Homeಕರೋನಾ ತಲ್ಲಣಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: 400 ಸಾಮಾಜಿಕ ಕಾರ್ಯಕರ್ತರ...

ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: 400 ಸಾಮಾಜಿಕ ಕಾರ್ಯಕರ್ತರ ಜನಾಗ್ರಹ

ನೀವು ದಿಟ್ಟ ಕ್ರಮಗಳ ಮೂಲಕ ಜನರ ನೆರವಿಗೆ ಧಾವಿಸದಿದ್ದರೆ ಕೋವಿಡ್ ನಿಯಮಗಳನ್ನು ಪಾಲಿಸುತ್ತಲೇ ಪ್ರತಿಭಟಿಸುವ ಅನಿವಾರ್ಯ ನಿರ್ಧಾರಗಳನ್ನು ನಾವೂ ಮಾಡಲೇಬೇಕಾಗುತ್ತದೆ ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.

- Advertisement -
- Advertisement -

ಕೋವಿಡ್ ಎರಡನೇ ಅಲೆಯಿಂದ ಜನಜೀವನ ಜರ್ಜರಿತವಾಗಿದೆ. ಇಂತಹ ದುರಂತದ ಸಂದರ್ಭದಲ್ಲಿ ಸರ್ಕಾರ ಜನರ ಜೀವ ಮತ್ತು ಜೀವನ ಉಳಿಸಲು ಪಂಚ ತುರ್ತು ಕ್ರಮಗಳನ್ನು ಕೈಗೆತ್ತಿಕೊಳ್ಳಬೇಕೆಂದು ಒತ್ತಾಯಿಸಿ ‘ಜನಾಗ್ರಹ ಆಂದೋಲನ’ದ ವತಿಯಿಂದ 400 ಜನ ಸಾಮಾಜಿಕ ಕಾರ್ಯಕರ್ತರು, ಹೋರಾಟಗಾರರು ಸಿಎಂ ಯಡಿಯೂರಪ್ಪನವರಿಗೆ ತುರ್ತು ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿಯವರ ವಿಶೇಷ ಅಧಿಕಾರಿ ಸತೀಶ್‌ರವರಿಗೆ ಆಂದೋಲನದ ಪರವಾಗಿ ವಕೀಲರಾದ ವರದರಾಜೇಂದ್ರ ಮತ್ತು ರವಿಮೋಹನ್ ಆಗ್ರಹ ಪತ್ರವನ್ನು ಸಲ್ಲಿಸಿದ್ದು, ಪತ್ರಕ್ಕೆ ಸಾಣೆಹಳ್ಳಿಯ ಪಂಡಿತರಾಧ್ಯ ಶ್ರೀಗಳು, ಹಿರಿಯ ಸ್ವಾತಂತ್ರ ಹೋರಾಟಗಾರರದ ಹೆಚ್. ಎಸ್. ದೊರೆಸ್ವಾಮಿ, ಸಾಹಿತಿ ಬರಗೂರು ರಾಮಚಂದ್ರಪ್ಪ, ನಿವೃತ್ತ ಐಎಎಸ್ ಅಧಿಕಾರಿ ಶಸಿಕಾಂತ್ ಸೆಂದಿಲ್, ಹಿರಿಯ ಸಾಮಾಜಿಕ ಕಾರ್ಯಕರ್ತ ಕೆ.ಎಲ್. ಅಶೋಕ್, ದಲಿತ ಚಳವಳಿಯ ಮುಖಂಡ ಮಾವಳ್ಳಿ ಶಂಕರ್ ಮುಂತಾದವರು ಸಹಿ ಹಾಕಿದ್ದಾರೆ.

ವಕೀಲರಾದ ವರದರಾಜೇಂದ್ರರವರು ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿ ಸತೀಶ್‌ರವರಿಗೆ ಜನಾಗ್ರಹ ಪತ್ರ ಸಲ್ಲಿಸಿದರು

 

