Homeಕರೋನಾ ತಲ್ಲಣಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: ರಾಜ್ಯಾದ್ಯಂತ ಪ್ರತಿಭಟನೆ

ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: ರಾಜ್ಯಾದ್ಯಂತ ಪ್ರತಿಭಟನೆ

- Advertisement -
- Advertisement -

ಕೋವಿಡ್ ಎರಡನೇ ಅಲೆಯಿಂದ ಜನಜೀವನ ಜರ್ಜರಿತವಾಗಿದೆ. ಇಂತಹ ದುರಂತದ ಸಂದರ್ಭದಲ್ಲಿ ಸರ್ಕಾರ ಜನರ ಜೀವ ಮತ್ತು ಜೀವನ ಉಳಿಸಲು ಪಂಚ ತುರ್ತು ಕ್ರಮಗಳನ್ನು ಕೈಗೆತ್ತಿಕೊಳ್ಳಬೇಕೆಂದು ಒತ್ತಾಯಿಸಿ ಜನಾಗ್ರಹ ಆಂದೋಲನದ ವತಿಯಿಂದ ರಾಜ್ಯದಾದ್ಯಂತ ಮನೆ ಮುಂದೆ ಪ್ರತಿಭಟನೆಗಳು ಆರಂಭವಾಗಿದೆ.

ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ ಎಂದು ವಾರದ ಹಿಂದೆ 400 ಕ್ಕೂ ಹೆಚ್ಚು ಸಾಮಾಜಿಕ ಕಾರ್ಯಕರ್ತರು ಮತ್ತು ಹೋರಾಟಗಾರರು ರಾಜ್ಯ ಸರ್ಕಾರಕ್ಕೆ ತುರ್ತು ಪತ್ರ ಬರೆದಿದ್ದರು. ಸಣ್ಣ ಸಂಖ್ಯೆಯ ಬೆಡ್‌ಗಳನ್ನು ಹೆಚ್ಚಿಸಿರುವುದನ್ನು ಬಿಟ್ಟರೆ ಸರ್ಕಾರ ಉಳಿದ ಯಾವ ಕೆಲಸಗಳನ್ನು ಮಾಡಿಲ್ಲ ಮತ್ತು ಕನಿಷ್ಟ ಸ್ಪಂದಿಸಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ಸರ್ಕಾರದ ಸಂವೇದನಾಶೂನ್ಯ ಧೋರಣೆಯನ್ನು ಖಂಡಿಸಿ, ಜನರ ಜೀವ ಮತ್ತು ಜೀವನ ಉಳಿಸುವ ದಿಟ್ಟ ಕ್ರಮಗಳಿಗೆ ಮುಂದಾಗಬೇಕೆಂದು ಆಗ್ರಹಿಸಿ ಈ ಪ್ರತಿಭಟನೆ ನಡೆಯುತ್ತಿದೆ. ಎಲ್ಲಾ ಊರುಗಳಲ್ಲೂ ಆಕ್ಸಿಜನ್ ಬೆಡ್ ಹೆಚ್ಚಿಸಿ, ಕೂಡಲೇ ಎಲ್ಲರಿಗೂ ಉಚಿತ ಲಸಿಕೆ ನೀಡಿರಿ, ಬಡ ಕುಟುಂಬಗಳಿಗೆ ಸಮಗ್ರ ಪಡಿತರ ವಿತರಿಸಿ, ಕೆಲಸವಿಲ್ಲದ ಕುಟುಂಬಗಳಿಗೆ ಕೋವಿಡ್ ನೆರವು ಧನ ನೀಡಿ, ಮಡಿದವರ ಕುಟುಂಬಕ್ಕೆ ಪರಿಹಾರ ಕೊಡಿ ಎಂಬುದು ನಮ್ಮ ಹಕ್ಕೊತ್ತಾಯಗಳಾಗಿವೆ ಎಂದು ಜನಾಗ್ರಹ ಆಂದೋಲನದ ವಕ್ತಾರರಾದ ಹೋರಾಟಗಾರ ಕೆ.ಎಲ್ ಅಶೋಕ್ ತಿಳಿಸಿದ್ದಾರೆ.

