Homeಅಂತರಾಷ್ಟ್ರೀಯಕಾಬೂಲ್ ಪ್ರವೇಶಿಸಿದ ತಾಲಿಬಾನ್: ರಾಜೀನಾಮೆಯತ್ತ ಅಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ

ಕಾಬೂಲ್ ಪ್ರವೇಶಿಸಿದ ತಾಲಿಬಾನ್: ರಾಜೀನಾಮೆಯತ್ತ ಅಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ

- Advertisement -
- Advertisement -

ತಾಲಿಬಾನ್ ಭಯೋತ್ಪಾದಕರು ಇಂದು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ಗೆ ಪ್ರವೇಶಿಸಿದ್ದಾರೆ. ಹಾಗಾಗಿ ಅಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ ಅವರು ರಾಜೀನಾಮೆ ನೀಡುವ ಸಾಧ್ಯತೆಗಳು ದಟ್ಟವಾಗಿವೆ. ಯಾವುದೇ ಹಿಂಸಾಚಾರಕ್ಕೆ ಆಸ್ಪದ ಕೊಡದಂತೆ ಅಧಿಕಾರ ಹಸ್ತಾಂತರಕ್ಕೆ ಒಪ್ಪಿಕೊಳ್ಳಲಾಗಿದೆ ಎಂದು ಹಂಗಾಮಿ ಆಂತರಿಕ ವ್ಯವಹಾರಗಳ ಸಚಿವ ಅಬ್ದುಲ್ ಸತ್ತಾರ್ ಮಿರ್ಜಕವಾಲ್ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ತಾಲಿಬಾನ್‌ ಬಂಡುಕೋರರು “ಎಲ್ಲಾ ಕಡೆಗಳಿಂದಲೂ” ರಾಜಧಾನಿಯನ್ನು ಪ್ರವೇಶಿಸುತ್ತಿದ್ದಾರೆ. ಸದ್ಯಕ್ಕೆ ಯಾವುದೇ ಹೋರಾಟಗಳು ವರದಿಯಾಗಿಲ್ಲ ಎಂದು ಆಂತರಿಕ ಸಚಿವಾಯಲದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಬೂಲ್‌ನ ಶಾಂತಿಯುತ ಶರಣಾಗತಿಗಾಗಿ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

20 ವರ್ಷಗಳ ಹಿಂದೆ ಅಮೆರಿಕಾವು ಕಾಬೂನ್‌ನಿಂದ ತಾಲಿಬಾನ್‌ಗಳನ್ನು ಹೊರಗಟ್ಟಿತ್ತು. ಅದಾದ ನಂತರ ಕಳೆದ ತಿಂಗಳು ಅಮೆರಿಕಾ ವಾಪಸ್ ಹೊರಟಿದೆ. ಈಗ ಸೆಪ್ಟೆಂಬರ್‌ 11ರ ದಾಳಿಯೊಂದಿಗೆ ತಾಲಿಬಾನ್‌ಗಳು ಕಾಬೂನ್‌ಗೆ ಪ್ರವೇಶಿಸಿದ್ದಾರೆ. ಅವರು ಶಾಂತಿಯುತ ಅಧಿಕಾರ ಹಸ್ತಾಂತರಕ್ಕೆ ಸರ್ಕಾರ ಒಪ್ಪಿಕೊಳ್ಳುವವರೆಗೂ ಕಾಬೂನ್‌ನ ಎಲ್ಲಾ ಪ್ರವೇಶದ್ವಾರಗಳಲ್ಲಿಯೂ ಮುತ್ತಿಗೆ ಹಾಕಲಿದ್ದಾರೆ ಎನ್ನಲಾಗಿದೆ.

ಅಫ್ಘಾನ್‌ ಪರಿಸ್ಥಿತಿಯ ಬಗ್ಗೆ ಸದ್ಯ ಅಧ್ಯಕ್ಷ ಅಶ್ರಫ್ ಘನಿ ಅವರಿಂದ ಯಾವುದೇ ತಕ್ಷಣದ ಮಾಹಿತಿ ದೊರಕಿಲ್ಲ. ಅವರು ಶನಿವಾರ ಸ್ಥಳೀಯ ನಾಯಕರು ಮತ್ತು ಅಂತಾರಾಷ್ಟ್ರೀಯ ಪಾಲುದಾರರೊಂದಿಗೆ ತುರ್ತು ಸಮಾಲೋಚನೆ ನಡೆಸಿದ್ದಾರೆ. ಅವರು ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಮತ್ತು ತಾಲಿಬಾನ್ ಕಮಾಂಡರ್ ಅಧಿಕಾರ ವಹಿಸಿಕೊಳ್ಳಲು ದಾರಿ ಮಾಡಿಕೊಡಲಿದ್ದಾರೆ ಎಂದು ವರದಿಗಳು ಹೇಳಿವೆ.

