Homeಕರೋನಾ ತಲ್ಲಣಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: ರಾಜ್ಯಾದ್ಯಂತ ಪ್ರತಿಭಟನೆ

ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: ರಾಜ್ಯಾದ್ಯಂತ ಪ್ರತಿಭಟನೆ

- Advertisement -
- Advertisement -

ಕೋವಿಡ್ ಎರಡನೇ ಅಲೆಯಿಂದ ಜನಜೀವನ ಜರ್ಜರಿತವಾಗಿದೆ. ಇಂತಹ ದುರಂತದ ಸಂದರ್ಭದಲ್ಲಿ ಸರ್ಕಾರ ಜನರ ಜೀವ ಮತ್ತು ಜೀವನ ಉಳಿಸಲು ಪಂಚ ತುರ್ತು ಕ್ರಮಗಳನ್ನು ಕೈಗೆತ್ತಿಕೊಳ್ಳಬೇಕೆಂದು ಒತ್ತಾಯಿಸಿ ಜನಾಗ್ರಹ ಆಂದೋಲನದ ವತಿಯಿಂದ ರಾಜ್ಯದಾದ್ಯಂತ ಮನೆ ಮುಂದೆ ಪ್ರತಿಭಟನೆಗಳು ಆರಂಭವಾಗಿದೆ.

ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ ಎಂದು ವಾರದ ಹಿಂದೆ 400 ಕ್ಕೂ ಹೆಚ್ಚು ಸಾಮಾಜಿಕ ಕಾರ್ಯಕರ್ತರು ಮತ್ತು ಹೋರಾಟಗಾರರು ರಾಜ್ಯ ಸರ್ಕಾರಕ್ಕೆ ತುರ್ತು ಪತ್ರ ಬರೆದಿದ್ದರು. ಸಣ್ಣ ಸಂಖ್ಯೆಯ ಬೆಡ್‌ಗಳನ್ನು ಹೆಚ್ಚಿಸಿರುವುದನ್ನು ಬಿಟ್ಟರೆ ಸರ್ಕಾರ ಉಳಿದ ಯಾವ ಕೆಲಸಗಳನ್ನು ಮಾಡಿಲ್ಲ ಮತ್ತು ಕನಿಷ್ಟ ಸ್ಪಂದಿಸಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ಸರ್ಕಾರದ ಸಂವೇದನಾಶೂನ್ಯ ಧೋರಣೆಯನ್ನು ಖಂಡಿಸಿ, ಜನರ ಜೀವ ಮತ್ತು ಜೀವನ ಉಳಿಸುವ ದಿಟ್ಟ ಕ್ರಮಗಳಿಗೆ ಮುಂದಾಗಬೇಕೆಂದು ಆಗ್ರಹಿಸಿ ಈ ಪ್ರತಿಭಟನೆ ನಡೆಯುತ್ತಿದೆ. ಎಲ್ಲಾ ಊರುಗಳಲ್ಲೂ ಆಕ್ಸಿಜನ್ ಬೆಡ್ ಹೆಚ್ಚಿಸಿ, ಕೂಡಲೇ ಎಲ್ಲರಿಗೂ ಉಚಿತ ಲಸಿಕೆ ನೀಡಿರಿ, ಬಡ ಕುಟುಂಬಗಳಿಗೆ ಸಮಗ್ರ ಪಡಿತರ ವಿತರಿಸಿ, ಕೆಲಸವಿಲ್ಲದ ಕುಟುಂಬಗಳಿಗೆ ಕೋವಿಡ್ ನೆರವು ಧನ ನೀಡಿ, ಮಡಿದವರ ಕುಟುಂಬಕ್ಕೆ ಪರಿಹಾರ ಕೊಡಿ ಎಂಬುದು ನಮ್ಮ ಹಕ್ಕೊತ್ತಾಯಗಳಾಗಿವೆ ಎಂದು ಜನಾಗ್ರಹ ಆಂದೋಲನದ ವಕ್ತಾರರಾದ ಹೋರಾಟಗಾರ ಕೆ.ಎಲ್ ಅಶೋಕ್ ತಿಳಿಸಿದ್ದಾರೆ.