ಜನರ ಕೂಗನ್ನು ಸರ್ಕಾರಕ್ಕೆ ತಲುಪಿಸಲು ಮೇ 6ರಿಂದ ‘ಜನಾಗ್ರಹ ಆಂದೋಲನ’ ಪ್ರಾರಂಭವಾಗಿದ್ದು, ಹೆಲ್ಪ್ ಲೈನ್ ನಡೆಸಿ ಜನರಿಗೆ ವೈದ್ಯಕೀಯ ನೆರವು ಹಾಗೂ ಆಹಾರದ ಆಸರೆ ನೀಡಲು ಪ್ರಯತ್ನಿಸಲಾಗುತ್ತಿದ್ದು, ಅದೇ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಸರ್ಕಾರವನ್ನು ಜಾಗೃತಗೊಳಿಸುವ ಪ್ರಯತ್ನ ನಡೆಸಲಾಗಿತ್ತು. ಇದರ ಭಾಗವಾಗಿ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರ್ ಮತ್ತು ಆಕ್ಸಿಜನ್ ಸಹಿತ ಬೆಡ್‌ಗಳ ಸಂಖ್ಯೆಯನ್ನು ಯದ್ಧೋಪಾದಿಯಲ್ಲಿ ಹೆಚ್ಚಿಸುವುದು, ಎಲ್ಲಾ ವಯಸ್ಸಿನವರಿಗೂ ಉಚಿತ ವ್ಯಾಕ್ಸಿನ್ ನೀಡುವುದು, ಎಲ್ಲಾ ಕುಟುಂಬಗಳಿಗೂ ಉಚಿತವಾಗಿ ಸಮಗ್ರ ಪಡಿತರ ಕಿಟ್ ನೀಡುವುದು, ದುಡಿಮೆ ಕಳೆದುಕೊಂಡಿರುವ ಶ್ರಮಿಕ ಕುಟುಂಬಗಳಿಗೆ ಕನಿಷ್ಟ 5000 ರೂಗಳ ಮಾಸಿಕ ಆರ್ಥಿಕ ನೆರವನ್ನು ನೀಡುವುದು ಮತ್ತು ದುಡಿಯುವ ವ್ಯಕ್ತಿ ಮಡಿದ ಕುಟುಂಬಕ್ಕೆ 5ಲಕ್ಷ ಪರಿಹಾರ ಧನ ನೀಡುವುದನ್ನು ಸರ್ಕಾರ ತೆಗೆದುಕೊಳ್ಳಲೇಬೇಕಾದ ಕ್ರಮಗಳೆಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ಈ ಯೋಜನೆಗಾಗಿ ಕಾರ್ಪೊರೇಟ್ ಕಂಪನಿಗಳ ವಹಿವಾಟಿನ ಮೇಲೆ ಶೇ. 2ರ ಕೊರೋನಾ ಸುಂಕವನ್ನು ಹಾಕುವ, ಕೋಟ್ಯಾಧಿಪತಿ ರಾಜಕಾರಣಿಗಳು ಹಾಗೂ ಉದ್ದಿಮೆಪತಿಗಳ ಆದಾಯದ ಮೇಲೆ ಶೇ. 5ರ ತೆರಿಗೆ ವಿಧಿಸುವ ಹಾಗೂ ಸೆಂಟ್ರಲ್ ವಿಸ್ಟಾದಂತಹ ದುಂದು ಯೋಜನೆಗಳನ್ನು ರದ್ದುಗೊಳಿಸಿ ಎಲ್ಲಾ ಹಣವನ್ನು ಕೋವಿಡ್ ನಿಭಾವಣೆಗೆ ತಿರುಗಿಸುವ ಸಲಹೆಗಳನ್ನು ಪತ್ರದಲ್ಲಿ ಮುಂದಿಡಲಾಗಿದೆ.

ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ ಹಾಗೂ ಆರ್ಥಿಕ ನೆರವು: ಸರ್ಕಾರ ತುರ್ತಾಗಿ ಕೈಗೆತ್ತಿಕೊಳ್ಳಲೇಬೇಕಾದ ಪಂಚ ಕ್ರಮಗಳು 

1.     ರಾಜ್ಯದ ಎಲ್ಲಾ ಊರುಗಳಲ್ಲಿ ಕೊರೋನಾ ಕೇರ್ ಸೆಂಟರ್ ಮತ್ತು ಆಕ್ಸಿಜನ್ ಸಹಿತ ಬೆಡ್ ಗಳ ಸಂಖ್ಯೆಯನ್ನು ತೀವ್ರಗತಿಯಲ್ಲಿ ಪ್ರತಿನಿತ್ಯ ಹೆಚ್ಚಿಸಬೇಕು ಮತ್ತು ನಿತ್ಯವೂ ಇದರ ಮಾಹಿತಿಯನ್ನು ಜನರಿಗೆ ನೀಡಬೇಕು.

2.     ಎಲ್ಲಾ ವಯಸ್ಸಿನ ಜನರಿಗೂ ವ್ಯಾಕ್ಸಿನ್ ಅನ್ನು ಸರ್ಕಾರವೇ ಉಚಿತವಾಗಿ ವ್ಯವಸ್ಥೆ ಮಾಡಬೇಕು ಮತ್ತು ತಡಮಾಡದೆ ನೀಡಬೇಕು.

