Homeಅಂತರಾಷ್ಟ್ರೀಯಕಾಬೂಲ್ ಪ್ರವೇಶಿಸಿದ ತಾಲಿಬಾನ್: ರಾಜೀನಾಮೆಯತ್ತ ಅಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ

ಕಾಬೂಲ್ ಪ್ರವೇಶಿಸಿದ ತಾಲಿಬಾನ್: ರಾಜೀನಾಮೆಯತ್ತ ಅಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ

- Advertisement -
- Advertisement -

ತಾಲಿಬಾನ್ ಭಯೋತ್ಪಾದಕರು ಇಂದು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ಗೆ ಪ್ರವೇಶಿಸಿದ್ದಾರೆ. ಹಾಗಾಗಿ ಅಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ ಅವರು ರಾಜೀನಾಮೆ ನೀಡುವ ಸಾಧ್ಯತೆಗಳು ದಟ್ಟವಾಗಿವೆ. ಯಾವುದೇ ಹಿಂಸಾಚಾರಕ್ಕೆ ಆಸ್ಪದ ಕೊಡದಂತೆ ಅಧಿಕಾರ ಹಸ್ತಾಂತರಕ್ಕೆ ಒಪ್ಪಿಕೊಳ್ಳಲಾಗಿದೆ ಎಂದು ಹಂಗಾಮಿ ಆಂತರಿಕ ವ್ಯವಹಾರಗಳ ಸಚಿವ ಅಬ್ದುಲ್ ಸತ್ತಾರ್ ಮಿರ್ಜಕವಾಲ್ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ತಾಲಿಬಾನ್‌ ಬಂಡುಕೋರರು “ಎಲ್ಲಾ ಕಡೆಗಳಿಂದಲೂ” ರಾಜಧಾನಿಯನ್ನು ಪ್ರವೇಶಿಸುತ್ತಿದ್ದಾರೆ. ಸದ್ಯಕ್ಕೆ ಯಾವುದೇ ಹೋರಾಟಗಳು ವರದಿಯಾಗಿಲ್ಲ ಎಂದು ಆಂತರಿಕ ಸಚಿವಾಯಲದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಬೂಲ್‌ನ ಶಾಂತಿಯುತ ಶರಣಾಗತಿಗಾಗಿ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

20 ವರ್ಷಗಳ ಹಿಂದೆ ಅಮೆರಿಕಾವು ಕಾಬೂನ್‌ನಿಂದ ತಾಲಿಬಾನ್‌ಗಳನ್ನು ಹೊರಗಟ್ಟಿತ್ತು. ಅದಾದ ನಂತರ ಕಳೆದ ತಿಂಗಳು ಅಮೆರಿಕಾ ವಾಪಸ್ ಹೊರಟಿದೆ. ಈಗ ಸೆಪ್ಟೆಂಬರ್‌ 11ರ ದಾಳಿಯೊಂದಿಗೆ ತಾಲಿಬಾನ್‌ಗಳು ಕಾಬೂನ್‌ಗೆ ಪ್ರವೇಶಿಸಿದ್ದಾರೆ. ಅವರು ಶಾಂತಿಯುತ ಅಧಿಕಾರ ಹಸ್ತಾಂತರಕ್ಕೆ ಸರ್ಕಾರ ಒಪ್ಪಿಕೊಳ್ಳುವವರೆಗೂ ಕಾಬೂನ್‌ನ ಎಲ್ಲಾ ಪ್ರವೇಶದ್ವಾರಗಳಲ್ಲಿಯೂ ಮುತ್ತಿಗೆ ಹಾಕಲಿದ್ದಾರೆ ಎನ್ನಲಾಗಿದೆ.

ಅಫ್ಘಾನ್‌ ಪರಿಸ್ಥಿತಿಯ ಬಗ್ಗೆ ಸದ್ಯ ಅಧ್ಯಕ್ಷ ಅಶ್ರಫ್ ಘನಿ ಅವರಿಂದ ಯಾವುದೇ ತಕ್ಷಣದ ಮಾಹಿತಿ ದೊರಕಿಲ್ಲ. ಅವರು ಶನಿವಾರ ಸ್ಥಳೀಯ ನಾಯಕರು ಮತ್ತು ಅಂತಾರಾಷ್ಟ್ರೀಯ ಪಾಲುದಾರರೊಂದಿಗೆ ತುರ್ತು ಸಮಾಲೋಚನೆ ನಡೆಸಿದ್ದಾರೆ. ಅವರು ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಮತ್ತು ತಾಲಿಬಾನ್ ಕಮಾಂಡರ್ ಅಧಿಕಾರ ವಹಿಸಿಕೊಳ್ಳಲು ದಾರಿ ಮಾಡಿಕೊಡಲಿದ್ದಾರೆ ಎಂದು ವರದಿಗಳು ಹೇಳಿವೆ.

