Homeಅಂತರಾಷ್ಟ್ರೀಯತಾಲಿಬಾನ್ ಆಕ್ರಮಣ: ತಜಕಿಸ್ತಾನದಲ್ಲಿ ರಕ್ಷಣೆ ಪಡೆದ 1000 ಕ್ಕೂ ಹೆಚ್ಚು ಅಫ್ಘಾನ್ ಸೈನಿಕರು

ತಾಲಿಬಾನ್ ಆಕ್ರಮಣ: ತಜಕಿಸ್ತಾನದಲ್ಲಿ ರಕ್ಷಣೆ ಪಡೆದ 1000 ಕ್ಕೂ ಹೆಚ್ಚು ಅಫ್ಘಾನ್ ಸೈನಿಕರು

- Advertisement -
- Advertisement -

ಅಫ್ಘಾನಿಸ್ತಾನದಿಂದ ಅಮೆರಿಕ ಸೈನ್ಯವನ್ನು ಹಿಂತೆಗೆಯುತ್ತಿದ್ದಂತೆ ತಾಲಿಬಾನ್‌ ಮತ್ತು ಅಫ್ಘಾನ್ ಪಡೆಗಳ ನಡುವೆ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ಉತ್ತರ ಪ್ರಾಂತ್ಯಗಳಲ್ಲಿ  ತಾಲಿಬಾನ್ ತನ್ನ ಚಟುವಟಿಕೆಗಳನ್ನು ತೀವ್ರಗೊಳಿಸಿದ್ದು ಅಫ್ಘಾನ್ ಪಡೆಗಳ ಮೇಲೆ ದಾಳಿ ನಡೆಸುತ್ತಿದೆ. ಸೋಮವಾರ ತಾಲಿಬಾನ್‌ ದಾಳಿಯಿಂದ ತಪ್ಪಿಸಿಕೊಳ್ಳಲು ಅಫ್ಘಾನ್ ಪಡೆಗೆ ಸೇರಿದ 1000 ಕ್ಕೂ ಹೆಚ್ಚು ಸೈನಿಕರು ಪಕ್ಕದ ದೇಶ ತಜಕಿಸ್ತಾನದಲ್ಲಿ ರಕ್ಷಣೆಯನ್ನು ಪಡೆದುಕೊಂಡಿದ್ದಾರೆ.

ಉತ್ತರ ಅಫ್ಘಾನಿಸ್ತಾನದ ಗ್ರಾಮೀಣ ಪ್ರಾಂತ್ಯಗಳಲ್ಲಿ ತಾಲಿಬಾನ್ ಪ್ರಾಬಲ್ಯವನ್ನು ಮುರಿಯಲು ಅಫ್ಘಾನಿಸ್ತಾನ ಮತ್ತು ಅಮೆರಿಕ ಪಡೆಗಳು ಇಷ್ಟು ವರ್ಷ ಹೋರಾಟ ನಡೆಸಿದ್ದವು. ಅಫ್ಘಾನ್ ನಲ್ಲಿನ ಅಮೆರಿಕಾ ಸೇನಾಪಡೆಯ ಕೇಂದ್ರ ಸ್ಥಾನವಾದ ಬಗ್ರಾಮ್ ವಾಯುನೆಲೆಯನ್ನು ಅಫ್ಘಾನ್ ಪಡೆಗಳಿಗೆ ಹಸ್ತಾಂತರಿಸಿರುವುದಾಗಿ ಅಮೆರಿಕ ಕಳೆದ ಶುಕ್ರವಾರ ಘೋಷಿಸಿತ್ತು. ಇದಾದ ಎರಡು ದಿನಗಳ ಬೆನ್ನಲ್ಲೇ ತಾಲಿಬಾನ್ ದಾಳಿ ತೀವ್ರಗೊಂಡಿದ್ದು ಅಫ್ಘಾನ್ ಸೇನಾಪಡೆಗಳು ಅನೇಕ ಕಡೆ ಹಿಮ್ಮೆಟ್ಟುತ್ತಿವೆ. ಪರಿಣಾಮವಾಗಿ ಸೋಮವಾರ 1,000ಕ್ಕೂ ಹೆಚ್ಚು ಅಫ್ಘಾನ್ ಸೈನಿಕರು ನೆರೆಯ ತಜಕಿಸ್ತಾನ ರಾಷ್ಟ್ರದಲ್ಲಿ ರಕ್ಷಣೆ ಪಡೆಯುವ ಸಂದರ್ಭ ಬಂದೊದಗಿದೆ.