3.     ರಾಜ್ಯದ ಎಲ್ಲಾ ಕುಟುಂಬಗಳಿಗೂ ಸರ್ಕಾರವೇ ಸಮಗ್ರ ಪಡಿತರ ಕಿಟ್ ಅನ್ನು ಉಚಿತವಾಗಿ ವಿತರಿಸಬೇಕು.

4.     ಕೆಲಸ ಕಳೆದುಕೊಂಡಿರುವ ಅಸಂಘಟಿತ ಕಾರ್ಮಿಕ, ಆಟೋ – ಟ್ಯಾಕ್ಸಿ ಚಾಲಕ, ನೇಕಾರ ಕಾರ್ಮಿಕ, ಕೃಷಿ ಕಾರ್ಮಿಕ, ಸಣ್ಣ ವ್ಯಾಪಾರಿ, ಸ್ವಯಂ ಉದ್ಯೋಗಿ ಮುಂತಾದ ಶ್ರಮಿಕ ವರ್ಗದ ಜನರಿಗೆ [ದೆಹಲಿ ಸರ್ಕಾರದ ಮಾದರಿಯಲ್ಲಿ] ಮಾಸಿಕ ಕನಿಷ್ಟ 5 ಸಾವಿರ ರೂಗಳ ಆರ್ಥಿಕ ನೆರವನ್ನು ನೀಡಲೇಬೇಕು. ಕಛೇರಿಗಳ ಸುತ್ತ ಅಲೆದಾಡಿಸದೆ ಅದನ್ನು ಕೂಡಲೇ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಬೇಕು.

5.     ಕೋರಾನಾದಿಂದ ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡ ಕುಟುಂಬಗಳಿಗೆ ಬದುಕನ್ನು ಕಟ್ಟಿಕೊಳ್ಳಲು ಕನಿಷ್ಟ 5 ಲಕ್ಷದ ಪರಿಹಾರ ದನವನ್ನು ನೀಡಬೇಕು.

 

ಇದಕ್ಕಾಗಿ ಹಣಕಾಸಿನ ವ್ಯವಸ್ಥೆ ಹೇಗೆ ಒದಗಿಸಬಹುದೆ ಎಂಬುದಕ್ಕೆ ಮೂರು ಸಲಹೆಗಳನ್ನು ಸಹ ಪತ್ರದಲ್ಲಿ ವಿವರಿಸಲಾಗಿದೆ. ಅವುಗಳೆಂದರೆ

1.   ಕರ್ನಾಟಕದಲ್ಲಿ ನಡೆಯುತ್ತಿರುವ ಕಾರ್ಪೊರೇಟ್ ವಹಿವಾಟಿನ ಮೇಲೆ ಶೇ. 2ರ ಕೋರೋನಾ ಸೆಸ್ ನಿಗದಿ ಮಾಡಿ. ಹಾಗೇ ಕರ್ನಾಟಕದ ಎಲ್ಲಾ ಕೋಟ್ಯಾಧಿಪತಿ ಉದ್ದಿಮೆಪತಿಗಳು ಮತ್ತು ರಾಜಕಾರಣಿಗಳ ವಾರ್ಷಿಕ ಆದಾಯದ ಶೇ. 5ನ್ನು ಸುಂಕವಾಗಿ ಸಂಗ್ರಹಿಸಿ. ಕೂಡಲೇ ಈ ಹಣವನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸುಗ್ರೀವಾಜ್ಞೆ ಹೊರಡಿಸಿ.

2.    ಮೆಟ್ರೋ ವಿಸ್ತರಣೆ, ರಸ್ತೆ ವಿಸ್ತರಣೆ, ಸರ್ಕಾರಿ ಸೌಧಗಳ ನಿರ್ಮಾಣ, ಮಠಗಳಿಗೆ ಅನುದಾನ ಮುಂತಾದ ಬಹುತೇಕ ತುರ್ತಲ್ಲದ ಯೋಜನೆಗಳಿಗೆ ಮಂಜೂರು ಮಾಡಿರುವ ಹಣವನ್ನು ಕೋವಿಡ್ ನಿಭಾವಣೆಗೆ ಡೈವರ್ಟ್ ಮಾಡಿ.

3.   ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಬರ ಪರಿಹಾರದ, ನೆರೆ ಪರಿಹಾರದ, ಜಿ ಎಸ್ ಟಿ ಬಾಬ್ತಿನ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ. ‘ಸೆಂಟ್ರಲ್ ವಿಸ್ಟಾ’ [20 ಸಾವಿರ ಕೋಟಿ ಮೌಲ್ಯದ ಮೋದಿ ಮಹಲ್] ನಂತಹ ಐಶಾರಾಮಿ ದುಂದು ವೆಚ್ಚಗಳನ್ನು ರದ್ದುಗೊಳಿಸಿ ರಾಜ್ಯಗಳಿಗೆ ಕೋವಿಡ್ ನೆರವು ನೀಡಲು ಮುಂದಾಗಬೇಕೆಂದು ಪ್ರಧಾನಿಯವರನ್ನು ಒತ್ತಾಯಿಸಿ ಎಂದು ತಿಳಿಸಲಾಗಿದೆ.

