Homeಮುಖಪುಟಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

- Advertisement -
- Advertisement -

ಅಫ್ಘಾನಿಸ್ಥಾನದ ಈಗ ತಾಲಿಬಾನಿಗಳ ವಶವಾಗಿದೆ. ತಾಲಿಬಾನ್ ಕಮಾಂಡರ್ ಮುಲ್ಲಾ ಅಬ್ದುಲ್ಲಾ ಅಫ್ಘಾನ್‌ನ ಅಧ್ಯಕ್ಷ ಸ್ಥಾನಕ್ಕೇರಿದ್ದಾರೆ. ಆಫ್ಘಾನ್‌ನಲ್ಲಿ ತಾಲಿಬಾನ್‌ ಆಡಳಿತ ಆರಂಭವಾಗಿದ್ದು, ಅಲ್ಲಿನ ಮಹಿಳೆಯರು ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅಫ್ಘಾನಿಸ್ತಾನದಲ್ಲಿ ಹೆಚ್ಚುತ್ತಿರುವ ತಾಲಿಬಾನ್ ದಾಳಿಯು ಮಹಿಳೆಯರನ್ನು ನಿಯಂತ್ರಿಸುವ ಕ್ರಮವನ್ನು ಒಳಗೊಂಡಿದೆ. ದೇಶದ ದೊಡ್ಡ ಭಾಗಗಳ ಮೇಲೆ ತಾಲಿಬಾನ್‌ ನಿಯಂತ್ರಣ ಸಾಧಿಸಿದೆ. ಆದರೆ, ಕನಿಷ್ಟ ಪ್ರತಿರೋಧ ಮತ್ತು ಅಂತರಾಷ್ಟ್ರೀಯ ಒತ್ತಡದ ಕೊರತೆಯಿಂದಾಗಿ ಅವರ ಹಿಂಸಾಚಾರ ತೀವ್ರಗೊಳ್ಳುವ ಸಾಧ್ಯತೆಯಿದ್ದು, ಅಫ್ಘಾನ್‌ ಮಹಿಳೆಯರಿಗೆ ಅಪಾಯವನ್ನು ತದ್ದೊಡ್ಡುತ್ತಿದೆ.

ಈ ಹಿಂದೆ ಜುಲೈನಲ್ಲಿ, ತಾಲಿಬಾನಿಗಳೊಂದಿಗೆ ‘ಮದುವೆ’ ಮಾಡಲು 15 ವರ್ಷಕ್ಕಿಂತ ಮೇಲ್ಪಟ್ಟ ಹುಡುಗಿಯರು ಮತ್ತು 45 ವರ್ಷದೊಳಗಿನ ವಿಧವೆಯರ ಪಟ್ಟಿಯನ್ನು ನೀಡುವಂತೆ ಅಫ್ಘಾನ್‌ನ ಸ್ಥಳೀಯ ಧಾರ್ಮಿಕ ಮುಖಂಡರಿಗೆ ತಾಲಿಬಾನ್ ಕೇಳಿತ್ತು.

ಈ ಬಲವಂತದ ಮದುವೆಗಳು ನಡೆದರೆ, ಮಹಿಳೆಯರು ಮತ್ತು ಹುಡುಗಿಯರನ್ನು ಪಾಕಿಸ್ತಾನದ ವಜೀರಿಸ್ತಾನಕ್ಕೆ ಕರೆದೊಯ್ದು ಪುನಃ ಶಿಕ್ಷಣ ನೀಡಲಾಗುವುದು ಮತ್ತು ‘ಅಧಿಕೃತ ಇಸ್ಲಾಂ’ಗೆ ಪರಿವರ್ತಿಸಲಾಗುವುದು ಎನ್ನಲಾಗಿದೆ.

ಇದನ್ನೂ ಓದಿ: ಅಫ್ಘಾನ್‌‌ ಪತನ: ನೆರೆ ದೇಶಗಳಿಗೆ ಸಂಬಂಧಿಸಿದ ವಿದೇಶಾಂಗ ನೀತಿಯನ್ನು ಪರಿಶೀಲಿಸಬೇಕು – ಶರದ್ ಪವಾರ್

