Homeಕರೋನಾ ತಲ್ಲಣಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: ರಾಜ್ಯಾದ್ಯಂತ ಪ್ರತಿಭಟನೆ

ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: ರಾಜ್ಯಾದ್ಯಂತ ಪ್ರತಿಭಟನೆ

- Advertisement -
- Advertisement -

ಕೋವಿಡ್ ಎರಡನೇ ಅಲೆಯಿಂದ ಜನಜೀವನ ಜರ್ಜರಿತವಾಗಿದೆ. ಇಂತಹ ದುರಂತದ ಸಂದರ್ಭದಲ್ಲಿ ಸರ್ಕಾರ ಜನರ ಜೀವ ಮತ್ತು ಜೀವನ ಉಳಿಸಲು ಪಂಚ ತುರ್ತು ಕ್ರಮಗಳನ್ನು ಕೈಗೆತ್ತಿಕೊಳ್ಳಬೇಕೆಂದು ಒತ್ತಾಯಿಸಿ ಜನಾಗ್ರಹ ಆಂದೋಲನದ ವತಿಯಿಂದ ರಾಜ್ಯದಾದ್ಯಂತ ಮನೆ ಮುಂದೆ ಪ್ರತಿಭಟನೆಗಳು ಆರಂಭವಾಗಿದೆ.

ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ ಎಂದು ವಾರದ ಹಿಂದೆ 400 ಕ್ಕೂ ಹೆಚ್ಚು ಸಾಮಾಜಿಕ ಕಾರ್ಯಕರ್ತರು ಮತ್ತು ಹೋರಾಟಗಾರರು ರಾಜ್ಯ ಸರ್ಕಾರಕ್ಕೆ ತುರ್ತು ಪತ್ರ ಬರೆದಿದ್ದರು. ಸಣ್ಣ ಸಂಖ್ಯೆಯ ಬೆಡ್‌ಗಳನ್ನು ಹೆಚ್ಚಿಸಿರುವುದನ್ನು ಬಿಟ್ಟರೆ ಸರ್ಕಾರ ಉಳಿದ ಯಾವ ಕೆಲಸಗಳನ್ನು ಮಾಡಿಲ್ಲ ಮತ್ತು ಕನಿಷ್ಟ ಸ್ಪಂದಿಸಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ಸರ್ಕಾರದ ಸಂವೇದನಾಶೂನ್ಯ ಧೋರಣೆಯನ್ನು ಖಂಡಿಸಿ, ಜನರ ಜೀವ ಮತ್ತು ಜೀವನ ಉಳಿಸುವ ದಿಟ್ಟ ಕ್ರಮಗಳಿಗೆ ಮುಂದಾಗಬೇಕೆಂದು ಆಗ್ರಹಿಸಿ ಈ ಪ್ರತಿಭಟನೆ ನಡೆಯುತ್ತಿದೆ. ಎಲ್ಲಾ ಊರುಗಳಲ್ಲೂ ಆಕ್ಸಿಜನ್ ಬೆಡ್ ಹೆಚ್ಚಿಸಿ, ಕೂಡಲೇ ಎಲ್ಲರಿಗೂ ಉಚಿತ ಲಸಿಕೆ ನೀಡಿರಿ, ಬಡ ಕುಟುಂಬಗಳಿಗೆ ಸಮಗ್ರ ಪಡಿತರ ವಿತರಿಸಿ, ಕೆಲಸವಿಲ್ಲದ ಕುಟುಂಬಗಳಿಗೆ ಕೋವಿಡ್ ನೆರವು ಧನ ನೀಡಿ, ಮಡಿದವರ ಕುಟುಂಬಕ್ಕೆ ಪರಿಹಾರ ಕೊಡಿ ಎಂಬುದು ನಮ್ಮ ಹಕ್ಕೊತ್ತಾಯಗಳಾಗಿವೆ ಎಂದು ಜನಾಗ್ರಹ ಆಂದೋಲನದ ವಕ್ತಾರರಾದ ಹೋರಾಟಗಾರ ಕೆ.ಎಲ್ ಅಶೋಕ್ ತಿಳಿಸಿದ್ದಾರೆ.

