Homeಅಂತರಾಷ್ಟ್ರೀಯತಾಲಿಬಾನ್ ಆಕ್ರಮಣ: ತಜಕಿಸ್ತಾನದಲ್ಲಿ ರಕ್ಷಣೆ ಪಡೆದ 1000 ಕ್ಕೂ ಹೆಚ್ಚು ಅಫ್ಘಾನ್ ಸೈನಿಕರು

ತಾಲಿಬಾನ್ ಆಕ್ರಮಣ: ತಜಕಿಸ್ತಾನದಲ್ಲಿ ರಕ್ಷಣೆ ಪಡೆದ 1000 ಕ್ಕೂ ಹೆಚ್ಚು ಅಫ್ಘಾನ್ ಸೈನಿಕರು

- Advertisement -
- Advertisement -

ಅಫ್ಘಾನಿಸ್ತಾನದಿಂದ ಅಮೆರಿಕ ಸೈನ್ಯವನ್ನು ಹಿಂತೆಗೆಯುತ್ತಿದ್ದಂತೆ ತಾಲಿಬಾನ್‌ ಮತ್ತು ಅಫ್ಘಾನ್ ಪಡೆಗಳ ನಡುವೆ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ಉತ್ತರ ಪ್ರಾಂತ್ಯಗಳಲ್ಲಿ  ತಾಲಿಬಾನ್ ತನ್ನ ಚಟುವಟಿಕೆಗಳನ್ನು ತೀವ್ರಗೊಳಿಸಿದ್ದು ಅಫ್ಘಾನ್ ಪಡೆಗಳ ಮೇಲೆ ದಾಳಿ ನಡೆಸುತ್ತಿದೆ. ಸೋಮವಾರ ತಾಲಿಬಾನ್‌ ದಾಳಿಯಿಂದ ತಪ್ಪಿಸಿಕೊಳ್ಳಲು ಅಫ್ಘಾನ್ ಪಡೆಗೆ ಸೇರಿದ 1000 ಕ್ಕೂ ಹೆಚ್ಚು ಸೈನಿಕರು ಪಕ್ಕದ ದೇಶ ತಜಕಿಸ್ತಾನದಲ್ಲಿ ರಕ್ಷಣೆಯನ್ನು ಪಡೆದುಕೊಂಡಿದ್ದಾರೆ.

ಉತ್ತರ ಅಫ್ಘಾನಿಸ್ತಾನದ ಗ್ರಾಮೀಣ ಪ್ರಾಂತ್ಯಗಳಲ್ಲಿ ತಾಲಿಬಾನ್ ಪ್ರಾಬಲ್ಯವನ್ನು ಮುರಿಯಲು ಅಫ್ಘಾನಿಸ್ತಾನ ಮತ್ತು ಅಮೆರಿಕ ಪಡೆಗಳು ಇಷ್ಟು ವರ್ಷ ಹೋರಾಟ ನಡೆಸಿದ್ದವು. ಅಫ್ಘಾನ್ ನಲ್ಲಿನ ಅಮೆರಿಕಾ ಸೇನಾಪಡೆಯ ಕೇಂದ್ರ ಸ್ಥಾನವಾದ ಬಗ್ರಾಮ್ ವಾಯುನೆಲೆಯನ್ನು ಅಫ್ಘಾನ್ ಪಡೆಗಳಿಗೆ ಹಸ್ತಾಂತರಿಸಿರುವುದಾಗಿ ಅಮೆರಿಕ ಕಳೆದ ಶುಕ್ರವಾರ ಘೋಷಿಸಿತ್ತು. ಇದಾದ ಎರಡು ದಿನಗಳ ಬೆನ್ನಲ್ಲೇ ತಾಲಿಬಾನ್ ದಾಳಿ ತೀವ್ರಗೊಂಡಿದ್ದು ಅಫ್ಘಾನ್ ಸೇನಾಪಡೆಗಳು ಅನೇಕ ಕಡೆ ಹಿಮ್ಮೆಟ್ಟುತ್ತಿವೆ. ಪರಿಣಾಮವಾಗಿ ಸೋಮವಾರ 1,000ಕ್ಕೂ ಹೆಚ್ಚು ಅಫ್ಘಾನ್ ಸೈನಿಕರು ನೆರೆಯ ತಜಕಿಸ್ತಾನ ರಾಷ್ಟ್ರದಲ್ಲಿ ರಕ್ಷಣೆ ಪಡೆಯುವ ಸಂದರ್ಭ ಬಂದೊದಗಿದೆ.