1,037 ಅಫ್ಘಾನ್ ಸೈನಿಕರಿಗೆ ತಮ್ಮ ದೇಶದಲ್ಲಿ ರಕ್ಷಣೆಯನ್ನು ನೀಡಲಾಗಿದೆ. ತಾಲಿಬಾನ್ ಪಡೆಯಿಂದ ರಕ್ಷಣೆಯನ್ನು ಪಡೆಯಲು ಸೈನಿಕರು ತಜಕಿಸ್ತಾನ ಗಡಿ ದಾಟಿ ದೇಶದೊಳಗೆ ಪ್ರವೇಶಿಸಿದ್ದಾರೆ. ನೆರೆಹೊರೆಯ ರಾಷ್ಟ್ರಗಳಿಂದ ಉತ್ತಮ ಬಾಂಧವ್ಯವನ್ನು ಹೊಂದುವ ದೃಷ್ಟಿಯಿಂದ ಈ ನಿರ್ಧಾರವನ್ನು ಕೈಗೊಂಡಿದೆ ಎಂದು  ತಜಕಿಸ್ತಾನ ಸರ್ಕಾರ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ.

ಉತ್ತರ ಪ್ರಾಂತ್ಯದ ಗಡಿ ವಲಯದಲ್ಲಿ ಅಫ್ಘಾನ್ ಪಡೆಗಳ ಮಿಲಿಟರಿ ಪೂರೈಕೆ ವ್ಯವಸ್ಥೆಗೆ ತೀವ್ರ ಹೊಡೆತ ಉಂಟಾಗಿದೆ. ತಾಲಿಬಾನ್ ದಾಳಿಗೆ ಅಫ್ಘಾನ್ ಪಡೆಗಳು ತತ್ತರಿಸುತ್ತಿವೆ. ಹಲವಾರು ಭಾಗಗಳಲ್ಲಿ ಸೈನಿಕರು ಒಂದೇ ಒಂದು ಗುಂಡನ್ನು ಸಿಡಿಸದೇ ಶರಣಾಗುತ್ತಿದ್ದಾರೆ. ಅಫ್ಘಾನ್ ಸೈನಿಕರ ನೈತಿಕರ ಸ್ಥೈರ್ಯ ತೀವ್ರವಾಗಿ ಕುಸಿದಿದೆ ಎಂದು ಮಿಲಿಟರಿ ತಜ್ಞರಾದ ಅತ್ತಾ ನೂರಿ ಕಾಬುಲ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದಲ್ಲಿ ಭೀಕರ ರೈಲು ಅಪಘಾತ: ಮೃತರ ಸಂಖ್ಯೆ 62ಕ್ಕೆ ಏರಿಕೆ, 100ಕ್ಕೂ ಹೆಚ್ಚು ಗಾಯಾಳುಗಳು

ತಾಲಿಬಾನ್‌ ಆಕ್ರಮಣದ ವೇಗ ಮತ್ತು ಹೆಚ್ಚು ಹೆಚ್ಚು ಪ್ರದೇಶಗಳನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಲುತ್ತಿರುವುದು ಅಫ್ಘಾನ್ ಪಡೆಗಳನ್ನು ಮಾನಸಿಕವಾಗಿ ಕುಗ್ಗಿಸಿದೆ. 1990 ರಿಂದಲೂ ಉತ್ತರ ಅಫ್ಘಾನ್ ಪ್ರಾಂತ್ಯ ತಾಲಿಬಾನ್ ವಿರೋಧಿ ಮೈತ್ರಿಪಡೆಗಳ ನಿಯಂತ್ರಣದಲ್ಲಿದ್ದು ಈಗ ಆ ಪ್ರದೇಶದಲ್ಲಿ ತಾಲಿಬಾನ್‌ ಕೈಮೇಲಾಗುತ್ತಿರುವುದು ಆತಂಕವನ್ನು ಸೃಷ್ಟಿಸಿದೆ.

ಅಫ್ಘಾನ್ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು ಸರ್ಕಾರ ಮತ್ತು ಅಂತರಾಷ್ಟ್ರೀಯ ಸಮುದಾಯ ಅಫ್ಘಾನಿಸ್ತಾನದ ಜೊತೆಗೆ ನಿಂತರೆ ಮಾತ್ರ ಹೆಚ್ಚುತ್ತಿರುವ ತಾಲಿಬಾನ್ ಪ್ರಾಬಲ್ಯವನ್ನು ಹಿಮ್ಮೆಟ್ಟಿಸಲು ಸಾಧ್ಯ ಎಂದು ಅತ್ತ ನೂರಿ ಅಭಿಪ್ರಾಯಪಟ್ಟಿದ್ದಾರೆ.

