Homeಅಂತರಾಷ್ಟ್ರೀಯತಾಲಿಬಾನ್ ಆಕ್ರಮಣ: ತಜಕಿಸ್ತಾನದಲ್ಲಿ ರಕ್ಷಣೆ ಪಡೆದ 1000 ಕ್ಕೂ ಹೆಚ್ಚು ಅಫ್ಘಾನ್ ಸೈನಿಕರು

ತಾಲಿಬಾನ್ ಆಕ್ರಮಣ: ತಜಕಿಸ್ತಾನದಲ್ಲಿ ರಕ್ಷಣೆ ಪಡೆದ 1000 ಕ್ಕೂ ಹೆಚ್ಚು ಅಫ್ಘಾನ್ ಸೈನಿಕರು

- Advertisement -
- Advertisement -

ಅಫ್ಘಾನಿಸ್ತಾನದಿಂದ ಅಮೆರಿಕ ಸೈನ್ಯವನ್ನು ಹಿಂತೆಗೆಯುತ್ತಿದ್ದಂತೆ ತಾಲಿಬಾನ್‌ ಮತ್ತು ಅಫ್ಘಾನ್ ಪಡೆಗಳ ನಡುವೆ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ಉತ್ತರ ಪ್ರಾಂತ್ಯಗಳಲ್ಲಿ  ತಾಲಿಬಾನ್ ತನ್ನ ಚಟುವಟಿಕೆಗಳನ್ನು ತೀವ್ರಗೊಳಿಸಿದ್ದು ಅಫ್ಘಾನ್ ಪಡೆಗಳ ಮೇಲೆ ದಾಳಿ ನಡೆಸುತ್ತಿದೆ. ಸೋಮವಾರ ತಾಲಿಬಾನ್‌ ದಾಳಿಯಿಂದ ತಪ್ಪಿಸಿಕೊಳ್ಳಲು ಅಫ್ಘಾನ್ ಪಡೆಗೆ ಸೇರಿದ 1000 ಕ್ಕೂ ಹೆಚ್ಚು ಸೈನಿಕರು ಪಕ್ಕದ ದೇಶ ತಜಕಿಸ್ತಾನದಲ್ಲಿ ರಕ್ಷಣೆಯನ್ನು ಪಡೆದುಕೊಂಡಿದ್ದಾರೆ.

ಉತ್ತರ ಅಫ್ಘಾನಿಸ್ತಾನದ ಗ್ರಾಮೀಣ ಪ್ರಾಂತ್ಯಗಳಲ್ಲಿ ತಾಲಿಬಾನ್ ಪ್ರಾಬಲ್ಯವನ್ನು ಮುರಿಯಲು ಅಫ್ಘಾನಿಸ್ತಾನ ಮತ್ತು ಅಮೆರಿಕ ಪಡೆಗಳು ಇಷ್ಟು ವರ್ಷ ಹೋರಾಟ ನಡೆಸಿದ್ದವು. ಅಫ್ಘಾನ್ ನಲ್ಲಿನ ಅಮೆರಿಕಾ ಸೇನಾಪಡೆಯ ಕೇಂದ್ರ ಸ್ಥಾನವಾದ ಬಗ್ರಾಮ್ ವಾಯುನೆಲೆಯನ್ನು ಅಫ್ಘಾನ್ ಪಡೆಗಳಿಗೆ ಹಸ್ತಾಂತರಿಸಿರುವುದಾಗಿ ಅಮೆರಿಕ ಕಳೆದ ಶುಕ್ರವಾರ ಘೋಷಿಸಿತ್ತು. ಇದಾದ ಎರಡು ದಿನಗಳ ಬೆನ್ನಲ್ಲೇ ತಾಲಿಬಾನ್ ದಾಳಿ ತೀವ್ರಗೊಂಡಿದ್ದು ಅಫ್ಘಾನ್ ಸೇನಾಪಡೆಗಳು ಅನೇಕ ಕಡೆ ಹಿಮ್ಮೆಟ್ಟುತ್ತಿವೆ. ಪರಿಣಾಮವಾಗಿ ಸೋಮವಾರ 1,000ಕ್ಕೂ ಹೆಚ್ಚು ಅಫ್ಘಾನ್ ಸೈನಿಕರು ನೆರೆಯ ತಜಕಿಸ್ತಾನ ರಾಷ್ಟ್ರದಲ್ಲಿ ರಕ್ಷಣೆ ಪಡೆಯುವ ಸಂದರ್ಭ ಬಂದೊದಗಿದೆ.

