Homeಅಂತರಾಷ್ಟ್ರೀಯಆಫ್ಘನ್‌ ಮಹಿಳೆಯರಿಗೆ ವಿಶ್ವವಿದ್ಯಾಲಯ ಶಿಕ್ಷಣ ನಿಷೇಧಿಸಿದ ತಾಲಿಬಾನ್: ಭುಗಿಲೆದ್ದ ಪ್ರತಿಭಟನೆಗಳು

ಆಫ್ಘನ್‌ ಮಹಿಳೆಯರಿಗೆ ವಿಶ್ವವಿದ್ಯಾಲಯ ಶಿಕ್ಷಣ ನಿಷೇಧಿಸಿದ ತಾಲಿಬಾನ್: ಭುಗಿಲೆದ್ದ ಪ್ರತಿಭಟನೆಗಳು

- Advertisement -
- Advertisement -

ಆಫ್ಘನ್‌ ಮಹಿಳೆಯರಿಗೆ ವಿಶ್ವವಿದ್ಯಾಲಯ ಶಿಕ್ಷಣ ನಿಷೇಧಿಸಿರುವುದಾಗಿ ತಾಲಿಬಾನ್ ಸರ್ಕಾರದ ಉನ್ನತ ಶಿಕ್ಷಣ ಸಚಿವ ಘೋಷಿಸಿದ್ದು, ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಆದೇಶಿಸಿದ್ದಾರೆ. ಈ ನಿರ್ಧಾರದ ವಿರುದ್ಧ ಆಫ್ಘನ್‌ನ ಪುರುಷರು ಮತ್ತು ಮಹಿಳೆಯರು ಬೀದಿಗಿಳಿಸಿ ಪ್ರತಿಭಟನೆ ನಡೆಸಿದ್ದಾರೆ.

ಈ ಮೊದಲು ಸಹ ಪ್ರೌಢಶಿಕ್ಷಣಕ್ಕಾಗಿ ಹೆಣ್ಣು ಮಕ್ಕಳ ಶಾಲೆ ತೆಗೆಯುವುದಾಗಿ ಘೋಷಿಸಿ ಹಿಂದೆ ಸರಿದಿತ್ತು. ಈಗ ಉನ್ನತ ಶಿಕ್ಷಣದಿಂದ ಮಹಿಳೆಯರನ್ನು ಹೊರಗಿಡಲು ಮುಂದಾಗಿದೆ. ಈ ಕ್ರಮಗಳ ವಿರುದ್ಧ ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗಳು ಕೇಳಿಬಂದಿವೆ.

ರಾಜಧಾನಿ ಕಾಬೂಲ್ ವಿಶ್ವವಿದ್ಯಾಲಯಗಳಿಂದ ಹೆಣ್ಣು ಮಕ್ಕಳನ್ನು ಹೊರಹಾಕುತ್ತಿರುವ, ವಿದ್ಯಾರ್ಥಿನಿಯರು ಅಳುತ್ತಿರುವ ದೃಶ್ಯಗಳುಳ್ಳ ವಿಡಿಯೋಗಳನ್ನು ಪಮಿರ್ ನ್ಯೂಸ್ ಟ್ವೀಟ್ ಮಾಡಿದೆ. ಅಲ್ಲದೆ ವಿದ್ಯಾರ್ಥಿನಿಯರ ಪ್ರತಿಭಟನೆಗೆ ಬೆಂಬಲ ಸೂಚಿಸಿರುವ ಪುರುಷ ವಿದ್ಯಾರ್ಥಿಗಳು ಸಹ ಕಾಲೇಜು ತೊರೆದು ಪ್ರತಿಭಟಿಸಿದ್ದಾರೆ.

ಹಲವಾರು ಪುರುಷ ವಿದ್ಯಾರ್ಥಿಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿ ಪರೀಕ್ಷೆ ಬಹಿಷ್ಕರಿಸಿದ್ದಾರೆ. ಕೆಲವು ಪುರುಷ ಪ್ರಾಧ್ಯಾಪಕರು ಸಹ ರಾಜೀನಾಮೆ ನಿಡಿದ್ದಾರೆ ಎಂದು ಪಮೀರ್ ನ್ಯೂಸ್ ವರದಿ ಮಾಡಿದೆ. ಜಲಾಲ್‌ಬಾದ್ ಮತ್ತು ಕಂದಹಾರ್ ವಿವಿಯಲ್ಲಿಯೂ ಸಹ ಪ್ರತಿಭಟನೆಗಳು ಭುಗಿಲೆದ್ದಿವೆ.

ಇಂದು ನಾವು ಮಹಿಳೆಯರ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವುದರ ವಿರುದ್ಧ ಧ್ವನಿ ಎತ್ತಲು ಕಾಬೂಲ್‌ನ ಬೀದಿಗಳಿಗೆ ಇಳಿಯುತ್ತೇವೆ ಎಂದು ಅಫ್ಘಾನಿಸ್ತಾನ ವುಮೆನ್ಸ್ ಯೂನಿಟಿ ಅಂಡ್ ಸಾಲಿಡಾರಿಟಿ ಗುಂಪಿನ ಪ್ರತಿಭಟನಾಕಾರರು ತಿಳಿಸಿದ್ದಾರೆ. ಆದರೆ ಎಲ್ಲಾ ಪ್ರತಿಭಟನೆಗಳು ತಾಲಿಬಾನ್ ಸರ್ಕಾರ ಹತ್ತಿಕ್ಕುತ್ತಿದೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

ವಿಶ್ವಸಂಸ್ಥೆ ಸೇರಿದಂತೆ ಹಲವಾರು ದೇಶಗಳು ತಾಲಿಬಾನ್‌ನ ಈ ಆದೇಶವನ್ನು ಖಂಡಿಸಿವೆ, ಇದು ಮಹಿಳೆಯರು ಔಪಚಾರಿಕ ಶಿಕ್ಷಣವನ್ನು ಪಡೆಯಲು ಸಾಧ್ಯವಾಗದ ತಾಲಿಬಾನ್ ಆಳ್ವಿಕೆಯ ಮೊದಲ ಅವಧಿಗೆ ಅಫ್ಘಾನಿಸ್ತಾನವನ್ನು ಹಿಂತಿರುಗಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಅಫ್ಘಾನಿಸ್ತಾನಕ್ಕೆ ಯುಎನ್‌ನ ವಿಶೇಷ ವರದಿಗಾರ “ಇದು ಸಮಾನ ಶಿಕ್ಷಣದ ಹಕ್ಕನ್ನು ಮತ್ತಷ್ಟು ಉಲ್ಲಂಘಿಸುವ ಕೃತ್ಯವಾಗಿದ್ದು, ಅಫ್ಘಾನ್ ಸಮಾಜದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಅಳಿಸುವಿಕೆಯನ್ನು ಆಳಗೊಳಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಾಲಿಬಾನ್ ಆಳ್ವಿಕೆಯ ಅಫ್ಘಾನ್‌‌‌‌: ಬೀದಿ ಬದಿ ಆಹಾರ ಮಾರುತ್ತಿರುವ ಟಿವಿ ಪತ್ರಕರ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...