ಉತ್ತರ ಅಫ್ಘಾನಿಸ್ತಾನದಲ್ಲಷ್ಟೇ ಅಲ್ಲದೇ ದಕ್ಷಿಣ ಪ್ರಾವಿನೆನ್ಸ್‌ಗಳ ರಾಜಧಾನಿಗಳಾದ ಕಂದಹಾರ್ ಮತ್ತು ಹೆಲ್ಮಂಡ್‌ಗಳಲ್ಲೂ ತಾಲಿಬಾನ್ ಆಕ್ರಮಣ ಮುಂದುವರೆದಿದೆ.  ನಾವು ಯುದ್ಧದಿಂದ ಬಸವಳಿದಿದ್ದೇವೆ. ತಾಲಿಬಾನ್ ಮತ್ತು ಅಪಘಾನ್ ಪಡೆಗಳ ನಡುವಿನ ಸಮರದಲ್ಲಿ ಕುಟುಂಬಗಳನ್ನು ಕಳೆದುಕೊಂಡಿದ್ದೇವೆ. ಯಾರೊಬ್ಬರೂ ಗೆಲ್ಲುತ್ತಿಲ್ಲ. ಇಂದು ನಿರ್ಣಾಯಕ ಘಟನೆ ನಡೆದಿದೆ ಎಂದು ತಾಲಿಬಾನ್ ಆಕ್ರಮಿತ ಹೆಲ್ಮಂಡ್‌ ಪ್ರಾಂತ್ಯದ ನವಾ ಜಿಲ್ಲೆಯ ನಿವಾಸಿ ಮೊಹಮ್ಮದ್ ಬರೆಕ್‌ಜಾಯಿ ಯುದ್ಧ ಪೀಡಿತ ಪ್ರದೇಶದ ನೋವನ್ನು ಹಂಚಿಕೊಂಡಿದ್ದಾರೆ.

ಮೇ ತಿಂಗಳಿನಿಂದ ಅಮೆರಿಕ ಅಫ್ಘಾನಿಸ್ತಾನದಿಂದ ತನ್ನ ಸೇನಾಪಡೆಗಳನ್ನು ಹಿಂತೆಗತವನ್ನು ಆರಂಭಿಸಿದೆ. ಅಮೆರಿಕನ್ ಸೈನ್ಯ ಅಫ್ಘಾನ್ ದೇಶವನ್ನು ತೊರೆಯಲಾರಂಭಿಸುತ್ತಿದ್ದಂತೆ ತಾಲಿಬಾನ್‌ ಅಟ್ಟಹಾಸ ತೀವ್ರಗೊಂಡಿದೆ. ಅಮೆರಿಕ ನಿರ್ಗಮನದ ನಂತರ ತಾಲಿಬಾನ್ ವಿರುದ್ಧದ ಹೋರಾಟದಲ್ಲಿ ಅಫ್ಘಾನಿಸ್ತಾನ ಏಕಾಂಗಿಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹಿಂದೆ ಸೋವಿಯತ್‌ ರಷ್ಯಾದ ವಿರುದ್ಧದ ಶೀತಲ ಸಮರದ ಸಂದರ್ಭದಲ್ಲಿ ಅಮೆರಿಕ ತಾಲಿಬಾನ್‌ ಪಡೆಗಳಿಗೆ ಪರೋಕ್ಷ ಬೆಂಬಲವನ್ನು ನೀಡಿತ್ತೆಂಬ ಆರೋಪಗಳಿದ್ದು, ರಷ್ಯಾ ಅಫ್ಘಾನಿಸ್ತಾನದಿಂದ ಹಿಂದೆ ಸರಿದ ದಿನದಿಂದಲೂ ಅಮೆರಿಕ ತಾಲಿಬಾನ್‌ ವಿರುದ್ಧ ಹೋರಾಡುತ್ತಿದೆ. ಕಳೆದ 20 ವರ್ಷಗಳ ಅಮೆರಿಕನ್‌ ಕಾರ್ಯಾಚರಣೆಯ ನಂತರವೂ ತಾನೇ ಹುಟ್ಟುಹಾಕಿದ ಸಂಘಟನೆಯನ್ನು ಮಣಿಸಲು ಅಮೆರಿಕದ ಸೇನಾಪಡೆಗಳಿಗೆ ಸಾಧ್ಯವಾಗಿಲ್ಲ. ಈಗ ತಾಲಿಬಾನ್ ವಿರುದ್ಧದ ಹೋರಾಟದಲ್ಲಿ ಅಫ್ಘಾನಿಸ್ತಾನವನ್ನು ಏಕಾಂಗಿಯಾಗಿಸಿ ಅಮೆರಿಕ ಹಿಂದೆ ಸರಿಯುವ ಸಂದರ್ಭ ನಿರ್ಮಾಣವಾಗಿದೆ. ದೇಶದಲ್ಲಿ ಸ್ಥಿರತೆಯನ್ನು ಸ್ಥಾಪಿಸುವ ನಮ್ಮ ಕೊನೆಯ ಆಶಾವಾದ ಅಮೆರಿಕದ ನಿರ್ಧಾರದಿಂದ ಮಂಕಾಗುತ್ತಿದೆ ಎಂದು ಅಫ್ಘಾನ್ ನಾಯಕರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಅಮೆರಿಕ ನಂತರ ಭಾರತ ಅಫ್ಘಾನಿಸ್ತಾನದ ಅತ್ಯಂತ ಆಪ್ತ ರಾಷ್ಟ್ರವಾಗಿದ್ದು, ಇಂದಿನ ಸಂದರ್ಭದಲ್ಲಿ ಭಾರತ ಸೇರಿ ಅಂತರಾಷ್ಟ್ರೀಯ ಸಮುದಾಯ ಸ್ಪಂದಿಸುತ್ತದೆ ಎಂಬ ವಿಶ್ವಾಸವಿದೆ ಎನ್ನುವ ಮೂಲಕ ಅವರು ಆಶಾವಾದವನ್ನೂ ವ್ಯಕ್ತಪಡಿಸಿದ್ದಾರೆ.

