Homeಮುಖಪುಟಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

- Advertisement -
- Advertisement -

ಅಫ್ಘಾನಿಸ್ಥಾನದ ಈಗ ತಾಲಿಬಾನಿಗಳ ವಶವಾಗಿದೆ. ತಾಲಿಬಾನ್ ಕಮಾಂಡರ್ ಮುಲ್ಲಾ ಅಬ್ದುಲ್ಲಾ ಅಫ್ಘಾನ್‌ನ ಅಧ್ಯಕ್ಷ ಸ್ಥಾನಕ್ಕೇರಿದ್ದಾರೆ. ಆಫ್ಘಾನ್‌ನಲ್ಲಿ ತಾಲಿಬಾನ್‌ ಆಡಳಿತ ಆರಂಭವಾಗಿದ್ದು, ಅಲ್ಲಿನ ಮಹಿಳೆಯರು ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅಫ್ಘಾನಿಸ್ತಾನದಲ್ಲಿ ಹೆಚ್ಚುತ್ತಿರುವ ತಾಲಿಬಾನ್ ದಾಳಿಯು ಮಹಿಳೆಯರನ್ನು ನಿಯಂತ್ರಿಸುವ ಕ್ರಮವನ್ನು ಒಳಗೊಂಡಿದೆ. ದೇಶದ ದೊಡ್ಡ ಭಾಗಗಳ ಮೇಲೆ ತಾಲಿಬಾನ್‌ ನಿಯಂತ್ರಣ ಸಾಧಿಸಿದೆ. ಆದರೆ, ಕನಿಷ್ಟ ಪ್ರತಿರೋಧ ಮತ್ತು ಅಂತರಾಷ್ಟ್ರೀಯ ಒತ್ತಡದ ಕೊರತೆಯಿಂದಾಗಿ ಅವರ ಹಿಂಸಾಚಾರ ತೀವ್ರಗೊಳ್ಳುವ ಸಾಧ್ಯತೆಯಿದ್ದು, ಅಫ್ಘಾನ್‌ ಮಹಿಳೆಯರಿಗೆ ಅಪಾಯವನ್ನು ತದ್ದೊಡ್ಡುತ್ತಿದೆ.

ಈ ಹಿಂದೆ ಜುಲೈನಲ್ಲಿ, ತಾಲಿಬಾನಿಗಳೊಂದಿಗೆ ‘ಮದುವೆ’ ಮಾಡಲು 15 ವರ್ಷಕ್ಕಿಂತ ಮೇಲ್ಪಟ್ಟ ಹುಡುಗಿಯರು ಮತ್ತು 45 ವರ್ಷದೊಳಗಿನ ವಿಧವೆಯರ ಪಟ್ಟಿಯನ್ನು ನೀಡುವಂತೆ ಅಫ್ಘಾನ್‌ನ ಸ್ಥಳೀಯ ಧಾರ್ಮಿಕ ಮುಖಂಡರಿಗೆ ತಾಲಿಬಾನ್ ಕೇಳಿತ್ತು.

ಈ ಬಲವಂತದ ಮದುವೆಗಳು ನಡೆದರೆ, ಮಹಿಳೆಯರು ಮತ್ತು ಹುಡುಗಿಯರನ್ನು ಪಾಕಿಸ್ತಾನದ ವಜೀರಿಸ್ತಾನಕ್ಕೆ ಕರೆದೊಯ್ದು ಪುನಃ ಶಿಕ್ಷಣ ನೀಡಲಾಗುವುದು ಮತ್ತು ‘ಅಧಿಕೃತ ಇಸ್ಲಾಂ’ಗೆ ಪರಿವರ್ತಿಸಲಾಗುವುದು ಎನ್ನಲಾಗಿದೆ.

ಇದನ್ನೂ ಓದಿ: ಅಫ್ಘಾನ್‌‌ ಪತನ: ನೆರೆ ದೇಶಗಳಿಗೆ ಸಂಬಂಧಿಸಿದ ವಿದೇಶಾಂಗ ನೀತಿಯನ್ನು ಪರಿಶೀಲಿಸಬೇಕು – ಶರದ್ ಪವಾರ್