1,037 ಅಫ್ಘಾನ್ ಸೈನಿಕರಿಗೆ ತಮ್ಮ ದೇಶದಲ್ಲಿ ರಕ್ಷಣೆಯನ್ನು ನೀಡಲಾಗಿದೆ. ತಾಲಿಬಾನ್ ಪಡೆಯಿಂದ ರಕ್ಷಣೆಯನ್ನು ಪಡೆಯಲು ಸೈನಿಕರು ತಜಕಿಸ್ತಾನ ಗಡಿ ದಾಟಿ ದೇಶದೊಳಗೆ ಪ್ರವೇಶಿಸಿದ್ದಾರೆ. ನೆರೆಹೊರೆಯ ರಾಷ್ಟ್ರಗಳಿಂದ ಉತ್ತಮ ಬಾಂಧವ್ಯವನ್ನು ಹೊಂದುವ ದೃಷ್ಟಿಯಿಂದ ಈ ನಿರ್ಧಾರವನ್ನು ಕೈಗೊಂಡಿದೆ ಎಂದು  ತಜಕಿಸ್ತಾನ ಸರ್ಕಾರ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ.

ಉತ್ತರ ಪ್ರಾಂತ್ಯದ ಗಡಿ ವಲಯದಲ್ಲಿ ಅಫ್ಘಾನ್ ಪಡೆಗಳ ಮಿಲಿಟರಿ ಪೂರೈಕೆ ವ್ಯವಸ್ಥೆಗೆ ತೀವ್ರ ಹೊಡೆತ ಉಂಟಾಗಿದೆ. ತಾಲಿಬಾನ್ ದಾಳಿಗೆ ಅಫ್ಘಾನ್ ಪಡೆಗಳು ತತ್ತರಿಸುತ್ತಿವೆ. ಹಲವಾರು ಭಾಗಗಳಲ್ಲಿ ಸೈನಿಕರು ಒಂದೇ ಒಂದು ಗುಂಡನ್ನು ಸಿಡಿಸದೇ ಶರಣಾಗುತ್ತಿದ್ದಾರೆ. ಅಫ್ಘಾನ್ ಸೈನಿಕರ ನೈತಿಕರ ಸ್ಥೈರ್ಯ ತೀವ್ರವಾಗಿ ಕುಸಿದಿದೆ ಎಂದು ಮಿಲಿಟರಿ ತಜ್ಞರಾದ ಅತ್ತಾ ನೂರಿ ಕಾಬುಲ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದಲ್ಲಿ ಭೀಕರ ರೈಲು ಅಪಘಾತ: ಮೃತರ ಸಂಖ್ಯೆ 62ಕ್ಕೆ ಏರಿಕೆ, 100ಕ್ಕೂ ಹೆಚ್ಚು ಗಾಯಾಳುಗಳು

ತಾಲಿಬಾನ್‌ ಆಕ್ರಮಣದ ವೇಗ ಮತ್ತು ಹೆಚ್ಚು ಹೆಚ್ಚು ಪ್ರದೇಶಗಳನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಲುತ್ತಿರುವುದು ಅಫ್ಘಾನ್ ಪಡೆಗಳನ್ನು ಮಾನಸಿಕವಾಗಿ ಕುಗ್ಗಿಸಿದೆ. 1990 ರಿಂದಲೂ ಉತ್ತರ ಅಫ್ಘಾನ್ ಪ್ರಾಂತ್ಯ ತಾಲಿಬಾನ್ ವಿರೋಧಿ ಮೈತ್ರಿಪಡೆಗಳ ನಿಯಂತ್ರಣದಲ್ಲಿದ್ದು ಈಗ ಆ ಪ್ರದೇಶದಲ್ಲಿ ತಾಲಿಬಾನ್‌ ಕೈಮೇಲಾಗುತ್ತಿರುವುದು ಆತಂಕವನ್ನು ಸೃಷ್ಟಿಸಿದೆ.

ಅಫ್ಘಾನ್ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು ಸರ್ಕಾರ ಮತ್ತು ಅಂತರಾಷ್ಟ್ರೀಯ ಸಮುದಾಯ ಅಫ್ಘಾನಿಸ್ತಾನದ ಜೊತೆಗೆ ನಿಂತರೆ ಮಾತ್ರ ಹೆಚ್ಚುತ್ತಿರುವ ತಾಲಿಬಾನ್ ಪ್ರಾಬಲ್ಯವನ್ನು ಹಿಮ್ಮೆಟ್ಟಿಸಲು ಸಾಧ್ಯ ಎಂದು ಅತ್ತ ನೂರಿ ಅಭಿಪ್ರಾಯಪಟ್ಟಿದ್ದಾರೆ.

