Homeಅಂತರಾಷ್ಟ್ರೀಯಕಾಬೂಲ್ ಪ್ರವೇಶಿಸಿದ ತಾಲಿಬಾನ್: ರಾಜೀನಾಮೆಯತ್ತ ಅಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ

ಕಾಬೂಲ್ ಪ್ರವೇಶಿಸಿದ ತಾಲಿಬಾನ್: ರಾಜೀನಾಮೆಯತ್ತ ಅಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ

- Advertisement -
- Advertisement -

ತಾಲಿಬಾನ್ ಭಯೋತ್ಪಾದಕರು ಇಂದು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ಗೆ ಪ್ರವೇಶಿಸಿದ್ದಾರೆ. ಹಾಗಾಗಿ ಅಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ ಅವರು ರಾಜೀನಾಮೆ ನೀಡುವ ಸಾಧ್ಯತೆಗಳು ದಟ್ಟವಾಗಿವೆ. ಯಾವುದೇ ಹಿಂಸಾಚಾರಕ್ಕೆ ಆಸ್ಪದ ಕೊಡದಂತೆ ಅಧಿಕಾರ ಹಸ್ತಾಂತರಕ್ಕೆ ಒಪ್ಪಿಕೊಳ್ಳಲಾಗಿದೆ ಎಂದು ಹಂಗಾಮಿ ಆಂತರಿಕ ವ್ಯವಹಾರಗಳ ಸಚಿವ ಅಬ್ದುಲ್ ಸತ್ತಾರ್ ಮಿರ್ಜಕವಾಲ್ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ತಾಲಿಬಾನ್‌ ಬಂಡುಕೋರರು “ಎಲ್ಲಾ ಕಡೆಗಳಿಂದಲೂ” ರಾಜಧಾನಿಯನ್ನು ಪ್ರವೇಶಿಸುತ್ತಿದ್ದಾರೆ. ಸದ್ಯಕ್ಕೆ ಯಾವುದೇ ಹೋರಾಟಗಳು ವರದಿಯಾಗಿಲ್ಲ ಎಂದು ಆಂತರಿಕ ಸಚಿವಾಯಲದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಬೂಲ್‌ನ ಶಾಂತಿಯುತ ಶರಣಾಗತಿಗಾಗಿ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

20 ವರ್ಷಗಳ ಹಿಂದೆ ಅಮೆರಿಕಾವು ಕಾಬೂನ್‌ನಿಂದ ತಾಲಿಬಾನ್‌ಗಳನ್ನು ಹೊರಗಟ್ಟಿತ್ತು. ಅದಾದ ನಂತರ ಕಳೆದ ತಿಂಗಳು ಅಮೆರಿಕಾ ವಾಪಸ್ ಹೊರಟಿದೆ. ಈಗ ಸೆಪ್ಟೆಂಬರ್‌ 11ರ ದಾಳಿಯೊಂದಿಗೆ ತಾಲಿಬಾನ್‌ಗಳು ಕಾಬೂನ್‌ಗೆ ಪ್ರವೇಶಿಸಿದ್ದಾರೆ. ಅವರು ಶಾಂತಿಯುತ ಅಧಿಕಾರ ಹಸ್ತಾಂತರಕ್ಕೆ ಸರ್ಕಾರ ಒಪ್ಪಿಕೊಳ್ಳುವವರೆಗೂ ಕಾಬೂನ್‌ನ ಎಲ್ಲಾ ಪ್ರವೇಶದ್ವಾರಗಳಲ್ಲಿಯೂ ಮುತ್ತಿಗೆ ಹಾಕಲಿದ್ದಾರೆ ಎನ್ನಲಾಗಿದೆ.

ಅಫ್ಘಾನ್‌ ಪರಿಸ್ಥಿತಿಯ ಬಗ್ಗೆ ಸದ್ಯ ಅಧ್ಯಕ್ಷ ಅಶ್ರಫ್ ಘನಿ ಅವರಿಂದ ಯಾವುದೇ ತಕ್ಷಣದ ಮಾಹಿತಿ ದೊರಕಿಲ್ಲ. ಅವರು ಶನಿವಾರ ಸ್ಥಳೀಯ ನಾಯಕರು ಮತ್ತು ಅಂತಾರಾಷ್ಟ್ರೀಯ ಪಾಲುದಾರರೊಂದಿಗೆ ತುರ್ತು ಸಮಾಲೋಚನೆ ನಡೆಸಿದ್ದಾರೆ. ಅವರು ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಮತ್ತು ತಾಲಿಬಾನ್ ಕಮಾಂಡರ್ ಅಧಿಕಾರ ವಹಿಸಿಕೊಳ್ಳಲು ದಾರಿ ಮಾಡಿಕೊಡಲಿದ್ದಾರೆ ಎಂದು ವರದಿಗಳು ಹೇಳಿವೆ.

