Homeಕರೋನಾ ತಲ್ಲಣಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: ರಾಜ್ಯಾದ್ಯಂತ ಪ್ರತಿಭಟನೆ

ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: ರಾಜ್ಯಾದ್ಯಂತ ಪ್ರತಿಭಟನೆ

- Advertisement -
- Advertisement -

ಕೋವಿಡ್ ಎರಡನೇ ಅಲೆಯಿಂದ ಜನಜೀವನ ಜರ್ಜರಿತವಾಗಿದೆ. ಇಂತಹ ದುರಂತದ ಸಂದರ್ಭದಲ್ಲಿ ಸರ್ಕಾರ ಜನರ ಜೀವ ಮತ್ತು ಜೀವನ ಉಳಿಸಲು ಪಂಚ ತುರ್ತು ಕ್ರಮಗಳನ್ನು ಕೈಗೆತ್ತಿಕೊಳ್ಳಬೇಕೆಂದು ಒತ್ತಾಯಿಸಿ ಜನಾಗ್ರಹ ಆಂದೋಲನದ ವತಿಯಿಂದ ರಾಜ್ಯದಾದ್ಯಂತ ಮನೆ ಮುಂದೆ ಪ್ರತಿಭಟನೆಗಳು ಆರಂಭವಾಗಿದೆ.

ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ ಎಂದು ವಾರದ ಹಿಂದೆ 400 ಕ್ಕೂ ಹೆಚ್ಚು ಸಾಮಾಜಿಕ ಕಾರ್ಯಕರ್ತರು ಮತ್ತು ಹೋರಾಟಗಾರರು ರಾಜ್ಯ ಸರ್ಕಾರಕ್ಕೆ ತುರ್ತು ಪತ್ರ ಬರೆದಿದ್ದರು. ಸಣ್ಣ ಸಂಖ್ಯೆಯ ಬೆಡ್‌ಗಳನ್ನು ಹೆಚ್ಚಿಸಿರುವುದನ್ನು ಬಿಟ್ಟರೆ ಸರ್ಕಾರ ಉಳಿದ ಯಾವ ಕೆಲಸಗಳನ್ನು ಮಾಡಿಲ್ಲ ಮತ್ತು ಕನಿಷ್ಟ ಸ್ಪಂದಿಸಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ಸರ್ಕಾರದ ಸಂವೇದನಾಶೂನ್ಯ ಧೋರಣೆಯನ್ನು ಖಂಡಿಸಿ, ಜನರ ಜೀವ ಮತ್ತು ಜೀವನ ಉಳಿಸುವ ದಿಟ್ಟ ಕ್ರಮಗಳಿಗೆ ಮುಂದಾಗಬೇಕೆಂದು ಆಗ್ರಹಿಸಿ ಈ ಪ್ರತಿಭಟನೆ ನಡೆಯುತ್ತಿದೆ. ಎಲ್ಲಾ ಊರುಗಳಲ್ಲೂ ಆಕ್ಸಿಜನ್ ಬೆಡ್ ಹೆಚ್ಚಿಸಿ, ಕೂಡಲೇ ಎಲ್ಲರಿಗೂ ಉಚಿತ ಲಸಿಕೆ ನೀಡಿರಿ, ಬಡ ಕುಟುಂಬಗಳಿಗೆ ಸಮಗ್ರ ಪಡಿತರ ವಿತರಿಸಿ, ಕೆಲಸವಿಲ್ಲದ ಕುಟುಂಬಗಳಿಗೆ ಕೋವಿಡ್ ನೆರವು ಧನ ನೀಡಿ, ಮಡಿದವರ ಕುಟುಂಬಕ್ಕೆ ಪರಿಹಾರ ಕೊಡಿ ಎಂಬುದು ನಮ್ಮ ಹಕ್ಕೊತ್ತಾಯಗಳಾಗಿವೆ ಎಂದು ಜನಾಗ್ರಹ ಆಂದೋಲನದ ವಕ್ತಾರರಾದ ಹೋರಾಟಗಾರ ಕೆ.ಎಲ್ ಅಶೋಕ್ ತಿಳಿಸಿದ್ದಾರೆ.

