Homeಅಂತರಾಷ್ಟ್ರೀಯಆಫ್ಘನ್‌ ಮಹಿಳೆಯರಿಗೆ ವಿಶ್ವವಿದ್ಯಾಲಯ ಶಿಕ್ಷಣ ನಿಷೇಧಿಸಿದ ತಾಲಿಬಾನ್: ಭುಗಿಲೆದ್ದ ಪ್ರತಿಭಟನೆಗಳು

ಆಫ್ಘನ್‌ ಮಹಿಳೆಯರಿಗೆ ವಿಶ್ವವಿದ್ಯಾಲಯ ಶಿಕ್ಷಣ ನಿಷೇಧಿಸಿದ ತಾಲಿಬಾನ್: ಭುಗಿಲೆದ್ದ ಪ್ರತಿಭಟನೆಗಳು

- Advertisement -
- Advertisement -

ಆಫ್ಘನ್‌ ಮಹಿಳೆಯರಿಗೆ ವಿಶ್ವವಿದ್ಯಾಲಯ ಶಿಕ್ಷಣ ನಿಷೇಧಿಸಿರುವುದಾಗಿ ತಾಲಿಬಾನ್ ಸರ್ಕಾರದ ಉನ್ನತ ಶಿಕ್ಷಣ ಸಚಿವ ಘೋಷಿಸಿದ್ದು, ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಆದೇಶಿಸಿದ್ದಾರೆ. ಈ ನಿರ್ಧಾರದ ವಿರುದ್ಧ ಆಫ್ಘನ್‌ನ ಪುರುಷರು ಮತ್ತು ಮಹಿಳೆಯರು ಬೀದಿಗಿಳಿಸಿ ಪ್ರತಿಭಟನೆ ನಡೆಸಿದ್ದಾರೆ.

ಈ ಮೊದಲು ಸಹ ಪ್ರೌಢಶಿಕ್ಷಣಕ್ಕಾಗಿ ಹೆಣ್ಣು ಮಕ್ಕಳ ಶಾಲೆ ತೆಗೆಯುವುದಾಗಿ ಘೋಷಿಸಿ ಹಿಂದೆ ಸರಿದಿತ್ತು. ಈಗ ಉನ್ನತ ಶಿಕ್ಷಣದಿಂದ ಮಹಿಳೆಯರನ್ನು ಹೊರಗಿಡಲು ಮುಂದಾಗಿದೆ. ಈ ಕ್ರಮಗಳ ವಿರುದ್ಧ ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗಳು ಕೇಳಿಬಂದಿವೆ.

ರಾಜಧಾನಿ ಕಾಬೂಲ್ ವಿಶ್ವವಿದ್ಯಾಲಯಗಳಿಂದ ಹೆಣ್ಣು ಮಕ್ಕಳನ್ನು ಹೊರಹಾಕುತ್ತಿರುವ, ವಿದ್ಯಾರ್ಥಿನಿಯರು ಅಳುತ್ತಿರುವ ದೃಶ್ಯಗಳುಳ್ಳ ವಿಡಿಯೋಗಳನ್ನು ಪಮಿರ್ ನ್ಯೂಸ್ ಟ್ವೀಟ್ ಮಾಡಿದೆ. ಅಲ್ಲದೆ ವಿದ್ಯಾರ್ಥಿನಿಯರ ಪ್ರತಿಭಟನೆಗೆ ಬೆಂಬಲ ಸೂಚಿಸಿರುವ ಪುರುಷ ವಿದ್ಯಾರ್ಥಿಗಳು ಸಹ ಕಾಲೇಜು ತೊರೆದು ಪ್ರತಿಭಟಿಸಿದ್ದಾರೆ.

ಹಲವಾರು ಪುರುಷ ವಿದ್ಯಾರ್ಥಿಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿ ಪರೀಕ್ಷೆ ಬಹಿಷ್ಕರಿಸಿದ್ದಾರೆ. ಕೆಲವು ಪುರುಷ ಪ್ರಾಧ್ಯಾಪಕರು ಸಹ ರಾಜೀನಾಮೆ ನಿಡಿದ್ದಾರೆ ಎಂದು ಪಮೀರ್ ನ್ಯೂಸ್ ವರದಿ ಮಾಡಿದೆ. ಜಲಾಲ್‌ಬಾದ್ ಮತ್ತು ಕಂದಹಾರ್ ವಿವಿಯಲ್ಲಿಯೂ ಸಹ ಪ್ರತಿಭಟನೆಗಳು ಭುಗಿಲೆದ್ದಿವೆ.

ಇಂದು ನಾವು ಮಹಿಳೆಯರ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವುದರ ವಿರುದ್ಧ ಧ್ವನಿ ಎತ್ತಲು ಕಾಬೂಲ್‌ನ ಬೀದಿಗಳಿಗೆ ಇಳಿಯುತ್ತೇವೆ ಎಂದು ಅಫ್ಘಾನಿಸ್ತಾನ ವುಮೆನ್ಸ್ ಯೂನಿಟಿ ಅಂಡ್ ಸಾಲಿಡಾರಿಟಿ ಗುಂಪಿನ ಪ್ರತಿಭಟನಾಕಾರರು ತಿಳಿಸಿದ್ದಾರೆ. ಆದರೆ ಎಲ್ಲಾ ಪ್ರತಿಭಟನೆಗಳು ತಾಲಿಬಾನ್ ಸರ್ಕಾರ ಹತ್ತಿಕ್ಕುತ್ತಿದೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

ವಿಶ್ವಸಂಸ್ಥೆ ಸೇರಿದಂತೆ ಹಲವಾರು ದೇಶಗಳು ತಾಲಿಬಾನ್‌ನ ಈ ಆದೇಶವನ್ನು ಖಂಡಿಸಿವೆ, ಇದು ಮಹಿಳೆಯರು ಔಪಚಾರಿಕ ಶಿಕ್ಷಣವನ್ನು ಪಡೆಯಲು ಸಾಧ್ಯವಾಗದ ತಾಲಿಬಾನ್ ಆಳ್ವಿಕೆಯ ಮೊದಲ ಅವಧಿಗೆ ಅಫ್ಘಾನಿಸ್ತಾನವನ್ನು ಹಿಂತಿರುಗಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಅಫ್ಘಾನಿಸ್ತಾನಕ್ಕೆ ಯುಎನ್‌ನ ವಿಶೇಷ ವರದಿಗಾರ “ಇದು ಸಮಾನ ಶಿಕ್ಷಣದ ಹಕ್ಕನ್ನು ಮತ್ತಷ್ಟು ಉಲ್ಲಂಘಿಸುವ ಕೃತ್ಯವಾಗಿದ್ದು, ಅಫ್ಘಾನ್ ಸಮಾಜದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಅಳಿಸುವಿಕೆಯನ್ನು ಆಳಗೊಳಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಾಲಿಬಾನ್ ಆಳ್ವಿಕೆಯ ಅಫ್ಘಾನ್‌‌‌‌: ಬೀದಿ ಬದಿ ಆಹಾರ ಮಾರುತ್ತಿರುವ ಟಿವಿ ಪತ್ರಕರ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...