Homeಮುಖಪುಟರಾಷ್ಟ್ರಧ್ವಜ ಹಾರಿಸದ ಮನೆಗಳ ಫೋಟೋ ತೆಗೆದುಕೊಳ್ಳಿ: ಉತ್ತರಾಖಾಂಡ್‌ ಬಿಜೆಪಿ ರಾಜ್ಯಾಧ್ಯಕ್ಷ ಹೇಳಿಕೆ

ರಾಷ್ಟ್ರಧ್ವಜ ಹಾರಿಸದ ಮನೆಗಳ ಫೋಟೋ ತೆಗೆದುಕೊಳ್ಳಿ: ಉತ್ತರಾಖಾಂಡ್‌ ಬಿಜೆಪಿ ರಾಜ್ಯಾಧ್ಯಕ್ಷ ಹೇಳಿಕೆ

- Advertisement -
- Advertisement -

“75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಯಾರ ಮನೆಯ ಮೇಲೆ ತಿರಂಗ ಧ್ವಜಗಳಿರುವುದಿಲ್ಲವೋ ಆ ಮನೆಯ ಫೋಟೋಗಳನ್ನು ತೆಗೆದುಕೊಳ್ಳಿ” ಎಂದು ಉತ್ತರಾಖಂಡ ಬಿಜೆಪಿ ಘಟಕದ ಮುಖ್ಯಸ್ಥ ತನ್ನ ಬೆಂಬಲಿಗರಿಗೆ ಸೂಚನೆ ನೀಡಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಆಗಸ್ಟ್ 13ರಿಂದ ಆಗಸ್ಟ್ 15ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಪ್ರಧಾನಿ ನರೇಂದ್ರ ಮೋದಿ “ಹರ್ ಘರ್ ತಿರಂಗ” ಅಭಿಯಾನಕ್ಕೆ ಕರೆ ನೀಡಿದ್ದಾರೆ. ಭಾರತದಾದ್ಯಂತ 20 ಕೋಟಿ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಸಾಮೂಹಿಕವಾಗಿ ಪ್ರದರ್ಶನ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಹಲ್ದ್ವಾನಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಉತ್ತರಾಖಂಡ್ ಮುಖ್ಯಸ್ಥ ಮಹೇಂದ್ರ ಭಟ್, “ರಾಷ್ಟ್ರಧ್ವಜವನ್ನು ಹಾರಿಸದವರನ್ನು ಭಾರತ ನಂಬಲು ಸಾಧ್ಯವಿಲ್ಲ” ಎಂದಿದ್ದಾರೆ.

“ಮನೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವುದರಿಂದ ಯಾರಿಗೆ ತಾನೇ ಏನು ಸಮಸ್ಯೆಯಾಗಲಿದೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಯಾರು ರಾಷ್ಟ್ರೀಯವಾದಿ ಮತ್ತು ಯಾರು ರಾಷ್ಟ್ರೀಯವಾದಿ ಅಲ್ಲ ಎಂಬುದನ್ನು ಸುತ್ತಮುತ್ತಲ ನಿವಾಸಿಗಳು ನೋಡಲು ಬಯಸುತ್ತಾರೆ” ಎಂದಿದ್ದಾರೆ.

ಉತ್ತರಾಖಂಡದ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಗಣೇಶ್ ಗೋಡಿಯಾಲ್ ಅವರು ಪ್ರತಿಕ್ರಿಯೆ ನೀಡಿದ್ದು, “ರಾಷ್ಟ್ರೀಯ ಪಕ್ಷವೊಂದರ ರಾಜ್ಯಾಧ್ಯಕ್ಷರಾಗಿರುವುದರಿಂದ ಮಹೇಂದ್ರ ಭಟ್ ಅವರು ಕ್ಷುಲ್ಲಕ ಟೀಕೆಗಳನ್ನು ಮಾಡುವ ಮೊದಲು ಎರಡು ಬಾರಿ ಯೋಚಿಸಬೇಕು” ಎಂದು ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಪ್ರಸ್ತುತ ಬೆಟ್ಟಗಳ ಶ್ರೇಣಿಯ ಭಾಗದಲ್ಲಿ ಪ್ರಸಾಸ ಮಾಡುತ್ತಿದ್ದೇನೆ. ತ್ರಿವರ್ಣ ಧ್ವಜವನ್ನು ಹಾರಿಸದ ಅನೇಕ ಮನೆಗಳನ್ನು ಇಲ್ಲಿ ನೋಡಬಹುದು. ಬಹುಶಃ ಬಿಜೆಪಿ ಆಡಳಿತದಿಂದಾಗಿ ಇವರು ಆರ್ಥಿಕ ಸಮಸ್ಯೆ ಎದುರಿಸುತ್ತಿರಬಹುದು” ಎಂದಿದ್ದಾರೆ.

ಬಿಜೆಪಿಯ ಸೈದ್ಧಾಂತಿಕ ತಳಹದಿಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಚೇರಿ ಹಲವು ವರ್ಷಗಳಿಂದ ರಾಷ್ಟ್ರಧ್ವಜವನ್ನು ಹಾರಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿರಿ: ಎಸ್.ಆರ್‌.ಹಿರೇಮಠ ಸಂದರ್ಶನ| ಎಸಿಬಿ ರದ್ದಾಗಿದ್ದು ಐತಿಹಾಸಿಕ ಗೆಲುವು, ಆದರೆ…,

“ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಯನ್ನು ಒಪ್ಪುವುದಾದರೆ, ಆರೆಸ್ಸೆಸ್ ಅನ್ನು ಯಾರೂ ನಂಬಬಾರದು” ಎಂದು ಅವರು ಮನವಿ ಮಾಡಿದ್ದಾರೆ.

ಟೀಕೆಗಳು ಬಂದ ಬಳಿಕ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಮಹೇಂದ್ರ ಭಟ್‌, “ನನ್ನ ಹೇಳಿಕೆಯನ್ನು ಕಾಂಗ್ರೆಸ್ ತಪ್ಪಾಗಿ ಅರ್ಥೈಸಿಕೊಂಡಿದೆ. ಸರ್ಕಾರವು ವಿವಿಧ ಮಾಧ್ಯಮಗಳ ಮೂಲಕ ತ್ರಿವರ್ಣ ಧ್ವಜವನ್ನು ವಿತರಿಸುತ್ತಿದೆ. ಬಿಜೆಪಿ ಕೂಡ ಅದಕ್ಕೆ ಸಹಾಯ ಮಾಡುತ್ತಿದೆ. ಸ್ವಾತಂತ್ರ್ಯ ದಿನದಂದು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಸಮಸ್ಯೆಯಾದರೂ ಏನು ಎಂದು ಕೇಳಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ಧ್ವಜಾರೋಹಣ ಮಾಡದವರನ್ನು ಈ ದೇಶದ ಜನರು ನಂಬುವುದಿಲ್ಲ ಎಂದು ಅವರು ಪುನರುಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...