“ನಗರದ ಮೇಲೆ ದಾಳಿ ನಡೆಯುವುದಿಲ್ಲ, ಶಾಂತಿಯುತ ಹಸ್ತಾಂತರವನ್ನು ಒಪ್ಪಿಕೊಳ್ಳಲಾಗಿದೆ.” ಪರಿವರ್ತನೆಯ ಆಡಳಿತಕ್ಕೆ ಅಧಿಕಾರವನ್ನು ಹಸ್ತಾಂತರಿಸಲಾಗುವುದು ಎಂದು ಸರ್ಕಾರದ ಹಂಗಾಮಿ ಆಂತರಿಕ ಸಚಿವ ಅಬ್ದುಲ್ ಸತ್ತಾರ್ ಮಿರ್ಜಕವಾಲ್ ಹೇಳಿದ್ದಾರೆ.

ಕಾಬೂಲ್ ಸುತ್ತಮುತ್ತಲಿನ ಹಲವಾರು ಸ್ಥಳಗಳಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಆದರೆ ಭದ್ರತಾ ಪಡೆಗಳು ಮತ್ತು ಅಂತಾರಾಷ್ಟ್ರೀಯ ಪಾಲುದಾರರೊಂದಿಗಿನ ಸಮನ್ವಯದಿಂದ ನಗರದ ಮೇಲೆ ನಿಯಂತ್ರಣ ಹೊಂದಿದೆ ಎಂದು ಅಫ್ಘಾನ್‌ ಅಧ್ಯಕ್ಷೀಯ ಕಚೇರಿ ಟ್ವೀಟ್‌ ಮಾಡಿದೆ.

ಕಾಬೂಲ್‌ನ ಅನೇಕ ಬೀದಿಗಳು ಕಾರುಗಳಿಂದ ತುಂಬಿಹೋಗಿವೆ. ಜನರು ತಮ್ಮ ಸ್ವಂತ ಸ್ಥಳಗಳಿಗೆ ಧಾವಿಸುತ್ತಿದ್ದಾರೆ. ಹಲವರು ವಿಮಾನ ನಿಲ್ದಾಣವನ್ನು ತಲುಪಲು ಪ್ರಯತ್ನಿಸುತ್ತಿದ್ದಾರೆ. ಕೆಲವು ಜನರು ತಮ್ಮ ಕೀಗಳನ್ನು ಕಾರಿನಲ್ಲಿ ಬಿಟ್ಟು ವಿಮಾನ ನಿಲ್ದಾಣಕ್ಕೆ ನುಗ್ಗಲು ಆರಂಭಿಸಿದ್ದಾರೆ” ಎಂದು ನಿವಾಸಿಯೊಬ್ಬರು ರಾಯಿಟರ್ಸ್‌ಗೆ ಫೋನ್ ಮೂಲಕ ತಿಳಿಸಿದ್ದಾರೆ.

ಸರ್ಕಾರದ ಕೈಯಲ್ಲಿರುವ ಕಾಬೂಲ್‌ ಏರ್‌ಪೋರ್ಟ್‌ಅನ್ನು ಹೊರತು ಪಡಿಸಿದರೆ, ಜನರು ಅಫ್ಘಾನಿಸ್ಥಾನದಿಂದ ಹೊರ ಹೋಗಲು ಇರುವುದು ಒಂದೇ ದಾರಿ, ಅದು ಪಾಕಿಸ್ತಾನಕ್ಕೆ ಅಂಟಿಕೊಂಡಿರುವ ಟೋರ್ಖಾಮ್ ಗಡಿ ಪೋಸ್ಟ್. ಆದರೆ, ಅದನ್ನೂ ಸಹ ತಾಲಿಬಾನ್‌ ವಶಪಡಿಸಿಕೊಂಡಿದೆ.

ಉಳಿದಂತೆ, “ಜಲಾಲಾಬಾದ್‌ನಲ್ಲಿ ಯಾವುದೇ ಘರ್ಷಣೆಗಳು ನಡೆಯುತ್ತಿಲ್ಲ. ಏಕೆಂದರೆ, ಅಲ್ಲಿನ ರಾಜ್ಯಪಾಲರು ತಾಲಿಬಾನ್‌ಗೆ ಶರಣಾಗಿದ್ದಾರೆ.” ಎಂದು ಜಲಾಲಾಬಾದ್ ಮೂಲದ ಅಫ್ಘಾನ್ ಅಧಿಕಾರಿಯೊಬ್ಬರು ರಾಯಿಟರ್ಸ್‌ಗೆ ತಿಳಿಸಿದ್ದಾರೆ. “ಜನರ ಜೀವಗಳನ್ನು ಉಳಿಸಲು ತಾಲಿಬಾನ್‌ಗಳಿಗೆ ಅಧಿಕಾರ ನೀಡುವುದೊಂದೇ ಏಕೈಕ ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಕಳೆದ ತಿಂಗಳು ಯುಎಸ್ ನೇತೃತ್ವದ ಪಡೆಗಳು ಅಫ್ಘಾನ್‌ನಲ್ಲಿದ್ದ ತಮ್ಮ ಉಳಿದ ಸೈನ್ಯದ ಬಹುಭಾಗವನ್ನು ಹಿಂತೆಗೆದುಕೊಂಡವು. ನಂತರ ಅಫ್ಘಾನ್ ಮಿಲಿಟರಿಯ ರಕ್ಷಣೆ ವ್ಯವಸ್ಥೆ ಕುಸಿಯಲಾರಂಭಿಸಿದಂತೆ ಕಾಣತೊಡಗಿತು. ಈ ವೇಳೆಗೆ ತಾಲಿಬಾನ್ ಕಾರ್ಯಾಚರಣೆ ಚುರುಕುಗೊಂಡಿತು.

ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ಶನಿವಾರ ಅಫ್ಘಾನ್‌ನ ನಾಗರಿಕರನ್ನು ಸ್ಥಳಾಂತರಿಸಲು ಮತ್ತು ಸೇನಾ ಸಿಬ್ಬಂದಿಗಳ “ಕ್ರಮಬದ್ಧ ಮತ್ತು ಸುರಕ್ಷಿತ” ಮರಳುವಿಕೆಯನ್ನು ಖಚಿತಪಡಿಸಿಕೊಳ್ಳಲು 5,000 ಯುಎಸ್ ಸೈನಿಕರನ್ನು ನಿಯೋಜಿಸಲು ಸೇನೆಗೆ ಅಧಿಕಾರ ನೀಡಿದ್ದಾರೆ. ಹೀಗಾಗಿ, 1,000 ಸೈನಿಕರನ್ನು ನಿಯೋಜಿಸಲಾಗಿದೆ. ಅವರು ಅಫ್ಘಾನ್‌ ಏರ್‌ಪೋರ್ಟ್‌ನಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಯುಎಸ್ ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ತಾಲಿಬಾನ್ ಅಫಘಾನ್ ಜನರಿಂದ ಜನಪ್ರಿಯವಾಗಿ ಅಂಗೀಕರಿಸಲ್ಪಟ್ಟಿದೆ. ಅಫ್ಘಾನಿಸ್ತಾನಿಗಳು ಮತ್ತು ವಿದೇಶಿಯರಿಗೆ ಸುರಕ್ಷತೆಯ ಭರವಸೆ ನೀಡಿದೆ. ಅವರ ಜೀವನ, ಆಸ್ತಿ ಮತ್ತು ಗೌರವವನ್ನು ರಕ್ಷಿಸಲಾಗುತ್ತದೆ. ತನ್ನ ಪ್ರೀತಿಯ ರಾಷ್ಟ್ರದಲ್ಲಿ ಶಾಂತಿಯುತ ಮತ್ತು ಸುರಕ್ಷಿತ ವಾತಾವರಣವನ್ನು ಸೃಷ್ಟಿಸಲಾಗುತ್ತದೆ. ರಾಜತಾಂತ್ರಿಕರು ಮತ್ತು ಸಹಾಯ ಕಾರ್ಯಕರ್ತರು ಕೂಡ ಯಾವುದೇ ಸಮಸ್ಯೆಗಳನ್ನು ಎದುರಿಸುವುದಿಲ್ಲ” ಎಂದು ತಾಲಿಬಾನ್‌ ಶನಿವಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.

ಆಗಸ್ಟ್ 31 ರೊಳಗೆ ಅಫ್ಘಾನಿಸ್ತಾನದಲ್ಲಿ ಯುಎಸ್ ಮಿಲಿಟರಿ ಕಾರ್ಯಾಚರಣೆಯನ್ನು ಕೊನೆಗೊಳಿಸಲು ಅಮೆರಿಕಾದ ಹಿಂದಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಯೋಜಿಸಿದ್ದರು. ಅದೇ ನಿರ್ಧಾರಕ್ಕೆ ಈಗಿನ ಅಧ್ಯಕ್ಷ ಬೈಡನ್‌ ಕೂಡ ಅಂಟಿಕೊಂಡಿದ್ದಾರೆ. ತಾಲಿಬಾನ್‌ಗಳು ಊಹಿಸಿದ್ದಕ್ಕಿಂತ ವೇಗವಾಗಿ ನಗರವನ್ನು ವಶಪಡಿಸಿಕೊಂಡಿದ್ದಾರೆ. ತನ್ನದೇ ಪ್ರದೇಶವನ್ನು ಹಿಡಿದಿಟ್ಟುಕೊಳ್ಳುವ ಅಥವಾ ರಕ್ಷಿಸಿಕೊಳ್ಳುವುದು ಅಫ್ಘಾನ್ ಸೇನೆಗೆ ಬಿಟ್ಟದ್ದು ಎಂದು ಅಮೆರಿಕಾ ಹೇಳಿದೆ.


ಇದನ್ನೂ ಓದಿ: ಅಫ್ಘಾನ್‌-ಪಾಕಿಸ್ತಾನದ ಪ್ರಮುಖ ಗಡಿ ಕ್ರಾಸಿಂಗ್‌‌‌ ತಾಲಿಬಾನ್ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...