ಈ ತಾಲಿಬಾನ್ ಆಕ್ರಮಣದಿಂದ ಮುಂದೆ ಏನಾಗಲಿದೆ ಎಂಬುದಕ್ಕೆ ಎಚ್ಚರಿಕೆಯಾಗಿ, 1996-2001ರ ನಡುವಿನ ತಾಲಿಬಾನ್‌ಗಳ ಕ್ರೂರ ಆಡಳಿತವು ನಮ್ಮ ಮುಂದಿದೆ. ಆ ಸಮಯದಲ್ಲಿ ಮಹಿಳೆಯರು ನಿರಂತರ ಮಾನವ ಹಕ್ಕುಗಳ ಉಲ್ಲಂಘನೆಗೆ ಒಳಗಾಗಿದ್ದರು. ಅವರಿಗೆ ಉದ್ಯೋಗ ಮತ್ತು ಶಿಕ್ಷಣವನ್ನು ನಿರಾಕರಿಸಲಾಗಿತ್ತು ಬುರ್ಖಾ ಧರಿಸಲು ಒತ್ತಾಯಿಸಲಾಯಿತು ಮತ್ತು ಮನೆಯಿಂದ ಹೊರಹೋಗುವುದನ್ನು ನಿಷೇಧಿಸಲಾಗಿತ್ತು.

ಮಹಿಳೆಯರು ಮತ್ತು ಅವರ ಹಕ್ಕುಗಳ ಬಗ್ಗೆ ತಮ್ಮ ನಿಲುವನ್ನು ಬದಲಿಸಿಕೊಂಡಿದ್ದಾರೆ ಎಂದು ತಾಲಿಬಾನ್‌ ಹೇಳಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೂ, ಅವರ ಕ್ರಮಗಳು ಸಾವಿರಾರು ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ಒಪ್ಪಿಸುವ ಪ್ರಯತ್ನಗಳು ಇತ್ತೇಚೆಗೆ ನಡೆದಿವೆ.

ಇದಲ್ಲದೆ, ತಾಲಿಬಾನ್ 12 ವರ್ಷಕ್ಕಿಂತ ಮೇಲ್ಪಟ್ಟ ಹೆಣ್ಣುಮಕ್ಕಳ ಶಿಕ್ಷಣವನ್ನು ನಿರಾಕರಿಸುವ ಉದ್ದೇಶವನ್ನು ಸೂಚಿಸಿದೆ. ಅಲ್ಲದೆ, ಮಹಿಳೆಯರಿಗೆ ಉದ್ಯೋಗ ನಿರಾಕರಣೆಯ ನಿಯಮವನ್ನು ಪುನರ್‌ಸ್ಥಾಪಿಸುವ ಉದ್ದೇಶವಿದೆ.

ಕಳೆದ 20 ವರ್ಷಗಳಲ್ಲಿ ಅಫಘಾನ್ ಮಹಿಳೆಯರು ಗಳಿಸಿದ ಹಕ್ಕುಗಳು, ವಿಶೇಷವಾಗಿ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಭಾಗವಹಿಸುವಿಕೆಯನ್ನು ಮತ್ತೆ ಕಳೆದುಕೊಳ್ಳುವ ಅಪಾಯ ಈಗ ಎದುರಾಗಿದೆ.

ತಾಲಿಬಾನ್‌ಗಳಿಗೆ ಮಹಿಳೆಯರನ್ನು ವಿವಾಹ ಮಾಡಿಸುವ ಕೃತ್ಯ, ಅವರನ್ನು ತಾಲಿಬಾನ್‌ಗೆ ಸೇರಿಸುವ ತಂತ್ರವಾಗಿದೆ. ಇದು ವಿವಾಹವಲ್ಲ, ಲೈಂಗಿಕ ಗುಲಾಮಗಿರಿಯಾಗಿದೆ. ಮದುವೆಯ ನೆಪದಲ್ಲಿ ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ತಳ್ಳುವುದು ಯುದ್ಧ ಅಪರಾಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧ ಎಂದು ಜಿನೇವಾ ಸಮಾವೇಶದ ಪರಿಚ್ಛೇದ 27 ಹೇಳುತ್ತದೆ.

ಇದನ್ನೂ ಓದಿ: ಅಫ್ಘಾನ್ ಪತನ: ಕಾಬೂಲ್‌ನಿಂ‌ದ ಭಾರತೀಯ ರಾಯಭಾರ ಕಚೇರಿ ಸ್ಥಳಾಂತರ

“ಮಹಿಳೆಯರನ್ನು ವಿಶೇಷವಾಗಿ ಅವರ ಗೌರವದ ಮೇಲಾಗು ದಮನ, ಅತ್ಯಾಚಾರ, ಬಲವಂತದ ವೇಶ್ಯಾವಾಟಿಕೆ ಅಥವಾ ಯಾವುದೇ ರೀತಿಯ ಅಸಭ್ಯ ಆಕ್ರಮಣದಿಂದ ರಕ್ಷಿಸಬೇಕು” ಎಂದು 27ನೇ ಪರಚ್ಛೇದ ಹೇಳಿದೆ.