“ಸರ್ಕಾರದ ಮೇಲೆ ಒತ್ತಡ ತರುವ ಭಾಗವಾಗಿ ಇಂದು ರಾಜ್ಯದ ಬಹುತೇಕ ಜಿಲ್ಲಾ, ತಾಲ್ಲೂಕುಗಳಲ್ಲಿ ಜನರು ತಮ್ಮ ತಮ್ಮ ಮನೆಗಳ ಮುಂದೆಯೇ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಸರ್ಕಾರ ಈಗಲೂ ನಮ್ಮ ಪಂಚ ಹಕ್ಕೊತ್ತಾಯಗಳನ್ನು ಈಡೇರಿಸಲು ಮುಂದಾಗದಿದ್ದರೆ ಗಂಭೀರ ಸ್ವರೂಪದ ಹೋರಾಟಕ್ಕೆ ಮುಂದಾಗುವುದು ಅನಿವಾರ್ಯವಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಜನರಿಗೆ ಆಸರೆಯಾಗುವ ಯಾವ ಕ್ರಮಗಳೂ ಇಲ್ಲದೆ, ಲಾಕ್ ಡೌನ್ ಮಾತ್ರ ಮುಂದುವರೆಯುತ್ತಿದೆ. ಈ ಸಮಯದಲ್ಲಿ ಜನರನ್ನು ಅಮಾನವೀಯವಾಗಿ ಥಳಿಸಲಾಗುತ್ತಿದೆ. ಹಾಗಾಗಿ ಸರ್ಕಾರದ ಈ ನಿಶ್ಚಲ ಮತ್ತು ಅಮಾನವೀಯ ಧೋರಣೆಯನ್ನು ಖಂಡಿಸಿ ಮತ್ತು ಪಂಚ ಕ್ರಮಗಳನ್ನು ಸರ್ಕಾರ ಕಾರ್ಯರೂಪಕ್ಕೆ ತರಲೇಬೇಕು ಎಂದು ಒತ್ತಾಯಿಸಬೇಕಿದೆ. ಪ್ರತಿಭಟನೆ ಮಾಡುವುದೇ ನಮ್ಮ ಗುರಿಯಲ್ಲ. ಇದು ಅನಿವಾರ್ಯ ಕ್ರಿಯೆ. ಒಂದು ವೇಳೆ ಸರ್ಕಾರ ಜನಪರ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾದರೆ ಸಾವಿರಾರು ಜನ ಕಾರ್ಯಕರ್ತರು ಸರ್ಕಾರದ ಜೊತೆ ಕೈಗೂಡಿಸಿ ಜನರನ್ನು ಉಳಿಸುವ ಕೈಂಕರ್ಯದಲ್ಲಿ ಭಾಗಿಯಾಗುತ್ತೇವೆ ಎಂಬ ಭರವಸೆಯನ್ನೂ ಇದರ ಜೊತೆಯಲ್ಲೇ ನೀಡುತ್ತಿದ್ದೇವೆ ಎಂದು ಜನಾಗ್ರಹ ಆಂದೋಲನ ತಿಳಿಸಿದೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದದ ಮುಖಂಡರಾದ ಮಾವಳ್ಳಿ ಶಂಕರ್, ಹೋರಾಟಗಾರ್ತಿ ಬಿ.ಟಿ ಲಲಿತಾ ನಾಯಕ್, ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳ, ಗೌರಿ ಮುಂತಾದವರು ತಮ್ಮ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯದಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ಫೋಟೊ ಗ್ಯಾಲರಿ ಇಲ್ಲಿದೆ.

ದಾವಣಗೆರೆಯಲ್ಲಿ ಮಹಿಳೆಯರ ಕೂಗು..
ಕೆ.ಆರ್ ನಗರದಲ್ಲಿ ಹಮಾಲಿ ಕಾರ್ಮಿಕರಿಂದ ಪ್ರತಿಭಟನೆ
ವಿಜಯಪುರದಲ್ಲಿ ಯುವಜನರ ಆಗ್ರಹ
ಶಿವಮೊಗ್ಗದಲ್ಲಿ ಸರ್ಕಾರದ ಮೇಲೆ ಒತ್ತಡ
ಚನ್ನಗಿರಿ ಕಾರ್ಮಿಕರಿಂದ ಪ್ರತಿಭಟನೆ
ಚಿತ್ರದುರ್ಗದಲ್ಲಿ ನಾಗರೀಕರ ಒತ್ತಾಯ
ಬೆಂಗಳೂರಿನ ಕೊಟ್ಟಿಗೆಪಾಳ್ಯದ ನಿವಾಸಿಗಳಿಂದ ಸರ್ಕಾರಕ್ಕೆ ಆಗ್ರಹ
ಬಿ.ಟಿ ಲಲಿತಾ ನಾಯಕ್‌ರವರ ಮನೆ ಮುಂದೆ ಪ್ರತಿಭಟನೆ
ಕೊಪ್ಪಳ ಜಿಲ್ಲೆಯ ಬರಗೂರಿನಲ್ಲಿ ಪ್ರತಿಭಟನೆ
ಬೆಣ್ಣಿಹಳ್ಳಿ, ಹರಪನಹಳ್ಳಿ ತಾ. ಬಳ್ಳಾರಿ ಜಿಲ್ಲೆಯಲ್ಲಿ ಜನಾಗ್ರಹ ಆಂದೋಲನ
ಕಲ್ಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಅನ್ನಭಾಗ್ಯ ಪಡಿತರ ಜಾರಿ ಮಾಡುವ ಹಮಾಲಿ ಕಾರ್ಮಿಕರಿಂದ ಪ್ರತಿಭಟನೆ

(ವರದಿಯನ್ನು ಅಪ್ಡೇಟ್‌ ಮಾಡಲಾಗುತ್ತದೆ.)


ಇದನ್ನೂ ಓದಿ: ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: 400 ಸಾಮಾಜಿಕ ಕಾರ್ಯಕರ್ತರ ಜನಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...