ಉತ್ತರ ಅಫ್ಘಾನಿಸ್ತಾನದಲ್ಲಷ್ಟೇ ಅಲ್ಲದೇ ದಕ್ಷಿಣ ಪ್ರಾವಿನೆನ್ಸ್‌ಗಳ ರಾಜಧಾನಿಗಳಾದ ಕಂದಹಾರ್ ಮತ್ತು ಹೆಲ್ಮಂಡ್‌ಗಳಲ್ಲೂ ತಾಲಿಬಾನ್ ಆಕ್ರಮಣ ಮುಂದುವರೆದಿದೆ.  ನಾವು ಯುದ್ಧದಿಂದ ಬಸವಳಿದಿದ್ದೇವೆ. ತಾಲಿಬಾನ್ ಮತ್ತು ಅಪಘಾನ್ ಪಡೆಗಳ ನಡುವಿನ ಸಮರದಲ್ಲಿ ಕುಟುಂಬಗಳನ್ನು ಕಳೆದುಕೊಂಡಿದ್ದೇವೆ. ಯಾರೊಬ್ಬರೂ ಗೆಲ್ಲುತ್ತಿಲ್ಲ. ಇಂದು ನಿರ್ಣಾಯಕ ಘಟನೆ ನಡೆದಿದೆ ಎಂದು ತಾಲಿಬಾನ್ ಆಕ್ರಮಿತ ಹೆಲ್ಮಂಡ್‌ ಪ್ರಾಂತ್ಯದ ನವಾ ಜಿಲ್ಲೆಯ ನಿವಾಸಿ ಮೊಹಮ್ಮದ್ ಬರೆಕ್‌ಜಾಯಿ ಯುದ್ಧ ಪೀಡಿತ ಪ್ರದೇಶದ ನೋವನ್ನು ಹಂಚಿಕೊಂಡಿದ್ದಾರೆ.

ಮೇ ತಿಂಗಳಿನಿಂದ ಅಮೆರಿಕ ಅಫ್ಘಾನಿಸ್ತಾನದಿಂದ ತನ್ನ ಸೇನಾಪಡೆಗಳನ್ನು ಹಿಂತೆಗತವನ್ನು ಆರಂಭಿಸಿದೆ. ಅಮೆರಿಕನ್ ಸೈನ್ಯ ಅಫ್ಘಾನ್ ದೇಶವನ್ನು ತೊರೆಯಲಾರಂಭಿಸುತ್ತಿದ್ದಂತೆ ತಾಲಿಬಾನ್‌ ಅಟ್ಟಹಾಸ ತೀವ್ರಗೊಂಡಿದೆ. ಅಮೆರಿಕ ನಿರ್ಗಮನದ ನಂತರ ತಾಲಿಬಾನ್ ವಿರುದ್ಧದ ಹೋರಾಟದಲ್ಲಿ ಅಫ್ಘಾನಿಸ್ತಾನ ಏಕಾಂಗಿಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹಿಂದೆ ಸೋವಿಯತ್‌ ರಷ್ಯಾದ ವಿರುದ್ಧದ ಶೀತಲ ಸಮರದ ಸಂದರ್ಭದಲ್ಲಿ ಅಮೆರಿಕ ತಾಲಿಬಾನ್‌ ಪಡೆಗಳಿಗೆ ಪರೋಕ್ಷ ಬೆಂಬಲವನ್ನು ನೀಡಿತ್ತೆಂಬ ಆರೋಪಗಳಿದ್ದು, ರಷ್ಯಾ ಅಫ್ಘಾನಿಸ್ತಾನದಿಂದ ಹಿಂದೆ ಸರಿದ ದಿನದಿಂದಲೂ ಅಮೆರಿಕ ತಾಲಿಬಾನ್‌ ವಿರುದ್ಧ ಹೋರಾಡುತ್ತಿದೆ. ಕಳೆದ 20 ವರ್ಷಗಳ ಅಮೆರಿಕನ್‌ ಕಾರ್ಯಾಚರಣೆಯ ನಂತರವೂ ತಾನೇ ಹುಟ್ಟುಹಾಕಿದ ಸಂಘಟನೆಯನ್ನು ಮಣಿಸಲು ಅಮೆರಿಕದ ಸೇನಾಪಡೆಗಳಿಗೆ ಸಾಧ್ಯವಾಗಿಲ್ಲ. ಈಗ ತಾಲಿಬಾನ್ ವಿರುದ್ಧದ ಹೋರಾಟದಲ್ಲಿ ಅಫ್ಘಾನಿಸ್ತಾನವನ್ನು ಏಕಾಂಗಿಯಾಗಿಸಿ ಅಮೆರಿಕ ಹಿಂದೆ ಸರಿಯುವ ಸಂದರ್ಭ ನಿರ್ಮಾಣವಾಗಿದೆ. ದೇಶದಲ್ಲಿ ಸ್ಥಿರತೆಯನ್ನು ಸ್ಥಾಪಿಸುವ ನಮ್ಮ ಕೊನೆಯ ಆಶಾವಾದ ಅಮೆರಿಕದ ನಿರ್ಧಾರದಿಂದ ಮಂಕಾಗುತ್ತಿದೆ ಎಂದು ಅಫ್ಘಾನ್ ನಾಯಕರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಅಮೆರಿಕ ನಂತರ ಭಾರತ ಅಫ್ಘಾನಿಸ್ತಾನದ ಅತ್ಯಂತ ಆಪ್ತ ರಾಷ್ಟ್ರವಾಗಿದ್ದು, ಇಂದಿನ ಸಂದರ್ಭದಲ್ಲಿ ಭಾರತ ಸೇರಿ ಅಂತರಾಷ್ಟ್ರೀಯ ಸಮುದಾಯ ಸ್ಪಂದಿಸುತ್ತದೆ ಎಂಬ ವಿಶ್ವಾಸವಿದೆ ಎನ್ನುವ ಮೂಲಕ ಅವರು ಆಶಾವಾದವನ್ನೂ ವ್ಯಕ್ತಪಡಿಸಿದ್ದಾರೆ.

