Homeಮುಖಪುಟಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

- Advertisement -
- Advertisement -

ಅಫ್ಘಾನಿಸ್ಥಾನದ ಈಗ ತಾಲಿಬಾನಿಗಳ ವಶವಾಗಿದೆ. ತಾಲಿಬಾನ್ ಕಮಾಂಡರ್ ಮುಲ್ಲಾ ಅಬ್ದುಲ್ಲಾ ಅಫ್ಘಾನ್‌ನ ಅಧ್ಯಕ್ಷ ಸ್ಥಾನಕ್ಕೇರಿದ್ದಾರೆ. ಆಫ್ಘಾನ್‌ನಲ್ಲಿ ತಾಲಿಬಾನ್‌ ಆಡಳಿತ ಆರಂಭವಾಗಿದ್ದು, ಅಲ್ಲಿನ ಮಹಿಳೆಯರು ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅಫ್ಘಾನಿಸ್ತಾನದಲ್ಲಿ ಹೆಚ್ಚುತ್ತಿರುವ ತಾಲಿಬಾನ್ ದಾಳಿಯು ಮಹಿಳೆಯರನ್ನು ನಿಯಂತ್ರಿಸುವ ಕ್ರಮವನ್ನು ಒಳಗೊಂಡಿದೆ. ದೇಶದ ದೊಡ್ಡ ಭಾಗಗಳ ಮೇಲೆ ತಾಲಿಬಾನ್‌ ನಿಯಂತ್ರಣ ಸಾಧಿಸಿದೆ. ಆದರೆ, ಕನಿಷ್ಟ ಪ್ರತಿರೋಧ ಮತ್ತು ಅಂತರಾಷ್ಟ್ರೀಯ ಒತ್ತಡದ ಕೊರತೆಯಿಂದಾಗಿ ಅವರ ಹಿಂಸಾಚಾರ ತೀವ್ರಗೊಳ್ಳುವ ಸಾಧ್ಯತೆಯಿದ್ದು, ಅಫ್ಘಾನ್‌ ಮಹಿಳೆಯರಿಗೆ ಅಪಾಯವನ್ನು ತದ್ದೊಡ್ಡುತ್ತಿದೆ.

ಈ ಹಿಂದೆ ಜುಲೈನಲ್ಲಿ, ತಾಲಿಬಾನಿಗಳೊಂದಿಗೆ ‘ಮದುವೆ’ ಮಾಡಲು 15 ವರ್ಷಕ್ಕಿಂತ ಮೇಲ್ಪಟ್ಟ ಹುಡುಗಿಯರು ಮತ್ತು 45 ವರ್ಷದೊಳಗಿನ ವಿಧವೆಯರ ಪಟ್ಟಿಯನ್ನು ನೀಡುವಂತೆ ಅಫ್ಘಾನ್‌ನ ಸ್ಥಳೀಯ ಧಾರ್ಮಿಕ ಮುಖಂಡರಿಗೆ ತಾಲಿಬಾನ್ ಕೇಳಿತ್ತು.

ಈ ಬಲವಂತದ ಮದುವೆಗಳು ನಡೆದರೆ, ಮಹಿಳೆಯರು ಮತ್ತು ಹುಡುಗಿಯರನ್ನು ಪಾಕಿಸ್ತಾನದ ವಜೀರಿಸ್ತಾನಕ್ಕೆ ಕರೆದೊಯ್ದು ಪುನಃ ಶಿಕ್ಷಣ ನೀಡಲಾಗುವುದು ಮತ್ತು ‘ಅಧಿಕೃತ ಇಸ್ಲಾಂ’ಗೆ ಪರಿವರ್ತಿಸಲಾಗುವುದು ಎನ್ನಲಾಗಿದೆ.

ಇದನ್ನೂ ಓದಿ: ಅಫ್ಘಾನ್‌‌ ಪತನ: ನೆರೆ ದೇಶಗಳಿಗೆ ಸಂಬಂಧಿಸಿದ ವಿದೇಶಾಂಗ ನೀತಿಯನ್ನು ಪರಿಶೀಲಿಸಬೇಕು – ಶರದ್ ಪವಾರ್