ಈ ತಾಲಿಬಾನ್ ಆಕ್ರಮಣದಿಂದ ಮುಂದೆ ಏನಾಗಲಿದೆ ಎಂಬುದಕ್ಕೆ ಎಚ್ಚರಿಕೆಯಾಗಿ, 1996-2001ರ ನಡುವಿನ ತಾಲಿಬಾನ್‌ಗಳ ಕ್ರೂರ ಆಡಳಿತವು ನಮ್ಮ ಮುಂದಿದೆ. ಆ ಸಮಯದಲ್ಲಿ ಮಹಿಳೆಯರು ನಿರಂತರ ಮಾನವ ಹಕ್ಕುಗಳ ಉಲ್ಲಂಘನೆಗೆ ಒಳಗಾಗಿದ್ದರು. ಅವರಿಗೆ ಉದ್ಯೋಗ ಮತ್ತು ಶಿಕ್ಷಣವನ್ನು ನಿರಾಕರಿಸಲಾಗಿತ್ತು ಬುರ್ಖಾ ಧರಿಸಲು ಒತ್ತಾಯಿಸಲಾಯಿತು ಮತ್ತು ಮನೆಯಿಂದ ಹೊರಹೋಗುವುದನ್ನು ನಿಷೇಧಿಸಲಾಗಿತ್ತು.

ಮಹಿಳೆಯರು ಮತ್ತು ಅವರ ಹಕ್ಕುಗಳ ಬಗ್ಗೆ ತಮ್ಮ ನಿಲುವನ್ನು ಬದಲಿಸಿಕೊಂಡಿದ್ದಾರೆ ಎಂದು ತಾಲಿಬಾನ್‌ ಹೇಳಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೂ, ಅವರ ಕ್ರಮಗಳು ಸಾವಿರಾರು ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ಒಪ್ಪಿಸುವ ಪ್ರಯತ್ನಗಳು ಇತ್ತೇಚೆಗೆ ನಡೆದಿವೆ.

ಇದಲ್ಲದೆ, ತಾಲಿಬಾನ್ 12 ವರ್ಷಕ್ಕಿಂತ ಮೇಲ್ಪಟ್ಟ ಹೆಣ್ಣುಮಕ್ಕಳ ಶಿಕ್ಷಣವನ್ನು ನಿರಾಕರಿಸುವ ಉದ್ದೇಶವನ್ನು ಸೂಚಿಸಿದೆ. ಅಲ್ಲದೆ, ಮಹಿಳೆಯರಿಗೆ ಉದ್ಯೋಗ ನಿರಾಕರಣೆಯ ನಿಯಮವನ್ನು ಪುನರ್‌ಸ್ಥಾಪಿಸುವ ಉದ್ದೇಶವಿದೆ.

ಕಳೆದ 20 ವರ್ಷಗಳಲ್ಲಿ ಅಫಘಾನ್ ಮಹಿಳೆಯರು ಗಳಿಸಿದ ಹಕ್ಕುಗಳು, ವಿಶೇಷವಾಗಿ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಭಾಗವಹಿಸುವಿಕೆಯನ್ನು ಮತ್ತೆ ಕಳೆದುಕೊಳ್ಳುವ ಅಪಾಯ ಈಗ ಎದುರಾಗಿದೆ.

ತಾಲಿಬಾನ್‌ಗಳಿಗೆ ಮಹಿಳೆಯರನ್ನು ವಿವಾಹ ಮಾಡಿಸುವ ಕೃತ್ಯ, ಅವರನ್ನು ತಾಲಿಬಾನ್‌ಗೆ ಸೇರಿಸುವ ತಂತ್ರವಾಗಿದೆ. ಇದು ವಿವಾಹವಲ್ಲ, ಲೈಂಗಿಕ ಗುಲಾಮಗಿರಿಯಾಗಿದೆ. ಮದುವೆಯ ನೆಪದಲ್ಲಿ ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ತಳ್ಳುವುದು ಯುದ್ಧ ಅಪರಾಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧ ಎಂದು ಜಿನೇವಾ ಸಮಾವೇಶದ ಪರಿಚ್ಛೇದ 27 ಹೇಳುತ್ತದೆ.

ಇದನ್ನೂ ಓದಿ: ಅಫ್ಘಾನ್ ಪತನ: ಕಾಬೂಲ್‌ನಿಂ‌ದ ಭಾರತೀಯ ರಾಯಭಾರ ಕಚೇರಿ ಸ್ಥಳಾಂತರ

“ಮಹಿಳೆಯರನ್ನು ವಿಶೇಷವಾಗಿ ಅವರ ಗೌರವದ ಮೇಲಾಗು ದಮನ, ಅತ್ಯಾಚಾರ, ಬಲವಂತದ ವೇಶ್ಯಾವಾಟಿಕೆ ಅಥವಾ ಯಾವುದೇ ರೀತಿಯ ಅಸಭ್ಯ ಆಕ್ರಮಣದಿಂದ ರಕ್ಷಿಸಬೇಕು” ಎಂದು 27ನೇ ಪರಚ್ಛೇದ ಹೇಳಿದೆ.