ಅಫ್ಘಾನಿಸ್ತಾನ ಸೈನಿಕರಿಗೆ ರಕ್ಷಣ ನೀಡಿದ ತಜಕಿಸ್ತಾನಕ್ಕೂ ಆಕ್ರಮಣ ಭೀತಿ ಎದುರಾಗಿದ್ದು ತನ್ನ ಗಡಿಯನ್ನು ರಕ್ಷಿಸಿಕೊಳ್ಳಲು ತಜಿಕ್ ಸರ್ಕಾರ ಮುಂದಾಗಿದೆ. ಅಫ್ಘಾನ್ ಗಡಿ ಭಾಗಕ್ಕೆ 20,000 ಸಾವಿರ ಸೈನಿಕರನ್ನು ಕಳುಹಿಸಿರುವ ತಜಕಿಸ್ತಾನ ಸರ್ಕಾರ, ನೆರೆ ಹೊರೆಯ ರಾಷ್ಟ್ರಗಳ ಜೊತೆ ಮಾತುಕತೆ ನಡೆಸುತ್ತಿದ್ದು ತಾಲಿಬಾನ್ ಆಕ್ರಮಣವನ್ನು ಗಂಭೀರವಾಗಿ ಪರಿಗಣಿಸುವಂತೆ ಅಂತರಾಷ್ಟ್ರೀಯ ಸಮುದಾಯದಲ್ಲಿ ಮನವಿ ಮಾಡಿದೆ. ತಜಿಕ್ ಅಧ್ಯಕ್ಷ ಎಮೊಮಾಲಿ ರಖಮಾನ್ ರಷ್ಯ ಅಧ್ಯಕ್ಷ ಪುಟಿನ್ ಅವರಿಗೆ ಕರೆ ಮಾಡಿ ತಜಕಿಸ್ತಾನದ ಭದ್ರತೆಗೆ ಸಹಾಯ ಮಾಡುವಂತೆ ಮನವಿ ಮಾಡಿದ್ದು ಪುಟಿನ್ ತಜಕಿಸ್ತಾನಕ್ಕೆ ಅಗತ್ಯ ಸೇನಾ ನೆರವು ನೀಡುವುದಾಗಿ ಭರವಸೆ ನೀಡಿರುವುದಾಗಿ ರಾಯಿಟರ್ಸ್‌ ಜೂನ್‌ 5 ರಂದು ವರದಿ ಮಾಡಿದೆ.

ರಾಜೇಶ್ ಹೆಬ್ಬಾರ್‌


ಇದನ್ನೂ ಓದಿ: ಉದ್ದ ಕೂದಲು ಬಿಟ್ಟ ಕಾರಣಕ್ಕೆ ಪಾಕಿಸ್ತಾನದ ಕಲಾವಿದನನ್ನು ಬಂಧಿಸಿದ ಪೊಲೀಸರು! ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...