Homeಮುಖಪುಟಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

- Advertisement -
- Advertisement -

ಅಫ್ಘಾನಿಸ್ಥಾನದ ಈಗ ತಾಲಿಬಾನಿಗಳ ವಶವಾಗಿದೆ. ತಾಲಿಬಾನ್ ಕಮಾಂಡರ್ ಮುಲ್ಲಾ ಅಬ್ದುಲ್ಲಾ ಅಫ್ಘಾನ್‌ನ ಅಧ್ಯಕ್ಷ ಸ್ಥಾನಕ್ಕೇರಿದ್ದಾರೆ. ಆಫ್ಘಾನ್‌ನಲ್ಲಿ ತಾಲಿಬಾನ್‌ ಆಡಳಿತ ಆರಂಭವಾಗಿದ್ದು, ಅಲ್ಲಿನ ಮಹಿಳೆಯರು ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅಫ್ಘಾನಿಸ್ತಾನದಲ್ಲಿ ಹೆಚ್ಚುತ್ತಿರುವ ತಾಲಿಬಾನ್ ದಾಳಿಯು ಮಹಿಳೆಯರನ್ನು ನಿಯಂತ್ರಿಸುವ ಕ್ರಮವನ್ನು ಒಳಗೊಂಡಿದೆ. ದೇಶದ ದೊಡ್ಡ ಭಾಗಗಳ ಮೇಲೆ ತಾಲಿಬಾನ್‌ ನಿಯಂತ್ರಣ ಸಾಧಿಸಿದೆ. ಆದರೆ, ಕನಿಷ್ಟ ಪ್ರತಿರೋಧ ಮತ್ತು ಅಂತರಾಷ್ಟ್ರೀಯ ಒತ್ತಡದ ಕೊರತೆಯಿಂದಾಗಿ ಅವರ ಹಿಂಸಾಚಾರ ತೀವ್ರಗೊಳ್ಳುವ ಸಾಧ್ಯತೆಯಿದ್ದು, ಅಫ್ಘಾನ್‌ ಮಹಿಳೆಯರಿಗೆ ಅಪಾಯವನ್ನು ತದ್ದೊಡ್ಡುತ್ತಿದೆ.

ಈ ಹಿಂದೆ ಜುಲೈನಲ್ಲಿ, ತಾಲಿಬಾನಿಗಳೊಂದಿಗೆ ‘ಮದುವೆ’ ಮಾಡಲು 15 ವರ್ಷಕ್ಕಿಂತ ಮೇಲ್ಪಟ್ಟ ಹುಡುಗಿಯರು ಮತ್ತು 45 ವರ್ಷದೊಳಗಿನ ವಿಧವೆಯರ ಪಟ್ಟಿಯನ್ನು ನೀಡುವಂತೆ ಅಫ್ಘಾನ್‌ನ ಸ್ಥಳೀಯ ಧಾರ್ಮಿಕ ಮುಖಂಡರಿಗೆ ತಾಲಿಬಾನ್ ಕೇಳಿತ್ತು.

ಈ ಬಲವಂತದ ಮದುವೆಗಳು ನಡೆದರೆ, ಮಹಿಳೆಯರು ಮತ್ತು ಹುಡುಗಿಯರನ್ನು ಪಾಕಿಸ್ತಾನದ ವಜೀರಿಸ್ತಾನಕ್ಕೆ ಕರೆದೊಯ್ದು ಪುನಃ ಶಿಕ್ಷಣ ನೀಡಲಾಗುವುದು ಮತ್ತು ‘ಅಧಿಕೃತ ಇಸ್ಲಾಂ’ಗೆ ಪರಿವರ್ತಿಸಲಾಗುವುದು ಎನ್ನಲಾಗಿದೆ.

ಇದನ್ನೂ ಓದಿ: ಅಫ್ಘಾನ್‌‌ ಪತನ: ನೆರೆ ದೇಶಗಳಿಗೆ ಸಂಬಂಧಿಸಿದ ವಿದೇಶಾಂಗ ನೀತಿಯನ್ನು ಪರಿಶೀಲಿಸಬೇಕು – ಶರದ್ ಪವಾರ್

