Homeಮುಖಪುಟಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

- Advertisement -
- Advertisement -

ಅಫ್ಘಾನಿಸ್ಥಾನದ ಈಗ ತಾಲಿಬಾನಿಗಳ ವಶವಾಗಿದೆ. ತಾಲಿಬಾನ್ ಕಮಾಂಡರ್ ಮುಲ್ಲಾ ಅಬ್ದುಲ್ಲಾ ಅಫ್ಘಾನ್‌ನ ಅಧ್ಯಕ್ಷ ಸ್ಥಾನಕ್ಕೇರಿದ್ದಾರೆ. ಆಫ್ಘಾನ್‌ನಲ್ಲಿ ತಾಲಿಬಾನ್‌ ಆಡಳಿತ ಆರಂಭವಾಗಿದ್ದು, ಅಲ್ಲಿನ ಮಹಿಳೆಯರು ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅಫ್ಘಾನಿಸ್ತಾನದಲ್ಲಿ ಹೆಚ್ಚುತ್ತಿರುವ ತಾಲಿಬಾನ್ ದಾಳಿಯು ಮಹಿಳೆಯರನ್ನು ನಿಯಂತ್ರಿಸುವ ಕ್ರಮವನ್ನು ಒಳಗೊಂಡಿದೆ. ದೇಶದ ದೊಡ್ಡ ಭಾಗಗಳ ಮೇಲೆ ತಾಲಿಬಾನ್‌ ನಿಯಂತ್ರಣ ಸಾಧಿಸಿದೆ. ಆದರೆ, ಕನಿಷ್ಟ ಪ್ರತಿರೋಧ ಮತ್ತು ಅಂತರಾಷ್ಟ್ರೀಯ ಒತ್ತಡದ ಕೊರತೆಯಿಂದಾಗಿ ಅವರ ಹಿಂಸಾಚಾರ ತೀವ್ರಗೊಳ್ಳುವ ಸಾಧ್ಯತೆಯಿದ್ದು, ಅಫ್ಘಾನ್‌ ಮಹಿಳೆಯರಿಗೆ ಅಪಾಯವನ್ನು ತದ್ದೊಡ್ಡುತ್ತಿದೆ.

ಈ ಹಿಂದೆ ಜುಲೈನಲ್ಲಿ, ತಾಲಿಬಾನಿಗಳೊಂದಿಗೆ ‘ಮದುವೆ’ ಮಾಡಲು 15 ವರ್ಷಕ್ಕಿಂತ ಮೇಲ್ಪಟ್ಟ ಹುಡುಗಿಯರು ಮತ್ತು 45 ವರ್ಷದೊಳಗಿನ ವಿಧವೆಯರ ಪಟ್ಟಿಯನ್ನು ನೀಡುವಂತೆ ಅಫ್ಘಾನ್‌ನ ಸ್ಥಳೀಯ ಧಾರ್ಮಿಕ ಮುಖಂಡರಿಗೆ ತಾಲಿಬಾನ್ ಕೇಳಿತ್ತು.

ಈ ಬಲವಂತದ ಮದುವೆಗಳು ನಡೆದರೆ, ಮಹಿಳೆಯರು ಮತ್ತು ಹುಡುಗಿಯರನ್ನು ಪಾಕಿಸ್ತಾನದ ವಜೀರಿಸ್ತಾನಕ್ಕೆ ಕರೆದೊಯ್ದು ಪುನಃ ಶಿಕ್ಷಣ ನೀಡಲಾಗುವುದು ಮತ್ತು ‘ಅಧಿಕೃತ ಇಸ್ಲಾಂ’ಗೆ ಪರಿವರ್ತಿಸಲಾಗುವುದು ಎನ್ನಲಾಗಿದೆ.

ಇದನ್ನೂ ಓದಿ: ಅಫ್ಘಾನ್‌‌ ಪತನ: ನೆರೆ ದೇಶಗಳಿಗೆ ಸಂಬಂಧಿಸಿದ ವಿದೇಶಾಂಗ ನೀತಿಯನ್ನು ಪರಿಶೀಲಿಸಬೇಕು – ಶರದ್ ಪವಾರ್