ಈ ಪತ್ರವನ್ನು ಔಪಚಾರಿಕವಾಗಿ ಬರಿಯುತ್ತಿಲ್ಲ. ಬದಲಿಗೆ ಪರಿಸ್ಥಿತಿಯ ತೀವ್ರತೆಯನ್ನು ಮನಗಂಡು, ರಾಜ್ಯದ ಜನರು ಉಳಿಯಬೇಕಾದರೆ ಸರ್ಕಾರ ಇದನ್ನು ಮಾಡಲೇಬೇಕು ಎಂಬ ಒತ್ತಾಸೆಯೊಂದಿಗೆ ಬರಿಯುತ್ತಿದ್ದೇವೆ. ಇವ್ಯಾವುವೂ ಅಸಾಧ್ಯವಾದ ಬೇಡಿಕೆಗಳಲ್ಲ. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ದೆಹಲಿ ಮುಂತಾದ ಸರ್ಕಾರಗಳು ಈಗಾಗಲೇ ಈ ನಿಟ್ಟಿನಲ್ಲಿ ನಿರ್ಧಾರಗಳನ್ನು ತೆಗೆದುಕೊಂಡಾಗಿದೆ. ಮುಖ್ಯಮಂತ್ರಿಗಳಾಗಿ ನೀವು ದಿಟ್ಟ ಕ್ರಮಗಳ ಮೂಲಕ ಜನರ ನೆರವಿಗೆ ಧಾವಿಸದಿದ್ದರೆ ಕೋವಿಡ್ ನಿಯಮಗಳನ್ನು ಪಾಲಿಸುತ್ತಲೇ ಪ್ರತಿಭಟಿಸುವ ಮತ್ತು  “ನಿಮ್ಮ ಬಳಿಗೂ ಬರುವ” ಅನಿವಾರ್ಯ ನಿರ್ಧಾರಗಳನ್ನು ನಾವೂ ಮಾಡಲೇಬೇಕಾಗುತ್ತದೆ. ಏಕೆಂದರೆ ನಮ್ಮ ಜೀವಕ್ಕಿಂತಲೂ ಜನರ ಜೀವನ ಮುಖ್ಯವಿದೆ. ಅದರ ಪತನವನ್ನು ನೋಡುತ್ತಾ ಕೈ ಕಟ್ಟಿ ಕೂರಲಂತೂ ನಮಗೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಗಳಿಗೆ ಎಚ್ಚರವನ್ನು ಸಹ ನೀಡಲಾಗಿದೆ.

ಚಿತ್ರನಟ ಚೇತನ್, ಬಿ.ಟಿ.ಲಲಿತಾನಾಯ್ಕ್, ಡಾ. ಗಣೇಶ್ ದೇವಿ, ಡಾ.ಸಿ.ಎಸ್.ದ್ವಾರಕನಾಥ್, ಡಾ.ಪ್ರಕಾಶ್ ಕಮ್ಮರಡಿ, ಡಾ.ಭೂಮಿಗೌಡ, ದಿನೇಶ್ ಅಮಿನ್ ಮಟ್ಟು, ಪ್ರೊ.ಪುರುಷೋತ್ತಮ ಬಿಳಿಮಲೆ, ಕೆ.ನೀಲಾ, ಕಲಬುರ್ಗಿ, ಯಾಸಿನ್ ಮಲ್ಪೆ, ಉಡುಪಿ, ಬಿ.ಸುರೇಶ್, ಬಡಗಲಪುರ ನಾಗೇಂದ್ರ, ಸ್ವರ್ಣ ಭಟ್, ರಾಯಚೂರು, ಕಡಿದಾಳ್ ಶಾಮಣ್ಣ, ಶಿವಮೊಗ್ಗ, ಡಾ.ಎಚ್.ಎಸ್.ಅನುಪಮಾ, ನೂರ್ ಶ್ರೀಧರ್, ಎಚ್.ಆರ್.ಬಸವರಾಜಪ್ಪ, ಕುರುಬೂರು ಶಾಂತಕುಮಾರ್, ಗುರುಪ್ರಸಾದ್ ಕೆರಗೋಡು ಸಹಿ ಮಾಡಿದವರಲ್ಲಿ ಸೇರಿದ್ದಾರೆ.


ಇದನ್ನೂ ಓದಿ: ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...