Homeಅಂತರಾಷ್ಟ್ರೀಯನಮಗೆ ಕಾಶ್ಮೀರದ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕಿದೆ: ತಾಲಿಬಾನ್ ವಕ್ತಾರ

ನಮಗೆ ಕಾಶ್ಮೀರದ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕಿದೆ: ತಾಲಿಬಾನ್ ವಕ್ತಾರ

- Advertisement -
- Advertisement -

ತಾಲಿಬಾನ್ ಆಡಳಿತದಲ್ಲಿ ಅಫ್ಘಾನಿಸ್ತಾನ ಪ್ರದೇಶವನ್ನು ಭಾರತ ವಿರೋಧಿ ಚಟುವಟಿಕೆಗೆ ಬಳಸಬಹುದೆಂಬ ಭಾರತದ ಆತಂಕದ ನಡುವೆ, ಕಾಶ್ಮೀರ ಸೇರಿದಂತೆ ಎಲ್ಲಿಯಾದರೂ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕು ತನಗಿದೆ ಎಂದು ತಾಲಿಬಾನ್ ಗುಂಪು ಹೇಳಿದೆ.

ಆದರೆ, ಯಾವುದೇ ದೇಶದ ವಿರುದ್ಧ ಶಸ್ತ್ರಾಸ್ತ್ರಗಳನ್ನು ಬಳಸುವ ನೀತಿಯನ್ನು ನಮ್ಮ ಗುಂಪು ಹೊಂದಿಲ್ಲ ಎಂದೂ ಸೇರಿಸಿದೆ.

ಬಿಬಿಸಿ ಉರ್ದುಗೆ ನೀಡಿರುವ ಸಂದರ್ಶನದಲ್ಲಿ ತಾಲಿಬಾನ್ ವಕ್ತಾರ ಸುಹೇಲ್ ಶಾಹೀನ್, “ಮುಸ್ಲಿಮರಾಗಿರುವ ನಮಗೆ ಕಾಶ್ಮೀರ, ಭಾರತ ಮತ್ತು ಯಾವುದೇ ಇತರ ದೇಶಗಳಲ್ಲಿ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕು ಇದೆ” ಎಂದಿದ್ದಾರೆ.

“ಮುಸ್ಲಿಮರು ನಿಮ್ಮ ಸ್ವಂತ ಜನರು, ನಿಮ್ಮ ಸ್ವಂತ ಪ್ರಜೆಗಳು ಎಂದು ಹೇಳುತ್ತೇವೆ. ನಿಮ್ಮ ಕಾನೂನುಗಳ ಅಡಿಯಲ್ಲಿ ಅವರಿಗೆ ಸಮಾನ ಹಕ್ಕುಗಳಿವೆ. ಎಂದು ಮುಸ್ಲಿಮರಿಗಾಗಿ ಧ್ವನಿ ಎತ್ತುತ್ತೇವೆ ” ಎಂದು ಹೇಳಿದ್ದಾರೆ.

ಆದರೆ, ಈ ಹಿಂದೆ ಕಾಶ್ಮೀರದ ಬಗ್ಗೆ ಹೇಳಿಕೆ ನೀಡಿದ್ದ ತಾಲಿಬಾನ್, ಕಾಶ್ಮೀರದ ಸಮಸ್ಯೆ ಅವರ ಆಂತರಿಕ ವಿಷಯ ಎಂದಿತ್ತು. ಅಫ್ಘಾನಿಸ್ತಾನದ ಭೂಮಿಯನ್ನು ಯಾವುದೇ ರೀತಿಯ ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸದಂತೆ ನೋಡಿಕೊಳ್ಳುವುದು ಭಾರತದ ಗುರಿಯಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ ಗುರುವಾರ ಹೇಳಿದ್ದರು.

ಇದನ್ನೂ ಓದಿ: ತಾಲಿಬಾನ್‌ಗೆ ಅಧಿಕಾರ ಸಿಕ್ಕಿದ್ದಕ್ಕೆ ಸಂಭ್ರಮಿಸುವುದು ಅಪಾಯ: ನಾಸೀರುದ್ದೀನ್‌ ಶಾ

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ಸುರಕ್ಷತೆ, ಭದ್ರತೆ ಮತ್ತು ಆರಂಭಿಕ ವಾಪಸಾತಿ ಮತ್ತು ಅಫ್ಘಾನ್ ಪ್ರಜೆಗಳು, ಅದರಲ್ಲೂ ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರು ಭಾರತಕ್ಕೆ ಪ್ರಯಾಣಿಸುವ ಬಗ್ಗೆಯೂ ಚರ್ಚೆಗಳು ಕೇಂದ್ರೀಕೃತವಾಗಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಬಗ್ಗೆ ಆತಂಕ ಹೆಚ್ಚಾಗಿದ್ದು, ಈ ಪ್ರದೇಶದಲ್ಲಿ ಭದ್ರತಾ ನಿಗಾ ಹೆಚ್ಚಿಸುವ ನಿರೀಕ್ಷೆಯಿದೆ.

“ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಲಾಗುವುದು. ಆದರೆ ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿವೆ ಮತ್ತು ಅಫ್ಘಾನಿಸ್ತಾನದಲ್ಲಿರುವ ಪಾಕಿಸ್ತಾನ ಮೂಲದ ಗುಂಪುಗಳು ಪರಿಸ್ಥಿತಿಯನ್ನು ಬಳಸಿಕೊಳ್ಳುವ ಸಾಮರ್ಥ್ಯ ಕಡಿಮೆ” ಎಂದು ANI ಕಳೆದ ತಿಂಗಳು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿತ್ತು.


ಇದನ್ನೂ ಓದಿ: ಬಹುಜನ ಭಾರತ; ಮನುವಾದ ಸುಣ್ಣವಾದರೆ ತಾಲಿಬಾನ್ ಬೆಣ್ಣೆ ಹೇಗಾದೀತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಮಗೆ ಕಾಶ್ಮೀರ ಮುಸ್ಲೀಂರ ಬಗ್ಗೆ ಕಾಳಜಿ ವಹಿಸುವ ಅಧಿಕಾರ ಇದ್ದರೆ ,ಭಾರತೀಯರಿಗೆ ತಾಲಿಬಾನ್ ನೆಲದಲ್ಲಿ ತಾಲಿಬಾನ್ ಗಳನ್ನು ನಿರ್ನಾಮ ಮಾಡುವ ಅಧಿಕಾರ ಸಹ ಇದೆ .ಜೈ ಹಿಂದ್

  2. ಪಸ್ತೂನ್ ಜನರನ್ನು ಬೇರ್ಪಡಿಸಿರುವ ಡುರಾಂಡ್ ಲಯ್ನ್ ಜಗಳವನ್ನು ಮೊದಲು ಬಗೆಹರಿಸಲು ಹೆಜ್ಜೆ ಇಡಲಿ.

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...