Homeಅಂತರಾಷ್ಟ್ರೀಯಕಾಬೂಲ್ ಪ್ರವೇಶಿಸಿದ ತಾಲಿಬಾನ್: ರಾಜೀನಾಮೆಯತ್ತ ಅಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ

ಕಾಬೂಲ್ ಪ್ರವೇಶಿಸಿದ ತಾಲಿಬಾನ್: ರಾಜೀನಾಮೆಯತ್ತ ಅಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ

- Advertisement -
- Advertisement -

ತಾಲಿಬಾನ್ ಭಯೋತ್ಪಾದಕರು ಇಂದು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ಗೆ ಪ್ರವೇಶಿಸಿದ್ದಾರೆ. ಹಾಗಾಗಿ ಅಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ ಅವರು ರಾಜೀನಾಮೆ ನೀಡುವ ಸಾಧ್ಯತೆಗಳು ದಟ್ಟವಾಗಿವೆ. ಯಾವುದೇ ಹಿಂಸಾಚಾರಕ್ಕೆ ಆಸ್ಪದ ಕೊಡದಂತೆ ಅಧಿಕಾರ ಹಸ್ತಾಂತರಕ್ಕೆ ಒಪ್ಪಿಕೊಳ್ಳಲಾಗಿದೆ ಎಂದು ಹಂಗಾಮಿ ಆಂತರಿಕ ವ್ಯವಹಾರಗಳ ಸಚಿವ ಅಬ್ದುಲ್ ಸತ್ತಾರ್ ಮಿರ್ಜಕವಾಲ್ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ತಾಲಿಬಾನ್‌ ಬಂಡುಕೋರರು “ಎಲ್ಲಾ ಕಡೆಗಳಿಂದಲೂ” ರಾಜಧಾನಿಯನ್ನು ಪ್ರವೇಶಿಸುತ್ತಿದ್ದಾರೆ. ಸದ್ಯಕ್ಕೆ ಯಾವುದೇ ಹೋರಾಟಗಳು ವರದಿಯಾಗಿಲ್ಲ ಎಂದು ಆಂತರಿಕ ಸಚಿವಾಯಲದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಬೂಲ್‌ನ ಶಾಂತಿಯುತ ಶರಣಾಗತಿಗಾಗಿ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

20 ವರ್ಷಗಳ ಹಿಂದೆ ಅಮೆರಿಕಾವು ಕಾಬೂನ್‌ನಿಂದ ತಾಲಿಬಾನ್‌ಗಳನ್ನು ಹೊರಗಟ್ಟಿತ್ತು. ಅದಾದ ನಂತರ ಕಳೆದ ತಿಂಗಳು ಅಮೆರಿಕಾ ವಾಪಸ್ ಹೊರಟಿದೆ. ಈಗ ಸೆಪ್ಟೆಂಬರ್‌ 11ರ ದಾಳಿಯೊಂದಿಗೆ ತಾಲಿಬಾನ್‌ಗಳು ಕಾಬೂನ್‌ಗೆ ಪ್ರವೇಶಿಸಿದ್ದಾರೆ. ಅವರು ಶಾಂತಿಯುತ ಅಧಿಕಾರ ಹಸ್ತಾಂತರಕ್ಕೆ ಸರ್ಕಾರ ಒಪ್ಪಿಕೊಳ್ಳುವವರೆಗೂ ಕಾಬೂನ್‌ನ ಎಲ್ಲಾ ಪ್ರವೇಶದ್ವಾರಗಳಲ್ಲಿಯೂ ಮುತ್ತಿಗೆ ಹಾಕಲಿದ್ದಾರೆ ಎನ್ನಲಾಗಿದೆ.

ಅಫ್ಘಾನ್‌ ಪರಿಸ್ಥಿತಿಯ ಬಗ್ಗೆ ಸದ್ಯ ಅಧ್ಯಕ್ಷ ಅಶ್ರಫ್ ಘನಿ ಅವರಿಂದ ಯಾವುದೇ ತಕ್ಷಣದ ಮಾಹಿತಿ ದೊರಕಿಲ್ಲ. ಅವರು ಶನಿವಾರ ಸ್ಥಳೀಯ ನಾಯಕರು ಮತ್ತು ಅಂತಾರಾಷ್ಟ್ರೀಯ ಪಾಲುದಾರರೊಂದಿಗೆ ತುರ್ತು ಸಮಾಲೋಚನೆ ನಡೆಸಿದ್ದಾರೆ. ಅವರು ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಮತ್ತು ತಾಲಿಬಾನ್ ಕಮಾಂಡರ್ ಅಧಿಕಾರ ವಹಿಸಿಕೊಳ್ಳಲು ದಾರಿ ಮಾಡಿಕೊಡಲಿದ್ದಾರೆ ಎಂದು ವರದಿಗಳು ಹೇಳಿವೆ.