“ಸರ್ಕಾರದ ಮೇಲೆ ಒತ್ತಡ ತರುವ ಭಾಗವಾಗಿ ಇಂದು ರಾಜ್ಯದ ಬಹುತೇಕ ಜಿಲ್ಲಾ, ತಾಲ್ಲೂಕುಗಳಲ್ಲಿ ಜನರು ತಮ್ಮ ತಮ್ಮ ಮನೆಗಳ ಮುಂದೆಯೇ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಸರ್ಕಾರ ಈಗಲೂ ನಮ್ಮ ಪಂಚ ಹಕ್ಕೊತ್ತಾಯಗಳನ್ನು ಈಡೇರಿಸಲು ಮುಂದಾಗದಿದ್ದರೆ ಗಂಭೀರ ಸ್ವರೂಪದ ಹೋರಾಟಕ್ಕೆ ಮುಂದಾಗುವುದು ಅನಿವಾರ್ಯವಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಜನರಿಗೆ ಆಸರೆಯಾಗುವ ಯಾವ ಕ್ರಮಗಳೂ ಇಲ್ಲದೆ, ಲಾಕ್ ಡೌನ್ ಮಾತ್ರ ಮುಂದುವರೆಯುತ್ತಿದೆ. ಈ ಸಮಯದಲ್ಲಿ ಜನರನ್ನು ಅಮಾನವೀಯವಾಗಿ ಥಳಿಸಲಾಗುತ್ತಿದೆ. ಹಾಗಾಗಿ ಸರ್ಕಾರದ ಈ ನಿಶ್ಚಲ ಮತ್ತು ಅಮಾನವೀಯ ಧೋರಣೆಯನ್ನು ಖಂಡಿಸಿ ಮತ್ತು ಪಂಚ ಕ್ರಮಗಳನ್ನು ಸರ್ಕಾರ ಕಾರ್ಯರೂಪಕ್ಕೆ ತರಲೇಬೇಕು ಎಂದು ಒತ್ತಾಯಿಸಬೇಕಿದೆ. ಪ್ರತಿಭಟನೆ ಮಾಡುವುದೇ ನಮ್ಮ ಗುರಿಯಲ್ಲ. ಇದು ಅನಿವಾರ್ಯ ಕ್ರಿಯೆ. ಒಂದು ವೇಳೆ ಸರ್ಕಾರ ಜನಪರ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾದರೆ ಸಾವಿರಾರು ಜನ ಕಾರ್ಯಕರ್ತರು ಸರ್ಕಾರದ ಜೊತೆ ಕೈಗೂಡಿಸಿ ಜನರನ್ನು ಉಳಿಸುವ ಕೈಂಕರ್ಯದಲ್ಲಿ ಭಾಗಿಯಾಗುತ್ತೇವೆ ಎಂಬ ಭರವಸೆಯನ್ನೂ ಇದರ ಜೊತೆಯಲ್ಲೇ ನೀಡುತ್ತಿದ್ದೇವೆ ಎಂದು ಜನಾಗ್ರಹ ಆಂದೋಲನ ತಿಳಿಸಿದೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದದ ಮುಖಂಡರಾದ ಮಾವಳ್ಳಿ ಶಂಕರ್, ಹೋರಾಟಗಾರ್ತಿ ಬಿ.ಟಿ ಲಲಿತಾ ನಾಯಕ್, ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳ, ಗೌರಿ ಮುಂತಾದವರು ತಮ್ಮ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯದಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ಫೋಟೊ ಗ್ಯಾಲರಿ ಇಲ್ಲಿದೆ.

ದಾವಣಗೆರೆಯಲ್ಲಿ ಮಹಿಳೆಯರ ಕೂಗು..
ಕೆ.ಆರ್ ನಗರದಲ್ಲಿ ಹಮಾಲಿ ಕಾರ್ಮಿಕರಿಂದ ಪ್ರತಿಭಟನೆ
ವಿಜಯಪುರದಲ್ಲಿ ಯುವಜನರ ಆಗ್ರಹ
ಶಿವಮೊಗ್ಗದಲ್ಲಿ ಸರ್ಕಾರದ ಮೇಲೆ ಒತ್ತಡ
ಚನ್ನಗಿರಿ ಕಾರ್ಮಿಕರಿಂದ ಪ್ರತಿಭಟನೆ
ಚಿತ್ರದುರ್ಗದಲ್ಲಿ ನಾಗರೀಕರ ಒತ್ತಾಯ
ಬೆಂಗಳೂರಿನ ಕೊಟ್ಟಿಗೆಪಾಳ್ಯದ ನಿವಾಸಿಗಳಿಂದ ಸರ್ಕಾರಕ್ಕೆ ಆಗ್ರಹ
ಬಿ.ಟಿ ಲಲಿತಾ ನಾಯಕ್‌ರವರ ಮನೆ ಮುಂದೆ ಪ್ರತಿಭಟನೆ
ಕೊಪ್ಪಳ ಜಿಲ್ಲೆಯ ಬರಗೂರಿನಲ್ಲಿ ಪ್ರತಿಭಟನೆ
ಬೆಣ್ಣಿಹಳ್ಳಿ, ಹರಪನಹಳ್ಳಿ ತಾ. ಬಳ್ಳಾರಿ ಜಿಲ್ಲೆಯಲ್ಲಿ ಜನಾಗ್ರಹ ಆಂದೋಲನ
ಕಲ್ಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಅನ್ನಭಾಗ್ಯ ಪಡಿತರ ಜಾರಿ ಮಾಡುವ ಹಮಾಲಿ ಕಾರ್ಮಿಕರಿಂದ ಪ್ರತಿಭಟನೆ

(ವರದಿಯನ್ನು ಅಪ್ಡೇಟ್‌ ಮಾಡಲಾಗುತ್ತದೆ.)


ಇದನ್ನೂ ಓದಿ: ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: 400 ಸಾಮಾಜಿಕ ಕಾರ್ಯಕರ್ತರ ಜನಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...