“ಸರ್ಕಾರದ ಮೇಲೆ ಒತ್ತಡ ತರುವ ಭಾಗವಾಗಿ ಇಂದು ರಾಜ್ಯದ ಬಹುತೇಕ ಜಿಲ್ಲಾ, ತಾಲ್ಲೂಕುಗಳಲ್ಲಿ ಜನರು ತಮ್ಮ ತಮ್ಮ ಮನೆಗಳ ಮುಂದೆಯೇ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಸರ್ಕಾರ ಈಗಲೂ ನಮ್ಮ ಪಂಚ ಹಕ್ಕೊತ್ತಾಯಗಳನ್ನು ಈಡೇರಿಸಲು ಮುಂದಾಗದಿದ್ದರೆ ಗಂಭೀರ ಸ್ವರೂಪದ ಹೋರಾಟಕ್ಕೆ ಮುಂದಾಗುವುದು ಅನಿವಾರ್ಯವಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಜನರಿಗೆ ಆಸರೆಯಾಗುವ ಯಾವ ಕ್ರಮಗಳೂ ಇಲ್ಲದೆ, ಲಾಕ್ ಡೌನ್ ಮಾತ್ರ ಮುಂದುವರೆಯುತ್ತಿದೆ. ಈ ಸಮಯದಲ್ಲಿ ಜನರನ್ನು ಅಮಾನವೀಯವಾಗಿ ಥಳಿಸಲಾಗುತ್ತಿದೆ. ಹಾಗಾಗಿ ಸರ್ಕಾರದ ಈ ನಿಶ್ಚಲ ಮತ್ತು ಅಮಾನವೀಯ ಧೋರಣೆಯನ್ನು ಖಂಡಿಸಿ ಮತ್ತು ಪಂಚ ಕ್ರಮಗಳನ್ನು ಸರ್ಕಾರ ಕಾರ್ಯರೂಪಕ್ಕೆ ತರಲೇಬೇಕು ಎಂದು ಒತ್ತಾಯಿಸಬೇಕಿದೆ. ಪ್ರತಿಭಟನೆ ಮಾಡುವುದೇ ನಮ್ಮ ಗುರಿಯಲ್ಲ. ಇದು ಅನಿವಾರ್ಯ ಕ್ರಿಯೆ. ಒಂದು ವೇಳೆ ಸರ್ಕಾರ ಜನಪರ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾದರೆ ಸಾವಿರಾರು ಜನ ಕಾರ್ಯಕರ್ತರು ಸರ್ಕಾರದ ಜೊತೆ ಕೈಗೂಡಿಸಿ ಜನರನ್ನು ಉಳಿಸುವ ಕೈಂಕರ್ಯದಲ್ಲಿ ಭಾಗಿಯಾಗುತ್ತೇವೆ ಎಂಬ ಭರವಸೆಯನ್ನೂ ಇದರ ಜೊತೆಯಲ್ಲೇ ನೀಡುತ್ತಿದ್ದೇವೆ ಎಂದು ಜನಾಗ್ರಹ ಆಂದೋಲನ ತಿಳಿಸಿದೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದದ ಮುಖಂಡರಾದ ಮಾವಳ್ಳಿ ಶಂಕರ್, ಹೋರಾಟಗಾರ್ತಿ ಬಿ.ಟಿ ಲಲಿತಾ ನಾಯಕ್, ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳ, ಗೌರಿ ಮುಂತಾದವರು ತಮ್ಮ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯದಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ಫೋಟೊ ಗ್ಯಾಲರಿ ಇಲ್ಲಿದೆ.

ದಾವಣಗೆರೆಯಲ್ಲಿ ಮಹಿಳೆಯರ ಕೂಗು..
ಕೆ.ಆರ್ ನಗರದಲ್ಲಿ ಹಮಾಲಿ ಕಾರ್ಮಿಕರಿಂದ ಪ್ರತಿಭಟನೆ
ವಿಜಯಪುರದಲ್ಲಿ ಯುವಜನರ ಆಗ್ರಹ
ಶಿವಮೊಗ್ಗದಲ್ಲಿ ಸರ್ಕಾರದ ಮೇಲೆ ಒತ್ತಡ
ಚನ್ನಗಿರಿ ಕಾರ್ಮಿಕರಿಂದ ಪ್ರತಿಭಟನೆ
ಚಿತ್ರದುರ್ಗದಲ್ಲಿ ನಾಗರೀಕರ ಒತ್ತಾಯ
ಬೆಂಗಳೂರಿನ ಕೊಟ್ಟಿಗೆಪಾಳ್ಯದ ನಿವಾಸಿಗಳಿಂದ ಸರ್ಕಾರಕ್ಕೆ ಆಗ್ರಹ
ಬಿ.ಟಿ ಲಲಿತಾ ನಾಯಕ್‌ರವರ ಮನೆ ಮುಂದೆ ಪ್ರತಿಭಟನೆ
ಕೊಪ್ಪಳ ಜಿಲ್ಲೆಯ ಬರಗೂರಿನಲ್ಲಿ ಪ್ರತಿಭಟನೆ
ಬೆಣ್ಣಿಹಳ್ಳಿ, ಹರಪನಹಳ್ಳಿ ತಾ. ಬಳ್ಳಾರಿ ಜಿಲ್ಲೆಯಲ್ಲಿ ಜನಾಗ್ರಹ ಆಂದೋಲನ
ಕಲ್ಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಅನ್ನಭಾಗ್ಯ ಪಡಿತರ ಜಾರಿ ಮಾಡುವ ಹಮಾಲಿ ಕಾರ್ಮಿಕರಿಂದ ಪ್ರತಿಭಟನೆ

(ವರದಿಯನ್ನು ಅಪ್ಡೇಟ್‌ ಮಾಡಲಾಗುತ್ತದೆ.)


ಇದನ್ನೂ ಓದಿ: ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: 400 ಸಾಮಾಜಿಕ ಕಾರ್ಯಕರ್ತರ ಜನಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...