ಈ ತಾಲಿಬಾನ್ ಆಕ್ರಮಣದಿಂದ ಮುಂದೆ ಏನಾಗಲಿದೆ ಎಂಬುದಕ್ಕೆ ಎಚ್ಚರಿಕೆಯಾಗಿ, 1996-2001ರ ನಡುವಿನ ತಾಲಿಬಾನ್‌ಗಳ ಕ್ರೂರ ಆಡಳಿತವು ನಮ್ಮ ಮುಂದಿದೆ. ಆ ಸಮಯದಲ್ಲಿ ಮಹಿಳೆಯರು ನಿರಂತರ ಮಾನವ ಹಕ್ಕುಗಳ ಉಲ್ಲಂಘನೆಗೆ ಒಳಗಾಗಿದ್ದರು. ಅವರಿಗೆ ಉದ್ಯೋಗ ಮತ್ತು ಶಿಕ್ಷಣವನ್ನು ನಿರಾಕರಿಸಲಾಗಿತ್ತು ಬುರ್ಖಾ ಧರಿಸಲು ಒತ್ತಾಯಿಸಲಾಯಿತು ಮತ್ತು ಮನೆಯಿಂದ ಹೊರಹೋಗುವುದನ್ನು ನಿಷೇಧಿಸಲಾಗಿತ್ತು.

ಮಹಿಳೆಯರು ಮತ್ತು ಅವರ ಹಕ್ಕುಗಳ ಬಗ್ಗೆ ತಮ್ಮ ನಿಲುವನ್ನು ಬದಲಿಸಿಕೊಂಡಿದ್ದಾರೆ ಎಂದು ತಾಲಿಬಾನ್‌ ಹೇಳಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೂ, ಅವರ ಕ್ರಮಗಳು ಸಾವಿರಾರು ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ಒಪ್ಪಿಸುವ ಪ್ರಯತ್ನಗಳು ಇತ್ತೇಚೆಗೆ ನಡೆದಿವೆ.

ಇದಲ್ಲದೆ, ತಾಲಿಬಾನ್ 12 ವರ್ಷಕ್ಕಿಂತ ಮೇಲ್ಪಟ್ಟ ಹೆಣ್ಣುಮಕ್ಕಳ ಶಿಕ್ಷಣವನ್ನು ನಿರಾಕರಿಸುವ ಉದ್ದೇಶವನ್ನು ಸೂಚಿಸಿದೆ. ಅಲ್ಲದೆ, ಮಹಿಳೆಯರಿಗೆ ಉದ್ಯೋಗ ನಿರಾಕರಣೆಯ ನಿಯಮವನ್ನು ಪುನರ್‌ಸ್ಥಾಪಿಸುವ ಉದ್ದೇಶವಿದೆ.

ಕಳೆದ 20 ವರ್ಷಗಳಲ್ಲಿ ಅಫಘಾನ್ ಮಹಿಳೆಯರು ಗಳಿಸಿದ ಹಕ್ಕುಗಳು, ವಿಶೇಷವಾಗಿ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಭಾಗವಹಿಸುವಿಕೆಯನ್ನು ಮತ್ತೆ ಕಳೆದುಕೊಳ್ಳುವ ಅಪಾಯ ಈಗ ಎದುರಾಗಿದೆ.

ತಾಲಿಬಾನ್‌ಗಳಿಗೆ ಮಹಿಳೆಯರನ್ನು ವಿವಾಹ ಮಾಡಿಸುವ ಕೃತ್ಯ, ಅವರನ್ನು ತಾಲಿಬಾನ್‌ಗೆ ಸೇರಿಸುವ ತಂತ್ರವಾಗಿದೆ. ಇದು ವಿವಾಹವಲ್ಲ, ಲೈಂಗಿಕ ಗುಲಾಮಗಿರಿಯಾಗಿದೆ. ಮದುವೆಯ ನೆಪದಲ್ಲಿ ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ತಳ್ಳುವುದು ಯುದ್ಧ ಅಪರಾಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧ ಎಂದು ಜಿನೇವಾ ಸಮಾವೇಶದ ಪರಿಚ್ಛೇದ 27 ಹೇಳುತ್ತದೆ.

ಇದನ್ನೂ ಓದಿ: ಅಫ್ಘಾನ್ ಪತನ: ಕಾಬೂಲ್‌ನಿಂ‌ದ ಭಾರತೀಯ ರಾಯಭಾರ ಕಚೇರಿ ಸ್ಥಳಾಂತರ

“ಮಹಿಳೆಯರನ್ನು ವಿಶೇಷವಾಗಿ ಅವರ ಗೌರವದ ಮೇಲಾಗು ದಮನ, ಅತ್ಯಾಚಾರ, ಬಲವಂತದ ವೇಶ್ಯಾವಾಟಿಕೆ ಅಥವಾ ಯಾವುದೇ ರೀತಿಯ ಅಸಭ್ಯ ಆಕ್ರಮಣದಿಂದ ರಕ್ಷಿಸಬೇಕು” ಎಂದು 27ನೇ ಪರಚ್ಛೇದ ಹೇಳಿದೆ.