1,037 ಅಫ್ಘಾನ್ ಸೈನಿಕರಿಗೆ ತಮ್ಮ ದೇಶದಲ್ಲಿ ರಕ್ಷಣೆಯನ್ನು ನೀಡಲಾಗಿದೆ. ತಾಲಿಬಾನ್ ಪಡೆಯಿಂದ ರಕ್ಷಣೆಯನ್ನು ಪಡೆಯಲು ಸೈನಿಕರು ತಜಕಿಸ್ತಾನ ಗಡಿ ದಾಟಿ ದೇಶದೊಳಗೆ ಪ್ರವೇಶಿಸಿದ್ದಾರೆ. ನೆರೆಹೊರೆಯ ರಾಷ್ಟ್ರಗಳಿಂದ ಉತ್ತಮ ಬಾಂಧವ್ಯವನ್ನು ಹೊಂದುವ ದೃಷ್ಟಿಯಿಂದ ಈ ನಿರ್ಧಾರವನ್ನು ಕೈಗೊಂಡಿದೆ ಎಂದು  ತಜಕಿಸ್ತಾನ ಸರ್ಕಾರ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ.

ಉತ್ತರ ಪ್ರಾಂತ್ಯದ ಗಡಿ ವಲಯದಲ್ಲಿ ಅಫ್ಘಾನ್ ಪಡೆಗಳ ಮಿಲಿಟರಿ ಪೂರೈಕೆ ವ್ಯವಸ್ಥೆಗೆ ತೀವ್ರ ಹೊಡೆತ ಉಂಟಾಗಿದೆ. ತಾಲಿಬಾನ್ ದಾಳಿಗೆ ಅಫ್ಘಾನ್ ಪಡೆಗಳು ತತ್ತರಿಸುತ್ತಿವೆ. ಹಲವಾರು ಭಾಗಗಳಲ್ಲಿ ಸೈನಿಕರು ಒಂದೇ ಒಂದು ಗುಂಡನ್ನು ಸಿಡಿಸದೇ ಶರಣಾಗುತ್ತಿದ್ದಾರೆ. ಅಫ್ಘಾನ್ ಸೈನಿಕರ ನೈತಿಕರ ಸ್ಥೈರ್ಯ ತೀವ್ರವಾಗಿ ಕುಸಿದಿದೆ ಎಂದು ಮಿಲಿಟರಿ ತಜ್ಞರಾದ ಅತ್ತಾ ನೂರಿ ಕಾಬುಲ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದಲ್ಲಿ ಭೀಕರ ರೈಲು ಅಪಘಾತ: ಮೃತರ ಸಂಖ್ಯೆ 62ಕ್ಕೆ ಏರಿಕೆ, 100ಕ್ಕೂ ಹೆಚ್ಚು ಗಾಯಾಳುಗಳು

ತಾಲಿಬಾನ್‌ ಆಕ್ರಮಣದ ವೇಗ ಮತ್ತು ಹೆಚ್ಚು ಹೆಚ್ಚು ಪ್ರದೇಶಗಳನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಲುತ್ತಿರುವುದು ಅಫ್ಘಾನ್ ಪಡೆಗಳನ್ನು ಮಾನಸಿಕವಾಗಿ ಕುಗ್ಗಿಸಿದೆ. 1990 ರಿಂದಲೂ ಉತ್ತರ ಅಫ್ಘಾನ್ ಪ್ರಾಂತ್ಯ ತಾಲಿಬಾನ್ ವಿರೋಧಿ ಮೈತ್ರಿಪಡೆಗಳ ನಿಯಂತ್ರಣದಲ್ಲಿದ್ದು ಈಗ ಆ ಪ್ರದೇಶದಲ್ಲಿ ತಾಲಿಬಾನ್‌ ಕೈಮೇಲಾಗುತ್ತಿರುವುದು ಆತಂಕವನ್ನು ಸೃಷ್ಟಿಸಿದೆ.

ಅಫ್ಘಾನ್ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು ಸರ್ಕಾರ ಮತ್ತು ಅಂತರಾಷ್ಟ್ರೀಯ ಸಮುದಾಯ ಅಫ್ಘಾನಿಸ್ತಾನದ ಜೊತೆಗೆ ನಿಂತರೆ ಮಾತ್ರ ಹೆಚ್ಚುತ್ತಿರುವ ತಾಲಿಬಾನ್ ಪ್ರಾಬಲ್ಯವನ್ನು ಹಿಮ್ಮೆಟ್ಟಿಸಲು ಸಾಧ್ಯ ಎಂದು ಅತ್ತ ನೂರಿ ಅಭಿಪ್ರಾಯಪಟ್ಟಿದ್ದಾರೆ.