ಈ ತಾಲಿಬಾನ್ ಆಕ್ರಮಣದಿಂದ ಮುಂದೆ ಏನಾಗಲಿದೆ ಎಂಬುದಕ್ಕೆ ಎಚ್ಚರಿಕೆಯಾಗಿ, 1996-2001ರ ನಡುವಿನ ತಾಲಿಬಾನ್‌ಗಳ ಕ್ರೂರ ಆಡಳಿತವು ನಮ್ಮ ಮುಂದಿದೆ. ಆ ಸಮಯದಲ್ಲಿ ಮಹಿಳೆಯರು ನಿರಂತರ ಮಾನವ ಹಕ್ಕುಗಳ ಉಲ್ಲಂಘನೆಗೆ ಒಳಗಾಗಿದ್ದರು. ಅವರಿಗೆ ಉದ್ಯೋಗ ಮತ್ತು ಶಿಕ್ಷಣವನ್ನು ನಿರಾಕರಿಸಲಾಗಿತ್ತು ಬುರ್ಖಾ ಧರಿಸಲು ಒತ್ತಾಯಿಸಲಾಯಿತು ಮತ್ತು ಮನೆಯಿಂದ ಹೊರಹೋಗುವುದನ್ನು ನಿಷೇಧಿಸಲಾಗಿತ್ತು.

ಮಹಿಳೆಯರು ಮತ್ತು ಅವರ ಹಕ್ಕುಗಳ ಬಗ್ಗೆ ತಮ್ಮ ನಿಲುವನ್ನು ಬದಲಿಸಿಕೊಂಡಿದ್ದಾರೆ ಎಂದು ತಾಲಿಬಾನ್‌ ಹೇಳಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೂ, ಅವರ ಕ್ರಮಗಳು ಸಾವಿರಾರು ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ಒಪ್ಪಿಸುವ ಪ್ರಯತ್ನಗಳು ಇತ್ತೇಚೆಗೆ ನಡೆದಿವೆ.

ಇದಲ್ಲದೆ, ತಾಲಿಬಾನ್ 12 ವರ್ಷಕ್ಕಿಂತ ಮೇಲ್ಪಟ್ಟ ಹೆಣ್ಣುಮಕ್ಕಳ ಶಿಕ್ಷಣವನ್ನು ನಿರಾಕರಿಸುವ ಉದ್ದೇಶವನ್ನು ಸೂಚಿಸಿದೆ. ಅಲ್ಲದೆ, ಮಹಿಳೆಯರಿಗೆ ಉದ್ಯೋಗ ನಿರಾಕರಣೆಯ ನಿಯಮವನ್ನು ಪುನರ್‌ಸ್ಥಾಪಿಸುವ ಉದ್ದೇಶವಿದೆ.

ಕಳೆದ 20 ವರ್ಷಗಳಲ್ಲಿ ಅಫಘಾನ್ ಮಹಿಳೆಯರು ಗಳಿಸಿದ ಹಕ್ಕುಗಳು, ವಿಶೇಷವಾಗಿ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಭಾಗವಹಿಸುವಿಕೆಯನ್ನು ಮತ್ತೆ ಕಳೆದುಕೊಳ್ಳುವ ಅಪಾಯ ಈಗ ಎದುರಾಗಿದೆ.

ತಾಲಿಬಾನ್‌ಗಳಿಗೆ ಮಹಿಳೆಯರನ್ನು ವಿವಾಹ ಮಾಡಿಸುವ ಕೃತ್ಯ, ಅವರನ್ನು ತಾಲಿಬಾನ್‌ಗೆ ಸೇರಿಸುವ ತಂತ್ರವಾಗಿದೆ. ಇದು ವಿವಾಹವಲ್ಲ, ಲೈಂಗಿಕ ಗುಲಾಮಗಿರಿಯಾಗಿದೆ. ಮದುವೆಯ ನೆಪದಲ್ಲಿ ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ತಳ್ಳುವುದು ಯುದ್ಧ ಅಪರಾಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧ ಎಂದು ಜಿನೇವಾ ಸಮಾವೇಶದ ಪರಿಚ್ಛೇದ 27 ಹೇಳುತ್ತದೆ.

ಇದನ್ನೂ ಓದಿ: ಅಫ್ಘಾನ್ ಪತನ: ಕಾಬೂಲ್‌ನಿಂ‌ದ ಭಾರತೀಯ ರಾಯಭಾರ ಕಚೇರಿ ಸ್ಥಳಾಂತರ

“ಮಹಿಳೆಯರನ್ನು ವಿಶೇಷವಾಗಿ ಅವರ ಗೌರವದ ಮೇಲಾಗು ದಮನ, ಅತ್ಯಾಚಾರ, ಬಲವಂತದ ವೇಶ್ಯಾವಾಟಿಕೆ ಅಥವಾ ಯಾವುದೇ ರೀತಿಯ ಅಸಭ್ಯ ಆಕ್ರಮಣದಿಂದ ರಕ್ಷಿಸಬೇಕು” ಎಂದು 27ನೇ ಪರಚ್ಛೇದ ಹೇಳಿದೆ.

