Homeಮುಖಪುಟತಾಲಿಬಾನ್ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತೆಯರಿಗೆ ನಿರ್ಬಂಧ; ಕೇಂದ್ರ ಸರ್ಕಾರ ಹೆಳಿದ್ದೇನು?

ತಾಲಿಬಾನ್ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತೆಯರಿಗೆ ನಿರ್ಬಂಧ; ಕೇಂದ್ರ ಸರ್ಕಾರ ಹೆಳಿದ್ದೇನು?

- Advertisement -
- Advertisement -

ಶುಕ್ರವಾರ ನವದೆಹಲಿಯಲ್ಲಿ ನಡೆದ ತಾಲಿಬಾನ್ ಪತ್ರಿಕಾಗೋಷ್ಠಿಗೆ ಪತ್ರಕರ್ತೆಯರಿಗೆ ನಿಷೇಧ ಹೇರಿದ್ದು ಭಾರಿ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಅಧಿಕೃತವಾಗಿ ಪ್ರತಿಕ್ರಿಯಿಸಿ, ‘ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರೊಂದಿಗಿನ ಪತ್ರಿಕಾ ಸಂವಾದಕ್ಕೂ, ನಮಗೂ ಯಾವುದೇ ಪಾತ್ರ ಅಥವಾ ಒಳಗೊಳ್ಳುವಿಕೆ ಇಲ್ಲ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಸ್ಪಷ್ಟೀಕರಣ ನೀಡಿದೆ.

ಮುತ್ತಕಿ ಮತ್ತು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ನಡುವಿನ ಮಾತುಕತೆಯ ನಂತರ ನವದೆಹಲಿಯ ಅಫ್ಘಾನ್ ರಾಯಭಾರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಯಾವುದೇ ಮಹಿಳಾ ಪತ್ರಕರ್ತರನ್ನು ಆಹ್ವಾನಿಸಲಾಗಿಲ್ಲ ಎಂದು ಬಹಿರಂಗವಾದ ನಂತರ ಟೀಕೆ ಆರಂಭವಾಯಿತು.

2021 ರಲ್ಲಿ ತಾಲಿಬಾನ್ ಗುಂಪು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಮುತ್ತಕಿ ಅವರ ಭಾರತ ಭೇಟಿ ಮೊದಲನೆಯದು. ಭಾರತ ಮತ್ತು ತಾಲಿಬಾನ್ ವಿದೇಶಾಂಗ ಸಚಿವರ ನಡುವಿನ ಮಾತುಕತೆಗಳು ವ್ಯಾಪಾರ, ಮಾನವೀಯ ನೆರವು ಮತ್ತು ಭದ್ರತಾ ಸಹಕಾರ ಸೇರಿದಂತೆ ಪ್ರಮುಖ ದ್ವಿಪಕ್ಷೀಯ ವಿಷಯಗಳನ್ನು ಒಳಗೊಂಡಿವೆ. ಆದರೆ, ಪತ್ರಿಕಾ ಸಂವಾದವು ಭಾರಿ ವಿವಾದಕ್ಕೆ ಕಾರಣವಾಗಿದೆ. ಸುದ್ದಿಗೋಷ್ಠಿಯಲ್ಲಿ ಫೋಟೋ ಜರ್ನಲಿಸ್ಟ್‌ಗಳು ಮತ್ತು ಪುರುಷ ವರದಿಗಾರರು ಮಾತ್ರ ಹಾಜರಿದ್ದರು. ಇದು ತಾಲಿಬಾನ್‌ನ ಲಿಂಗ ಪಕ್ಷಪಾತವನ್ನು ಎತ್ತಿ ತೋರಿಸಿತು.

ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರನ್ನು ಸೇರಿಸಿಕೊಳ್ಳಲು ಭಾರತದ ಸ್ಪಷ್ಟ ಸಲಹೆಗಳ ಹೊರತಾಗಿಯೂ, ತಾಲಿಬಾನ್ ನಿಯೋಗವು ಮಾಧ್ಯಮ ಆಹ್ವಾನಿತರನ್ನು ನಿರ್ಧರಿಸಿತು. ಭಾರತದ ಒಳಗೊಳ್ಳುವಿಕೆಯ ಕರೆಗಳನ್ನು ನಿರ್ಲಕ್ಷಿಸಿ ಪುರುಷ ಪತ್ರಕರ್ತರನ್ನು ಆಯ್ಕೆ ಮಾಡಿತು ಎಂದು ಮೂಲಗಳು ಹೇಳುತ್ತವೆ.

