕೂರಲಂತೂ ನಮಗೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಗಳಿಗೆ ಎಚ್ಚರವನ್ನು ಸಹ ನೀಡಲಾಗಿದೆ.

ಚಿತ್ರನಟ ಚೇತನ್, ಬಿ.ಟಿ.ಲಲಿತಾನಾಯ್ಕ್, ಡಾ. ಗಣೇಶ್ ದೇವಿ, ಡಾ.ಸಿ.ಎಸ್.ದ್ವಾರಕನಾಥ್, ಡಾ.ಪ್ರಕಾಶ್ ಕಮ್ಮರಡಿ, ಡಾ.ಭೂಮಿಗೌಡ, ದಿನೇಶ್ ಅಮಿನ್ ಮಟ್ಟು, ಪ್ರೊ.ಪುರುಷೋತ್ತಮ ಬಿಳಿಮಲೆ, ಕೆ.ನೀಲಾ, ಕಲಬುರ್ಗಿ, ಯಾಸಿನ್ ಮಲ್ಪೆ, ಉಡುಪಿ, ಬಿ.ಸುರೇಶ್, ಬಡಗಲಪುರ ನಾಗೇಂದ್ರ, ಸ್ವರ್ಣ ಭಟ್, ರಾಯಚೂರು, ಕಡಿದಾಳ್ ಶಾಮಣ್ಣ, ಶಿವಮೊಗ್ಗ, ಡಾ.ಎಚ್.ಎಸ್.ಅನುಪಮಾ, ನೂರ್ ಶ್ರೀಧರ್, ಎಚ್.ಆರ್.ಬಸವರಾಜಪ್ಪ, ಕುರುಬೂರು ಶಾಂತಕುಮಾರ್, ಗುರುಪ್ರಸಾದ್ ಕೆರಗೋಡು ಸಹಿ ಮಾಡಿದವರಲ್ಲಿ ಸೇರಿದ್ದಾರೆ.


ಇದನ್ನೂ ಓದಿ: ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...