Homeಕರ್ನಾಟಕಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ಹಿಂದಿಗೆ ಮಾತ್ರ ಆದ್ಯತೆ ನೀಡಿ ಉಳಿದ ಭಾಷೆಗಳಿಗೆ ಆದ್ಯತೆ ನೀಡದಿರುವುದು ತಪ್ಪು, ಇಲ್ಲಿ ಎಲ್ಲಾ ರಾಜ್ಯದ ಜನರು ವಾಸಿಸುತ್ತಾರೆ. ಅವರ ಭಾಷೆಯನ್ನೂ ಬಳಸೋಣ ಅಲ್ಲವೇ ಎಂದು ಟಿ.ಎಸ್.ನಾಗಾಭರಣ ತಿಳಿಸಿದ್ದಾರೆ.

- Advertisement -
- Advertisement -

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಾರಿಗೆ ಶುರುವಾಗಿನಿಂದ ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಮೆಟ್ರೋ ನಿಲ್ದಾಣಗಳಲ್ಲಿ ನಾಮಫಲಕಗಳ ಬದಲಾವಣೆ ವಿಚಾರವಂತೂ ಪ್ರತಿ ಬಿಎಂಆರ್‌ಸಿಎಲ್ ಸಭೆಯಲ್ಲೂ ಕೇಳಿಬರುವಂತಹದ್ದು. ಇಂತಹ ಸಂದರ್ಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ ಎಂದು ತಾಕೀತು ಮಾಡಿದ್ದಾರೆ.

ಮೆಟ್ರೋ ರೈಲುಗಳಲ್ಲಿ ಮತ್ತು ಮೆಟ್ರೋ ನಿಲ್ದಾಣಗಳ ನಾಮಫಲಕಗಳಲ್ಲಿ ಹಿಂದಿ ಭಾಷೆಯನ್ನು ತೆಗೆದುಹಾಕಿ ಕೇವಲ ಕನ್ನಡ ಮತ್ತು ಇಂಗ್ಲೀಷ್ ಭಾಷೆ ಬಳಸುವಂತೆ ಕೆಡಿಎ ಒತ್ತಾಯಿಸಿದೆ. ರಾಜ್ಯ ಸರ್ಕಾರ ತ್ರಿಭಾಷಾ ನೀತಿಗೆ ಬದ್ಧವಾಗಿಲ್ಲದೇ ಇರುವಾಗ 3 ಭಾಷೆಯ ಫಲಕಗಳೇಕೆ ಎಂದು ಟಿ.ಎಸ್.ನಾಗಾಭರಣ ಪ್ರಶ್ನಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರವು 2 ಆಯ್ಕೆಗಳನ್ನು ಬಿಎಂಆರ್‌ಸಿಎಲ್ ಮುಂದಿಟ್ಟಿದೆ. ಒಂದು ಕೇವಲ ಕನ್ನಡ ಮತ್ತು ಇಂಗ್ಲೀಷ್ ಫಲಕಗಳನ್ನು ಬಳಸುವುದು. ಎರಡನೇಯದು ಹಿಂದಿ ಬೇಕೇಬೇಕು ಎಂದರೆ ದೇಶದ ಎಲ್ಲಾ 22 ಅಧಿಕೃತ ಭಾಷೆಗಳನ್ನು ನಾಮಫಲಕಗಳ ಬಳಸಬೇಕು ಎಂದಿದೆ.

ಹಿಂದಿಗೆ ಮಾತ್ರ ಆದ್ಯತೆ ನೀಡಿ ಉಳಿದ ಭಾಷೆಗಳಿಗೆ ಆದ್ಯತೆ ನೀಡದಿರುವುದು ತಪ್ಪು, ಇಲ್ಲಿ ಎಲ್ಲಾ ರಾಜ್ಯದ ಜನರು ವಾಸಿಸುತ್ತಾರೆ. ಅವರ ಭಾಷೆಯನ್ನೂ ಬಳಸೋಣ ಅಲ್ಲವೇ ಎಂದು ಟಿ.ಎಸ್.ನಾಗಾಭರಣ ತಿಳಿಸಿದ್ದಾರೆ.

ಇನ್ನು ಮೆಟ್ರೋದಲ್ಲಿ ವಿಶೇಷವಾಗಿ ಸ್ವಚ್ಛತೆ ಮತ್ತು ಭದ್ರತಾ ವಿಭಾಗಗಳಲ್ಲಿ ಕನ್ನಡಿಗರನ್ನು ಮಾತ್ರ ಉದ್ಯೋಗಕ್ಕೆ ತೆಗೆದುಕೊಳ್ಳಬೇಕು. ನಮ್ಮ ಜನರಿಗೂ ಕೆಲಸದ ಅವಶ್ಯಕತೆ ಹೆಚ್ಚಾಗಿದೆ ಎಂದು ಕೆಡಿಎ ಸಭೆಗೆ ತಿಳಿಸಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಶಿಫಾರಸ್ಸುಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ. ನವೆಂಬರ್ ಒಳಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಹೇಳಿದ್ದಾರೆ.

ಆದರೆ ಇಂತಹ ಭರವಸೆ ಹಲವು ಬಾರಿ ಬಂದಿದ್ದರೂ, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ದೇಶಾದ್ಯಂತ ತ್ರಿಭಾಷಾ ನೀತಿಗೆ ವಿರೋಧ ವ್ಯಕ್ತವಾಗುತ್ತಿರುವ ಈ ಪರಿಸ್ಥಿತಿಯಲ್ಲಿ ಬಿಎಂಆರ್‌ಸಿಎಲ್ ಹೇಗೆ ಕಾರ್ಯನಿವರ್ಹಿಸುತ್ತದೆ ಎಂದು ಕಾದುನೋಡಬೇಕು.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...