ಅಫ್ಘಾನಿಸ್ತಾನ ಸೈನಿಕರಿಗೆ ರಕ್ಷಣ ನೀಡಿದ ತಜಕಿಸ್ತಾನಕ್ಕೂ ಆಕ್ರಮಣ ಭೀತಿ ಎದುರಾಗಿದ್ದು ತನ್ನ ಗಡಿಯನ್ನು ರಕ್ಷಿಸಿಕೊಳ್ಳಲು ತಜಿಕ್ ಸರ್ಕಾರ ಮುಂದಾಗಿದೆ. ಅಫ್ಘಾನ್ ಗಡಿ ಭಾಗಕ್ಕೆ 20,000 ಸಾವಿರ ಸೈನಿಕರನ್ನು ಕಳುಹಿಸಿರುವ ತಜಕಿಸ್ತಾನ ಸರ್ಕಾರ, ನೆರೆ ಹೊರೆಯ ರಾಷ್ಟ್ರಗಳ ಜೊತೆ ಮಾತುಕತೆ ನಡೆಸುತ್ತಿದ್ದು ತಾಲಿಬಾನ್ ಆಕ್ರಮಣವನ್ನು ಗಂಭೀರವಾಗಿ ಪರಿಗಣಿಸುವಂತೆ ಅಂತರಾಷ್ಟ್ರೀಯ ಸಮುದಾಯದಲ್ಲಿ ಮನವಿ ಮಾಡಿದೆ. ತಜಿಕ್ ಅಧ್ಯಕ್ಷ ಎಮೊಮಾಲಿ ರಖಮಾನ್ ರಷ್ಯ ಅಧ್ಯಕ್ಷ ಪುಟಿನ್ ಅವರಿಗೆ ಕರೆ ಮಾಡಿ ತಜಕಿಸ್ತಾನದ ಭದ್ರತೆಗೆ ಸಹಾಯ ಮಾಡುವಂತೆ ಮನವಿ ಮಾಡಿದ್ದು ಪುಟಿನ್ ತಜಕಿಸ್ತಾನಕ್ಕೆ ಅಗತ್ಯ ಸೇನಾ ನೆರವು ನೀಡುವುದಾಗಿ ಭರವಸೆ ನೀಡಿರುವುದಾಗಿ ರಾಯಿಟರ್ಸ್‌ ಜೂನ್‌ 5 ರಂದು ವರದಿ ಮಾಡಿದೆ.

ರಾಜೇಶ್ ಹೆಬ್ಬಾರ್‌


ಇದನ್ನೂ ಓದಿ: ಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...