2008 ರಲ್ಲಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು 1820ರ ನಿರ್ಣಯವನ್ನು ಅಂಗೀಕರಿಸಿತು. “ಅತ್ಯಾಚಾರ ಮತ್ತು ಇತರ ಲೈಂಗಿಕ ದೌರ್ಜನ್ಯಗಳು ಯುದ್ಧ ಅಪರಾಧಗಳು, ಮಾನವೀಯತೆಯ ವಿರುದ್ಧದ ಅಪರಾಧಗಳು” ಎಂದು ಅದು ಘೋಷಿಸಿತು.

ಈಗ ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಏನಾಗುತ್ತದೆ ಎಂಬುದು ಅಲ್ಲಿನ ದೌರ್ಜನ್ಯಗಳನ್ನು ತಡೆಯಲು ವಿಶ್ವಸಂಸ್ಥೆಯು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ.

ತಜ್ಞರಿಂದ ಬಂದಿರುವ ಸಲಹೆಗಳಲ್ಲಿ ಸುಸ್ಥಿರ ಶಾಂತಿ ಮತ್ತು ತಕ್ಷಣದ ಕದನ ವಿರಾಮವನ್ನು ತರುವ ಕ್ರಮಗಳು ಸೇರಿವೆ. ಅಲ್ಲದೆ, ಮಹಿಳಾ ಹಕ್ಕುಗಳನ್ನು ಖಾತರಿಪಡಿಸುವುದು, ಅಫ್ಘಾನಿಸ್ತಾನದ ಸಂವಿಧಾನ ಮತ್ತು ರಾಷ್ಟ್ರೀಯ ಶಾಸನ ಮತ್ತು ಅಂತರಾಷ್ಟ್ರೀಯ ಕಾನೂನಿನಲ್ಲಿ ಪ್ರತಿಪಾದಿಸಲಾಗಿದೆ.

ಪ್ರಸ್ತುತ, ಅಫ್ಘಾನ್ ಸರ್ಕಾರದ ತಂಡದಲ್ಲಿ ಕೇವಲ ನಾಲ್ಕು ಮಹಿಳಾ ಶಾಂತಿ ಸಂಧಾನಕಾರರಿದ್ದಾರೆ ಮತ್ತು ತಾಲಿಬಾನ್‌ಗಳಲ್ಲಿ ಯಾರೂ ಇಲ್ಲ. ತಾಲಿಬಾನ್ ವಿರುದ್ಧವಿರುವ ನಿರ್ಬಂಧಗಳನ್ನು ತೆಗೆದುಹಾಕುವ ಕ್ರಮಗಳ ಸಂದರ್ಭದಲ್ಲಿ ಮಹಿಳೆಯರ ಹಕ್ಕುಗಳನ್ನು ಎತ್ತಿ ಹಿಡಿಯುವ ಬದ್ಧತೆಯನ್ನೂ ಕೂಡ ಅನುಸರಿಸಬೇಕಾಗಿದೆ.

ಪ್ರಸ್ತುತ ಅಫ್ಘಾನಿಸ್ತಾನಕ್ಕೆ ಯುರೋಪಿಯನ್ ಯೂನಿಯನ್ ಮತ್ತು ಅಮೆರಿಕಾ ಅತಿದೊಡ್ಡ ದಾನಿಗಳಾಗಿದ್ದು, ಮಹಿಳಾ ಹಕ್ಕುಗಳು ಮತ್ತು ಅವರ ಶಿಕ್ಷಣ ಮತ್ತು ಉದ್ಯೋಗಕ್ಕೆ ಒತ್ತು ನೀಡಬೇಕು.

ಮಹಿಳೆಯರಿಗೆ ಕಾನೂನಿನ ಅಡಿಯಲ್ಲಿ ಸಮಾನ ರಕ್ಷಣೆ ಮತ್ತು ನ್ಯಾಯಕ್ಕೆ ಸಮಾನ ಪ್ರವೇಶವಿದೆ ಎಂದು ಖಚಿತಪಡಿಸಿಕೊಳ್ಳಲು ಯುಎನ್ ಮತ್ತು ಅಂತರಾಷ್ಟ್ರೀಯ ಸಮುದಾಯದ ಪ್ರಯತ್ನಗಳನ್ನು ಅಫ್ಘಾನಿಸ್ತಾನ ಮತ್ತು ಇತರ ಪ್ರದೇಶದಾದ್ಯಂತ ಮಹಿಳೆಯರು ಸ್ವಾಗತಿಸುತ್ತಾರೆ.

ಮೂಲ: ಔಟ್‌ಲುಕ್

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...