2008 ರಲ್ಲಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು 1820ರ ನಿರ್ಣಯವನ್ನು ಅಂಗೀಕರಿಸಿತು. “ಅತ್ಯಾಚಾರ ಮತ್ತು ಇತರ ಲೈಂಗಿಕ ದೌರ್ಜನ್ಯಗಳು ಯುದ್ಧ ಅಪರಾಧಗಳು, ಮಾನವೀಯತೆಯ ವಿರುದ್ಧದ ಅಪರಾಧಗಳು” ಎಂದು ಅದು ಘೋಷಿಸಿತು.

ಈಗ ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಏನಾಗುತ್ತದೆ ಎಂಬುದು ಅಲ್ಲಿನ ದೌರ್ಜನ್ಯಗಳನ್ನು ತಡೆಯಲು ವಿಶ್ವಸಂಸ್ಥೆಯು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ.

ತಜ್ಞರಿಂದ ಬಂದಿರುವ ಸಲಹೆಗಳಲ್ಲಿ ಸುಸ್ಥಿರ ಶಾಂತಿ ಮತ್ತು ತಕ್ಷಣದ ಕದನ ವಿರಾಮವನ್ನು ತರುವ ಕ್ರಮಗಳು ಸೇರಿವೆ. ಅಲ್ಲದೆ, ಮಹಿಳಾ ಹಕ್ಕುಗಳನ್ನು ಖಾತರಿಪಡಿಸುವುದು, ಅಫ್ಘಾನಿಸ್ತಾನದ ಸಂವಿಧಾನ ಮತ್ತು ರಾಷ್ಟ್ರೀಯ ಶಾಸನ ಮತ್ತು ಅಂತರಾಷ್ಟ್ರೀಯ ಕಾನೂನಿನಲ್ಲಿ ಪ್ರತಿಪಾದಿಸಲಾಗಿದೆ.

ಪ್ರಸ್ತುತ, ಅಫ್ಘಾನ್ ಸರ್ಕಾರದ ತಂಡದಲ್ಲಿ ಕೇವಲ ನಾಲ್ಕು ಮಹಿಳಾ ಶಾಂತಿ ಸಂಧಾನಕಾರರಿದ್ದಾರೆ ಮತ್ತು ತಾಲಿಬಾನ್‌ಗಳಲ್ಲಿ ಯಾರೂ ಇಲ್ಲ. ತಾಲಿಬಾನ್ ವಿರುದ್ಧವಿರುವ ನಿರ್ಬಂಧಗಳನ್ನು ತೆಗೆದುಹಾಕುವ ಕ್ರಮಗಳ ಸಂದರ್ಭದಲ್ಲಿ ಮಹಿಳೆಯರ ಹಕ್ಕುಗಳನ್ನು ಎತ್ತಿ ಹಿಡಿಯುವ ಬದ್ಧತೆಯನ್ನೂ ಕೂಡ ಅನುಸರಿಸಬೇಕಾಗಿದೆ.

ಪ್ರಸ್ತುತ ಅಫ್ಘಾನಿಸ್ತಾನಕ್ಕೆ ಯುರೋಪಿಯನ್ ಯೂನಿಯನ್ ಮತ್ತು ಅಮೆರಿಕಾ ಅತಿದೊಡ್ಡ ದಾನಿಗಳಾಗಿದ್ದು, ಮಹಿಳಾ ಹಕ್ಕುಗಳು ಮತ್ತು ಅವರ ಶಿಕ್ಷಣ ಮತ್ತು ಉದ್ಯೋಗಕ್ಕೆ ಒತ್ತು ನೀಡಬೇಕು.

ಮಹಿಳೆಯರಿಗೆ ಕಾನೂನಿನ ಅಡಿಯಲ್ಲಿ ಸಮಾನ ರಕ್ಷಣೆ ಮತ್ತು ನ್ಯಾಯಕ್ಕೆ ಸಮಾನ ಪ್ರವೇಶವಿದೆ ಎಂದು ಖಚಿತಪಡಿಸಿಕೊಳ್ಳಲು ಯುಎನ್ ಮತ್ತು ಅಂತರಾಷ್ಟ್ರೀಯ ಸಮುದಾಯದ ಪ್ರಯತ್ನಗಳನ್ನು ಅಫ್ಘಾನಿಸ್ತಾನ ಮತ್ತು ಇತರ ಪ್ರದೇಶದಾದ್ಯಂತ ಮಹಿಳೆಯರು ಸ್ವಾಗತಿಸುತ್ತಾರೆ.

ಮೂಲ: ಔಟ್‌ಲುಕ್

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...