2008 ರಲ್ಲಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು 1820ರ ನಿರ್ಣಯವನ್ನು ಅಂಗೀಕರಿಸಿತು. “ಅತ್ಯಾಚಾರ ಮತ್ತು ಇತರ ಲೈಂಗಿಕ ದೌರ್ಜನ್ಯಗಳು ಯುದ್ಧ ಅಪರಾಧಗಳು, ಮಾನವೀಯತೆಯ ವಿರುದ್ಧದ ಅಪರಾಧಗಳು” ಎಂದು ಅದು ಘೋಷಿಸಿತು.

ಈಗ ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಏನಾಗುತ್ತದೆ ಎಂಬುದು ಅಲ್ಲಿನ ದೌರ್ಜನ್ಯಗಳನ್ನು ತಡೆಯಲು ವಿಶ್ವಸಂಸ್ಥೆಯು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ.

ತಜ್ಞರಿಂದ ಬಂದಿರುವ ಸಲಹೆಗಳಲ್ಲಿ ಸುಸ್ಥಿರ ಶಾಂತಿ ಮತ್ತು ತಕ್ಷಣದ ಕದನ ವಿರಾಮವನ್ನು ತರುವ ಕ್ರಮಗಳು ಸೇರಿವೆ. ಅಲ್ಲದೆ, ಮಹಿಳಾ ಹಕ್ಕುಗಳನ್ನು ಖಾತರಿಪಡಿಸುವುದು, ಅಫ್ಘಾನಿಸ್ತಾನದ ಸಂವಿಧಾನ ಮತ್ತು ರಾಷ್ಟ್ರೀಯ ಶಾಸನ ಮತ್ತು ಅಂತರಾಷ್ಟ್ರೀಯ ಕಾನೂನಿನಲ್ಲಿ ಪ್ರತಿಪಾದಿಸಲಾಗಿದೆ.

ಪ್ರಸ್ತುತ, ಅಫ್ಘಾನ್ ಸರ್ಕಾರದ ತಂಡದಲ್ಲಿ ಕೇವಲ ನಾಲ್ಕು ಮಹಿಳಾ ಶಾಂತಿ ಸಂಧಾನಕಾರರಿದ್ದಾರೆ ಮತ್ತು ತಾಲಿಬಾನ್‌ಗಳಲ್ಲಿ ಯಾರೂ ಇಲ್ಲ. ತಾಲಿಬಾನ್ ವಿರುದ್ಧವಿರುವ ನಿರ್ಬಂಧಗಳನ್ನು ತೆಗೆದುಹಾಕುವ ಕ್ರಮಗಳ ಸಂದರ್ಭದಲ್ಲಿ ಮಹಿಳೆಯರ ಹಕ್ಕುಗಳನ್ನು ಎತ್ತಿ ಹಿಡಿಯುವ ಬದ್ಧತೆಯನ್ನೂ ಕೂಡ ಅನುಸರಿಸಬೇಕಾಗಿದೆ.

ಪ್ರಸ್ತುತ ಅಫ್ಘಾನಿಸ್ತಾನಕ್ಕೆ ಯುರೋಪಿಯನ್ ಯೂನಿಯನ್ ಮತ್ತು ಅಮೆರಿಕಾ ಅತಿದೊಡ್ಡ ದಾನಿಗಳಾಗಿದ್ದು, ಮಹಿಳಾ ಹಕ್ಕುಗಳು ಮತ್ತು ಅವರ ಶಿಕ್ಷಣ ಮತ್ತು ಉದ್ಯೋಗಕ್ಕೆ ಒತ್ತು ನೀಡಬೇಕು.

ಮಹಿಳೆಯರಿಗೆ ಕಾನೂನಿನ ಅಡಿಯಲ್ಲಿ ಸಮಾನ ರಕ್ಷಣೆ ಮತ್ತು ನ್ಯಾಯಕ್ಕೆ ಸಮಾನ ಪ್ರವೇಶವಿದೆ ಎಂದು ಖಚಿತಪಡಿಸಿಕೊಳ್ಳಲು ಯುಎನ್ ಮತ್ತು ಅಂತರಾಷ್ಟ್ರೀಯ ಸಮುದಾಯದ ಪ್ರಯತ್ನಗಳನ್ನು ಅಫ್ಘಾನಿಸ್ತಾನ ಮತ್ತು ಇತರ ಪ್ರದೇಶದಾದ್ಯಂತ ಮಹಿಳೆಯರು ಸ್ವಾಗತಿಸುತ್ತಾರೆ.

ಮೂಲ: ಔಟ್‌ಲುಕ್

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...