2008 ರಲ್ಲಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು 1820ರ ನಿರ್ಣಯವನ್ನು ಅಂಗೀಕರಿಸಿತು. “ಅತ್ಯಾಚಾರ ಮತ್ತು ಇತರ ಲೈಂಗಿಕ ದೌರ್ಜನ್ಯಗಳು ಯುದ್ಧ ಅಪರಾಧಗಳು, ಮಾನವೀಯತೆಯ ವಿರುದ್ಧದ ಅಪರಾಧಗಳು” ಎಂದು ಅದು ಘೋಷಿಸಿತು.

ಈಗ ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಏನಾಗುತ್ತದೆ ಎಂಬುದು ಅಲ್ಲಿನ ದೌರ್ಜನ್ಯಗಳನ್ನು ತಡೆಯಲು ವಿಶ್ವಸಂಸ್ಥೆಯು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ.

ತಜ್ಞರಿಂದ ಬಂದಿರುವ ಸಲಹೆಗಳಲ್ಲಿ ಸುಸ್ಥಿರ ಶಾಂತಿ ಮತ್ತು ತಕ್ಷಣದ ಕದನ ವಿರಾಮವನ್ನು ತರುವ ಕ್ರಮಗಳು ಸೇರಿವೆ. ಅಲ್ಲದೆ, ಮಹಿಳಾ ಹಕ್ಕುಗಳನ್ನು ಖಾತರಿಪಡಿಸುವುದು, ಅಫ್ಘಾನಿಸ್ತಾನದ ಸಂವಿಧಾನ ಮತ್ತು ರಾಷ್ಟ್ರೀಯ ಶಾಸನ ಮತ್ತು ಅಂತರಾಷ್ಟ್ರೀಯ ಕಾನೂನಿನಲ್ಲಿ ಪ್ರತಿಪಾದಿಸಲಾಗಿದೆ.

ಪ್ರಸ್ತುತ, ಅಫ್ಘಾನ್ ಸರ್ಕಾರದ ತಂಡದಲ್ಲಿ ಕೇವಲ ನಾಲ್ಕು ಮಹಿಳಾ ಶಾಂತಿ ಸಂಧಾನಕಾರರಿದ್ದಾರೆ ಮತ್ತು ತಾಲಿಬಾನ್‌ಗಳಲ್ಲಿ ಯಾರೂ ಇಲ್ಲ. ತಾಲಿಬಾನ್ ವಿರುದ್ಧವಿರುವ ನಿರ್ಬಂಧಗಳನ್ನು ತೆಗೆದುಹಾಕುವ ಕ್ರಮಗಳ ಸಂದರ್ಭದಲ್ಲಿ ಮಹಿಳೆಯರ ಹಕ್ಕುಗಳನ್ನು ಎತ್ತಿ ಹಿಡಿಯುವ ಬದ್ಧತೆಯನ್ನೂ ಕೂಡ ಅನುಸರಿಸಬೇಕಾಗಿದೆ.

ಪ್ರಸ್ತುತ ಅಫ್ಘಾನಿಸ್ತಾನಕ್ಕೆ ಯುರೋಪಿಯನ್ ಯೂನಿಯನ್ ಮತ್ತು ಅಮೆರಿಕಾ ಅತಿದೊಡ್ಡ ದಾನಿಗಳಾಗಿದ್ದು, ಮಹಿಳಾ ಹಕ್ಕುಗಳು ಮತ್ತು ಅವರ ಶಿಕ್ಷಣ ಮತ್ತು ಉದ್ಯೋಗಕ್ಕೆ ಒತ್ತು ನೀಡಬೇಕು.

ಮಹಿಳೆಯರಿಗೆ ಕಾನೂನಿನ ಅಡಿಯಲ್ಲಿ ಸಮಾನ ರಕ್ಷಣೆ ಮತ್ತು ನ್ಯಾಯಕ್ಕೆ ಸಮಾನ ಪ್ರವೇಶವಿದೆ ಎಂದು ಖಚಿತಪಡಿಸಿಕೊಳ್ಳಲು ಯುಎನ್ ಮತ್ತು ಅಂತರಾಷ್ಟ್ರೀಯ ಸಮುದಾಯದ ಪ್ರಯತ್ನಗಳನ್ನು ಅಫ್ಘಾನಿಸ್ತಾನ ಮತ್ತು ಇತರ ಪ್ರದೇಶದಾದ್ಯಂತ ಮಹಿಳೆಯರು ಸ್ವಾಗತಿಸುತ್ತಾರೆ.

ಮೂಲ: ಔಟ್‌ಲುಕ್

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...