ಈ ತಾಲಿಬಾನ್ ಆಕ್ರಮಣದಿಂದ ಮುಂದೆ ಏನಾಗಲಿದೆ ಎಂಬುದಕ್ಕೆ ಎಚ್ಚರಿಕೆಯಾಗಿ, 1996-2001ರ ನಡುವಿನ ತಾಲಿಬಾನ್‌ಗಳ ಕ್ರೂರ ಆಡಳಿತವು ನಮ್ಮ ಮುಂದಿದೆ. ಆ ಸಮಯದಲ್ಲಿ ಮಹಿಳೆಯರು ನಿರಂತರ ಮಾನವ ಹಕ್ಕುಗಳ ಉಲ್ಲಂಘನೆಗೆ ಒಳಗಾಗಿದ್ದರು. ಅವರಿಗೆ ಉದ್ಯೋಗ ಮತ್ತು ಶಿಕ್ಷಣವನ್ನು ನಿರಾಕರಿಸಲಾಗಿತ್ತು ಬುರ್ಖಾ ಧರಿಸಲು ಒತ್ತಾಯಿಸಲಾಯಿತು ಮತ್ತು ಮನೆಯಿಂದ ಹೊರಹೋಗುವುದನ್ನು ನಿಷೇಧಿಸಲಾಗಿತ್ತು.

ಮಹಿಳೆಯರು ಮತ್ತು ಅವರ ಹಕ್ಕುಗಳ ಬಗ್ಗೆ ತಮ್ಮ ನಿಲುವನ್ನು ಬದಲಿಸಿಕೊಂಡಿದ್ದಾರೆ ಎಂದು ತಾಲಿಬಾನ್‌ ಹೇಳಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೂ, ಅವರ ಕ್ರಮಗಳು ಸಾವಿರಾರು ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ಒಪ್ಪಿಸುವ ಪ್ರಯತ್ನಗಳು ಇತ್ತೇಚೆಗೆ ನಡೆದಿವೆ.

ಇದಲ್ಲದೆ, ತಾಲಿಬಾನ್ 12 ವರ್ಷಕ್ಕಿಂತ ಮೇಲ್ಪಟ್ಟ ಹೆಣ್ಣುಮಕ್ಕಳ ಶಿಕ್ಷಣವನ್ನು ನಿರಾಕರಿಸುವ ಉದ್ದೇಶವನ್ನು ಸೂಚಿಸಿದೆ. ಅಲ್ಲದೆ, ಮಹಿಳೆಯರಿಗೆ ಉದ್ಯೋಗ ನಿರಾಕರಣೆಯ ನಿಯಮವನ್ನು ಪುನರ್‌ಸ್ಥಾಪಿಸುವ ಉದ್ದೇಶವಿದೆ.

ಕಳೆದ 20 ವರ್ಷಗಳಲ್ಲಿ ಅಫಘಾನ್ ಮಹಿಳೆಯರು ಗಳಿಸಿದ ಹಕ್ಕುಗಳು, ವಿಶೇಷವಾಗಿ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಭಾಗವಹಿಸುವಿಕೆಯನ್ನು ಮತ್ತೆ ಕಳೆದುಕೊಳ್ಳುವ ಅಪಾಯ ಈಗ ಎದುರಾಗಿದೆ.

ತಾಲಿಬಾನ್‌ಗಳಿಗೆ ಮಹಿಳೆಯರನ್ನು ವಿವಾಹ ಮಾಡಿಸುವ ಕೃತ್ಯ, ಅವರನ್ನು ತಾಲಿಬಾನ್‌ಗೆ ಸೇರಿಸುವ ತಂತ್ರವಾಗಿದೆ. ಇದು ವಿವಾಹವಲ್ಲ, ಲೈಂಗಿಕ ಗುಲಾಮಗಿರಿಯಾಗಿದೆ. ಮದುವೆಯ ನೆಪದಲ್ಲಿ ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ತಳ್ಳುವುದು ಯುದ್ಧ ಅಪರಾಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧ ಎಂದು ಜಿನೇವಾ ಸಮಾವೇಶದ ಪರಿಚ್ಛೇದ 27 ಹೇಳುತ್ತದೆ.

ಇದನ್ನೂ ಓದಿ: ಅಫ್ಘಾನ್ ಪತನ: ಕಾಬೂಲ್‌ನಿಂ‌ದ ಭಾರತೀಯ ರಾಯಭಾರ ಕಚೇರಿ ಸ್ಥಳಾಂತರ

“ಮಹಿಳೆಯರನ್ನು ವಿಶೇಷವಾಗಿ ಅವರ ಗೌರವದ ಮೇಲಾಗು ದಮನ, ಅತ್ಯಾಚಾರ, ಬಲವಂತದ ವೇಶ್ಯಾವಾಟಿಕೆ ಅಥವಾ ಯಾವುದೇ ರೀತಿಯ ಅಸಭ್ಯ ಆಕ್ರಮಣದಿಂದ ರಕ್ಷಿಸಬೇಕು” ಎಂದು 27ನೇ ಪರಚ್ಛೇದ ಹೇಳಿದೆ.