ಉತ್ತರ ಅಫ್ಘಾನಿಸ್ತಾನದಲ್ಲಷ್ಟೇ ಅಲ್ಲದೇ ದಕ್ಷಿಣ ಪ್ರಾವಿನೆನ್ಸ್‌ಗಳ ರಾಜಧಾನಿಗಳಾದ ಕಂದಹಾರ್ ಮತ್ತು ಹೆಲ್ಮಂಡ್‌ಗಳಲ್ಲೂ ತಾಲಿಬಾನ್ ಆಕ್ರಮಣ ಮುಂದುವರೆದಿದೆ.  ನಾವು ಯುದ್ಧದಿಂದ ಬಸವಳಿದಿದ್ದೇವೆ. ತಾಲಿಬಾನ್ ಮತ್ತು ಅಪಘಾನ್ ಪಡೆಗಳ ನಡುವಿನ ಸಮರದಲ್ಲಿ ಕುಟುಂಬಗಳನ್ನು ಕಳೆದುಕೊಂಡಿದ್ದೇವೆ. ಯಾರೊಬ್ಬರೂ ಗೆಲ್ಲುತ್ತಿಲ್ಲ. ಇಂದು ನಿರ್ಣಾಯಕ ಘಟನೆ ನಡೆದಿದೆ ಎಂದು ತಾಲಿಬಾನ್ ಆಕ್ರಮಿತ ಹೆಲ್ಮಂಡ್‌ ಪ್ರಾಂತ್ಯದ ನವಾ ಜಿಲ್ಲೆಯ ನಿವಾಸಿ ಮೊಹಮ್ಮದ್ ಬರೆಕ್‌ಜಾಯಿ ಯುದ್ಧ ಪೀಡಿತ ಪ್ರದೇಶದ ನೋವನ್ನು ಹಂಚಿಕೊಂಡಿದ್ದಾರೆ.

ಮೇ ತಿಂಗಳಿನಿಂದ ಅಮೆರಿಕ ಅಫ್ಘಾನಿಸ್ತಾನದಿಂದ ತನ್ನ ಸೇನಾಪಡೆಗಳನ್ನು ಹಿಂತೆಗತವನ್ನು ಆರಂಭಿಸಿದೆ. ಅಮೆರಿಕನ್ ಸೈನ್ಯ ಅಫ್ಘಾನ್ ದೇಶವನ್ನು ತೊರೆಯಲಾರಂಭಿಸುತ್ತಿದ್ದಂತೆ ತಾಲಿಬಾನ್‌ ಅಟ್ಟಹಾಸ ತೀವ್ರಗೊಂಡಿದೆ. ಅಮೆರಿಕ ನಿರ್ಗಮನದ ನಂತರ ತಾಲಿಬಾನ್ ವಿರುದ್ಧದ ಹೋರಾಟದಲ್ಲಿ ಅಫ್ಘಾನಿಸ್ತಾನ ಏಕಾಂಗಿಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹಿಂದೆ ಸೋವಿಯತ್‌ ರಷ್ಯಾದ ವಿರುದ್ಧದ ಶೀತಲ ಸಮರದ ಸಂದರ್ಭದಲ್ಲಿ ಅಮೆರಿಕ ತಾಲಿಬಾನ್‌ ಪಡೆಗಳಿಗೆ ಪರೋಕ್ಷ ಬೆಂಬಲವನ್ನು ನೀಡಿತ್ತೆಂಬ ಆರೋಪಗಳಿದ್ದು, ರಷ್ಯಾ ಅಫ್ಘಾನಿಸ್ತಾನದಿಂದ ಹಿಂದೆ ಸರಿದ ದಿನದಿಂದಲೂ ಅಮೆರಿಕ ತಾಲಿಬಾನ್‌ ವಿರುದ್ಧ ಹೋರಾಡುತ್ತಿದೆ. ಕಳೆದ 20 ವರ್ಷಗಳ ಅಮೆರಿಕನ್‌ ಕಾರ್ಯಾಚರಣೆಯ ನಂತರವೂ ತಾನೇ ಹುಟ್ಟುಹಾಕಿದ ಸಂಘಟನೆಯನ್ನು ಮಣಿಸಲು ಅಮೆರಿಕದ ಸೇನಾಪಡೆಗಳಿಗೆ ಸಾಧ್ಯವಾಗಿಲ್ಲ. ಈಗ ತಾಲಿಬಾನ್ ವಿರುದ್ಧದ ಹೋರಾಟದಲ್ಲಿ ಅಫ್ಘಾನಿಸ್ತಾನವನ್ನು ಏಕಾಂಗಿಯಾಗಿಸಿ ಅಮೆರಿಕ ಹಿಂದೆ ಸರಿಯುವ ಸಂದರ್ಭ ನಿರ್ಮಾಣವಾಗಿದೆ. ದೇಶದಲ್ಲಿ ಸ್ಥಿರತೆಯನ್ನು ಸ್ಥಾಪಿಸುವ ನಮ್ಮ ಕೊನೆಯ ಆಶಾವಾದ ಅಮೆರಿಕದ ನಿರ್ಧಾರದಿಂದ ಮಂಕಾಗುತ್ತಿದೆ ಎಂದು ಅಫ್ಘಾನ್ ನಾಯಕರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಅಮೆರಿಕ ನಂತರ ಭಾರತ ಅಫ್ಘಾನಿಸ್ತಾನದ ಅತ್ಯಂತ ಆಪ್ತ ರಾಷ್ಟ್ರವಾಗಿದ್ದು, ಇಂದಿನ ಸಂದರ್ಭದಲ್ಲಿ ಭಾರತ ಸೇರಿ ಅಂತರಾಷ್ಟ್ರೀಯ ಸಮುದಾಯ ಸ್ಪಂದಿಸುತ್ತದೆ ಎಂಬ ವಿಶ್ವಾಸವಿದೆ ಎನ್ನುವ ಮೂಲಕ ಅವರು ಆಶಾವಾದವನ್ನೂ ವ್ಯಕ್ತಪಡಿಸಿದ್ದಾರೆ.