“ನಗರದ ಮೇಲೆ ದಾಳಿ ನಡೆಯುವುದಿಲ್ಲ, ಶಾಂತಿಯುತ ಹಸ್ತಾಂತರವನ್ನು ಒಪ್ಪಿಕೊಳ್ಳಲಾಗಿದೆ.” ಪರಿವರ್ತನೆಯ ಆಡಳಿತಕ್ಕೆ ಅಧಿಕಾರವನ್ನು ಹಸ್ತಾಂತರಿಸಲಾಗುವುದು ಎಂದು ಸರ್ಕಾರದ ಹಂಗಾಮಿ ಆಂತರಿಕ ಸಚಿವ ಅಬ್ದುಲ್ ಸತ್ತಾರ್ ಮಿರ್ಜಕವಾಲ್ ಹೇಳಿದ್ದಾರೆ.

ಕಾಬೂಲ್ ಸುತ್ತಮುತ್ತಲಿನ ಹಲವಾರು ಸ್ಥಳಗಳಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಆದರೆ ಭದ್ರತಾ ಪಡೆಗಳು ಮತ್ತು ಅಂತಾರಾಷ್ಟ್ರೀಯ ಪಾಲುದಾರರೊಂದಿಗಿನ ಸಮನ್ವಯದಿಂದ ನಗರದ ಮೇಲೆ ನಿಯಂತ್ರಣ ಹೊಂದಿದೆ ಎಂದು ಅಫ್ಘಾನ್‌ ಅಧ್ಯಕ್ಷೀಯ ಕಚೇರಿ ಟ್ವೀಟ್‌ ಮಾಡಿದೆ.

ಕಾಬೂಲ್‌ನ ಅನೇಕ ಬೀದಿಗಳು ಕಾರುಗಳಿಂದ ತುಂಬಿಹೋಗಿವೆ. ಜನರು ತಮ್ಮ ಸ್ವಂತ ಸ್ಥಳಗಳಿಗೆ ಧಾವಿಸುತ್ತಿದ್ದಾರೆ. ಹಲವರು ವಿಮಾನ ನಿಲ್ದಾಣವನ್ನು ತಲುಪಲು ಪ್ರಯತ್ನಿಸುತ್ತಿದ್ದಾರೆ. ಕೆಲವು ಜನರು ತಮ್ಮ ಕೀಗಳನ್ನು ಕಾರಿನಲ್ಲಿ ಬಿಟ್ಟು ವಿಮಾನ ನಿಲ್ದಾಣಕ್ಕೆ ನುಗ್ಗಲು ಆರಂಭಿಸಿದ್ದಾರೆ” ಎಂದು ನಿವಾಸಿಯೊಬ್ಬರು ರಾಯಿಟರ್ಸ್‌ಗೆ ಫೋನ್ ಮೂಲಕ ತಿಳಿಸಿದ್ದಾರೆ.

ಸರ್ಕಾರದ ಕೈಯಲ್ಲಿರುವ ಕಾಬೂಲ್‌ ಏರ್‌ಪೋರ್ಟ್‌ಅನ್ನು ಹೊರತು ಪಡಿಸಿದರೆ, ಜನರು ಅಫ್ಘಾನಿಸ್ಥಾನದಿಂದ ಹೊರ ಹೋಗಲು ಇರುವುದು ಒಂದೇ ದಾರಿ, ಅದು ಪಾಕಿಸ್ತಾನಕ್ಕೆ ಅಂಟಿಕೊಂಡಿರುವ ಟೋರ್ಖಾಮ್ ಗಡಿ ಪೋಸ್ಟ್. ಆದರೆ, ಅದನ್ನೂ ಸಹ ತಾಲಿಬಾನ್‌ ವಶಪಡಿಸಿಕೊಂಡಿದೆ.

ಉಳಿದಂತೆ, “ಜಲಾಲಾಬಾದ್‌ನಲ್ಲಿ ಯಾವುದೇ ಘರ್ಷಣೆಗಳು ನಡೆಯುತ್ತಿಲ್ಲ. ಏಕೆಂದರೆ, ಅಲ್ಲಿನ ರಾಜ್ಯಪಾಲರು ತಾಲಿಬಾನ್‌ಗೆ ಶರಣಾಗಿದ್ದಾರೆ.” ಎಂದು ಜಲಾಲಾಬಾದ್ ಮೂಲದ ಅಫ್ಘಾನ್ ಅಧಿಕಾರಿಯೊಬ್ಬರು ರಾಯಿಟರ್ಸ್‌ಗೆ ತಿಳಿಸಿದ್ದಾರೆ. “ಜನರ ಜೀವಗಳನ್ನು ಉಳಿಸಲು ತಾಲಿಬಾನ್‌ಗಳಿಗೆ ಅಧಿಕಾರ ನೀಡುವುದೊಂದೇ ಏಕೈಕ ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಕಳೆದ ತಿಂಗಳು ಯುಎಸ್ ನೇತೃತ್ವದ ಪಡೆಗಳು ಅಫ್ಘಾನ್‌ನಲ್ಲಿದ್ದ ತಮ್ಮ ಉಳಿದ ಸೈನ್ಯದ ಬಹುಭಾಗವನ್ನು ಹಿಂತೆಗೆದುಕೊಂಡವು. ನಂತರ ಅಫ್ಘಾನ್ ಮಿಲಿಟರಿಯ ರಕ್ಷಣೆ ವ್ಯವಸ್ಥೆ ಕುಸಿಯಲಾರಂಭಿಸಿದಂತೆ ಕಾಣತೊಡಗಿತು. ಈ ವೇಳೆಗೆ ತಾಲಿಬಾನ್ ಕಾರ್ಯಾಚರಣೆ ಚುರುಕುಗೊಂಡಿತು.

ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ಶನಿವಾರ ಅಫ್ಘಾನ್‌ನ ನಾಗರಿಕರನ್ನು ಸ್ಥಳಾಂತರಿಸಲು ಮತ್ತು ಸೇನಾ ಸಿಬ್ಬಂದಿಗಳ “ಕ್ರಮಬದ್ಧ ಮತ್ತು ಸುರಕ್ಷಿತ” ಮರಳುವಿಕೆಯನ್ನು ಖಚಿತಪಡಿಸಿಕೊಳ್ಳಲು 5,000 ಯುಎಸ್ ಸೈನಿಕರನ್ನು ನಿಯೋಜಿಸಲು ಸೇನೆಗೆ ಅಧಿಕಾರ ನೀಡಿದ್ದಾರೆ. ಹೀಗಾಗಿ, 1,000 ಸೈನಿಕರನ್ನು ನಿಯೋಜಿಸಲಾಗಿದೆ. ಅವರು ಅಫ್ಘಾನ್‌ ಏರ್‌ಪೋರ್ಟ್‌ನಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಯುಎಸ್ ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ತಾಲಿಬಾನ್ ಅಫಘಾನ್ ಜನರಿಂದ ಜನಪ್ರಿಯವಾಗಿ ಅಂಗೀಕರಿಸಲ್ಪಟ್ಟಿದೆ. ಅಫ್ಘಾನಿಸ್ತಾನಿಗಳು ಮತ್ತು ವಿದೇಶಿಯರಿಗೆ ಸುರಕ್ಷತೆಯ ಭರವಸೆ ನೀಡಿದೆ. ಅವರ ಜೀವನ, ಆಸ್ತಿ ಮತ್ತು ಗೌರವವನ್ನು ರಕ್ಷಿಸಲಾಗುತ್ತದೆ. ತನ್ನ ಪ್ರೀತಿಯ ರಾಷ್ಟ್ರದಲ್ಲಿ ಶಾಂತಿಯುತ ಮತ್ತು ಸುರಕ್ಷಿತ ವಾತಾವರಣವನ್ನು ಸೃಷ್ಟಿಸಲಾಗುತ್ತದೆ. ರಾಜತಾಂತ್ರಿಕರು ಮತ್ತು ಸಹಾಯ ಕಾರ್ಯಕರ್ತರು ಕೂಡ ಯಾವುದೇ ಸಮಸ್ಯೆಗಳನ್ನು ಎದುರಿಸುವುದಿಲ್ಲ” ಎಂದು ತಾಲಿಬಾನ್‌ ಶನಿವಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.

ಆಗಸ್ಟ್ 31 ರೊಳಗೆ ಅಫ್ಘಾನಿಸ್ತಾನದಲ್ಲಿ ಯುಎಸ್ ಮಿಲಿಟರಿ ಕಾರ್ಯಾಚರಣೆಯನ್ನು ಕೊನೆಗೊಳಿಸಲು ಅಮೆರಿಕಾದ ಹಿಂದಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಯೋಜಿಸಿದ್ದರು. ಅದೇ ನಿರ್ಧಾರಕ್ಕೆ ಈಗಿನ ಅಧ್ಯಕ್ಷ ಬೈಡನ್‌ ಕೂಡ ಅಂಟಿಕೊಂಡಿದ್ದಾರೆ. ತಾಲಿಬಾನ್‌ಗಳು ಊಹಿಸಿದ್ದಕ್ಕಿಂತ ವೇಗವಾಗಿ ನಗರವನ್ನು ವಶಪಡಿಸಿಕೊಂಡಿದ್ದಾರೆ. ತನ್ನದೇ ಪ್ರದೇಶವನ್ನು ಹಿಡಿದಿಟ್ಟುಕೊಳ್ಳುವ ಅಥವಾ ರಕ್ಷಿಸಿಕೊಳ್ಳುವುದು ಅಫ್ಘಾನ್ ಸೇನೆಗೆ ಬಿಟ್ಟದ್ದು ಎಂದು ಅಮೆರಿಕಾ ಹೇಳಿದೆ.


ಇದನ್ನೂ ಓದಿ: ಅಫ್ಘಾನ್‌-ಪಾಕಿಸ್ತಾನದ ಪ್ರಮುಖ ಗಡಿ ಕ್ರಾಸಿಂಗ್‌‌‌ ತಾಲಿಬಾನ್ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...