Homeಅಂತರಾಷ್ಟ್ರೀಯತಾಲಿಬಾನಿಗಳು ಸಾಮಾನ್ಯ ನಾಗರಿಕರು, ಮಿಲಿಟರಿ ಪಡೆಯಲ್ಲ: ಪಾಕ್ ಪಿಎಂ ಇಮ್ರಾನ್ ಖಾನ್

ತಾಲಿಬಾನಿಗಳು ಸಾಮಾನ್ಯ ನಾಗರಿಕರು, ಮಿಲಿಟರಿ ಪಡೆಯಲ್ಲ: ಪಾಕ್ ಪಿಎಂ ಇಮ್ರಾನ್ ಖಾನ್

- Advertisement -
- Advertisement -

30 ಲಕ್ಷ ಜನ ಆಫ್ಘನ್ ನಿರಾಶ್ರಿತರು ಪಾಕ್ ಗಡಿಯಲ್ಲಿದ್ದಾರೆ. ಇಂತಹ ಸಮಯದಲ್ಲಿ ಅವರನ್ನು ಬಗ್ಗು ಬಡಿಯಲು ಸಾಧ್ಯವೇ? ಅಷ್ಟಕ್ಕೂ ತಾಲಿಬಾನಿಗಳು ಸಾಮಾನ್ಯ ನಾಗರಿಕರು, ಮಿಲಿಟರಿ ಪಡೆಯಲ್ಲ ಎಂದು ಪಾಕ್ ಪಿಎಂ ಇಮ್ರಾನ್ ಖಾನ್ ಹೇಳಿದ್ದಾರೆ ಎಂದು ವರದಿಯಾಗಿದೆ.

ಪಿಬಿಎಸ್ ನ್ಯೂಸ್‌ಹವರ್ ಎಂಬ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, “ಪಾಕಿಸ್ತಾನವು 30 ಜನ ಆಫ್ಘನ್ ನಿರಾಶ್ರಿತರಿಗೆ ಆಶ್ರಯ ನೀಡಿದೆ. ಅವರಲ್ಲಿ ಬಹುತೇಕರು ತಾಲಿಬಾನ್ ಜನಾಂಗೀಯ ಗುಂಪಿಗೆ ಸೇರಿದ ಪಶ್ತೂನ್‌ ಜನಾಂಗವಾಗಿದೆ” ಎಂದು ಅವರು ಒತ್ತಿ ಹೇಳಿದ್ದಾರೆ.

ತಾಲಿಬಾನಿಗಳಿಗೆ ಪಾಕಿಸ್ತಾನ ಸುರಕ್ಷಿತ ಸ್ವರ್ಗವಾಗಿದೆ ಎಂಬ ಆರೋಪಕ್ಕೆ ಉತ್ತರಿಸಿದ ಖಾನ್ “ತಾಲಿಬಾನಿಗಳು ಸಾಮಾನ್ಯ ನಾಗರಿಕರು, ಮಿಲಿಟರಿ ಪಡೆಯಲ್ಲ. ಅಂತವರು ಈ ನಿರಾಶ್ರಿತರ ಕ್ಯಾಂಪ್‌ನಲ್ಲಿದ್ದರೆ ಅವರನ್ನು ಬಗ್ಗು ಬಡಿಯಬೇಕೆಂದು ಹೇಗೆ ಹೇಳುತ್ತೀರಿ” ಎಂದು ಖಾನ್ ಪ್ರಶ್ನಿಸಿದ್ದಾರೆ.

ಪಾಕಿಸ್ತಾನವು ತಾಲಿಬಾನಿಗಳಿಗೆ ಆಫ್ಘಾನಿಸ್ತಾನದ ವಿರುದ್ಧ ಹೋರಾಡಲು ಸೈನಿಕವಾಗಿ ಮತ್ತು ಆರ್ಥಿಕವಾಗಿ ಸಹಾಯ ಮಾಡುತ್ತಿದೆ ಎಂಬ ಆರೋಪ ಬಹಳ ಹಿಂದಿನಿಂದಲೂ ಇದೆ ಎಂಬುದಕ್ಕೆ ಉತ್ತರಿಸಿದ ಅವರು, “ಇದೆಲ್ಲವು ಸುಳ್ಳು, ಅತ್ಯಂತ ಅಸಮಂಜಸ” ಎಂದಿದ್ದಾರೆ.

ಅಮೆರಿಕವು ಆಫ್ಘನ್‌ನಲ್ಲಿ ನಡೆಸಿದ ಯುದ್ದದಲ್ಲಿ ಸಾವಿರಾರು ಪಾಕಿಸ್ತಾನಿಯವರು ಪ್ರಾಣ ತೆತ್ತಿದ್ದಾರೆ. ಅಮೆರಿಕದ ಮೇಲಿನ ದಾಳಿಗೂ ಪಾಕಿಸ್ತಾನಕ್ಕೂ ಏನು ಸಂಬಂಧವಿಲ್ಲದಿದ್ದರೂ ನಮ್ಮವರು ಪ್ರಾಣ ತೆತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಅಲ್ಲದೆ ಜುಲೈ ಒಂದರಂದು ಇನ್ನು ಮುಂದೆ ಪಾಕ್ ಅಮೆರಿಕ ಪರ ಯಾವುದೇ ಯುದ್ದಗಳಲ್ಲಿ ಭಾಗವಹಿಸುವುದಿಲ್ಲ ಎಂದು ಅವರು ಘೋಷಿಸಿದ್ದರು.

ವಿಶ್ವಸಂಸ್ಥೆಯ ಭದ್ರತಾ ಕೌನ್ಸಿಲ್ ಸಿದ್ದಪಡಿಸಿದ ವರದಿಯ ಪ್ರಕಾರ ತೇಹ್ರಿಕ್ ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಎಂಬ 6000 ಜನರುಳ್ಳ ಭಯೋತ್ಪಾದನಾ ಗುಂಪು ಪಾಕ್ ಗಡಿಯಲ್ಲಿದೆ ಎನ್ನಲಾಗಿದೆ. ಇದು ಆಫ್ಘನ್ ತಾಲಿಬಾನ್ ಗುಂಪನ್ನು ಬೆಂಬಲಿಸುತ್ತಾ ಪಾಕಿಸ್ತಾನಿ ವಿರೋಧಿ ಉದ್ದೇಶವನ್ನು ಹೊಂದಿದೆ ಮತ್ತು ಆಫ್ಘನ್ ಸೈನ್ಯದ ವಿರುದ್ಧ ಹೋರಾಡಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.


ಇದನ್ನೂ ಓದಿ: ಅಮೆರಿಕ ಪರ ಯುದ್ಧದಲ್ಲಿ ಪಾಕ್ ಭಾಗವಹಿಸುವುದಿಲ್ಲ: ಇಮ್ರಾನ್ ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...