“ನಗರದ ಮೇಲೆ ದಾಳಿ ನಡೆಯುವುದಿಲ್ಲ, ಶಾಂತಿಯುತ ಹಸ್ತಾಂತರವನ್ನು ಒಪ್ಪಿಕೊಳ್ಳಲಾಗಿದೆ.” ಪರಿವರ್ತನೆಯ ಆಡಳಿತಕ್ಕೆ ಅಧಿಕಾರವನ್ನು ಹಸ್ತಾಂತರಿಸಲಾಗುವುದು ಎಂದು ಸರ್ಕಾರದ ಹಂಗಾಮಿ ಆಂತರಿಕ ಸಚಿವ ಅಬ್ದುಲ್ ಸತ್ತಾರ್ ಮಿರ್ಜಕವಾಲ್ ಹೇಳಿದ್ದಾರೆ.

ಕಾಬೂಲ್ ಸುತ್ತಮುತ್ತಲಿನ ಹಲವಾರು ಸ್ಥಳಗಳಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಆದರೆ ಭದ್ರತಾ ಪಡೆಗಳು ಮತ್ತು ಅಂತಾರಾಷ್ಟ್ರೀಯ ಪಾಲುದಾರರೊಂದಿಗಿನ ಸಮನ್ವಯದಿಂದ ನಗರದ ಮೇಲೆ ನಿಯಂತ್ರಣ ಹೊಂದಿದೆ ಎಂದು ಅಫ್ಘಾನ್‌ ಅಧ್ಯಕ್ಷೀಯ ಕಚೇರಿ ಟ್ವೀಟ್‌ ಮಾಡಿದೆ.

ಕಾಬೂಲ್‌ನ ಅನೇಕ ಬೀದಿಗಳು ಕಾರುಗಳಿಂದ ತುಂಬಿಹೋಗಿವೆ. ಜನರು ತಮ್ಮ ಸ್ವಂತ ಸ್ಥಳಗಳಿಗೆ ಧಾವಿಸುತ್ತಿದ್ದಾರೆ. ಹಲವರು ವಿಮಾನ ನಿಲ್ದಾಣವನ್ನು ತಲುಪಲು ಪ್ರಯತ್ನಿಸುತ್ತಿದ್ದಾರೆ. ಕೆಲವು ಜನರು ತಮ್ಮ ಕೀಗಳನ್ನು ಕಾರಿನಲ್ಲಿ ಬಿಟ್ಟು ವಿಮಾನ ನಿಲ್ದಾಣಕ್ಕೆ ನುಗ್ಗಲು ಆರಂಭಿಸಿದ್ದಾರೆ” ಎಂದು ನಿವಾಸಿಯೊಬ್ಬರು ರಾಯಿಟರ್ಸ್‌ಗೆ ಫೋನ್ ಮೂಲಕ ತಿಳಿಸಿದ್ದಾರೆ.

ಸರ್ಕಾರದ ಕೈಯಲ್ಲಿರುವ ಕಾಬೂಲ್‌ ಏರ್‌ಪೋರ್ಟ್‌ಅನ್ನು ಹೊರತು ಪಡಿಸಿದರೆ, ಜನರು ಅಫ್ಘಾನಿಸ್ಥಾನದಿಂದ ಹೊರ ಹೋಗಲು ಇರುವುದು ಒಂದೇ ದಾರಿ, ಅದು ಪಾಕಿಸ್ತಾನಕ್ಕೆ ಅಂಟಿಕೊಂಡಿರುವ ಟೋರ್ಖಾಮ್ ಗಡಿ ಪೋಸ್ಟ್. ಆದರೆ, ಅದನ್ನೂ ಸಹ ತಾಲಿಬಾನ್‌ ವಶಪಡಿಸಿಕೊಂಡಿದೆ.

ಉಳಿದಂತೆ, “ಜಲಾಲಾಬಾದ್‌ನಲ್ಲಿ ಯಾವುದೇ ಘರ್ಷಣೆಗಳು ನಡೆಯುತ್ತಿಲ್ಲ. ಏಕೆಂದರೆ, ಅಲ್ಲಿನ ರಾಜ್ಯಪಾಲರು ತಾಲಿಬಾನ್‌ಗೆ ಶರಣಾಗಿದ್ದಾರೆ.” ಎಂದು ಜಲಾಲಾಬಾದ್ ಮೂಲದ ಅಫ್ಘಾನ್ ಅಧಿಕಾರಿಯೊಬ್ಬರು ರಾಯಿಟರ್ಸ್‌ಗೆ ತಿಳಿಸಿದ್ದಾರೆ. “ಜನರ ಜೀವಗಳನ್ನು ಉಳಿಸಲು ತಾಲಿಬಾನ್‌ಗಳಿಗೆ ಅಧಿಕಾರ ನೀಡುವುದೊಂದೇ ಏಕೈಕ ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಕಳೆದ ತಿಂಗಳು ಯುಎಸ್ ನೇತೃತ್ವದ ಪಡೆಗಳು ಅಫ್ಘಾನ್‌ನಲ್ಲಿದ್ದ ತಮ್ಮ ಉಳಿದ ಸೈನ್ಯದ ಬಹುಭಾಗವನ್ನು ಹಿಂತೆಗೆದುಕೊಂಡವು. ನಂತರ ಅಫ್ಘಾನ್ ಮಿಲಿಟರಿಯ ರಕ್ಷಣೆ ವ್ಯವಸ್ಥೆ ಕುಸಿಯಲಾರಂಭಿಸಿದಂತೆ ಕಾಣತೊಡಗಿತು. ಈ ವೇಳೆಗೆ ತಾಲಿಬಾನ್ ಕಾರ್ಯಾಚರಣೆ ಚುರುಕುಗೊಂಡಿತು.

ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ಶನಿವಾರ ಅಫ್ಘಾನ್‌ನ ನಾಗರಿಕರನ್ನು ಸ್ಥಳಾಂತರಿಸಲು ಮತ್ತು ಸೇನಾ ಸಿಬ್ಬಂದಿಗಳ “ಕ್ರಮಬದ್ಧ ಮತ್ತು ಸುರಕ್ಷಿತ” ಮರಳುವಿಕೆಯನ್ನು ಖಚಿತಪಡಿಸಿಕೊಳ್ಳಲು 5,000 ಯುಎಸ್ ಸೈನಿಕರನ್ನು ನಿಯೋಜಿಸಲು ಸೇನೆಗೆ ಅಧಿಕಾರ ನೀಡಿದ್ದಾರೆ. ಹೀಗಾಗಿ, 1,000 ಸೈನಿಕರನ್ನು ನಿಯೋಜಿಸಲಾಗಿದೆ. ಅವರು ಅಫ್ಘಾನ್‌ ಏರ್‌ಪೋರ್ಟ್‌ನಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಯುಎಸ್ ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ತಾಲಿಬಾನ್ ಅಫಘಾನ್ ಜನರಿಂದ ಜನಪ್ರಿಯವಾಗಿ ಅಂಗೀಕರಿಸಲ್ಪಟ್ಟಿದೆ. ಅಫ್ಘಾನಿಸ್ತಾನಿಗಳು ಮತ್ತು ವಿದೇಶಿಯರಿಗೆ ಸುರಕ್ಷತೆಯ ಭರವಸೆ ನೀಡಿದೆ. ಅವರ ಜೀವನ, ಆಸ್ತಿ ಮತ್ತು ಗೌರವವನ್ನು ರಕ್ಷಿಸಲಾಗುತ್ತದೆ. ತನ್ನ ಪ್ರೀತಿಯ ರಾಷ್ಟ್ರದಲ್ಲಿ ಶಾಂತಿಯುತ ಮತ್ತು ಸುರಕ್ಷಿತ ವಾತಾವರಣವನ್ನು ಸೃಷ್ಟಿಸಲಾಗುತ್ತದೆ. ರಾಜತಾಂತ್ರಿಕರು ಮತ್ತು ಸಹಾಯ ಕಾರ್ಯಕರ್ತರು ಕೂಡ ಯಾವುದೇ ಸಮಸ್ಯೆಗಳನ್ನು ಎದುರಿಸುವುದಿಲ್ಲ” ಎಂದು ತಾಲಿಬಾನ್‌ ಶನಿವಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.

ಆಗಸ್ಟ್ 31 ರೊಳಗೆ ಅಫ್ಘಾನಿಸ್ತಾನದಲ್ಲಿ ಯುಎಸ್ ಮಿಲಿಟರಿ ಕಾರ್ಯಾಚರಣೆಯನ್ನು ಕೊನೆಗೊಳಿಸಲು ಅಮೆರಿಕಾದ ಹಿಂದಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಯೋಜಿಸಿದ್ದರು. ಅದೇ ನಿರ್ಧಾರಕ್ಕೆ ಈಗಿನ ಅಧ್ಯಕ್ಷ ಬೈಡನ್‌ ಕೂಡ ಅಂಟಿಕೊಂಡಿದ್ದಾರೆ. ತಾಲಿಬಾನ್‌ಗಳು ಊಹಿಸಿದ್ದಕ್ಕಿಂತ ವೇಗವಾಗಿ ನಗರವನ್ನು ವಶಪಡಿಸಿಕೊಂಡಿದ್ದಾರೆ. ತನ್ನದೇ ಪ್ರದೇಶವನ್ನು ಹಿಡಿದಿಟ್ಟುಕೊಳ್ಳುವ ಅಥವಾ ರಕ್ಷಿಸಿಕೊಳ್ಳುವುದು ಅಫ್ಘಾನ್ ಸೇನೆಗೆ ಬಿಟ್ಟದ್ದು ಎಂದು ಅಮೆರಿಕಾ ಹೇಳಿದೆ.


ಇದನ್ನೂ ಓದಿ: ಅಫ್ಘಾನ್‌-ಪಾಕಿಸ್ತಾನದ ಪ್ರಮುಖ ಗಡಿ ಕ್ರಾಸಿಂಗ್‌‌‌ ತಾಲಿಬಾನ್ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...