Homeಅಂತರಾಷ್ಟ್ರೀಯಅಫ್ಘಾನ್‌ ಮಾಜಿ ಉಪಾಧ್ಯಕ್ಷನ ಸಹೋದರನನ್ನು ಕೊಂದ ತಾಲಿಬಾನ್

ಅಫ್ಘಾನ್‌ ಮಾಜಿ ಉಪಾಧ್ಯಕ್ಷನ ಸಹೋದರನನ್ನು ಕೊಂದ ತಾಲಿಬಾನ್

- Advertisement -
- Advertisement -

ಅಫ್ಘಾನಿಸ್ತಾನದ ಮಾಜಿ ಉಪಾಧ್ಯಕ್ಷ ಅಮರುಲ್ಲಾ ಸಲೀಹ್ ಅವರ ಸಹೋದರ ರೋಹುಲ್ಲಾ ಅಜೀಜಿ ಮತ್ತು ಅವರ ಚಾಲಕನನ್ನು ಉತ್ತರ ಪಂಜ್‌ಶಿರ್ ಪ್ರಾಂತ್ಯದ ಕರುಖ್ ಜಿಲ್ಲೆಯಲ್ಲಿ ತಾಲಿಬಾನ್ ಗುಂಡಿಕ್ಕಿ ಕೊಂದಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ಅಮ್ರುಲ್ಲಾ ಸಲೀಹ್ ಅವರ ಸೋದರ ಸಂಬಂಧಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

ಪಂಜ್‌ಶೀರ್‌ನ ತಾಲಿಬಾನ್ ವಿರೋಧಿ ಗುಂಪಿನ ಮುಂಚೂಣಿಯ ನಾಯಕರಲ್ಲಿ ಒಬ್ಬರಾಗಿರುವ ಅಜೀಜಿ ಅವರು ಗುರುವಾರ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅವರನ್ನು ತಾಲಿಬಾನಿಗಳು ತಪಾಸಣಾ ಕೇಂದ್ರದಲ್ಲಿ ತಡೆದಿದ್ದಾರೆ. ನಂತರ ಅಜೀಜಿ ಮತ್ತು ಅವರ ಚಾಲನಿಗೆ ಗುಂಡು ಹಾರಿಸಿ ಕೊಲ್ಲಲಾಗಿದೆ ಎಂದು ಅವರ ಸೋದರ ಸಂಬಂಧಿ ಶುರೇಶ್‌ ಸಲೀಹ್‌ ಹೇಳಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಪ್ರತಿಭಟನಾಕಾರರ ಮೇಲೆ ತಾಲಿಬಾನ್ ಹಿಂಸಾಚಾರ; ವಿಶ್ವಸಂಸ್ಥೆ ಖಂಡನೆ

ತಾಲಿಬಾನಿಗಳು ಅಜೀಜಿ ಅವರನ್ನು ತಡೆಯುವ ಸಮಯದಲ್ಲಿ ಅವರು ಎಲ್ಲಿಗೆ ಹೋಗುತ್ತಿದ್ದರು ಎಂದು ತಿಳಿದಿಲ್ಲ ಎಂದು ಶುರೇಶ್‌‌ ಹೇಳಿದ್ದಾರೆ. ಅವರನ್ನು ತಡೆದಿದ್ದ ಪ್ರದೇಶದಲ್ಲಿ ಫೋನ್‌ಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಅಜೀಜಿ ಅವರ ಮೃಹ ದೇಹವನ್ನು ಆತನ ಸಂಬಂಧಿಕರಿಗೆ ನೀಡಲಾಗಿಲ್ಲ ಎಂದು ಖಾಮಾ ನ್ಯೂಸ್ ಅನ್ನು ಉಲ್ಲೇಖಿಸಿ ಐಎಎನ್ಎಸ್ ವರದಿ ಮಾಡಿದೆ. ಈ ಮಧ್ಯೆ, ತಾಲಿಬಾನ್ ಈ ಸುದ್ದಿಯನ್ನು ನಿರಾಕರಿಸಿದ್ದು, ತಾಲಿಬಾನ್‌ನೊಂದಿಗಿನ ಸಂಘರ್ಷದ ಸಮಯದಲ್ಲಿ ಅಜೀಜಿಯವರನ್ನು ಕೊಲ್ಲಲಾಯಿತು ಎಂದು ಐಎಎನ್ಎಸ್ ವರದಿ ಮಾಡಿದೆ.

ಇದು ಪಂಜ್‌ಶೀರ್ ಪ್ರಾಂತ್ಯದಲ್ಲಿ ಪ್ರಾಣ ಕಳೆದುಕೊಂಡ ತಾಲಿಬಾನ್ ವಿರೋಧಿ ನಾಯಕರ ಕುಟುಂಬದ ಎರಡನೇ ಸದಸ್ಯರಾಗಿದ್ದಾರೆ. ಈ ಹಿಂದೆ, ಕಮಾಂಡರ್ ಅಬ್ದುಲ್ ವದೂದ್‌‌ ಅವರು ತಾಲಿಬಾನ್‌ ವಿರೋಧಿ ಪಡೆಯ ವಕ್ತಾರ ಫಾಹಿಮ್‌ ದಷ್ಟಿ ಅವರೊಂದಿಗೆ ಹತ್ಯೆಯಾಗಿದ್ದರು.

ಇದನ್ನೂ ಓದಿ: ಅಫ್ಘಾನ್ ಮಹಿಳೆಯರ ಪ್ರತಿಭಟನೆ ವರದಿ ಮಾಡಿದ ಪತ್ರಕರ್ತರ ಮೇಲೆ ತಾಲಿಬಾನ್‌ನಿಂದ ಹಲ್ಲೆ

ಆದರೆ ತಾಲಿಬಾನ್ ಇಬ್ಬರನ್ನೂ ಕೊಂದಿರುವುದನ್ನು ನಿರಾಕರಿಸಿದ್ದು, ಬದಲಾಗಿ ಸಂಘರ್ಷದ ಸಮಯದಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.

ಕಾಬೂಲ್‌ನ ಈಶಾನ್ಯದಲ್ಲಿರುವ ಪಂಜ್‌ಶೀರ್ ಪ್ರಾಂತ್ಯವನ್ನು ತಾನು ವಶಪಡಿಸಿರುವುದಾಗಿ ಕಳೆದ ವಾರ ತಾಲಿಬಾನ್‌ ಹೇಳಿತ್ತು. ಆದರೆ ಅಲ್ಲಿನ ಕೆಲವು ಭಾಗಗಳಲ್ಲಿ ಇನ್ನೂ ಹೋರಾಟ ನಡೆಯುತ್ತಿದೆ.

ತಾಲಿಬಾನ್‌ ವಿರೋಧಿ ಪಡೆಗಳು ತಾಲಿಬಾನ್‌ನಿಂದ ಕೆಲವು ಪ್ರದೇಶಗಳನ್ನು ಮರು ವಶಪಡಿಸಿಕೊಂಡಿದ್ದೇವೆ ಎಂದು ಹೇಳಿಕೊಂಡಿದೆ. ಈ ಬಗ್ಗೆ ತಾಲಿಬಾನ್ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...