2008 ರಲ್ಲಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು 1820ರ ನಿರ್ಣಯವನ್ನು ಅಂಗೀಕರಿಸಿತು. “ಅತ್ಯಾಚಾರ ಮತ್ತು ಇತರ ಲೈಂಗಿಕ ದೌರ್ಜನ್ಯಗಳು ಯುದ್ಧ ಅಪರಾಧಗಳು, ಮಾನವೀಯತೆಯ ವಿರುದ್ಧದ ಅಪರಾಧಗಳು” ಎಂದು ಅದು ಘೋಷಿಸಿತು.

ಈಗ ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಏನಾಗುತ್ತದೆ ಎಂಬುದು ಅಲ್ಲಿನ ದೌರ್ಜನ್ಯಗಳನ್ನು ತಡೆಯಲು ವಿಶ್ವಸಂಸ್ಥೆಯು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ.

ತಜ್ಞರಿಂದ ಬಂದಿರುವ ಸಲಹೆಗಳಲ್ಲಿ ಸುಸ್ಥಿರ ಶಾಂತಿ ಮತ್ತು ತಕ್ಷಣದ ಕದನ ವಿರಾಮವನ್ನು ತರುವ ಕ್ರಮಗಳು ಸೇರಿವೆ. ಅಲ್ಲದೆ, ಮಹಿಳಾ ಹಕ್ಕುಗಳನ್ನು ಖಾತರಿಪಡಿಸುವುದು, ಅಫ್ಘಾನಿಸ್ತಾನದ ಸಂವಿಧಾನ ಮತ್ತು ರಾಷ್ಟ್ರೀಯ ಶಾಸನ ಮತ್ತು ಅಂತರಾಷ್ಟ್ರೀಯ ಕಾನೂನಿನಲ್ಲಿ ಪ್ರತಿಪಾದಿಸಲಾಗಿದೆ.

ಪ್ರಸ್ತುತ, ಅಫ್ಘಾನ್ ಸರ್ಕಾರದ ತಂಡದಲ್ಲಿ ಕೇವಲ ನಾಲ್ಕು ಮಹಿಳಾ ಶಾಂತಿ ಸಂಧಾನಕಾರರಿದ್ದಾರೆ ಮತ್ತು ತಾಲಿಬಾನ್‌ಗಳಲ್ಲಿ ಯಾರೂ ಇಲ್ಲ. ತಾಲಿಬಾನ್ ವಿರುದ್ಧವಿರುವ ನಿರ್ಬಂಧಗಳನ್ನು ತೆಗೆದುಹಾಕುವ ಕ್ರಮಗಳ ಸಂದರ್ಭದಲ್ಲಿ ಮಹಿಳೆಯರ ಹಕ್ಕುಗಳನ್ನು ಎತ್ತಿ ಹಿಡಿಯುವ ಬದ್ಧತೆಯನ್ನೂ ಕೂಡ ಅನುಸರಿಸಬೇಕಾಗಿದೆ.

ಪ್ರಸ್ತುತ ಅಫ್ಘಾನಿಸ್ತಾನಕ್ಕೆ ಯುರೋಪಿಯನ್ ಯೂನಿಯನ್ ಮತ್ತು ಅಮೆರಿಕಾ ಅತಿದೊಡ್ಡ ದಾನಿಗಳಾಗಿದ್ದು, ಮಹಿಳಾ ಹಕ್ಕುಗಳು ಮತ್ತು ಅವರ ಶಿಕ್ಷಣ ಮತ್ತು ಉದ್ಯೋಗಕ್ಕೆ ಒತ್ತು ನೀಡಬೇಕು.

ಮಹಿಳೆಯರಿಗೆ ಕಾನೂನಿನ ಅಡಿಯಲ್ಲಿ ಸಮಾನ ರಕ್ಷಣೆ ಮತ್ತು ನ್ಯಾಯಕ್ಕೆ ಸಮಾನ ಪ್ರವೇಶವಿದೆ ಎಂದು ಖಚಿತಪಡಿಸಿಕೊಳ್ಳಲು ಯುಎನ್ ಮತ್ತು ಅಂತರಾಷ್ಟ್ರೀಯ ಸಮುದಾಯದ ಪ್ರಯತ್ನಗಳನ್ನು ಅಫ್ಘಾನಿಸ್ತಾನ ಮತ್ತು ಇತರ ಪ್ರದೇಶದಾದ್ಯಂತ ಮಹಿಳೆಯರು ಸ್ವಾಗತಿಸುತ್ತಾರೆ.

ಮೂಲ: ಔಟ್‌ಲುಕ್

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....