ಅಫ್ಘಾನಿಸ್ತಾನ ಸೈನಿಕರಿಗೆ ರಕ್ಷಣ ನೀಡಿದ ತಜಕಿಸ್ತಾನಕ್ಕೂ ಆಕ್ರಮಣ ಭೀತಿ ಎದುರಾಗಿದ್ದು ತನ್ನ ಗಡಿಯನ್ನು ರಕ್ಷಿಸಿಕೊಳ್ಳಲು ತಜಿಕ್ ಸರ್ಕಾರ ಮುಂದಾಗಿದೆ. ಅಫ್ಘಾನ್ ಗಡಿ ಭಾಗಕ್ಕೆ 20,000 ಸಾವಿರ ಸೈನಿಕರನ್ನು ಕಳುಹಿಸಿರುವ ತಜಕಿಸ್ತಾನ ಸರ್ಕಾರ, ನೆರೆ ಹೊರೆಯ ರಾಷ್ಟ್ರಗಳ ಜೊತೆ ಮಾತುಕತೆ ನಡೆಸುತ್ತಿದ್ದು ತಾಲಿಬಾನ್ ಆಕ್ರಮಣವನ್ನು ಗಂಭೀರವಾಗಿ ಪರಿಗಣಿಸುವಂತೆ ಅಂತರಾಷ್ಟ್ರೀಯ ಸಮುದಾಯದಲ್ಲಿ ಮನವಿ ಮಾಡಿದೆ. ತಜಿಕ್ ಅಧ್ಯಕ್ಷ ಎಮೊಮಾಲಿ ರಖಮಾನ್ ರಷ್ಯ ಅಧ್ಯಕ್ಷ ಪುಟಿನ್ ಅವರಿಗೆ ಕರೆ ಮಾಡಿ ತಜಕಿಸ್ತಾನದ ಭದ್ರತೆಗೆ ಸಹಾಯ ಮಾಡುವಂತೆ ಮನವಿ ಮಾಡಿದ್ದು ಪುಟಿನ್ ತಜಕಿಸ್ತಾನಕ್ಕೆ ಅಗತ್ಯ ಸೇನಾ ನೆರವು ನೀಡುವುದಾಗಿ ಭರವಸೆ ನೀಡಿರುವುದಾಗಿ ರಾಯಿಟರ್ಸ್‌ ಜೂನ್‌ 5 ರಂದು ವರದಿ ಮಾಡಿದೆ.

ರಾಜೇಶ್ ಹೆಬ್ಬಾರ್‌


ಇದನ್ನೂ ಓದಿ: ಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...