“ಸರ್ಕಾರದ ಮೇಲೆ ಒತ್ತಡ ತರುವ ಭಾಗವಾಗಿ ಇಂದು ರಾಜ್ಯದ ಬಹುತೇಕ ಜಿಲ್ಲಾ, ತಾಲ್ಲೂಕುಗಳಲ್ಲಿ ಜನರು ತಮ್ಮ ತಮ್ಮ ಮನೆಗಳ ಮುಂದೆಯೇ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಸರ್ಕಾರ ಈಗಲೂ ನಮ್ಮ ಪಂಚ ಹಕ್ಕೊತ್ತಾಯಗಳನ್ನು ಈಡೇರಿಸಲು ಮುಂದಾಗದಿದ್ದರೆ ಗಂಭೀರ ಸ್ವರೂಪದ ಹೋರಾಟಕ್ಕೆ ಮುಂದಾಗುವುದು ಅನಿವಾರ್ಯವಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಜನರಿಗೆ ಆಸರೆಯಾಗುವ ಯಾವ ಕ್ರಮಗಳೂ ಇಲ್ಲದೆ, ಲಾಕ್ ಡೌನ್ ಮಾತ್ರ ಮುಂದುವರೆಯುತ್ತಿದೆ. ಈ ಸಮಯದಲ್ಲಿ ಜನರನ್ನು ಅಮಾನವೀಯವಾಗಿ ಥಳಿಸಲಾಗುತ್ತಿದೆ. ಹಾಗಾಗಿ ಸರ್ಕಾರದ ಈ ನಿಶ್ಚಲ ಮತ್ತು ಅಮಾನವೀಯ ಧೋರಣೆಯನ್ನು ಖಂಡಿಸಿ ಮತ್ತು ಪಂಚ ಕ್ರಮಗಳನ್ನು ಸರ್ಕಾರ ಕಾರ್ಯರೂಪಕ್ಕೆ ತರಲೇಬೇಕು ಎಂದು ಒತ್ತಾಯಿಸಬೇಕಿದೆ. ಪ್ರತಿಭಟನೆ ಮಾಡುವುದೇ ನಮ್ಮ ಗುರಿಯಲ್ಲ. ಇದು ಅನಿವಾರ್ಯ ಕ್ರಿಯೆ. ಒಂದು ವೇಳೆ ಸರ್ಕಾರ ಜನಪರ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾದರೆ ಸಾವಿರಾರು ಜನ ಕಾರ್ಯಕರ್ತರು ಸರ್ಕಾರದ ಜೊತೆ ಕೈಗೂಡಿಸಿ ಜನರನ್ನು ಉಳಿಸುವ ಕೈಂಕರ್ಯದಲ್ಲಿ ಭಾಗಿಯಾಗುತ್ತೇವೆ ಎಂಬ ಭರವಸೆಯನ್ನೂ ಇದರ ಜೊತೆಯಲ್ಲೇ ನೀಡುತ್ತಿದ್ದೇವೆ ಎಂದು ಜನಾಗ್ರಹ ಆಂದೋಲನ ತಿಳಿಸಿದೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದದ ಮುಖಂಡರಾದ ಮಾವಳ್ಳಿ ಶಂಕರ್, ಹೋರಾಟಗಾರ್ತಿ ಬಿ.ಟಿ ಲಲಿತಾ ನಾಯಕ್, ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳ, ಗೌರಿ ಮುಂತಾದವರು ತಮ್ಮ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯದಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ಫೋಟೊ ಗ್ಯಾಲರಿ ಇಲ್ಲಿದೆ.

ದಾವಣಗೆರೆಯಲ್ಲಿ ಮಹಿಳೆಯರ ಕೂಗು..
ಕೆ.ಆರ್ ನಗರದಲ್ಲಿ ಹಮಾಲಿ ಕಾರ್ಮಿಕರಿಂದ ಪ್ರತಿಭಟನೆ
ವಿಜಯಪುರದಲ್ಲಿ ಯುವಜನರ ಆಗ್ರಹ
ಶಿವಮೊಗ್ಗದಲ್ಲಿ ಸರ್ಕಾರದ ಮೇಲೆ ಒತ್ತಡ
ಚನ್ನಗಿರಿ ಕಾರ್ಮಿಕರಿಂದ ಪ್ರತಿಭಟನೆ
ಚಿತ್ರದುರ್ಗದಲ್ಲಿ ನಾಗರೀಕರ ಒತ್ತಾಯ
ಬೆಂಗಳೂರಿನ ಕೊಟ್ಟಿಗೆಪಾಳ್ಯದ ನಿವಾಸಿಗಳಿಂದ ಸರ್ಕಾರಕ್ಕೆ ಆಗ್ರಹ
ಬಿ.ಟಿ ಲಲಿತಾ ನಾಯಕ್‌ರವರ ಮನೆ ಮುಂದೆ ಪ್ರತಿಭಟನೆ
ಕೊಪ್ಪಳ ಜಿಲ್ಲೆಯ ಬರಗೂರಿನಲ್ಲಿ ಪ್ರತಿಭಟನೆ
ಬೆಣ್ಣಿಹಳ್ಳಿ, ಹರಪನಹಳ್ಳಿ ತಾ. ಬಳ್ಳಾರಿ ಜಿಲ್ಲೆಯಲ್ಲಿ ಜನಾಗ್ರಹ ಆಂದೋಲನ
ಕಲ್ಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಅನ್ನಭಾಗ್ಯ ಪಡಿತರ ಜಾರಿ ಮಾಡುವ ಹಮಾಲಿ ಕಾರ್ಮಿಕರಿಂದ ಪ್ರತಿಭಟನೆ

(ವರದಿಯನ್ನು ಅಪ್ಡೇಟ್‌ ಮಾಡಲಾಗುತ್ತದೆ.)


ಇದನ್ನೂ ಓದಿ: ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: 400 ಸಾಮಾಜಿಕ ಕಾರ್ಯಕರ್ತರ ಜನಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....