Homeಅಂತರಾಷ್ಟ್ರೀಯನಮಗೆ ಕಾಶ್ಮೀರದ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕಿದೆ: ತಾಲಿಬಾನ್ ವಕ್ತಾರ

ನಮಗೆ ಕಾಶ್ಮೀರದ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕಿದೆ: ತಾಲಿಬಾನ್ ವಕ್ತಾರ

- Advertisement -
- Advertisement -

ತಾಲಿಬಾನ್ ಆಡಳಿತದಲ್ಲಿ ಅಫ್ಘಾನಿಸ್ತಾನ ಪ್ರದೇಶವನ್ನು ಭಾರತ ವಿರೋಧಿ ಚಟುವಟಿಕೆಗೆ ಬಳಸಬಹುದೆಂಬ ಭಾರತದ ಆತಂಕದ ನಡುವೆ, ಕಾಶ್ಮೀರ ಸೇರಿದಂತೆ ಎಲ್ಲಿಯಾದರೂ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕು ತನಗಿದೆ ಎಂದು ತಾಲಿಬಾನ್ ಗುಂಪು ಹೇಳಿದೆ.

ಆದರೆ, ಯಾವುದೇ ದೇಶದ ವಿರುದ್ಧ ಶಸ್ತ್ರಾಸ್ತ್ರಗಳನ್ನು ಬಳಸುವ ನೀತಿಯನ್ನು ನಮ್ಮ ಗುಂಪು ಹೊಂದಿಲ್ಲ ಎಂದೂ ಸೇರಿಸಿದೆ.

ಬಿಬಿಸಿ ಉರ್ದುಗೆ ನೀಡಿರುವ ಸಂದರ್ಶನದಲ್ಲಿ ತಾಲಿಬಾನ್ ವಕ್ತಾರ ಸುಹೇಲ್ ಶಾಹೀನ್, “ಮುಸ್ಲಿಮರಾಗಿರುವ ನಮಗೆ ಕಾಶ್ಮೀರ, ಭಾರತ ಮತ್ತು ಯಾವುದೇ ಇತರ ದೇಶಗಳಲ್ಲಿ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕು ಇದೆ” ಎಂದಿದ್ದಾರೆ.

“ಮುಸ್ಲಿಮರು ನಿಮ್ಮ ಸ್ವಂತ ಜನರು, ನಿಮ್ಮ ಸ್ವಂತ ಪ್ರಜೆಗಳು ಎಂದು ಹೇಳುತ್ತೇವೆ. ನಿಮ್ಮ ಕಾನೂನುಗಳ ಅಡಿಯಲ್ಲಿ ಅವರಿಗೆ ಸಮಾನ ಹಕ್ಕುಗಳಿವೆ. ಎಂದು ಮುಸ್ಲಿಮರಿಗಾಗಿ ಧ್ವನಿ ಎತ್ತುತ್ತೇವೆ ” ಎಂದು ಹೇಳಿದ್ದಾರೆ.

ಆದರೆ, ಈ ಹಿಂದೆ ಕಾಶ್ಮೀರದ ಬಗ್ಗೆ ಹೇಳಿಕೆ ನೀಡಿದ್ದ ತಾಲಿಬಾನ್, ಕಾಶ್ಮೀರದ ಸಮಸ್ಯೆ ಅವರ ಆಂತರಿಕ ವಿಷಯ ಎಂದಿತ್ತು. ಅಫ್ಘಾನಿಸ್ತಾನದ ಭೂಮಿಯನ್ನು ಯಾವುದೇ ರೀತಿಯ ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸದಂತೆ ನೋಡಿಕೊಳ್ಳುವುದು ಭಾರತದ ಗುರಿಯಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ ಗುರುವಾರ ಹೇಳಿದ್ದರು.

ಇದನ್ನೂ ಓದಿ: ತಾಲಿಬಾನ್‌ಗೆ ಅಧಿಕಾರ ಸಿಕ್ಕಿದ್ದಕ್ಕೆ ಸಂಭ್ರಮಿಸುವುದು ಅಪಾಯ: ನಾಸೀರುದ್ದೀನ್‌ ಶಾ

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ಸುರಕ್ಷತೆ, ಭದ್ರತೆ ಮತ್ತು ಆರಂಭಿಕ ವಾಪಸಾತಿ ಮತ್ತು ಅಫ್ಘಾನ್ ಪ್ರಜೆಗಳು, ಅದರಲ್ಲೂ ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರು ಭಾರತಕ್ಕೆ ಪ್ರಯಾಣಿಸುವ ಬಗ್ಗೆಯೂ ಚರ್ಚೆಗಳು ಕೇಂದ್ರೀಕೃತವಾಗಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಬಗ್ಗೆ ಆತಂಕ ಹೆಚ್ಚಾಗಿದ್ದು, ಈ ಪ್ರದೇಶದಲ್ಲಿ ಭದ್ರತಾ ನಿಗಾ ಹೆಚ್ಚಿಸುವ ನಿರೀಕ್ಷೆಯಿದೆ.

“ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಲಾಗುವುದು. ಆದರೆ ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿವೆ ಮತ್ತು ಅಫ್ಘಾನಿಸ್ತಾನದಲ್ಲಿರುವ ಪಾಕಿಸ್ತಾನ ಮೂಲದ ಗುಂಪುಗಳು ಪರಿಸ್ಥಿತಿಯನ್ನು ಬಳಸಿಕೊಳ್ಳುವ ಸಾಮರ್ಥ್ಯ ಕಡಿಮೆ” ಎಂದು ANI ಕಳೆದ ತಿಂಗಳು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿತ್ತು.


ಇದನ್ನೂ ಓದಿ: ಬಹುಜನ ಭಾರತ; ಮನುವಾದ ಸುಣ್ಣವಾದರೆ ತಾಲಿಬಾನ್ ಬೆಣ್ಣೆ ಹೇಗಾದೀತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಮಗೆ ಕಾಶ್ಮೀರ ಮುಸ್ಲೀಂರ ಬಗ್ಗೆ ಕಾಳಜಿ ವಹಿಸುವ ಅಧಿಕಾರ ಇದ್ದರೆ ,ಭಾರತೀಯರಿಗೆ ತಾಲಿಬಾನ್ ನೆಲದಲ್ಲಿ ತಾಲಿಬಾನ್ ಗಳನ್ನು ನಿರ್ನಾಮ ಮಾಡುವ ಅಧಿಕಾರ ಸಹ ಇದೆ .ಜೈ ಹಿಂದ್

  2. ಪಸ್ತೂನ್ ಜನರನ್ನು ಬೇರ್ಪಡಿಸಿರುವ ಡುರಾಂಡ್ ಲಯ್ನ್ ಜಗಳವನ್ನು ಮೊದಲು ಬಗೆಹರಿಸಲು ಹೆಜ್ಜೆ ಇಡಲಿ.

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...