ತಾಲಿಬಾನ್ ವಿದೇಶಾಂಗ ಸಚಿವರ ಪ್ರತಿಕ್ರಿಯೆ

ಅಫಘಾನ್ ಮಹಿಳೆಯರ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವರದಿಗಾರರು ಪ್ರಶ್ನಿಸಿದಾಗ, ಅಮೀರ್ ಖಾನ್ ಮುತ್ತಕಿ ಸಮರ್ಥನೆಗಿಳಿದರು. “ಪ್ರತಿಯೊಂದು ದೇಶಕ್ಕೂ ತನ್ನದೇ ಆದ ಪದ್ಧತಿಗಳು, ಕಾನೂನುಗಳು ಮತ್ತು ತತ್ವಗಳಿವೆ” ಎಂದು ಅವರು ಹೇಳಿದರು. ‘ಅಫ್ಘಾನಿಸ್ತಾನದ ಆಂತರಿಕ ವ್ಯವಹಾರಗಳಿಗೆ ಗೌರವ ಇರಬೇಕು, ತಾಲಿಬಾನ್ ಸ್ವಾಧೀನದ ನಂತರ ಅಫ್ಘಾನಿಸ್ತಾನದ ಭದ್ರತಾ ಪರಿಸ್ಥಿತಿ ಸುಧಾರಿಸಿದೆ. ನಾವು ಅಧಿಕಾರಕ್ಕೆ ಮರಳುವ ಹಿಂದಿನ ಅವಧಿಗೆ ಹೋಲಿಸಿದರೆ ಸಾವುನೋವುಗಳಲ್ಲಿ ಇಳಿಕೆ ಕಂಡುಬಂದಿದೆ’ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 2021 ರಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಾಗಿನಿಂದ, ಆರನೇ ತರಗತಿಯ ನಂತರ ಹುಡುಗಿಯರ ಶಿಕ್ಷಣದ ಮೇಲಿನ ನಿಷೇಧ, ಹೆಚ್ಚಿನ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಮಹಿಳೆಯರ ಮೇಲಿನ ನಿರ್ಬಂಧಗಳು ಮತ್ತು ಕಟ್ಟುನಿಟ್ಟಾದ ವಸ್ತ್ರ ಸಂಹಿತೆಗಳ ಜಾರಿ ಸೇರಿದಂತೆ ಮಹಿಳೆಯರ ಹಕ್ಕುಗಳ ಮೇಲೆ ಈ ಗುಂಪು ತೀವ್ರ ನಿರ್ಬಂಧಗಳನ್ನು ವಿಧಿಸಿದೆ. ವಿಶ್ವಸಂಸ್ಥೆಯು ಈ ಕ್ರಮಗಳನ್ನು ಖಂಡಿಸಿದ್ದು, ಅಫ್ಘಾನ್ ಮಹಿಳೆಯರು ಮತ್ತು ಹುಡುಗಿಯರ ಮೇಲಿನ ವ್ಯಾಪಕ, ವ್ಯವಸ್ಥಿತ ದಬ್ಬಾಳಿಕೆಯನ್ನು ಎತ್ತಿ ತೋರಿಸಿದೆ.

ದೆಹಲಿ ಪತ್ರಿಕಾಗೋಷ್ಠಿಯಿಂದ ಮಹಿಳಾ ಪತ್ರಕರ್ತರನ್ನು ಹೊರಗಿಡುವುದು ತಾಲಿಬಾನ್ ಮಹಿಳೆಯರನ್ನು ನಡೆಸಿಕೊಳ್ಳುವ ಬಗ್ಗೆ ಅಂತರರಾಷ್ಟ್ರೀಯ ಸಮುದಾಯದ ಕಳವಳಗಳ ಮೇಲೆ ಮತ್ತೊಮ್ಮೆ ಬೆಳಕು ಚೆಲ್ಲಿದೆ.

ದಲಿತ ಐಪಿಎಸ್ ಅಧಿಕಾರಿ ಪೂರಣ್‌ ಕುಮಾರ್ ‘ಆತ್ಮಹತ್ಯೆ’ ಪ್ರಕರಣ: ಎಫ್‌ಐಆರ್‌ನಲ್ಲಿ ಎಸ್‌ಸಿ/ಎಸ್‌ಟಿ ಕಾಯ್ದೆ ದುರ್ಬಲಗೊಳಿಸಿರುವ ಆರೋಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...