“ನಗರದ ಮೇಲೆ ದಾಳಿ ನಡೆಯುವುದಿಲ್ಲ, ಶಾಂತಿಯುತ ಹಸ್ತಾಂತರವನ್ನು ಒಪ್ಪಿಕೊಳ್ಳಲಾಗಿದೆ.” ಪರಿವರ್ತನೆಯ ಆಡಳಿತಕ್ಕೆ ಅಧಿಕಾರವನ್ನು ಹಸ್ತಾಂತರಿಸಲಾಗುವುದು ಎಂದು ಸರ್ಕಾರದ ಹಂಗಾಮಿ ಆಂತರಿಕ ಸಚಿವ ಅಬ್ದುಲ್ ಸತ್ತಾರ್ ಮಿರ್ಜಕವಾಲ್ ಹೇಳಿದ್ದಾರೆ.

ಕಾಬೂಲ್ ಸುತ್ತಮುತ್ತಲಿನ ಹಲವಾರು ಸ್ಥಳಗಳಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಆದರೆ ಭದ್ರತಾ ಪಡೆಗಳು ಮತ್ತು ಅಂತಾರಾಷ್ಟ್ರೀಯ ಪಾಲುದಾರರೊಂದಿಗಿನ ಸಮನ್ವಯದಿಂದ ನಗರದ ಮೇಲೆ ನಿಯಂತ್ರಣ ಹೊಂದಿದೆ ಎಂದು ಅಫ್ಘಾನ್‌ ಅಧ್ಯಕ್ಷೀಯ ಕಚೇರಿ ಟ್ವೀಟ್‌ ಮಾಡಿದೆ.

ಕಾಬೂಲ್‌ನ ಅನೇಕ ಬೀದಿಗಳು ಕಾರುಗಳಿಂದ ತುಂಬಿಹೋಗಿವೆ. ಜನರು ತಮ್ಮ ಸ್ವಂತ ಸ್ಥಳಗಳಿಗೆ ಧಾವಿಸುತ್ತಿದ್ದಾರೆ. ಹಲವರು ವಿಮಾನ ನಿಲ್ದಾಣವನ್ನು ತಲುಪಲು ಪ್ರಯತ್ನಿಸುತ್ತಿದ್ದಾರೆ. ಕೆಲವು ಜನರು ತಮ್ಮ ಕೀಗಳನ್ನು ಕಾರಿನಲ್ಲಿ ಬಿಟ್ಟು ವಿಮಾನ ನಿಲ್ದಾಣಕ್ಕೆ ನುಗ್ಗಲು ಆರಂಭಿಸಿದ್ದಾರೆ” ಎಂದು ನಿವಾಸಿಯೊಬ್ಬರು ರಾಯಿಟರ್ಸ್‌ಗೆ ಫೋನ್ ಮೂಲಕ ತಿಳಿಸಿದ್ದಾರೆ.

ಸರ್ಕಾರದ ಕೈಯಲ್ಲಿರುವ ಕಾಬೂಲ್‌ ಏರ್‌ಪೋರ್ಟ್‌ಅನ್ನು ಹೊರತು ಪಡಿಸಿದರೆ, ಜನರು ಅಫ್ಘಾನಿಸ್ಥಾನದಿಂದ ಹೊರ ಹೋಗಲು ಇರುವುದು ಒಂದೇ ದಾರಿ, ಅದು ಪಾಕಿಸ್ತಾನಕ್ಕೆ ಅಂಟಿಕೊಂಡಿರುವ ಟೋರ್ಖಾಮ್ ಗಡಿ ಪೋಸ್ಟ್. ಆದರೆ, ಅದನ್ನೂ ಸಹ ತಾಲಿಬಾನ್‌ ವಶಪಡಿಸಿಕೊಂಡಿದೆ.

ಉಳಿದಂತೆ, “ಜಲಾಲಾಬಾದ್‌ನಲ್ಲಿ ಯಾವುದೇ ಘರ್ಷಣೆಗಳು ನಡೆಯುತ್ತಿಲ್ಲ. ಏಕೆಂದರೆ, ಅಲ್ಲಿನ ರಾಜ್ಯಪಾಲರು ತಾಲಿಬಾನ್‌ಗೆ ಶರಣಾಗಿದ್ದಾರೆ.” ಎಂದು ಜಲಾಲಾಬಾದ್ ಮೂಲದ ಅಫ್ಘಾನ್ ಅಧಿಕಾರಿಯೊಬ್ಬರು ರಾಯಿಟರ್ಸ್‌ಗೆ ತಿಳಿಸಿದ್ದಾರೆ. “ಜನರ ಜೀವಗಳನ್ನು ಉಳಿಸಲು ತಾಲಿಬಾನ್‌ಗಳಿಗೆ ಅಧಿಕಾರ ನೀಡುವುದೊಂದೇ ಏಕೈಕ ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಕಳೆದ ತಿಂಗಳು ಯುಎಸ್ ನೇತೃತ್ವದ ಪಡೆಗಳು ಅಫ್ಘಾನ್‌ನಲ್ಲಿದ್ದ ತಮ್ಮ ಉಳಿದ ಸೈನ್ಯದ ಬಹುಭಾಗವನ್ನು ಹಿಂತೆಗೆದುಕೊಂಡವು. ನಂತರ ಅಫ್ಘಾನ್ ಮಿಲಿಟರಿಯ ರಕ್ಷಣೆ ವ್ಯವಸ್ಥೆ ಕುಸಿಯಲಾರಂಭಿಸಿದಂತೆ ಕಾಣತೊಡಗಿತು. ಈ ವೇಳೆಗೆ ತಾಲಿಬಾನ್ ಕಾರ್ಯಾಚರಣೆ ಚುರುಕುಗೊಂಡಿತು.

ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ಶನಿವಾರ ಅಫ್ಘಾನ್‌ನ ನಾಗರಿಕರನ್ನು ಸ್ಥಳಾಂತರಿಸಲು ಮತ್ತು ಸೇನಾ ಸಿಬ್ಬಂದಿಗಳ “ಕ್ರಮಬದ್ಧ ಮತ್ತು ಸುರಕ್ಷಿತ” ಮರಳುವಿಕೆಯನ್ನು ಖಚಿತಪಡಿಸಿಕೊಳ್ಳಲು 5,000 ಯುಎಸ್ ಸೈನಿಕರನ್ನು ನಿಯೋಜಿಸಲು ಸೇನೆಗೆ ಅಧಿಕಾರ ನೀಡಿದ್ದಾರೆ. ಹೀಗಾಗಿ, 1,000 ಸೈನಿಕರನ್ನು ನಿಯೋಜಿಸಲಾಗಿದೆ. ಅವರು ಅಫ್ಘಾನ್‌ ಏರ್‌ಪೋರ್ಟ್‌ನಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಯುಎಸ್ ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ತಾಲಿಬಾನ್ ಅಫಘಾನ್ ಜನರಿಂದ ಜನಪ್ರಿಯವಾಗಿ ಅಂಗೀಕರಿಸಲ್ಪಟ್ಟಿದೆ. ಅಫ್ಘಾನಿಸ್ತಾನಿಗಳು ಮತ್ತು ವಿದೇಶಿಯರಿಗೆ ಸುರಕ್ಷತೆಯ ಭರವಸೆ ನೀಡಿದೆ. ಅವರ ಜೀವನ, ಆಸ್ತಿ ಮತ್ತು ಗೌರವವನ್ನು ರಕ್ಷಿಸಲಾಗುತ್ತದೆ. ತನ್ನ ಪ್ರೀತಿಯ ರಾಷ್ಟ್ರದಲ್ಲಿ ಶಾಂತಿಯುತ ಮತ್ತು ಸುರಕ್ಷಿತ ವಾತಾವರಣವನ್ನು ಸೃಷ್ಟಿಸಲಾಗುತ್ತದೆ. ರಾಜತಾಂತ್ರಿಕರು ಮತ್ತು ಸಹಾಯ ಕಾರ್ಯಕರ್ತರು ಕೂಡ ಯಾವುದೇ ಸಮಸ್ಯೆಗಳನ್ನು ಎದುರಿಸುವುದಿಲ್ಲ” ಎಂದು ತಾಲಿಬಾನ್‌ ಶನಿವಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.

ಆಗಸ್ಟ್ 31 ರೊಳಗೆ ಅಫ್ಘಾನಿಸ್ತಾನದಲ್ಲಿ ಯುಎಸ್ ಮಿಲಿಟರಿ ಕಾರ್ಯಾಚರಣೆಯನ್ನು ಕೊನೆಗೊಳಿಸಲು ಅಮೆರಿಕಾದ ಹಿಂದಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಯೋಜಿಸಿದ್ದರು. ಅದೇ ನಿರ್ಧಾರಕ್ಕೆ ಈಗಿನ ಅಧ್ಯಕ್ಷ ಬೈಡನ್‌ ಕೂಡ ಅಂಟಿಕೊಂಡಿದ್ದಾರೆ. ತಾಲಿಬಾನ್‌ಗಳು ಊಹಿಸಿದ್ದಕ್ಕಿಂತ ವೇಗವಾಗಿ ನಗರವನ್ನು ವಶಪಡಿಸಿಕೊಂಡಿದ್ದಾರೆ. ತನ್ನದೇ ಪ್ರದೇಶವನ್ನು ಹಿಡಿದಿಟ್ಟುಕೊಳ್ಳುವ ಅಥವಾ ರಕ್ಷಿಸಿಕೊಳ್ಳುವುದು ಅಫ್ಘಾನ್ ಸೇನೆಗೆ ಬಿಟ್ಟದ್ದು ಎಂದು ಅಮೆರಿಕಾ ಹೇಳಿದೆ.


ಇದನ್ನೂ ಓದಿ: ಅಫ್ಘಾನ್‌-ಪಾಕಿಸ್ತಾನದ ಪ್ರಮುಖ ಗಡಿ ಕ್ರಾಸಿಂಗ್‌‌‌ ತಾಲಿಬಾನ್ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...