Homeಅಂತರಾಷ್ಟ್ರೀಯನಮಗೆ ಕಾಶ್ಮೀರದ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕಿದೆ: ತಾಲಿಬಾನ್ ವಕ್ತಾರ

ನಮಗೆ ಕಾಶ್ಮೀರದ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕಿದೆ: ತಾಲಿಬಾನ್ ವಕ್ತಾರ

- Advertisement -
- Advertisement -

ತಾಲಿಬಾನ್ ಆಡಳಿತದಲ್ಲಿ ಅಫ್ಘಾನಿಸ್ತಾನ ಪ್ರದೇಶವನ್ನು ಭಾರತ ವಿರೋಧಿ ಚಟುವಟಿಕೆಗೆ ಬಳಸಬಹುದೆಂಬ ಭಾರತದ ಆತಂಕದ ನಡುವೆ, ಕಾಶ್ಮೀರ ಸೇರಿದಂತೆ ಎಲ್ಲಿಯಾದರೂ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕು ತನಗಿದೆ ಎಂದು ತಾಲಿಬಾನ್ ಗುಂಪು ಹೇಳಿದೆ.

ಆದರೆ, ಯಾವುದೇ ದೇಶದ ವಿರುದ್ಧ ಶಸ್ತ್ರಾಸ್ತ್ರಗಳನ್ನು ಬಳಸುವ ನೀತಿಯನ್ನು ನಮ್ಮ ಗುಂಪು ಹೊಂದಿಲ್ಲ ಎಂದೂ ಸೇರಿಸಿದೆ.

ಬಿಬಿಸಿ ಉರ್ದುಗೆ ನೀಡಿರುವ ಸಂದರ್ಶನದಲ್ಲಿ ತಾಲಿಬಾನ್ ವಕ್ತಾರ ಸುಹೇಲ್ ಶಾಹೀನ್, “ಮುಸ್ಲಿಮರಾಗಿರುವ ನಮಗೆ ಕಾಶ್ಮೀರ, ಭಾರತ ಮತ್ತು ಯಾವುದೇ ಇತರ ದೇಶಗಳಲ್ಲಿ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕು ಇದೆ” ಎಂದಿದ್ದಾರೆ.

“ಮುಸ್ಲಿಮರು ನಿಮ್ಮ ಸ್ವಂತ ಜನರು, ನಿಮ್ಮ ಸ್ವಂತ ಪ್ರಜೆಗಳು ಎಂದು ಹೇಳುತ್ತೇವೆ. ನಿಮ್ಮ ಕಾನೂನುಗಳ ಅಡಿಯಲ್ಲಿ ಅವರಿಗೆ ಸಮಾನ ಹಕ್ಕುಗಳಿವೆ. ಎಂದು ಮುಸ್ಲಿಮರಿಗಾಗಿ ಧ್ವನಿ ಎತ್ತುತ್ತೇವೆ ” ಎಂದು ಹೇಳಿದ್ದಾರೆ.

ಆದರೆ, ಈ ಹಿಂದೆ ಕಾಶ್ಮೀರದ ಬಗ್ಗೆ ಹೇಳಿಕೆ ನೀಡಿದ್ದ ತಾಲಿಬಾನ್, ಕಾಶ್ಮೀರದ ಸಮಸ್ಯೆ ಅವರ ಆಂತರಿಕ ವಿಷಯ ಎಂದಿತ್ತು. ಅಫ್ಘಾನಿಸ್ತಾನದ ಭೂಮಿಯನ್ನು ಯಾವುದೇ ರೀತಿಯ ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸದಂತೆ ನೋಡಿಕೊಳ್ಳುವುದು ಭಾರತದ ಗುರಿಯಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ ಗುರುವಾರ ಹೇಳಿದ್ದರು.

ಇದನ್ನೂ ಓದಿ: ತಾಲಿಬಾನ್‌ಗೆ ಅಧಿಕಾರ ಸಿಕ್ಕಿದ್ದಕ್ಕೆ ಸಂಭ್ರಮಿಸುವುದು ಅಪಾಯ: ನಾಸೀರುದ್ದೀನ್‌ ಶಾ

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ಸುರಕ್ಷತೆ, ಭದ್ರತೆ ಮತ್ತು ಆರಂಭಿಕ ವಾಪಸಾತಿ ಮತ್ತು ಅಫ್ಘಾನ್ ಪ್ರಜೆಗಳು, ಅದರಲ್ಲೂ ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರು ಭಾರತಕ್ಕೆ ಪ್ರಯಾಣಿಸುವ ಬಗ್ಗೆಯೂ ಚರ್ಚೆಗಳು ಕೇಂದ್ರೀಕೃತವಾಗಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಬಗ್ಗೆ ಆತಂಕ ಹೆಚ್ಚಾಗಿದ್ದು, ಈ ಪ್ರದೇಶದಲ್ಲಿ ಭದ್ರತಾ ನಿಗಾ ಹೆಚ್ಚಿಸುವ ನಿರೀಕ್ಷೆಯಿದೆ.

“ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಲಾಗುವುದು. ಆದರೆ ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿವೆ ಮತ್ತು ಅಫ್ಘಾನಿಸ್ತಾನದಲ್ಲಿರುವ ಪಾಕಿಸ್ತಾನ ಮೂಲದ ಗುಂಪುಗಳು ಪರಿಸ್ಥಿತಿಯನ್ನು ಬಳಸಿಕೊಳ್ಳುವ ಸಾಮರ್ಥ್ಯ ಕಡಿಮೆ” ಎಂದು ANI ಕಳೆದ ತಿಂಗಳು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿತ್ತು.


ಇದನ್ನೂ ಓದಿ: ಬಹುಜನ ಭಾರತ; ಮನುವಾದ ಸುಣ್ಣವಾದರೆ ತಾಲಿಬಾನ್ ಬೆಣ್ಣೆ ಹೇಗಾದೀತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಮಗೆ ಕಾಶ್ಮೀರ ಮುಸ್ಲೀಂರ ಬಗ್ಗೆ ಕಾಳಜಿ ವಹಿಸುವ ಅಧಿಕಾರ ಇದ್ದರೆ ,ಭಾರತೀಯರಿಗೆ ತಾಲಿಬಾನ್ ನೆಲದಲ್ಲಿ ತಾಲಿಬಾನ್ ಗಳನ್ನು ನಿರ್ನಾಮ ಮಾಡುವ ಅಧಿಕಾರ ಸಹ ಇದೆ .ಜೈ ಹಿಂದ್

  2. ಪಸ್ತೂನ್ ಜನರನ್ನು ಬೇರ್ಪಡಿಸಿರುವ ಡುರಾಂಡ್ ಲಯ್ನ್ ಜಗಳವನ್ನು ಮೊದಲು ಬಗೆಹರಿಸಲು ಹೆಜ್ಜೆ ಇಡಲಿ.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...